Connect with us

LATEST NEWS

ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!

Published

on

ಆಂಧ್ರಪ್ರದೇಶ : ಆಲದ ಮರದ ಪೊಟರೆಯಲ್ಲಿ ಬರೋಬ್ಬರಿ 64 ಲಕ್ಷ ರೂ. ಪತ್ತೆಯಾಗಿರುವ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ನಡೆದಿದೆ. ಇದು ಹೇಗೆ ಪತ್ತೆಯಾಯ್ತು? ಮಾಯಾಜಾಲನಾ? ಎಂಬ ಪ್ರನೆ ಮೂಡೋದು ಸಹಜ. ಆದ್ರೆ, ಇಲ್ಲಿ ಸಿಕ್ಕಿರೋದು ಮೇಲಿಂದ ಉದುರಿದ ದುಡ್ಡಲ್ಲ. ಬದಲಿಗೆ ಕಳವುಗೈದ ದುಡ್ಡು.

ಹೌದು, ಎಟಿಎಂಗೆ ಹಣ ತುಂಬಿಸಲು ಹೋದ ವಾಹನದಿಂದ ಹಣವನ್ನು ವ್ಯಕ್ತಿಯೊಬ್ಬ ಕಳವು ಮಾಡಿದ್ದಾನೆ.  ಬಳಿಕ ಆಲದ ಮರದ ಪೊಟರೆಯಲ್ಲಿ ಬಚ್ಚಿಟ್ಟಿದ್ದ ಎಂದು ತಿಳಿದು ಬಂದಿದೆ. ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಿದ ವೇಳೆ ಸತ್ಯಾಂಶ ಬಯಲಾಗಿದೆ.

ಏನಿದು ಘಟನೆ ?

ಸಿಎಂಎಸ್ ಭದ್ರತಾ ಸಂಸ್ಥೆಯ ಸಿಬ್ಬಂದಿ ಗುರುವಾರ ಮಧ್ಯಾಹ್ನ 68 ಲಕ್ಷ ರೂಪಾಯಿಯೊಂದಿಗೆ ಒಂಗೋಲ್ ನಿಂದ ತೆರಳಿದ್ದರು. ಚಿಮಕುರ್ತಿ, ಮರ್ರಿಚೆಟ್ಲಪಾಲೆಂ, ದೊಡ್ಡಾವರಂ, ಗುಂಡ್ಲಪಲ್ಲಿ, ಮಡ್ಡಿಪಾಡು ಪ್ರದೇಶಗಳಲ್ಲಿರುವ ವಿವಿಧ ಎಟಿಎಂ ಯಂತ್ರಗಳಿಗೆ ಹಣ ತುಂಬಿಸಬೇಕಾಗಿತ್ತು.

ಆದರೆ, ಅದೇ ದಿನ ಮಧ್ಯಾಹ್ನ 2 ಗಂಟೆ ಸುಮಾರಿಗೆ ಒಂಗೋಲ್‌ನ ಕರ್ನೂಲ್ ರಸ್ತೆಯಲ್ಲಿರುವ ಭಾರತೀಯ ಪೆಟ್ರೋಲ್ ಬಂಕ್‌ನಲ್ಲಿ ವಾಹನ ನಿಲ್ಲಿಸಿದ್ದಾರೆ. ಮಧ್ಯಾಹ್ನ ಆಗಿದ್ದರಿಂದ ತಾವು ತಂದಿದ್ದ ತಿಂಡಿ ತಿನ್ನಲು ಬಂಕ್ ರೂಮಿಗೆ ಹೋಗಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿದ್ದ ವಾಚ್ ಮನ್ ಬಂದು ವಾಹನದ ಬೀಗ ಮುರಿದು 64 ಲಕ್ಷ ರೂ.ಮೌಲ್ಯದ 500 ರೂ.ನೋಟುಗಳ ಬಂಡಲ್​ಗಳನ್ನು ಕಳ್ಳತನ ಮಾಡಿದ್ದ.

ಅಷ್ಟರಲ್ಲಿ ಊಟ ಮುಗಿಸಿ ಹಿಂದಿರುಗಿದ ಸಿಬ್ಬಂದಿಗೆ ವಾಹನದ ಬಾಗಿಲು ತೆರೆದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಒಳಗೆ ನೋಡಿದಾಗ 100 ರೂಪಾಯಿ ನೋಟುಗಳ ಬಂಡಲ್ ಗಳು ಮಾತ್ರ ಪತ್ತೆಯಾಗಿವೆ. 500 ರೂಪಾಯಿ ನೋಟುಗಳ ಬಂಡಲ್‌ಗಳು ಕಾಣಿಸಲಿಲ್ಲ.
ಅವರು ತಂದಿದ್ದ 68 ಲಕ್ಷ ರೂಪಾಯಿಯಲ್ಲಿ 64 ಲಕ್ಷ ರೂ. ಕಳ್ಳತನವಾಗಿರುವುದು ಗೊತ್ತಾಗಿದೆ.

ಕೂಡಲೇ ಪೊಲೀಸರಿಗೆ ದೂರು ನೀಡಿದ ನಂತರ ಹೆಚ್ಚುವರಿ ಎಸ್ಪಿ (ಅಪರಾಧ) ಎಸ್.ವಿ.ಶ್ರೀಧರ್ ರಾವ್ ಮತ್ತು ತಾಲೂಕು ಸಿಐ ಭಕ್ತವತ್ಸಲ ರೆಡ್ಡಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿದರು. ಹತ್ತಿರದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಲಾಯಿತು. ಮುಸುಕುಧಾರಿಯೊಬ್ಬ ಬೈಕ್‌ನಲ್ಲಿ ಬಂದು ವಾಹನದಲ್ಲಿದ್ದ ನಗದು ದೋಚಿರುವುದು ಕಂಡುಬಂದಿತ್ತು. ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.

ಇದನ್ನೂ ಓದಿ : ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

ಆರೋಪಿ ಬಂಧನ :

ಬಂಧಿತ ಆರೋಪಿ ಮಹೇಶ್ ಎಂದು ಗುರುತಿಸಲಾಗಿದೆ. ಆತ ಈ ಹಿಂದೆ ಸಿಎಂಎಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ನೋಟುಗಳ ಬಂಡಲ್‌ಗಳ ಜೊತೆಗೆ, ಅವನು ತನ್ನ ಸ್ವಗ್ರಾಮವಾದ ಸಂತನೂತಲಪಾಡು ಮಂಡಲದ ಕಾಮೆಪಲ್ಲಿವಾರಿಪಾಲೆಂನಲ್ಲಿರುವ ತನ್ನ ಮನೆಯ ಸಮೀಪವಿರುವ ಆಲದ ಮರದ ಕಾಂಡದಲ್ಲಿ ಹಣವನ್ನು ಬಚ್ಚಿಟ್ಟಿದ್ದ ಎನ್ನಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆಲದ ಮರದ ಬುಡದಲ್ಲಿ ಬಚ್ಚಿಟ್ಟಿದ್ದ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

INTERNATIONAL

ವಾಟ್ಸಪ್ ಸ್ಟೇಟಸ್‌ನಲ್ಲಿ ಮತ್ತೊಂದು ಮಹತ್ವದ ಬದಲಾವಣೆ!

Published

on

ಅತ್ಯಂತ ಹೆಚ್ಚಿನ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಆ್ಯಪ್ ವಾಟ್ಸಪ್ ಈಗ ಮತ್ತೆ ಸ್ಟೇಟಸ್ ಮಿತಿಯನ್ನು ಏರಿಕೆ ಮಾಡಿದೆ.

ಹೌದು, ವಾಟ್ಸಪ್ ಬಳಕೆದಾರರಿಗೆ ಇದು ಭರ್ಜರಿ ಗುಡ್‌ ನ್ಯೂಸ್! ವಾಟ್ಸಪ್ ಸ್ಟೇಟಸ್ ಅವಧಿ ಇದೀಗ ಒಂದುವರೆ ನಿಮಿಷಕ್ಕೆ ಏರಿಕೆಯಾಗಿದೆ. ವಿಶ್ವಾದ್ಯಂತ ನೆಚ್ಚಿನ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್‌ನಲ್ಲಿ ದಿನಕ್ಕೊಂದು ಹೊಸ ಹೊಸ ಫೀಚರ್‌ಗಳು ಸೇರಿಕೊಳ್ಳುತ್ತಿದೆ. ವಾಟ್ಸಪ್ ಸಂಸ್ಥೆಯು, ಇದೀಗ ‘ವಾಟ್ಸಪ್ ಸ್ಟೇಟಸ್‌’ನಲ್ಲಿ ಈ ಪ್ರಮುಖ ಬದಲಾವಣೆ ತಂದಿದೆ.

ಈ ಮೊದಲು 30 ಸೆಕೆಂಡ್, ನಂತರ ಒಂದು ನಿಮಿಷಕ್ಕೆ ಏರಿಕೆಯಾಗಿತ್ತು. ಇದೀಗ ಒಂದುವರೇ (1:30) ನಿಮಿಷಗಳ ವೀಡಿಯೋವನ್ನು ಸ್ಟೇಟಸ್‌ನಲ್ಲಿ ಪೋಸ್ಟ್ ಮಾಡಬಹುದಾಗಿದೆ.

ವಾಟ್ಸಪ್ ಸ್ಟೇಟಸ್ ಕಿರು ಪರಿಚಯ
2017ರಲ್ಲಿ ವಾಟ್ಸಪ್ ಸಂಸ್ಥೆ ಮೊದಲ ಬಾರಿಗೆ ಸ್ಟೇಟಸ್ ಆಯ್ಕೆ ಪರಿಚಯಿಸಿದ್ದು, ಫೋಟೋ, ವಿಡಿಯೋ ಮತ್ತು ಜಿಫ್ ಫೈಲ್‌ಗಳನ್ನು ಅಪ್‌ಲೋಡ್ ಮಾಡಲು ಅವಕಾಶ ಕಲ್ಪಿಸಿತ್ತು. ಅಪ್ಲೋಡ್‌ ಮಾಡಿದ ಫೈಲ್‌ಗಳು 24 ಗಂಟೆಗಳ ನಂತರ ತನ್ನಷ್ಟಕ್ಕೆ ತಾನೇ ಮರೆಯಾಗುತ್ತವೆ. ಅಲ್ಲಿಯವರೆಗೆ ಬಳಕೆದಾರನ ಸಂಪರ್ಕದಲ್ಲಿರುವರಿಗೆ ಮಾತ್ರ ಸ್ಟೇಟಸ್‌ ಕಾಣಿಸುತ್ತದೆ. ಇತ್ತೀಚಿಗೆ ವಾಟ್ಸಪ್‌ ‘ಸ್ಟೇಟಸ್’ ಫೀಚರ್‌ನಲ್ಲಿ ಬದಲಾವಣೆ ತಂದಿದ್ದು, ವಾಟ್ಸಪ್‌ ಸ್ಟೇಟಸ್‌ ಅನ್ನು ನೇರವಾಗಿ ಫೇಸ್‌ಬುಕ್‌ ಒಡೆತನದ ಯಾವುದೇ ಸಾಮಾಜಿಕ ಆಪ್‌ ಖಾತೆಗೆ ಶೇರ್‌ ಮಾಡಬಹುದಾಗಿದೆ.

ವಾಟ್ಸ್‌ಆಪ್‌ ಅಪ್ಡೇಟ್‌ ಮಾಡಿ
ವಾಟ್ಸಪ್‌ನಲ್ಲಿ ವಿಡಿಯೋ ಸ್ಟೇಟಸ್‌ ಹಂಚಿಕೊಳ್ಳಬಹುದು. ವಾಟ್ಸಪ್‌ ಓಪನ್ ಮಾಡಿ ಚಾಟ್ಸ್‌ ಪಕ್ಕದ ಸ್ಟೇಟಸ್‌ ಕ್ಲಿಕ್ ಮಾಡಿ. ಮೈ ಸ್ಟೇಟಸ್‌ ಆಯ್ಕೆಯನ್ನು ಕ್ಲಿಕ್ ಮಾಡಿ, ಆ ನಂತರ ಕ್ಯಾಮೆರಾ ಐಕಾನ್ ಕ್ಲಿಕ್ ಮಾಡಿ. ಸ್ಟೇಟಸ್‌ ಇಡಲು ಫೋನ್ ಗ್ಯಾಲರಿಯ ವಿಡಿಯೋ ಫೈಲ್ ಆಯ್ಕೆ ಮಾಡಿ. ನಂತರ, ನಿಮ್ಮ ವಿಡಿಯೋವನ್ನು ಹೊಸ ಮಿತಿ ಒಂದುವರೇ ನಿಮಿಷದ ಅವಧಿಗೆ ಸೆಟ್‌ ಮಾಡಿ, ಸೆಂಡ್ ಬಟನ್ ಕ್ಲಿಕ್ ಮಾಡಿ. ಈ ಹೊಸ ಫೀಚರ್ ಬಳಸಲು ಕೂಡಲೇ ವಾಟ್ಸ್‌ಆಪ್‌ ಅಪ್ಡೇಟ್‌ ಮಾಡಿ.

Continue Reading

LATEST NEWS

ಮಗಳಿಗೆ ಇನ್ಸುಲಿನ್ ತರಲು ಹಣವಿಲ್ಲ ಎಂದು ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆಗೆ ಶರಣಾದ ತಂದೆ

Published

on

ಲಕ್ನೋ: ಮಧುಮೇಹಿ ಮಗಳಿಗೆ ಇನ್ಸುಲಿನ್ ತರಲು ಹಣವಿಲ್ಲ ಎಂದು ವೀಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಅಸಹಾಯಕ ತಂದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮೃ*ತ ವ್ಯಕ್ತಿ ರಿಯಲ್ ಎಸ್ಟೇಟ್ ಡೀಲರ್ ಶಹಬಾಜ್ ಶಕೀಲ್ ಎಂದು ಗುರುತಿಸಲಾಗಿದೆ. ಆತ್ಮಹ*ತ್ಯೆಗೂ ಮುನ್ನ ಶಕೀಲ್ ವಿಡಿಯೋ ಮಾಡಿ, ಅದರಲ್ಲಿ ತಮ್ಮ ನೋವೆಲ್ಲಾ ಹಂಚಿಕೊಂಡು, ಬಳಿಕ ಸೆಕ್ಯುರಿಟಿ ಗಾರ್ಡ್​ ಬಳಿ ಇದ್ದ ಗನ್​ನಿಂದ ಶೂ*ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ವಾಕಿಂಗ್ ಮಾಡಲು ಹೋದ ವ್ಯಕ್ತಿ ಹೃದಯಾ*ಘಾತಕ್ಕೆ ಬ*ಲಿ

ಮಗಳು ಮಧುಮೇಹದಿಂದ ಬಳಲುತ್ತಿದ್ದಾಳೆ, ಆಕೆಗೆ ಇನ್ಸುಲಿನ್ ಖರೀದಿ ಮಾಡಲು ನನ್ನ ಬಳಿ ಹಣವಿಲ್ಲ ಎಂದು ಅಸಹಾಯಕ ತಂದೆ ಕಣ್ಣೀರಿಟ್ಟಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೋಟಿಗಟ್ಟಲೆ ಸಾಲ ಮಾಡಿದ್ದು, ಅವರ ಆರ್ಥಿಕ ಪರಿಸ್ಥಿತಿ ಅಷ್ಟೊಂದು ಚೆನ್ನಾಗಿರಲಿಲ್ಲ ಎಂಬುದು ತಿಳಿದುಬಂದಿದೆ.

Continue Reading

DAKSHINA KANNADA

ಮಂಗಳೂರು: ಸ್ಪೀಕರ್ ಯು.ಟಿ ಖಾದರ್ ರವರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

Published

on

ಮಂಗಳೂರು: ದ.ಕ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಮಂಗಳೂರು ನೀರುಮಾರ್ಗ ಗ್ರಾಮ ಪಂಚಾಯತ್ ಮತ್ತು ಹಸಿರು ದಳ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಗ್ರಾಮಪಂಚಾಯತ್ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ಇಂದು ಮಂಗಳೂರಿನ ನೀರುಮಾರ್ಗದಲ್ಲಿ ನಡೆಯಿತು.

ವಿಧಾನ ಸಭಾಸ್ಪೀಕರ್ ಯು.ಟಿ ಖಾದರ್ ರವರು ವಿವಿಧ ಕಾಮಗಾರಿಯ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ನೆರೆವೇರಿಸಿದರು. ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮದ ಉಧ್ಘಾಟನೆಯನ್ನು ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಿದರು.

ನಾಡಗೀತೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಬಳಿಕ ಎಸ್.ಎಸ್.ಎಲ್.ಸಿ ಯ ಕೆ.ರೂಪಾಲಿರಾವ್, ಇಜಾರ ಸಾಹಿಲ್, ಲಿಜಾ ರೂಜ್ ಮೊಂತೆರೊ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು. ಬಳಿಕ ವಿಕಲಚೇತರಿಗೆ ಹಾಗೂ ಕ್ರೀಡಾ ಸಾಧಕರಿಗೆ ಚೆಕ್ ವಿತರಣೆ ನಡೆಯಿತು.

ಬಳಿಕ ನೀರುಮಾರ್ಗ ಗ್ರಾಮ ಪಂಚಾಯತ್-ಹಸಿರು ದಳ ಮಂಗಳೂರು ವತಿಯಿಂದ ಸನ್ಮಾನಿಸಿದರು. ಯು.ಟಿ ಖಾದರ್ ಅವರು ಮಾತನಾಡಿ, ಗ್ರಾಮ ಪಂಚಾಯತ್ ಎಂದರೆ ಅದು ಗ್ರಾಮದ ಹೃದಯ, ಅ ಹೃದಯ ಭಾಗದ ಕಾಮಗಾರಿ ವೇಗವಾಗಿ ನಡೆದರೆ ಜಿಲ್ಲೆಯ ಕಾಮಗಾರಿಗೆ ವೇಗಪಡೆದಂತೆ ಎಂದರು.

ಇದನ್ನೂ ಓದಿ: ಮಂಗಳೂರು: ಎಂ.ಆರ್.ಪಿ.ಎಲ್ ನಿಂದ ಸ್ವಚ್ಛತಾ ಜಾಥಾ

ವಿಶಿಷ್ಟ ಸಾಧನೆಗೈದ ಮಹೇಶ್ ಕುಮಾರ್ ಹೊಳ್ಳ,ಮಹಮ್ಮದ್ ಬಾಷ, ಪದ್ಮನಾಭ ಕೋಟ್ಯಾನ್, ವಿಜಯ್ ಕೋಟ್ಯಾನ್ ಅವರನ್ನು ಗೌರವಿಸಲಾಯಿತು. ಅಧ್ಯಕ್ಷ ಶ್ರೀಧರ್ ಚಿಕ್ಕಬೆಟ್ಟು, ಉಪಾಧ್ಯಕ್ಷೆ ಮೋಲಿ ಶಾಂತಿ ಸಲ್ಡಾನ , ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮೋನು, ಸಲೀಂ, ಕೆ.ಡಿಪಿ ಸದಸ್ಯ ಮೆಲ್ವಿನ್ ಡಿಸೋಜಾ, ಮಾಜಿ ಮೇಯರ್ ಭಾಸ್ಕರ್ ಮೊಯ್ಲಿ ಮೊದಲಾದವರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page