Connect with us

ಗಾಯಕಿ ಕನ್ನಿಕಾಗೆ ಕೊರೊನಾ: ಪಾರ್ಟಿಯಲ್ಲೂ ಹಾಜರ್, ಕೇರ್ ಲೆಸ್ ನಡೆಗೆ ಎಫ್.ಐ.ಆರ್ ದಾಖಲು

Published

on

ಗಾಯಕಿ ಕನ್ನಿಕಾಗೆ ಕೊರೊನಾ: ಪಾರ್ಟಿಯಲ್ಲೂ ಹಾಜರ್, ಕೇರ್ ಲೆಸ್ ನಡೆಗೆ ಎಫ್.ಐ.ಆರ್ ದಾಖಲು

ನವದೆಹಲಿ: ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವ ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ವಿರುದ್ಧ ಲಕ್ನೋ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮಾರ್ಚ್ ಆರಂಭದಲ್ಲಿ ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದ ಗಾಯಕಿ ಕನ್ನಿಕಾ ಅವರಿಗೆ ಡೆಡ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಆದರೆ ಸೋಂಕು ಇತರರಿಗೆ ಹರಡದಂತೆ ಅಗತ್ಯವಾದ ನಿರ್ದೇಶನಗಳನ್ನು ಪಾಲಿಸದ ಹಿನ್ನೆಲೆ ಲಕ್ನೋ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನಿನ್ನೆ (ಮಾರ್ಚ್ 20) ಕನ್ನಿಕಾ ಅವರ ಕೋವಿಡ್-19 ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಆದರೆ ಇದಕ್ಕೂ ಮೊದಲು ಹಲವು ವಿಐಪಿಗಳನ್ನು ಕನ್ನಿಕಾ ಪಾರ್ಟಿಯಲ್ಲಿ ಭೇಟಿಯಾಗಿದ್ದರು. ಹೀಗಾಗಿ ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಕನ್ನಿಕಾ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟ ಬಳಿಕ ಅವರಿಗೆ ಲಕ್ನೋದ ಕಿಂಗ್ ಜಾರ್ಜ್ ಮೆಡಿಕಲ್ ವಿಶ್ವವಿದ್ಯಾಲಯ (ಕೆಜಿಎಂಯು)ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಆದರೆ ಲಕ್ನೊ ಮುಖ್ಯ ವೈದ್ಯಕೀಯ ಅಧಿಕಾರಿಯೊಬ್ಬರು ಕನ್ನಿಕಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮೆರೆದಿದ್ದಾರೆ ಎಂದು ದೂರಿದ್ದು, ಈ ದೂರಿನ ಮೇರೆಗೆ ಐಪಿಸಿ ಸೆಕ್ಷನ್ 188, 269, 270ರ ಅಡಿಯಲ್ಲಿ ಲಕ್ನೊದ ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಕನ್ನಿಕಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನು ಕನ್ನಿಕಾರಿಂದಾಗಿ ಮಾರಕ ಕೊರೋನಾ ವೈರಸ್ ಸೋಂಕಿನ ಬಿಸಿ ಇದೀಗ ರಾಷ್ಟ್ರಪತಿ ಭವನ ಮತ್ತು ಸಂಸತ್ತಿಗೂ ತಟ್ಟಿದೆ.

ಕಾರಣ ಕನ್ನಿಕಾ ಕಪೂರ್ ಬೇರೆ ಬೇರೆ ದಿನಗಳಲ್ಲಿ ಒಟ್ಟು ಮೂರು ಪಾರ್ಟಿಗಳಲ್ಲಿ ಭಾಗಿಯಾಗಿದ್ದರು. ಉನ್ನತ ರಾಜಕಾರಣಿಗಳು ಸೇರಿದಂತೆ ಹಲವಾರು ವಿಐಪಿಗಳನ್ನು ಭೇಟಿ ಮಾಡಿದ್ದರು.

ಪಾರ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಬಿಜೆಪಿ ಸಂಸದ ದುಶ್ಯಂತ್ ಸಿಂಗ್ ಮತ್ತು ಅವರ ತಾಯಿ ಗಾಯಕಿ ಕನ್ನಿಕಾರ ಸಂಪರ್ಕಕ್ಕೆ ಬಂದಿದ್ದರು.

ಈ ಹಿನ್ನೆಲೆ ಈ ನಾಯಕರು ತಮ್ಮನ್ನು ತಾವು ಪ್ರತ್ಯೇಕವಾಗಿರಿಸಿಕೊಂಡಿದ್ದಾರೆ. ಲಂಡನ್‌ನಿಂದ ಬಂದ ಬಳಿಕ ಕನ್ನಿಕಾ ಐಷಾರಾಮಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು.

ಅಲ್ಲದೇ ಕಾನ್ಪುರದ ಸಂಬಂಧಿಕರ ಮನೆಗೆ ಕನ್ನಿಕಾ ಭೇಟಿ ಕೊಟ್ಟಿದ್ದರು ಎಂದು ಲಕ್ನೋನ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಇಷ್ಟೇ ಅಲ್ಲದೇ ಇತ್ತೀಚೆಗೆ ಲಕ್ನೊದ ಆಪ್ತರ ನಿವಾಸದಲ್ಲಿ ಹೋಳಿ ಹಬ್ಬದ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದರು.

ಆ ಪಾರ್ಟಿಗೆ ರಾಜಸ್ತಾನದ ಮಾಜಿ ಮುಖ್ಯಮಂತ್ರಿ, ರಾಜಕಾರಣಿ ವಸುಂಧರಾ ರಾಜೇ ಮತ್ತು ಅವರ ಪುತ್ರ ಸಂಸದ ದುಶ್ಯಂತ್ ಸಿಂಗ್ ಸೇರಿದಂತೆ ಹಲವರು ಆಗಮಿಸಿ ಒಟ್ಟೊಟ್ಟಿಗೆ ನಿಂತು ಫೋಟೋಗಳನ್ನು ತೆಗೆಸಿಕೊಂಡಿದ್ದರು.

ಪಾರ್ಟಿ ಮುಗಿಸಿಕೊಂಡು ದುಶ್ಯಂತ್ ಸಿಂಗ್ ಸಂಸತ್ತ್ ಕಲಾಪದಲ್ಲಿ ಕಳೆದ ವಾರ ಭಾಗಿಯಾಗಿದ್ದರು.

ಆಗ ಇವರ ಸಂಪರ್ಕಕ್ಕೆ ಹಲವು ರಾಜ್ಯಸಭಾ ಮತ್ತು ಲೋಕಸಭಾ ಸದಸ್ಯರು ಬಂದಿದ್ದಾರೆ.

ಇದೀಗ ಕನ್ನಿಕಾಗೆ ಕೊರೋನಾ ದೃಢಪಟ್ಟ ನಂತರ ಇದೀಗ ದುಶ್ಯಂತ್ ಸಿಂಗ್ ಮತ್ತು ವಸುಂಧರಾ ರಾಜೆ ಕೂಡ ಮನೆಯಲ್ಲಿ ಸ್ವಯಂ ನಿರ್ಬಂಧ ವಿಧಿಸಿ ಉಳಿದುಕೊಂಡಿದ್ದಾರೆ.

ದುಶ್ಯಂತ್ ಸಿಂಗ್ ಅವರು ಕೇವಲ ಕಲಾಪದಲ್ಲಿ ಭಾಗವಹಿಸಿ ಸುಮ್ಮನಾಗಲಿಲ್ಲ.

ಮೊನ್ನೆ ಮಾರ್ಚ್ 18 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕೇಂದ್ರ ಸಚಿವರು, ಸಂಸದರು, ವಿರೋಧ ಪಕ್ಷದ ನಾಯಕರಿಗೆ ಉಪಹಾರ ಕೂಟ ಏರ್ಪಡಿಸಿದ್ದರು.

ಅದಕ್ಕೆ ದುಶ್ಯಂತ್ ಸಿಂಗ್ ಅವರು ಕೂಡ ರಾಜಸ್ತಾನದ ಸಂಸದರ ಜೊತೆ ಆಗಮಿಸಿದ್ದರು.

ಅಷ್ಟೇ ಅಲ್ಲ ಈ ಉಪಹಾರ ಕೂಟದಲ್ಲಿ ಕೇಂದ್ರದ ಮಾಜಿ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, ಬಿಜೆಪಿ ಸಂಸದೆ ಹೇಮಮಾಲಿನಿ, ಕೇಂದ್ರ ಸಚಿವ ಅರ್ಜುನ್ ರಾಮ್ ಮೆಘವಾಲ್, ಸಚಿವೆ ಮನೇಕಾ ಗಾಂಧಿ,

ಕಾಂಗ್ರೆಸ್ ಸಂಸದೆ ಕುಮಾರಿ ಸೆಲ್ಜಾ, ಬಾಕ್ಸರ್ ಮೇರಿ ಕೊಮ್ ಸೇರಿದಂತೆ ಇನ್ನೂ ಹಲವರು ಭಾಗವಹಿಸಿದ್ದರು. ಸದ್ಯ ಮುಂದೇನಾಗುತ್ತಾ ಕಾದು ನೋಡಬೇಕಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಬಾವಿಗೆ ಹಾರಿ ಜೀವಾಂತ್ಯಗೊಳಿಸಿದ ಬಸ್ ಏಜೆಂಟ್

Published

on

ಉಡುಪಿ: ಬಸ್ ಏಜೆಂಟ್ ಓರ್ವರು ಮನೆಯ‌ ಹತ್ತಿರದ ಬಾವಿಗೆ ಜಿಗಿದು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬನ್ನಂಜೆ ಗರಡಿ ಸಂಪರ್ಕಿಸುವ ರಸ್ತೆ ಸಮೀಪ ಬುಧವಾರ ನಡೆದಿದೆ.

ಬಸ್ ಏಜೆಂಟ್ ಕೆ. ರಾಜೇಶ್ ಶೆಣೈ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.  ಸಮಾಜಸೇವಕ ಈಶ್ವರ್ ಮಲ್ಪೆ ತಂಡದವರು ಕಾರ್ಯಾಚರಣೆ ಮೂಲಕ ಶವವನ್ನು ಬಾವಿಯಿಂದ ಮೇಲೆತ್ತಿದರು.

ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಸಹಕರಿಸಿದರು. ನಗರ ಪೋಲಿಸ್ ಠಾಣೆಯ ಎಸ್. ಐ ನಾರಾಯಣ, ಹೆಡ್  ಕಾನ್ಸ್ಟೇಬಲ್  ನೇತಾವತಿ ಕಾನೂನು ಪ್ರಕ್ರಿಯೆ ನಡೆಸಿದರು.

Continue Reading

LATEST NEWS

ಹೆಲ್ಮೆಟ್‌ ಧರಿಸದ ಸವಾರನನ್ನು ನಿಲ್ಲಿಸಿ ದಂಡ ಹಾಕದೇ ಕಳುಹಿಸಿದ ಪೊಲೀಸ್‌ ಸಿಬ್ಬಂದಿ!

Published

on

ಶಹದೋಲ್: ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಚಾಲನೆ ಹಾಗೂ ಅಪಘಾತಗಳಾಗುವ ಸಂದರ್ಭದಲ್ಲಿ ತಲೆಗೆ ಏಟು ಬೀಳಬಾರದೆನ್ನುವ ಕಾರಣಕ್ಕೆ ಹೆಲ್ಮೆಟ್‌ ಖಡ್ಡಾಯಗೊಳಿಸಿ ಸರಕಾರವೇ ಆದೇಶ ಹೊರಡಿಸಿದೆ. ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಆದರೆ, ಮಧ್ಯಪ್ರದೇಶದ ಶಹದೋಲ್‌ನಲ್ಲಿ ಸಂಚಾರಿ ಪೊಲೀಸ್ ಹೆಲ್ಮೆಟ್ ಧರಿಸದೇ ಬಂದ ಬೈಕ್ ಸವಾರರನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಅವರು ಹೇಳಿದ ಉತ್ತರ ಕೇಳಿ ಕಕ್ಕಾಬಿಕ್ಕಿಯಾಗಿದ್ದಾರೆ.

ತನ್ನ ದೊಡ್ಡ ತಲೆಗೆ ಚಿಕ್ಕ ಹೆಲ್ಮೆಟ್ ಸರಿಹೊಂದುವುದಿಲ್ಲ ಎಂದಾಗ ಪೊಲೀಸ್‌ ತನ್ನದೇ ಹೆಲ್ಮೆಟ್‌ ತೆಗೆದು ಸವಾರನ ತಲೆಗೆ ಇಟ್ಟು ನೋಡಿದ್ದಾರೆ. ಆದರೂ ಹೆಲ್ಮೆಟ್‌ ಅವರ ತಲೆಗೆ ಸರಿಹೊಂದಿಲ್ಲ. ಇವರಿಬ್ಬರ ನಡುವಿನ ಸಂವಾದ ಇದೀಗ ಭಾರೀ ವೈರಲ್‌ ಆಗಿದೆ.

“ದಿ ಟ್ರಾಫಿಕ್ ಕಾಪ್” ಎಂದು ಜನಪ್ರಿಯವಾಗಿರುವ ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಮತ್ತು ಸೋಶಿಯಲ್ ಇನ್ಫ್ಲುಯೆನ್ಸರ್ ಆಗಿರುವ ವಿವೇಕಾನಂದ ತಿವಾರಿ, ಹೆಲ್ಮೆಟ್ ಇಲ್ಲದೆ ಮೋಟಾರ್‌ಸೈಕಲ್ ಸವಾರಿ ಮಾಡಿದ್ದಕ್ಕಾಗಿ ವ್ಯಕ್ತಿಯನ್ನು ತಡೆದಿದ್ದಾರೆ.

ಸುರಕ್ಷತಾ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದಾಗ, ಸವಾರ ಬೈಕ್‌ನಿಂದ ಇಳಿದು ಮಾರುಕಟ್ಟೆಯಲ್ಲಿ ತನ್ನ ಗಾತ್ರದ ಹೆಲ್ಮೆಟ್ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾನೆ. ಆರಂಭದಲ್ಲಿ ಸಂಶಯ ವ್ಯಕ್ತಪಡಿಸಿದ ತಿವಾರಿ, ಸವಾರನ ತಲೆಯ ಮೇಲೆ ತನ್ನದೇ ಆದ ಹೆಲ್ಮೆಟ್ ಹಾಕಲು ಪ್ರಯತ್ನಿಸಿದ್ದಾರೆ. ಹೆಲ್ಮೆಟ್ ಹೊಂದಿಕೆಯಾಗಲಿಲ್ಲ, ನಿಜವಾದ ಕಷ್ಟವನ್ನು ಅರಿತುಕೊಂಡ ಅಧಿಕಾರಿ, ದಂಡ ವಿಧಿಸಲ್ಲ ಎಂದರು.

ಇದನ್ನೂ ಓದಿ: ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

ಅಲ್ಲದೆ ದೊಡ್ಡ ತಲೆಗೆ ಸರಿ ಹೊಂದುವ ಹೆಲ್ಮೆಟ್‌ಗಳನ್ನು ತಯಾರಿಸಿ ಎಂದು ಕಂಪೆನಿಗಳಿಗೆ ಮನವಿ ಮಾಡಿದರು. ಈ ವಿಡಿಯೋ ವೈರಲ್‌ ಆಗಿದ್ದು, ಸ್ಟೀಲ್‌ಬರ್ಡ್ ಕಂಪೆನಿ ಹೆಲ್ಮೆಟ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ದೊಡ್ಡ ಹೆಲ್ಮೆಟ್‌ಗಳನ್ನು ತಯಾರಿಸುವುದಾಗಿ ಹೇಳಿದೆ.

Continue Reading

LATEST NEWS

ಇಸ್ತ್ರಿ ಅಂಗಡಿಯವನ ಸಂಪಾದನೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು!

Published

on

ಕೇವಲ 10 ರೂಪಾಯಿಗೆ ಒಂದು ಬಟ್ಟೆ ಇಸ್ತ್ರಿ ಮಾಡುವ ಸಣ್ಣ ಉದ್ಯಮದಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ.


ನಳಿನಿ ಉನಾಗರ್ ಎಂಬುವವರು ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಅವರ ಮನೆಯ ಬಳಿಯಿರುವ ಡ್ರೈ ಕ್ಲೀನರ್ ಅಂಗಡಿಯ ಮಾಲೀಕರು ಮತ್ತು ಅವರ ಪತ್ನಿ ಇಬ್ಬರೂ ಸೇರಿ ಸಹಾಯಕರ ನೆರವಿನೊಂದಿಗೆ ಈ ಸಾಧನೆ ಮಾಡುತ್ತಿದ್ದಾರೆ.

ಪ್ರತಿದಿನ ಸುಮಾರು 350 ಬಟ್ಟೆಗಳನ್ನು ತಲಾ 10 ರೂಪಾಯಿಯಂತೆ ಇಸ್ತ್ರಿ ಮಾಡುತ್ತಾರೆ. ಇದರಿಂದ ದಿನಕ್ಕೆ 3,500 ರೂ. ಆದಾಯ ಬರುತ್ತದೆ. ಪ್ರತಿದಿನ ಸರಿಸುಮಾರು 20 ಭಾರೀ ಬಟ್ಟೆಗಳನ್ನು ತಲಾ 350 ರೂ. ರಂತೆ ಡ್ರೈ ಕ್ಲೀನ್ ಮಾಡುತ್ತಾರೆ. ಇದರಿಂದ ದಿನಕ್ಕೆ 7,000 ರೂ. ಆದಾಯ ಬರುತ್ತದೆ. ಎಲ್ಲಾ ಸೇರಿ ದಿನಕ್ಕೆ ಸುಮಾರು 10,500 ರೂಪಾಯಿ ಗಳಿಸುತ್ತಾರೆ. ತಿಂಗಳಿಗೆ 27 ದಿನ ಕೆಲ್ಸ ಮಾಡಿದ್ರೂ ಒಟ್ಟು ಆದಾಯ ಸುಮಾರು 2.8 ಲಕ್ಷ ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

ಅಂಗಡಿ ಅವರದ್ದೇ ಆದ ಕಾರಣ ಬಾಡಿಗೆ ಇರುವುದಿಲ್ಲ. ವಿದ್ಯುತ್ ಬಿಲ್ ಸುಮಾರು 6,000 ರೂ. ಮತ್ತು ಇಬ್ಬರು ಸಹಾಯಕರ ಸಂಬಳ 40,000 ರೂ. ಕಳೆದರೆ, ಅವರಿಗೆ ತಿಂಗಳಿಗೆ ಅಂದಾಜು 2.3 ಲಕ್ಷ ರೂಪಾಯಿ ಉಳಿಯುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page