Connect with us

LATEST NEWS

ಮಳವಳ್ಳಿ ಲಿಂಗಪಟ್ಟಣದ ಮಾರಮ್ಮ ದೇವರ ಪ್ರಸಾದ ಸೇವಿಸಿ 75 ಮಂದಿ ಅಸ್ವಸ್ಥ..

Published

on

ಮಳವಳ್ಳಿ ಲಿಂಗಪಟ್ಟಣದ ಮಾರಮ್ಮ ದೇವರ ಪ್ರಸಾದ ಸೇವಿಸಿ 75 ಮಂದಿ ಅಸ್ವಸ್ಥ..

ಮಂಡ್ಯ : ಚಾಮರಾಜನಗರದ ಸುಳ್ವಾಡಿ ಕಿಚ್ಗುತ್ತಿ ಮಾರಮ್ಮನ ವಿಷ ಪ್ರಸಾದ ಪ್ರಕರಣ ಮಾಸುವ ಮುನ್ನವೇ ಸಕ್ಕರೆನಾಡಲ್ಲಿ ಅಂತಹದ್ದೇ ಪ್ರಕರಣ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದ ಗ್ರಾಮದ ಮಾರಮ್ಮ ದೇವರ ಪ್ರಸಾದ ಸೇವಿಸಿ 75ಕ್ಕೂ ಭಕ್ತರು ಅಸ್ವಸ್ಥರಾಗಿದ್ದಾರೆ.

ಪ್ರಸಾದ ತಿಂದವರಲ್ಲಿ ವಾಂತಿ, ಬೇಧಿ ಶುರುವಾಗಿದ್ದು, ನಿತ್ರಾಣಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ತಕ್ಷಣಕ್ಕೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗ್ರಾಮಕ್ಕೆ ತಾಲೂಕು ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ದೌಡಾಯಿಸಿದ್ದಾರೆ. ಪ್ರಸಾದ ಸೇವಿಸಿದವರ ಪರೀಕ್ಷೆ ನಡೆಸಿದ್ದು, ಚಿಕಿತ್ಸೆಗೆ ಮುಂದಾಗಿದ್ದಾರೆ.

ಊರಿನ ಪ್ರಮುಖ ಮುಖಂಡರೊಬ್ಬರ ಮನೆಯಲ್ಲಿ ಮದುವೆ ಪ್ರಯುಕ್ತ ರಾತ್ರಿ ಊರಿನ‌ ಮಾರಮ್ಮನ ದೇವಾಲಯದಲ್ಲಿ ಪೂಜೆ ಮಾಡಿಸಿ ಜನರಿ ಗಾಗಿ ಪ್ರಸಾದದ ರೂಪದಲ್ಲಿ ಪುಳಿಯೋಗರೆ ಮಾಡಿ ವಿತರಿಸಲಾಗಿತ್ತು.

ಗ್ರಾಮದ 100 ಕ್ಕೂ ಹೆಚ್ಚು ಮಂದಿ ಆ ಪ್ರಸಾದವನ್ನು‌ ಸೇವಿಸಿದ್ದರು. ಈ ಪ್ರಸಾದ ಸೇವಿಸಿದ ಕೆಲವರಿಗೆ ರಾತ್ರಿ ವಾಂತಿ ಬೇಧಿ ಕಾಣಿಸಿಕೊಂಡು ಹಲಗೂರಿನ ಆಸ್ಪ ತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು .ಬೆಳಿಗ್ಗೆ ಮತ್ತಷ್ಟು ಜನರಿಗೆ ವಾಂತಿ ಬೇಧಿ ಕಾಣಿಸಿಕೊಂಡು ಅವರೆಲ್ಲರೀ ಹಲಗೂರಿನ ಆಸ್ಪತ್ರೆ ಬಂದಿದ್ದಾರೆ. ಒಂದೇ ಊರಿನ‌ ಹೆಚ್ಚಿನ‌ ಜನರು ಆಸ್ಪತ್ರೆಗೆ ಬರುತ್ತಿದ್ದಂತೆ ವಿಚಾರಿಸಿದ ವೈದ್ಯರು ಗ್ರಾಮದ ಆಗಿರುವ ಸಮಸ್ಯೆ ಅರಿತು‌ ಕೂಡಲೇ ಲಿಂಗಪಟ್ಟಣಕ್ಕೆ ತಮ್ಮ ಸಿಬ್ಬಂದಿಗಳೊಂದಿಗೆ ಬಂದಿದ್ದಾರೆ‌. ಊರಿನಲ್ಲಿ ಪ್ರಸಾದ ತಿಂದ ಬಹುತೇಕರಿಗೆ ವಾಂತಿ, ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡವರಿಗೆ ಗ್ರಾಮದಲ್ಲಿ ಚಿಕಿತ್ಸೆ ನೀಡಿದ್ದು ಬಹುತೇಕರು ಚೇತರಿಸಿಕೊಂಡಿದ್ದಾರೆ‌.

ಗ್ರಾಮದಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯ ವೈದ್ಯರು ತಮ್ಮ ಮೇಲಧಿಕಾರಿಗಳಿಗೆ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿರೋ ಬಗ್ಗೆ ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಮಂಚೇಗೌಡ, ಮಳವಳ್ಳಿ ಡಿವೈಎಸ್​ಪಿ ಪೃಥ್ವಿ ಹಾಗೂ ಸಿಪಿಊ ಭೇಟಿ ನೀಡಿ ಪರಿಸ್ಥಿತಿಯ ಅವ ಲೋಕನ ನಡೆಸಿದರು. ಗ್ರಾಮದಲ್ಲಿ ದೇವರ ಪ್ರಸಾದ ತಯಾರಿಕೆ ಮಾಡುವಾಗ ಫುಡ್ ಪಾಯಿಸನ್ ಆಗಿರು ಶಂಕೆಯ ಮೇರೆಗೆ ತಯಾರಿಸಿದ್ದ ಪ್ರಸಾದ ಹಾಗೂ ನೀರಿನ ಸ್ಯಾಂಪಲ್ ನ್ನು ಪರೀಕ್ಷೆಗಾಗಿ ಪಡೆದುಕೊಂಡರು.

ಸದ್ಯ ಗ್ರಾಮದಲ್ಲಿ ಬಹುತೇಕರು ಚೇತರಿಸಿಕೊಂಡಿದ್ದು ಪರಿಸ್ಥಿತಿ ನಿಯಂತ್ರಣದಲ್ಲಿದ್ದು,ಯಾವುದೇ ಆತಂಕ ವಿಲ್ಲವೆಂದು ಡಿಎಚ್​ಒ ತಿಳಿಸಿದ್ದಾರೆ. ಒಂದಿಬ್ಬರು ಹೆಚ್ಚು‌ಅಸ್ವಸ್ಥ ಗೊಂಡಿರೋದರಿಂದ ಮಳವಳ್ಳಿ ಆಸ್ಪತ್ರೆಗೆ ಕಳಿಸಿದ್ದು ಪ್ರಯೋಗಾಲಯದ ವರದಿ ಬಂದ ಬಳಿಕ ಇದಕ್ಕೆ ಕಾರಣವೇನೆಂದು ತಿಳಿಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಗ್ರಾಮದಲ್ಲಿ ನಡೆದ ಈ ಘಟನೆ ಯಿಂದಾಗಿ ಇಡೀ ಗ್ರಾಮದ ಜನರು‌ ಆತಂಕಗೊಂಡಿ ದ್ದಾರೆ. . ಸದ್ಯ ಯಾವುದೇ ಅನಾಹುತ ಆಗಿಲ್ಲವಾದರೂ ಆರೋಗ್ಯ ಇಲಾಖೆ ಈ ಬಗ್ಗೆ ಕಟ್ಟೆಚ್ಚರ ವಹಿಸಿ ಗ್ರಾಮದಲ್ಲೇ ಬೀಡು ಬಿಟ್ಟು ಅಸ್ವಸ್ಥರಿಗೆ ಚಿಕಿತ್ಸೆ ನೀಡಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.

LATEST NEWS

ಅಹಮದಾಬಾದ್ ವಿಮಾನ ಪತನ: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ನಿಧ*ನ

Published

on

ಮಂಗಳೂರು/ಅಹಮದಾಬಾದ್: ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್‌ ರೂಪಾನಿ ವಿಮಾನ ದುರಂತದಲ್ಲಿ ಮೃ*ತಪಟ್ಟಿದ್ದಾರೆ.


ಏರ್ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃ*ತಪಟ್ಟಿರುವುದು ದೃಢವಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತದ ಸಾ*ವಿಗೆ ಸಂತಾಪ ಸೂಚಿಸಿದ್ದಾರೆ.

 

Continue Reading

LATEST NEWS

ಏರ್‌ ಇಂಡಿಯಾ ವಿಮಾನ ಪತನ- ಬ್ಲಾಕ್ ಬಾಕ್ಸ್‌ ಅಂದರೆ ಏನು?

Published

on

ಗುಜರಾತ್​​ನ ಅಹಮದಾಬಾದ್​ನಲ್ಲಿ ಲಂಡನ್​​ಗೆ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.


ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಯಾವುದೇ ವಿಮಾನ/ ಹೆಲಿಕಾಪ್ಟರ್‌ ಪತನವಾದರೂ ಪತನದ ತನಿಖೆಯಲ್ಲಿ ಪ್ರಮುಖ ಪಾತ್ರವಹಿಸುವುದು ಬ್ಲ್ಯಾಕ್‌ ಬಾಕ್ಸ್‌.

ಬ್ಲಾಕ್ ಬಾಕ್ಸ್‌ ಅಂದರೆ ಏನು?
ಬ್ಲಾಕ್ ಬಾಕ್ಸ್‌ ಅಂದರೆ ರೆಕಾರ್ಡರ್‌ಗಳನ್ನು ಒಳಗೊಂಡಿರುವ ಎರಡು ದೊಡ್ಡ ಲೋಹದ ಪಟ್ಟಿಗೆಗಳಾಗಿದ್ದು, ಹೆಚ್ಚಿನ ವಿಮಾನಗಳಲ್ಲಿ ಒಂದನ್ನು ಮುಂಭಾಗದಲ್ಲಿ ಮತ್ತು ಇನ್ನೊಂದು ಹಿಂಭಾಗದಲ್ಲಿ ಇರಿಸಬೇಕಾಗುತ್ತದೆ. ಈ ರೆಕಾರ್ಡರ್‌ಗಳು ವಿಮಾನ ಹಾರಾಟದ ಬಗ್ಗೆ ಮಾಹಿತಿಯನ್ನು ದಾಖಲಿಸುತ್ತವೆ ಮತ್ತು ವಿಮಾನ ಅಪಘಾತಕ್ಕೆ ಕಾರಣವಾಗುವ ಘಟನೆಗಳನ್ನು ಪುನರ್‌ನಿರ್ಮಿಸಲು ಸಹಕಾರಿಯಾಗುತ್ತವೆ.

ಸಾಮಾನ್ಯವಾಗಿ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತದೆ.

ಇದನ್ನೂ ಓದಿ: ಅಹಮದಾಬಾದ್: ಭೀಕರ ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಶಂಕೆ

ಬ್ಲ್ಯಾಕ್ ಬಾಕ್ಸ್ ಹೆಸರು; ಬಣ್ಣ ಕಿತ್ತಳೆ
ವಿಮಾನದಲ್ಲಿ ಇರಿಸಿರುವ ಈ ಪೆಟ್ಟಿಗೆಗಳನ್ನು ಬ್ಲ್ಯಾಕ್‌ ಬಾಕ್ಸ್ ಎಂದು ಕರೆದರೂ ಸಹ ಇದು ಕಪ್ಪಗೆ ಇರುವುದಿಲ್ಲ. ಈ ಕಪ್ಪು ಪೆಟ್ಟಿಗೆಗಳು ಜ್ವಲಂತ, ಹೆಚ್ಚಿನ ಗೋಚರತೆಗಾಗಿ ಕಿತ್ತಳೆ ಬಣ್ಣದ್ದಾಗಿರುತ್ತವೆ. ಇದರಿಂದಾಗಿ ಕ್ರ್ಯಾಶ್ ಸೈಟ್‌ನಲ್ಲಿ ಅವುಗಳನ್ನು ಹುಡುಕುವ ಸಿಬ್ಬಂದಿಗಳು ಅವುಗಳನ್ನು ಹುಡುಕಲು ಸುಲಭವಾಗಿರುತ್ತದೆ.

ಬ್ಲ್ಯಾಕ್ ಬಾಕ್ಸ್ ಹೇಗೆ ಕಾರ್ಯನಿರ್ವಹಿಸುತ್ತದೆ ?
ಇದು ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲ್ಯಾಕ್‌ ಬಾಕ್ಸ್‌ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್‌ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್‌ ಹೊರ ಸೂಸುತ್ತಿರುತ್ತದೆ.

ಡೇಟಾ ರಿಕವರ್ ಮಾಡುವುದು ಹೇಗೆ?
ಕಪ್ಪು ಪೆಟ್ಟಿಗೆಗಳಿಂದ ರಿಕವರ್‌ ಆದ ಡೇಟಾವನ್ನು ವಿಶ್ಲೇಷಿಸಲು ಸಾಮಾನ್ಯವಾಗಿ 10-15 ದಿನಗಳನ್ನು ತೆಗೆದುಕೊಳ್ಳುತ್ತದೆ. ಈ ಮಧ್ಯೆ, ತನಿಖಾಧಿಕಾರಿಗಳು ಏರ್ ಟ್ರಾಫಿಕ್ ಕಂಟ್ರೋಲ್ ಸಿಬ್ಬಂದಿಯಿಂದ ಹೇಳಿಕೆ ಪಡೆಯುವುದು ಮತ್ತು ಎಟಿಸಿ ಹಾಗೂ ಪೈಲಟ್‌ಗಳ ನಡುವಿನ ಸಂಭಾಷಣೆಯ ರೆಕಾರ್ಡಿಂಗ್‌ಗಳಂತಹ ಇತರ ಸುಳಿವುಗಳಿಗಾಗಿಯೂ ನೋಡುತ್ತಾರೆ ಎಂದು ತಿಳಿದುಬಂದಿದೆ.

Continue Reading

LATEST NEWS

ಏರ್‌ ಇಂಡಿಯಾ ವಿಮಾನ ದುರಂತ; ಪ್ರಧಾನಿ ಮೋದಿ ಸಂತಾಪ

Published

on

ಗುಜರಾತ್‌ನ ಅಹಮದಾಬಾದ್‌ನಲ್ಲಿ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್‌’ನಲ್ಲಿ ನಡೆದ ಈ ದುರಂತವು “ಪದಗಳಿಗೆ ಮೀರಿದ ಹೃದಯವಿದ್ರಾವಕ” ಎಂದು ಪ್ರಧಾನಿ ಹೇಳಿದರು. ಅಲ್ಲದೇ ಈ ದುರಂತವು ನಮ್ಮನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ. ಇದು ಪದಗಳಿಗೆ ಮೀರಿದ ಹೃದಯವಿದ್ರಾವಕವಾಗಿದೆ ಎಂದು ಪ್ರಧಾನಿ ಮೋದಿ X ನಲ್ಲಿ ಬರೆದಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page