Connect with us

DAKSHINA KANNADA

ಜೂ. 15 ರಂದು 12ನೇ ವರ್ಷದ ಸ್ವರುಣ್ ಸ್ಮರಣಾಂಜಲಿ 2025

Published

on

ಮಂಗಳೂರು : ಕಲಾಸಾಧಕ, ಸಮಾಜ ಸೇವಕ, ದಿವಂಗತ ಸ್ವರುಣ್‌ ರಾಜ್‌ ಸಂಸ್ಮರಣೆಯ 12ನೇ ವರ್ಷದ ಕಾರ್ಯಕ್ರಮ ‘ಸ್ವರುಣ್‌ ಸ್ಮರಣಾಂಜಲಿ 2025’ ಜೂನ್ 15 ರಂದು ಭಾನುವಾರ ಸಂಜೆ 5.30ಕ್ಕೆ ಮಂಗಳೂರು ಪುರಭವನದಲ್ಲಿ ಜರುಗಲಿದೆ.

ಸಂಸದ ಬ್ರಿಜೇಶ್ ಚೌಟ, ಸ್ವರುಣ್‌ ರಾಜ್ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ರಾಜ್‌ ಗೌರವ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಮಾಜಿ ಎಂಎಲ್‌ಸಿ ಕ್ಯಾ. ಗಣೇಶ್ ಕಾರ್ಣಿಕ್‌ ಸ್ವರುಣ್ ನುಡಿನಮನ ಸಲ್ಲಿಸಲಿದ್ದಾರೆ. ಬೆಂಗಳೂರಿನ ಯುವ ವಾಗ್ಮಿ ಹಾರಿಕ ಮಂಜುನಾಥ್‌ ಮುಖ್ಯ ಭಾಷಣ ಮಾಡಲಿರುವರು.

(2024 ರ ಕಾರ್ಯಕ್ರಮದ ಫೋಟೋ)

READ IN ENGLISH : https://www.nammakudlaenglish.com/12th-swarun-memorial-on-june-15/

ಇದನ್ನೂ ಓದಿ : ಯಕ್ಷಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

ಬಳಿಕ ವಿಜಯಕುಮಾರ್ ಎಸ್ ಚೆನ್ನೈ ಮತ್ತು ಶುಭಾಮಣಿ ಚಂದ್ರಶೇಖರ್‌ ಇವರಿಂದ ಭರತನಾಟ್ಯ ನಡೆಯಲಿದೆ ಎಂದು ಸನಾತನ ನಾಟ್ಯಾಲಯದ ಪ್ರಕಟಣೆ ತಿಳಿಸಿದೆ.

DAKSHINA KANNADA

‘ಎಲ್ಲಾ ಆದ ಮೇಲೆ ಶಾಂತಿಸಭೆ’: ಸಂಸದ ಕೋಟ

Published

on

ಉಡುಪಿ: ಚರ್ಚೆ, ವಾದ-ವಿವಾದ, ಪ್ರಕರಣಗಳು ಆದ ಬಳಿಕ ಶಾಂತಿ ಸಭೆ ಇಷ್ಟು ದಿನಗಳ ನಂತರವಾ.. ಎಂಬ ಚರ್ಚೆ ಸಮಾಜದಲ್ಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇವತ್ತು ಎಲ್ಲಾ ಶಾಂತಿ ಸಭೆಗಳು, ಪೊಲೀಸ್ ಕ್ರಮಗಳು ಹಾಗೂ ಪೊಲೀಸ್ ಫೋರ್ಸ್‌ಗಳು ಎಲ್ಲವೂ ಕೂಡ ಈ ಸಮಾಜದ ಮುಖ್ಯ ವಾಹಿನಿಯಿಂದ ಬದುಕುತ್ತಿರುವಂತಹ ಹಿಂದೂಗಳ ಮೇಲೆ ಗಧಾ-ಪ್ರಹಾರ ಮಾಡಲು ರೂಪಿಸಿದ್ದಾರೆಯೇ ಎಂಬ ಭಾವನೆ ಮೂಡುತ್ತಿದೆ. ಇಂದು ಯಾವ ರೀತಿಯ ವಾತಾವರಣ ಇದೆ ಎಂದರೆ ಯಾರೇ ಒಬ್ಬ ಕಾರ್ಯಕರ್ತ ಅದು ಬಿಜೆಪಿ ಕಾರ್ಯಕರ್ತನೋ, ಹಿಂದೂತ್ವದ ಬಗ್ಗೆ ಮಾತನಾಡುವ ಸಾಮಾನ್ಯ ಕಾರ್ಯಕರ್ತ ಆಗಿರಬಹುದು, ಅವನ ಬದುಕಿನ ಹಕ್ಕನ್ನೇ ಮೊಟಕುಗೊಳಿಸುವಂತಹ ಪ್ರಯತ್ನಗಳು, ರೌಡಿಶೀಟರ್ ಹಾಕುವಂತಹ ಕೆಲಸಗಳು ನಡೆಯುತ್ತಿವೆ. ಪರಮೇಶ್ವರ್ ಅವರು ತಿಳುವಳಿಕೆ ಇರುವಂತಹ ಮಂತ್ರಿ. ಒಂದು ಸಮಾಜವನ್ನು ಒಡೆಯುವ, ಸಮಾಜದ ಮೇಲೆ ಗಧಾಪ್ರಹಾರ ಮಾಡುವ, ಸಮಾಜದ ಮೇಲೆ ದೌರ್ಜನ್ಯ ಮಾಡುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

WATCH VIDEO

Continue Reading

DAKSHINA KANNADA

ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

Published

on

ಉಡುಪಿ: ಘೋಷನ್ ಇವೆಂಟ್ಸ್ ಮೀಡಿಯಾ ಮತ್ತು ಪ್ರಿಯಾ ಫ್ಯಾಶನ್ ದುಬೈ ಇದರ ಆಶ್ರಯದಲ್ಲಿ ತುಂಬೆ ಮೆಡಿ ಸಿಟಿ ಅಜ್ಮನ್ ಇದರ ಸಹಯೋಗದಲ್ಲಿ “ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡಲ್ ಈಸ್ಟ್- 2025” ಅಂತಾರಾಷ್ಟ್ರೀಯ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ನವೆಂಬರ್ ತಿಂಗಳಲ್ಲಿ ದುಬೈನಲ್ಲಿ ಆಯೋಜಿಸಲಾಗಿದೆ.


ಈ ಸ್ಪರ್ಧೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಘೋಷನ್ ಇವೆಂಟ್ಸ್ ಮೀಡಿಯಾದ ದೆಚಮ್ಮ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ತುಳುನಾಡಿನ ಮಹಿಳೆಯರಿಗೆ ವೇದಿಕೆ‌ ಒದಗಿಸುವ ನಿಟ್ಟಿನಲ್ಲಿ ಈ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ. “ಮಿಸ್ ಮಂಗಳೂರು ದಿವಾ” ಸ್ಪರ್ಧೆಯಲ್ಲಿ 18ರಿಂದ 35ವರ್ಷದೊಳಗಿನ ಅವಿವಾಹಿತ ಮಹಿಳೆಯರು ಭಾಗವಹಿಸ ಬಹುದು. ಮಿಸಸ್ ಮಂಗಳೂರು ದಿವಾ ಸ್ಪರ್ಧೆಯಲ್ಲಿ ಎಲ್ಲ ವಯೋಮಿತಿಯ ವಿವಾಹಿತ ಮಹಿಳೆಯರು ಪಾಲ್ಗೊಳ್ಳಬಹುದು ಎಂದರು. ಆಗಸ್ಟ್ ಅಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಅಂತ್ಯಗೊಳ್ಳಲಿದೆ. ಆ ಬಳಿಕ ಮಂಗಳೂರಿನಲ್ಲಿ ಅಡಿಷನ್ ನಡೆಯಲಿದ್ದು, ಅಲ್ಲಿ ಆಯ್ಕೆಯಾಗುವ ಸ್ಪರ್ಧಿಗಳು ನವೆಂಬರ್ ತಿಂಗಳು ದುಬೈನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ಫೈನಲ್ ಗೆ ಆಯ್ಕೆಯಾಗುವ ಸ್ಪರ್ಧಿಗಳಿಗೆ ವಿಸಾ, ವಿಮಾನ ಟಿಕೆಟ್, ಮೂರು ದಿನಗಳ ವಾಸ್ತವ್ಯವನ್ನು ಒದಗಿಸಲಾಗುವುದು. ಅಲ್ಲದೆ, ಊಟ, ಪ್ರಯಾಣ, ಫೋಟೋ ಶೂಟ್‌, ರ್ಯಾಂಪ್ ವಾಕ್ ತರಬೇತಿ, ಮೇಕಪ್ ಹಾಗೂ ಕಾಸ್ಟ್ಯೂಮ್ ಅನ್ನು ಉಚಿತವಾಗಿ ಆಯೋಜಕರು ಒದಗಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

ಘೋಷನ್ ಇವೆಂಟ್ಸ್ ಮೀಡಿಯಾದ ಸಬಿತಾ ಕರ್ಲೋ ಮಾತನಾಡಿ, ಫೈನಲ್ ನಲ್ಲಿ ಮೂರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಲಿದೆ. ಮೊದಲ ಸುತ್ತಿನಲ್ಲಿ ಸಾಂಪ್ರದಾಯಿಕ ವಸ್ತ್ರ ಧರಿಸಿ ಪ್ರದರ್ಶನ ನೀಡಬೇಕು. ಎರಡನೇ ಸುತ್ತಿನಲ್ಲಿ ಫಿಜನ್ ಹಾಗೂ ಮೂರನೇ ಸುತ್ತಿನಲ್ಲಿ ಗೌನ್ ಧರಿಸಿ ವಾಕ್ ಮಾಡಬೇಕು. ಮೂರನೇ ಸುತ್ತಿನ ಬಳಿಕ ಪ್ರಶ್ನಾವಳಿ ಸುತ್ತು ನಡೆಯಲಿದೆ. ಟಾಪ್ ಮೂವರು ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಿಯಾ ಫ್ಯಾಶನ್ ಮಾಲಕಿ ಪ್ರಿಯಾ ಫೆರ್ನಾಂಡಿಸ್, ಮಿಸ್ಟರ್ ಯುಎಇ ವಿನ್ನರ್ ಗೌತಮ್ ಬಂಗೇರ, ವಿಷ್ಣುವರ್ಧನ್ ಭಟ್ ಇದ್ದರು.

Continue Reading

DAKSHINA KANNADA

ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ದ ಮಸೂದೆ ಮಂಡನೆ ಮಾಡ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Published

on

ಮಂಗಳೂರು: ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ದ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.


ಈ ಸಭೆಯನ್ನು ನಾವು ಯಾವುದೇ ದುರುದ್ದೇಶದಿಂದ ಕರೆದಿಲ್ಲ ಅಥವಾ ‌ದ.ಕ ಜಿಲ್ಲೆಗೆ ಯಾವುದೇ ಲೇಬಲ್ ಹಚ್ಚಲು ನಾವು ಕರೆದಿಲ್ಲ. ಇತಿಹಾಸ ನೋಡಿದ್ರೆ ಇಡೀ ರಾಜ್ಯದಲ್ಲಿ ದ.ಕ ಜಿಲ್ಲೆಯಂಥ ಜಿಲ್ಲೆ ಮತ್ತೊಂದಿಲ್ಲ. ನೀವು ಬುದ್ದಿವಂತರು ಮಾತ್ರವಲ್ಲ, ಬಹಳಷ್ಟು ಕ್ರಿಯಾಶೀಲರು, ಪ್ರಪಂಚದ ಯಾವುದೇ ಮೂಲೆಯಲ್ಲಿ ಬದುಕಬಹುದಾದ ಚಾಕಚಕ್ಯತೆ ಉಳ್ಳವರು. ಇಡೀ ದೇಶದ ಶಿಕ್ಷಣ ವ್ಯವಸ್ಥೆನ್ನ ನಿಯಂತ್ರಣ ಮಾಡೋರು ನೀವು, ಎಂದು ಮಂಗಳೂರು ಶಾಂತಿ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರಾವಳಿಯನ್ನು ಹಾಡಿ ಹೊಗಳಿದ್ದಾರೆ.

ಲಕ್ಷಾಂತರ ಜನರು ವಿದ್ಯಾರ್ಥಿಗಳು ಇಲ್ಲಿ ಕಲಿತು ಹೋಗಿ ಜೀವನ ಕಟ್ಟುಕೊಂಡಿದ್ದಾರೆ. ದೇಶದ ಮೊದಲ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ಕೊಡುಗೆ ಕೊಟ್ಟ ಜಿಲ್ಲೆ ದ.ಕ. ಸುಮಾರು‌ 38 ಜನರು ಇಂದು ತಮ್ಮ ಅಭಿಪ್ರಾಯ ಹೇಳಿದ್ದೀರಿ. ಬಹಳಷ್ಟು ಜನರು ಒಳ್ಳೆಯ ಸಲಹೆ ಕೊಟ್ಟಿದ್ದೀರಿ, ಸರ್ಕಾರದ ಜವಾಬ್ದಾರಿ ತಿಳಿಸಿದ್ದೀರಿ. ಹರೀಶ್ ಪೂಂಜಾ, ಭರತ್ ಶೆಟ್ಟಿ, ಕಾಮತ್ ಸತ್ಯ ಹೇಳಿದ್ದೀರಿ ಇದೊಂದು ಸೈದ್ದಾಂತಿಕ ಜಗಳ ಅಂತ ನಿಜವಾದ ಸತ್ಯ ಹೇಳಿದ್ದೀರಿ, ಆದರೆ ನಮ್ಮ‌‌ ಮಕ್ಕಳು ಇಂಥ ಭಯದಲ್ಲೇ ಬದುಕಬೇಕಾ? ನಾನು ನೆಹರೂ ಮೈದಾನಕ್ಕೆ ಚಿಕ್ಕಂದಿನಲ್ಲಿ ಅಥ್ಲೀಟ್ ಆಗಿ ಬಂದಿದ್ದೆ, ಆಗ ಯಾರೂ ಇಲ್ಲಿ ಹಿಂದೂ ಮುಸ್ಲಿಂ ಅಂದಿದ್ದನ್ನ ನಾನು ನೋಡಿಲ್ಲ. ಹಾಗಾಗಿ ಇತಿಹಾಸ ಸ್ಮರಿಸಿಕೊಳ್ಳಿ, ದ.ಕ ಜಿಲ್ಲೆಯ ಅವಶ್ಯಕತೆ ಇದೆ. ನಾವು ನಿಮ್ಮ ಸಲಹೆಗಳನ್ನು ತೆಗೆದುಕೊಂಡು ಚರ್ಚೆ ಮಾಡಬೇಕಿದೆ. ಆ ಬಳಿಕ ಏನೆಲ್ಲಾ ಕ್ರಮ ವಹಿಸಬೇಕೋ ಅದನ್ನ ವಹಿಸ್ತೇನೆ. ಮುಖ್ಯಮಂತ್ರಿಗಳು ಸದನದಲ್ಲೇ ಡ್ರಗ್ಸ್ ವಿರುದ್ದ ಯುದ್ದ ಸಾರಿದ್ದಾರೆ. ನಾವು ಯಾವುದೇ ಕಾರಣಕ್ಕೂ ಮತ್ತೊಂದು ಉಡ್ತಾ ಪಂಜಾಬ್ ಆಗಲು ಬಿಡಲ್ಲ. ಮಂಗಳೂರು ಕಮಿಷನರ್, ಎಸ್ಪಿಗೂ ಅದನ್ನ ಖಡಕ್ ಆಗಿ ಹೇಳಿದ್ದೇನೆ.

ಇದನ್ನೂ ಓದಿ: ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

ಬಹಳ ಸಾಂಸ್ಕೃತಿಕವಾಗಿ ಐಶ್ವರ್ಯವಂತ ಜಿಲ್ಲೆ ದ.ಕ ಜಿಲ್ಲೆಯಲ್ಲಿ ಸೌಹಾರ್ದ ಸಮಾವೇಶ ಮಾಡುವ ಬಗ್ಗೆಯೂ ಚಿಂತನೆ ಇದ್ದು, ಶಾಂತಿಯ ವಾತಾವರಣ ಕರಾವಳಿ ಪ್ರದೇಶದಲ್ಲಿ ಬರಬೇಕು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬಾರದು. ಪೊಲೀಸರು ಇನ್ನೂ ಕಠಿಣವಾಗಿ ಹೋಗಲು ಅವಕಾಶ ಕೊಡಬೇಡಿ. ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ದ ಮಸೂದೆ ಮಂಡನೆ ಮಾಡ್ತೇವೆ. ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಮಂಡನೆ ಮಾಡ್ತೇವೆ ಎಂದು ಪರಮೇಸ್ವರ್ ಇದೇ ಸಂಧರ್ಭ ತಿಳಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page