Connect with us

LATEST NEWS

ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿ 19 ದಿನ: ಮುಂದೇನು?

Published

on

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ನಾಪತ್ತೆಯಾಗಿ ಇಂದಿಗೆ 19 ದಿನಗಳು ಕಳೆದಿದೆ. ಇದಕ್ಕಾಗಿ ಮಂಗಳೂರು ನಗರ ಪೊಲೀಸ್‌ ಆಯುಕ್ತರು 4 ತಂಡಗಳನ್ನು ರಚಿಸಿದ್ದು, ಆದರೂ ಪ್ರಮುಖ ಆರೋಪಿ ಪತ್ತೆಯಾಗಿಲ್ಲ.

ಈ ಘಟನೆ ನಡೆದ ನಂತರದಲ್ಲಿ ಪೊಲೀಸರ ಪ್ರತಿಯೊಂದು ನಡೆ ಅನುಮಾನಾಸ್ಪದವಾಗಿದೆ ಎಂದು ಇಲಾಖೆಯ ಸಿಬ್ಬಂದಿಯೇ ದೂರುತ್ತಿದ್ದು, ಬಡವನಿಗೊಂದು ನ್ಯಾಯ ದುಡ್ಡಿದ್ದವರಿಗೊಂದು ನ್ಯಾಯ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಪ್ರಮುಖ ಆರೋಪಿಯನ್ನು ಬಿಟ್ಟು ಉಳಿದವರನ್ನು ವಶಕ್ಕೆ ಪಡೆದು, ಅಮಾನತು ಮಾಡಿ ಪೊಲೀಸ್‌ ಇಲಾಖೆ ಕೈತೊಳೆದುಕೊಂಡಿದೆ ಎನ್ನುವುದು ಸಾರ್ವಜನಿಕರ ಆರೋಪ. ಪ್ರಕರಣ ಸುದ್ದಿಯಾದಾಗಿನಿಂದ ಏನೆಲ್ಲಾ ಘಟನಾವಳಿ ನಡೆದಿದೆ ಎಂಬ ಪಿನ್‌ ಟು ಪಿನ್‌ ವರದಿ ಇಲ್ಲಿದೆ.
ಘಟನಾವಳಿ ವಿವರ
ನಗರದ ಕಾನೂನು ಕಾಲೇಜಿನಲ್ಲಿ ಕಲಿಯುತ್ತಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿ ಆ.8ರಂದು ನ್ಯಾಯವಾದಿ ಕೆ.ಎಸ್‌.ಎನ್‌ ರಾಜೇಶ್‌ ಅವರ ಕರಂಗಲ್ಪಾಡಿ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು.
ಸೆ.25ರಂದು ರಾಜೇಶ್‌ ಭಟ್‌ ಆತನ ಚೇಂಬರ್‌ ಒಳಗೆ ಈ ಯುವತಿಯನ್ನು ಕರೆದು ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ಮೊದಲು ಸಹ ಆಕೆ ಕೆಲಸ ಮಾಡುತ್ತಿರುವ ವೇಳೆ ಸಿಸಿಟಿವಿಯ ಮೂಲಕ ಪೋಟೋ ತೆಗೆದು ಆ ಫೋಟೋವನ್ನು ಆಕೆಗೆ ವಾಟ್ಸಪ್‌ ಮೂಲಕ ಕಳುಹಿಸಿ ಅಸಭ್ಯ ಮೇಸೆಜ್‌ ಮಾಡುತ್ತಿದ್ದನು.
ಅ.18ರಂದು ಈ ಬಗ್ಗೆ ಮಂಗಳೂರು ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ.

ಘಟನೆ ನಡೆದ ಎರಡು ದಿನದೊಳಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಎನ್‌.ಶಶಿಕುಮಾರ್‌ ಆರೋಪಿಯ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿ ಬರುತ್ತಾರೆ.
ಅ.22ರಂದು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್​​ ಹಾಗೂ ಬಾರ್ ಅಸೋಸಿಯೇಷನ್​​ನಿಂದ ರಾಜೇಶ್ ಭಟ್ ಅಮಾನತು ಆಗುತ್ತಾನೆ.
ಅ.27ರಂದು ರಾಜೇಶ್‌ ಭಟ್‌ಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಬೋಂದೆಲ್‌ ನಿವಾಸಿ ಅನಂತ ಭಟ್‌ ಎಂಬುವವನ್ನು ಪೊಲೀಸರು ವಶಕ್ಕೆ ಪಡೆಯುತ್ತಾರೆ. ಈತ ರಾಜೇಶ್‌ ಭಟ್‌ ಅನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಬಿಟ್ಟಿದ್ದಾನೆ ಎಂಬ ಆರೋಪದಲ್ಲಿ ಈತನ ಬಂಧನವಾಗುತ್ತದೆ.
ಅ.29ರಂದು ಜಿಲ್ಲಾ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳ್ಳುತ್ತದೆ.


ಅದಾದ ಮರುದಿನ ಅಂದರೆ ಅ.30ರಂದು ನಗರದ ಕ್ಲಾಕ್‌ ಟವರ್‌ ಮುಂದೆ ಸರ್ವಕಾಲೇಜು ವಿದ್ಯಾರ್ಥಿ ಸಂಘ ಜೊತೆ ಹಲವು ಸಾಮಾಜಿಕ ಹೋರಾಟಗಾರರು ಸೇರಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸುತ್ತಾರೆ. ಅದರಲ್ಲೂ ಸಂತ್ರಸ್ತೆಯೇ ಪ್ರತಿಭಟನೆಯಲ್ಲಿ ಭಾಗಿಯಾಗಿ ಆರೋಪಿ ಬಂಧನಕ್ಕೆ ಆಗ್ರಹಿಸುತ್ತಾಳೆ.
ನ.2ರಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಪೊಲೀಸ್‌ ಕಮೀಷನರ್‌, ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಆರೋಪದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಮಂಗಳೂರು ದಕ್ಷಿಣ ವಿಭಾಗ ಸಹಾಯಕ ಪೊಲೀಸ್‌ ಆಯುಕ್ತ ರಂಜಿತ್‌ ಬಂಡಾರು ನೇತೃತ್ವದಲ್ಲಿ 4 ಪೊಲೀಸ್‌ ತಂಡ ರಚಿಸಲಾಗಿದೆ.

ಆರೋಪಿ ಪದೇ ಪದೇ ವಾಸ್ತವ್ಯ ಬದಲಾಯಿಸುತ್ತಿದ್ದಾನೆ ಎಂದು ಹೇಳಿಕೆ ನೀಡುತ್ತಾರೆ. ಈ ಪ್ರಕರಣದಲ್ಲಿ ಪವಿತ್ರಾ ಆಚಾರ್ಯ, ಸಂತ್ರಸ್ತೆಯ ಬಾಯ್ ಫ್ರೆಂಡ್ ಧ್ರುವ ಮತ್ತು ಆತನ ತಾಯಿ ಮಹಾಲಕ್ಷ್ಮೀ ಹಾಗೂ ಅನಂತ ಭಟ್‌ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರುತ್ತಾರೆ.
ಈ ಪ್ರಕರಣದಲ್ಲಿ ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಇಷ್ಟೆಲ್ಲಾ ಬೆಳವಣಿಗೆಗಳು ಆಗಿ 19 ದಿನಗಳು ಕಳೆದಿವೆ. ಪ್ರಕರಣ ದಾಖಲಾದ ದಿನದಿಂದ ಆರೋಪಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ತನಕ ಬಂಧಿಸದೇ ಆತ ಪರಾರಿಯಾಗಲು ಪೊಲೀಸರೇ ಸಹಕರಿಸಿದ್ದಾರೆ ಎಂಬ ಆರೋಪವನ್ನು ಪ್ರತಿಭಟನಾ ನಿರತರೇ ಮಾಡಿದ್ದಾರೆ.

ಅದಾಗಿ ಜಾಮೀನು ಅರ್ಜಿ ವಜಾ ಆಗಿ 8 ದಿನಗಳು ಕಳೆದರೂ ಪೊಲೀಸರು 4 ತಂಡ ಮಾಡಿ ಯಾರನ್ನು ಹುಡುಕುತ್ತಿದ್ದಾರೆ ಎಂಬುವುದೇ ಇದುವರೆಗೂ ಸ್ಪಷ್ಟವಾಗಿಲ್ಲ ಎಂದು ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
ಅ.30ರಂದು ಪ್ರತಿಭಟನೆ ನಡೆಸಲು ಅನುಮತಿಗಾಗಿ ಪೊಲೀಸರ ಬಳಿ ಹೋದಾಗ ಗಂಟೆಗಟ್ಟಲೆ ಅಲೆದಾಡಿಸಿದ್ದಾರೆ ಎಂದು ಹೆಸರು ಹೇಳಲಿಚ್ಚಿಸದ ವಿದ್ಯಾರ್ಥಿ ಆರೋಪಿಸಿದ್ದಾರೆ.
ಮಂಗಳೂರು ನಗರಕ್ಕೆ ಎನ್‌.ಶಶಿಕುಮಾರ್‌ ಪೊಲೀಸ್‌ ಆಯುಕ್ತರಾಗಿ ಬಂದಾಗಿನಿಂದ ಸಣ್ಣಪುಟ್ಟ ಪ್ರಕರಣಗಳನ್ನು ಬೇಧಿಸಿ ಸಾಮಾಜಿಕ ಜಾಲತಾಣದ ಹೀರೋ, ಮಂಗಳೂರಿನ ಸೂಪರ್‌ ಕಾಪ್‌ ಅನಿಸಿಕೊಂಡಿದ್ದಾರೆ. ಆದರೆ ಈ ಪ್ರಕರಣದಲ್ಲಿ ಪೊಲೀಸ್‌ ಕಮೀಷನರದ್ದು ಜಾಣ ನಡೆ ಅನ್ನುತ್ತಿದ್ದಾರೆ ಸ್ವತಃ ಪೊಲೀಸ್‌ ಮೂಲಗಳು.
ಸದ್ಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಅದಾದ ಬಳಿಕ ಸಮಾನ ಮನಸ್ಕ ಸಂಘಟನೆ ಜೊತೆಗೂಡಿ ಶೀಘ್ರದಲ್ಲಿಯೇ ಉಪವಾಸ ಸತ್ಯಾಗ್ರಹದೊಂದಿಗೆ ಹೈಕೋರ್ಟ್‌ ಕದ ತಟ್ಟಲು ಸಿದ್ದತೆ ನಡೆಸಲಾಗಿದೆ.
ಉಪವಾಸ ಸತ್ಯಾಗ್ರಹಕ್ಕೆ ಪೊಲೀಸರು ಇದಕ್ಕೆ ಅನುಮತಿ ನೀಡುವುದಿಲ್ಲ ಎಂಬುವುದು ನಮಗೆ ಗೊತ್ತಿದೆ. ಆದರೆ ಅನುಮತಿ ನೀಡದಿದ್ದರೂ ನಾವು ಉಪವಾಸ ನಡೆಸಿಯೇ ತೀರುತ್ತೇವೆ ಎಂದು ವಿದ್ಯಾರ್ಥಿ ಮುಖಂಡರೊಬ್ಬರು ಹೇಳಿದ್ದಾರೆ.
‘ಪ್ರತಿಯೊಂದು ವಿಷಯದಲ್ಲಿ ಜವಾಬ್ದಾರಿ ತೆಗೆದುಕೊಳ್ಳುವ ಕಮೀಷನರ್‌ ಇಂತಹ ಸೂಕ್ಷ್ಮ ಪ್ರಕರಣದಲ್ಲಿ ಜವಾಬ್ದಾರಿ ತೆಗೆದುಕೊಳ್ಳದೆ ತಂಡ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಆ ತಂಡ ಈ ತನಕ ಏನು ಮಾಡಿದೆ? ಸಾಮಾಜಿಕ ಕಾರ್ಯಕರ್ತೆ, ಪ್ರಸನ್ನ ರವಿ ಪ್ರಶ್ನಿಸಿದ್ದಾರೆ.

LATEST NEWS

ಜನ್ಮದಿನದ ಪಾರ್ಟಿಗೆ ಕರೆಸಿ ಯುವಕನ ಹ*ತ್ಯೆ

Published

on

ಮಂಗಳೂರು/ರಾಯಚೂರು :  ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಯುವಕನ ಕೊ*ಲೆ ಮಾಡಿರುವ ಘಟನೆ ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ  ನಡೆದಿದೆ.

ಜಹೀರಾಬಾದ್ ಬಡಾವಣೆ ನಿವಾಸಿ, 22 ವರ್ಷದ ವಿಶಾಲ್ ಕೊ*ಲೆಯಾದ ಯುವಕ. 19 ವರ್ಷದ ರಾಜು ಅಲಿಯಾಸ್ ಯೇಸು ಮತ್ತು ಬಸವರಾಜ  ಕೊ*ಲೆಗೈದ ಆರೋಪಿಗಳು.

ಇದನ್ನೂ ಓದಿ : ವಸತಿ ಕಟ್ಟಡದ ಮೇಲೆ ಫೈ*ರಿಂಗ್ ; ಬಾಲಿವುಡ್ ನಟನ ಬಂಧನ

ಬಸವರಾಜ ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ವಿಶಾಲ್ ನನ್ನು ಕರೆಸಿಕೊಂಡಿದ್ದ. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ಬಳಿಕ ಕೊ*ಲೆಯಲ್ಲಿ ಅಂತ್ಯ ಕಂಡಿದೆ. ಕೊ*ಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

bangalore

ಕೆಲಸಕ್ಕೆ ಗೈರಾಗಿದ್ದಕ್ಕೆ ಯುವತಿಗೆ ಸಾರ್ವಜನಿಕವಾಗಿ ಅವಮಾನ: ಮಾಲೀಕ ಪೊಲೀಸರ ವಶ

Published

on

ಬೆಂಗಳೂರು: ಐದು ವರ್ಷದಿಂದ ಕೆಲಸ ಮಾಡುತ್ತಿದ್ದ ಯುವತಿ ರಜೆ ಹಾಕಿದ್ದಕ್ಕೆ ಸೈಬರ್‌ ಸೆಂಟರ್‌ ಮಾಲೀಕ ಆಕೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.


ಕಳೆದ ಐದು ವರ್ಷಗಳಿಂದ ಲಕ್ಷ್ಮಿ ಎಂಬ ಯುವತಿ ‘ಮುಸ್ಕಾನ್‌ ಟೈಮ್ಸ್‌’ ಸೈಬರ್‌ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಲಕ್ಷ್ಮಿ ವೈಯಕ್ತಿಕ ಕಾರಣದಿಂದ ಗೈರಾಗಿದ್ದರು. ಈ ಕಾರಣಕ್ಕೆ ಕೋಪಗೊಂಡ ಮಾಲೀಕ ಸೈಯದ್‌, ಯುವತಿಯ ವಿರುದ್ಧ ಧ್ವೇಷ ಸಾಧಿಸಲು ಶುರುಮಾಡಿದ್ದ.

ಲಕ್ಷ್ಮಿ ಗುರುವಾರ(ಜ.22) ರಾತ್ರಿ 7.30ರ ಹೊತ್ತಿಗೆ ರಸ್ತೆಯಲ್ಲಿ ಹೋಗುತ್ತಿದ್ದಾಗ, ಸೈಯದ್‌ ಆಕೆಯನ್ನು ಅಡ್ಡಗಟ್ಟಿ ಸಾವರ್ಜನಿಕವಾಗಿ ಅಶ್ಲೀಲ ಪದಗಳಿಂದ ನಿಂದಿಸಲು ಶುರು ಮಾಡಿದ್ದ. ‘ನಿನಗೆ ಬಟ್ಟೆ ಬಿಚ್ಚಿ ಹೊಡೆಯುತ್ತೇನೆ, ರಸ್ತೆಯಲ್ಲಿಯೇ ಕತ್ತರಿಸಿ ಹಾಕುತ್ತೇನೆ. ನಿನ್ನಿಂದ ನನ್ನ ದುಡ್ಡೆಲ್ಲಾ ಹೋಯಿತು, ನನ್ನ ತಲೆ ಕೆಡಿಸಬೇಡ’ ಎಂದು ಅತೀ ಕೀಳಾಗಿ ಮಾತನಾಡಿದಲ್ಲದೇ, ಅಸಭ್ಯವಾಗಿ ವರ್ತಿಸಿದ್ದ.

ಸೈಯದ್‌ನ ಈ ವರ್ತನೆ ಗಮನಿಸಿದ ಸ್ಥಳೀಯರು ಆತನನ್ನು ಸ್ಥಳದಲ್ಲೇ ಜಮಾಯಿಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಒಂದು ಮಹಿಳೆಯ ಜತೆ ವರ್ತಿಸುವ ರೀತಿ ಇದಲ್ಲ ಎಂದು ಬುದ್ಧಿ ಹೇಳಿದರು. ಬಳಿಕ ಪರಿಸ್ಥಿತಿ ತೀವ್ರ ವೀಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದು ಕಪಾಳಮೋಕ್ಷಕ್ಕೆ ಬಲಿಯಾಯ್ತು ಗೆಳೆತನ; ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಮಾಡಿ ತಪ್ಪೊಪ್ಪಿಕೊಂಡ ಯುವಕ

ಮಾಹಿತಿ ತಿಳಿದು ಸ್ಥಳಕ್ಕೆ ತಕ್ಷಣ ಧಾವಿಸಿದ ಕೆಂಗೇರಿ ಪೊಲೀಸರು ಯುವತಿಗೆ ಪ್ರಾಣ ಬೆದರಿಕೆ ಮತ್ತು ಮಾನಹಾನಿ ಮಾಡಿದ ಆರೋಪದಡಿ ಪ್ರಕರಣ ದಾಖಲಾಸಿ, ಸೈಯದ್‌ನನ್ನು ವಶಕ್ಕೆ ಪಡೆದಿದ್ದಾರೆ. ಜತೆಗೆ ಈ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Continue Reading

DAKSHINA KANNADA

ಫೆ.14ರಂದು 16ನೇ ವರ್ಷದ ಜಯ-ವಿಜಯ ಜೋಡುಕರೆ ಕಂಬಳ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಮಂಗಳೂರು ಇವರ ನೇತೃತ್ವದಲ್ಲಿ ಮನ್ಕು ತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಫೆ.14 ಮತ್ತು 15ರಂದು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆಯಿತು. ಸುತೇಜ್ ಎಂಟರ್ ಪ್ರೈಸಸ್ ಮುಂಬಯಿ ಇದರ ಎಂಡಿ, ಹಾಗೂ ಕಂಬಳದ ಮಾರ್ಗದರ್ಶಕ ಎಚ್. ಸುಧಾಕರ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಮುಂದಾಳತ್ವದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ನಂತರ ಈ ಬಗ್ಗೆ ಸುಧಾಕರ್ ಶೆಟ್ಟಿ ಮಾತನಾಡಿ ಜಪ್ಪಿನಮೊಗರುವಿನಲ್ಲಿ ನಡೆಯುತ್ತಿರುವ ಕಂಬಳ ಅತ್ಯಂತ ವಿಶೇಷವಾದದ್ದು. ಯಾಕಂದ್ರೆ ಶಾಸಕ ವೇದವ್ಯಾಸ್ ಕಾಮತ್ ಅವರ ಸಹಕಾರದಿಂದ ವ್ಯವಸ್ಥಿತವಾಗಿ ಈಗ ನಡೆಯುತ್ತಿದೆ. ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸ್ತಾರೆ. ಕಂಬಳವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಗೌರವಾಧ್ಯಕ್ಷ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಉದ್ಯಮಿಗಳು ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಕಂಬಳದಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಯ ವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆ ವೀಣಾಮಂಗಳ, ಮತ್ತೋರ್ವ ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ತಿರುವೈಲುಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು ಮತ್ತಿತ್ತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page