Connect with us

BANTWAL

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

Published

on

ವಿಶೇಷ ವರದಿ

ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು ವರ್ಷಗಳು ಸಂದಿವೆ.

ಆದರೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಓರ್ವ ಇನ್ನೂ ಪೊಲೀಸರ ಕೈಗೆ ಸಿಗದೆ ಭೂಗತನಾಗಿದ್ದಾನೆ. ಇದೇ ಪ್ರಕರಣದ ಮತ್ತೊಂದು ಪ್ರಮುಖ ಅಂಶ ಎಂದರೆ ಮಡಿವಾಳ ಹತ್ಯೆ ಆರೋಪದ ಎಲ್ಲಾ ಆರೋಪಿಗಳು ಜಾಮೀನಿನ ಮೇಲೆ ಹೊರಗಿದ್ದಾರೆ.

 ಕೊಲೆಯಾದ ಶರತ್‌ ಮಡಿವಾಳ

18 ಮಂದಿಯ ಬಂಧನ-ರಿಲೀಸ್‌
ಬಂಟ್ವಾಳದ ಆರ್‌ ಎಸ್‌ ನಾಯಕ ಶರತ್‌ ಮಡಿವಾಳ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಬಂಟ್ವಾಳದ ಸಜಿಪ ಮುನ್ನೂರಿನ ಆಲಾಡಿಯ ಶರೀಫ್‌ ಸಹಿತ ಒಟ್ಟು 18 ಜನರನ್ನು ಪೊಲೀಸರು ಬಂಧಿಸಿದ್ದರು. ಇದರಲ್ಲಿ ಖಲಂದರ್‌ ನಿಸಾರ್‌ ಎಂಬಾತ ಸುಮಾರು ಒಂದೂವರೆ ವರ್ಷಕ್ಕಿಂತಲೂ ಅಧಿಕ ಸಮಯ ತಲೆಮರೆಸಿಕೊಂಡಿದ್ದ.

ಕೊನೆಗೆ 2019 ಮಾ.1 ರಂದು ಬಂಟ್ವಾಳ ನ್ಯಾಯಲಯಕ್ಕೆಖಲಂದರ್ ಶರಣಾಗಿದ್ದ. ಆದರೆ ಕೃತ್ಯಕ್ಕೆ ಸಹಕರಿಸಿದ್ದ ಆರೋಪಿ ಇಬ್ರಾಹಿಂ ನಂದಾವರ ಇನ್ನು ಕೂಡ ತಲೆಮರೆಸಿಕೊಂಡಿದ್ದು ಆತನನ್ನು ಹುಡುಕಿ ತರುವುದು ಪೊಲೀಸರಿಗೆ ಸವಾಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತರೆಲ್ಲರೂ ಜಾಮೀನಿನ ಮೇಲೆ ಹೊರಗಿದ್ದಾರೆ.

            ಶರತ್‌ ಮಡಿವಾಳ ಶವಯಾತ್ರೆ

ಎಲ್ಲಿದ್ದಾನೆ ಇಬ್ರಾಹಿಂ ನಂದಾವರ?
ಶರತ್‌ ಮಡಿವಾಳ ಹತ್ಯೆ ಪ್ರಕರಣದಲ್ಲಿ ಇಬ್ರಾಹಿಂ ನಂದಾವರ ಸಹಕರಿಸಿದ್ದ ಜೊತೆಗೆ ಕೊಲೆ ನಡೆದಾಗ ಬಂಟ್ವಾಳ ಆಸುಪಾಸಿನಲ್ಲಿದ್ದ. ಆದರೆ ತನಿಖೆಯ ಜಾಡು ಹಿಡಿದ ಪೊಲೀಸರ ಕಣ್ಣು ಇಬ್ರಾಹಿಂ ಮೇಲೆ ಬೀಳುತ್ತಿದ್ದಂತೆ ಆತ ಕೊಲ್ಲಿ ರಾಷ್ಟ್ರಕ್ಕೆ ಎಸ್ಕೇಪ್‌ ಆಗಿದ್ದಾನೆ ಎಂದು ಹೇಳಲಾಗುತ್ತಿದೆ.

ಆದ್ರೆ ಈವರೆಗೆ ಭಾರತಕ್ಕೆ ಹಿಂತಿರುಗಿಲ್ಲ ಅಥವಾ ಆತನನ್ನು ಭಾರತಕ್ಕೆ ಕರೆ ತರಲು ಬೇಕಾದ ಫೈಲ್ ಪುಟಪ್ ಗೃಹ ಇಲಾಖೆ ಮಾಡಿಲ್ಲ ಪೊಲೀಸ್‌ ಇಲಾಖೆ ಮೂಲಗಳು ತಿಳಿಸಿವೆ.

ಈತನ ವಿರುದ್ಧ ದೇಶಾದ್ಯಂತ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ ಸಹಿತ ಎಲ್ಲೆಡೆ ಸರ್ಚ್‌ ವಾರೆಂಟ್‌ ಜಾರಿಯಲ್ಲಿದೆ ಅಂತನೂ ಪೊಲೀಸ್ ಇಲಾಖೆ ಹೇಳುತ್ತಿದೆ.

ಬೆಂಗಳೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆ

ಓರ್ವ ಆರೋಪಿ ಮೇಲೆ ನಡೆದಿತ್ತು ಕೊಲೆಯತ್ನ?
ಇದೇ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ಆರೋಪಿ ಶರೀಫ್ ಎಂಬಾತನ ಮೇಲೆ 2020ರ ಆ.6 ರಂದು ಬಂಟ್ವಾಳದ ಆತನ ಮನೆ ಬಳಿಯೇ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿತ್ತು. ಈ ವೇಳೆ ಆತ ಓಡಿಹೋಗಿ ಪ್ರಾಣ ಉಳಿಸಿಕೊಂಡಿದ್ದ.

ಎಸ್ಪಿ ಸೇರಿ ಹಲವರಿಗೆ ವರ್ಗಾವಣೆ ಶಿಕ್ಷೆ ವಿಧಿಸಿದ್ದ ಪ್ರಕರಣ
ಶರತ್‌ ಮಡಿವಾಳ ಕೊಲೆ ಪ್ರಕರಣ ಕರಾವಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ರೆ ರಾಜ್ಯ ರಾಜಕೀಯವನ್ನು ಅಲ್ಲೋಲ ಕಲ್ಲೋಲ ಮಾಡಿತ್ತು. ಆ ಸಮಯದಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವಿತ್ತು.

ಸುಧೀರ್ ಕುಮಾರ್ ರೆಡ್ಡಿ

ಬಿ. ರಮಾನಾಥ್‌ ರೈ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಪ್ರಕರಣ ನಡೆದ ಸಂದರ್ಭ ಆಗಿನ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಭೂಷಣ್ ಜಿ. ಬೊರಸೆ, ಬಂಟ್ವಾಳ ಡಿವೈಎಸ್‌ಪಿ ರವೀಶ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಯ್ಯ, ಬಂಟ್ವಾಳ ನಗರ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ರಕ್ಷಿತ್‌ ಅವರು ಸಾಮೂಹಿಕವಾಗಿ ವರ್ಗಾವಣೆಯಾಗಿದ್ದರು.

ಭೂಷಣ್ ಜಿ. ಬೊರಸೆ ಸ್ಥಳಕ್ಕೆ ಸುಧೀರ್ ಕುಮಾರ್ ರೆಡ್ಡಿ ಎಸ್ಪಿಯಾಗಿ ನೇಮಕವಾಗಿದ್ದರು. ಅದಾದ ನಂತರದಲ್ಲಿ ಇಬ್ರಾಹಿಂ ನಂದಾವರ ಬಿಟ್ಟು ಉಳಿದೆಲ್ಲಾ ಆರೋಪಿಗಳ ಬಂಧನವಾಗಿತ್ತು.

2 ತಿಂಗಳು ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ
2017 ಜು.4 ರಂದು ರಾತ್ರಿ 9.30ಕ್ಕೆ ಬಿ.ಸಿ.ರೋಡಿನಲ್ಲಿ ದುಷ್ಕರ್ಮಿಗಳಿಂದ ಶರತ್ ಮಡಿವಾಳನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶರತ್ ಮಡಿವಾಳ ಜು. 7ರಂದು ಮಧ್ಯರಾತ್ರಿ 12.30ಕ್ಕೆ ಚಿಕಿತ್ಸೆಫಲಕಾರಿಯಾಗದೇ ಮೃತಪಟ್ಟಿದ್ದರು.

  ಶರತ್‌ಗೆ ನಿರ್ಮಿಸಿದ ಸ್ಮಾರದ ಮುಂದೆ ಆತನ ತಂದೆ 

ಇದಾದ ಮರುದಿನ ಮಂಗಳೂರಿನ ಆಸ್ಪತ್ರೆಯಿಂದ ಆರಂಭವಾಗಿದ್ದ ಶವಯಾತ್ರೆ ಬಿ.ಸಿ.ರೋಡ್ ತಲುಪುವ ಹೊತ್ತಿಗೆ ಕಲ್ಲು ತೂರಾಟ, ಗಲಭೆನಡೆದು ಹೋಗಿ ಬಂಟ್ವಾಳ ಪ್ರದೇಶ ಅಕ್ಷರಶ ರಣರಂಗವಾಗಿತ್ತು. ಪೊಲೀಸರು ಹರ ಸಾಹಸ ಪಟ್ಟು ಪರಿಸ್ಥಿತಿಯನ್ನು ನಿಭಾಯಿಸಿ ನಿಷೇಧಾಜ್ಞೆ ಹೇರಲಾಗಿತ್ತು.

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

BANTWAL

ಸ್ಕೂಟರಿಗೆ ಢಿ*ಕ್ಕಿ ಹೊಡೆದ KSRTC ಬಸ್; ಸವಾರ ಸಾ*ವು

Published

on

ಬಂಟ್ವಾಳ: ಕೆ.ಎಸ್.ಆ‌ರ್.ಟಿ.ಸಿ ಬಸ್ಸು ಓವ‌ರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿ*ಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ಪಾಣೆಮಂಗಳೂರಿನ ನೆಹರೂನಗರದಲ್ಲಿ ತಡರಾತ್ರಿ ನಡೆದಿದೆ.


ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃ*ತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಬಿರುಗಾಳಿ; 25 ಮಂದಿ ಬಲಿ

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಡಿ*ಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಲಾರಿಗಳು ಪರಸ್ಪರ ಡಿಕ್ಕಿಯಾಗಿ ಪಲ್ಟಿ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಸಾ*ವು

Published

on

ಬಂಟ್ವಾಳ: ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾ*ವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಬಳಿ ಗುರುವಾರ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಕ್ಲೀನರ್ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪ*ಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಡಾಮರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.​​​​​

ಅಪ*ಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರುವ ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಮಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಮಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ ಪ್ರಕರಣ; ಎಸ್ಪಿ ಡಾ. ಅರುಣ್‌ ಹೇಳಿದ್ದೇನು?

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page