Connect with us

LATEST NEWS

ಭೀಕರ ಅಪಘಾತದಲ್ಲಿ 9 ಮಂದಿ ಸಾ*ವು..! ಮದುವೆ ಮುಗಿಸಿ ಬರುತ್ತಿದ್ದವರು ಜವರಾಯನಿಗೆ ಬ*ಲಿ..!

Published

on

ರಾಜಸ್ಥಾನ: ವ್ಯಾನ್‌ವೊಂದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದ ರಾಷ್ಟ್ರೀಯ ಹೆದ್ದಾರಿ 52ರ ಅಕ್ಲೇರಾ ಬಳಿ ಶನಿವಾರ(ಎ.20) ತಡರಾತ್ರಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಒಂಭತ್ತು ಮಂದಿ ಮೃತಪಟ್ಟಿದ್ದಾರೆ.

accident

ಮದುವೆ ಸಮಾರಭ ಮುಗಿಸಿ ಬರುತ್ತಿದ್ದ ವ್ಯಾನ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಘಟನೆಯಿಂದಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ 6 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಅಸುನೀಗಿದ್ದಾರೆ. ಇನ್ನೂ ಓರ್ವ ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

Read More..;  ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

ಅಪಘಾತದ ವಿಷಯ ತಿಳಿದು ಮದುವೆ ಮನೆ ಶೋಕಸಾಗರದಲ್ಲಿ ಮುಳುಗಿದೆ. ಟ್ರಕ್ ಹರಿಯಾಣ ಮೂಲದ್ದಾಗಿದ್ದು, ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.  ಮೃತರನ್ನು ಗುರುತಿಸುವ ಪ್ರಯತ್ನ ಮುಂದುವರೆದಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಮೃತಪಟ್ಟ ಯುವಕರು ಬಗ್ರಿ ಸಮುದಾಯದವರು ಎನ್ನಲಾಗಿದೆ.  ಟ್ರಕ್ ಚಾಲಕನ ಅತಿಯಾದ ವೇಗದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಕಡಬ: ಅಪಘಾತದ ಗಾಯಾಳು ವಾರದ ಬಳಿಕ ಚಿಕಿತ್ಸೆ ಫಲಿಸದೆ ಸಾವು

Published

on

ಕಡಬ: ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಒಂದು ವಾರದ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ ಪದ್ಮನಾಭ (48) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಮೇ 11 ರಂದು ರಾತ್ರಿ ಪದ್ಮನಾಭ ಅವರು ತಮ್ಮ ಸಹೋದರ ಸುದರ್ಶನ್ ಮತ್ತು ಸ್ನೇಹಿತರಾದ ಚೇತನ್ ಹಾಗೂ ಸತೀಶ್ ಎಂಬವರ ಜತೆ ಉಪ್ಪಿನಂಗಡಿ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ಪದ್ಮನಾಭ ಮತ್ತು ಸಂಗಡಿಗರು ಸಂಚರಿಸುತ್ತಿದ್ದ ಕಾರು ಮತ್ತು ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತಿತರ ಕ್ಷೇತ್ರಗಳಿಗೆ ಭೇಟಿ ನೀಡಿ ಶಿವಮೊಗ್ಗಕ್ಕೆ ವಾಪಸಾಗುತ್ತಿದ್ದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ನಡುವೆ ಢಿಕ್ಕಿ ಸಂಭವಿಸಿ ಅಪಘಾತ ನಡೆದಿತ್ತು. ಈ ಅವಘಡದಲ್ಲಿ ಪದ್ಮನಾಭ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಇದನ್ನೂ ಓದಿ: ಮುಂದಿನ 5 ದಿನ ಭಾರಿ ಮಳೆ, ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲೆ?

ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Continue Reading

LATEST NEWS

ಮುಂದಿನ 5 ದಿನ ಭಾರಿ ಮಳೆ, ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ??

Published

on

ಮಂಗಳೂರು/ನವದೆಹಲಿ : ಸದ್ಯ ರಾಜ್ಯದ ಹಲವೆಡೆ ಎರಡು ದಿನ ಭಾರಿ ಮಳೆ ಸುರಿದಿದೆ. ಮಳೆಯ ಅವಾಂತರಕ್ಕೆ ರಾಜ್ಯ ರಾಜಧಾನಿ ಸೇರಿದಂತೆ ಕರಾವಳಿ ಭಾಗ ತತ್ತರಿಸಿ ಹೋಗಿದೆ. ಅಲ್ಲಲ್ಲಿ ಗುಡ್ಡ ಕುಸಿತ, ಮನೆಗೆ ಹಾ*ನಿ ಹೀಗೆ ಅನೇಕ ಸಮಸ್ಯೆಗಳನ್ನು ತಂದೊಡ್ಡಿದೆ ಮಳೆ. ಇದೀಗ ಹವಾಮಾನ ಇಲಾಖೆ ಮತ್ತೆ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಎಲ್ಲೆಲ್ಲಿ ಮಳೆ?

ಮೇ 22 ರಿಂದ 26 ರ ವರೆಗೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಇಂದಿನಿಂದ ಮೇ.26 ರ ವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಎಲ್ಲೆಲ್ಲಿ ಬಿಸಿ ಗಾಳಿ?

ಒಂದೆಡೆ ಮಳೆಯಾದರೆ, ಮತ್ತೊಂದೆಡೆ ತೀವ್ರ ಶಾಖದ ಪರಿಸ್ಥಿತಿ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದ ಪ್ರತ್ಯೇಕ ಪ್ರದೇಶಗಳಲ್ಲಿ ಮೇ 24 ರ ವರೆಗೆ ಶಾಖದ ಅಲೆಯ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹೇಳಿದೆ.

ರಾಜಸ್ಥಾನ, ಹರಿಯಾಣ, ಚಂಡೀಗಢ, ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ರಾತ್ರಿ ಬೆಚ್ಚಗಿನ ತಾಪಮಾನ ಇರುವ ಸಾಧ್ಯತೆ ಇದೆ. ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಸಹ ಕಂಡುಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ : Watch video: ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ಇಂಡಿಗೋ ವಿಮಾನ ಜಸ್ಟ್​ ಮಿಸ್

ವಾಯವ್ಯ ಪ್ರದೇಶದಲ್ಲಿ ಗುಡುಗು, ಮಿಂಚು, ಅಲ್ಲದೇ, ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಬೀಸಬಹುದು ಎಂಬ ಎಚ್ಚರಿಕೆ ನೀಡಲಾಗಿದೆ. ಅದರಲ್ಲೂ ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಪಶ್ಚಿಮ ಹಿಮಾಲಯದಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲೂ ಬಿರುಗಾರಿ ಸಾಧ್ಯತೆ ಇದೆ.  ಮುಂದಿನ ಎರಡು ದಿನಗಳಲ್ಲಿ ಪಶ್ಚಿಮ ರಾಜಸ್ಥಾನದಲ್ಲಿ ಧೂಳು ಮಿಶ್ರಿತ ಬಿರುಗಾಳಿ (ಗಂಟೆಗೆ 40-50 ಕಿ.ಮೀ/ಗಂ) ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

 

 

 

Continue Reading

LATEST NEWS

Watch video: ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ಇಂಡಿಗೋ ವಿಮಾನ ಜಸ್ಟ್​ ಮಿಸ್

Published

on

ಮಂಗಳೂರು/ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿದ್ದು, ದೊಡ್ಡ ಅನಾಹುತದಿಂದ ಪಾರಾಗಿದೆ.

ಹೌದು, ಇಂಡಿಗೋ ವಿಮಾನ 6E2142 ದೆಹಲಿಯಿಂದ ಜಮ್ಮುಕಾಶೀರದ ಶ್ರೀನಗರಕ್ಕೆ 200 ಪ್ರಯಾಣಿಕರನ್ನು ಹೊತ್ತು ಆಕಾಶದಲ್ಲಿ ಪ್ರಯಾಣಿಸುತ್ತಿತ್ತು. ವಿಮಾನ ಆಕಾಶದಲ್ಲಿ ಇರುವಾಗಲೇ ಬಲವಾದ ಆಲಿಕಲ್ಲು ಮಳೆ ಆರಂಭವಾಗಿದೆ. ಆಲಿಕಲ್ಲುಗಳು ವಿಮಾನದ ಮೇಲೆ ಬೀದ್ದಿದ್ದರಿಂದ ಶಬ್ಧ ಕೂಡ ಭಯ ಮೂಡಿಸಿದೆ. ಆಲಿಕಲ್ಲು ಮಳೆ ಜೊತೆಗೆ ಗುಡುಗು, ಮಿಂಚು, ಗಾಳಿಯೂ ಜೋರಾಗಿ ಬೀಸುತ್ತಿದ್ದರಿಂದ ಇಡೀ ವಿಮಾನವೇ ಆಕಾಶದಲ್ಲಿ ಅಲುಗಾಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಇದರಿಂದ ಗಾಬರಿಯಾದ ಪ್ರಯಾಣಿಕರು ವಿಮಾನದೊಳಗೆ ಕುಳಿತು ಕಿರುಚಾಡುತ್ತಾ, ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ಗೋಳಾಡುವ ವಿಡಿಯೋಗಳನ್ನು ಪ್ರಯಾಣಿಕರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ಪೈಲಟ್ ತಕ್ಷಣ ಶ್ರೀನಗರದ ವಾಯು ಸಂಚಾರ ನಿಯಂತ್ರಣಕ್ಕೆ ತುರ್ತು ವರದಿ ಮಾಡಿದ್ದಾರೆ. ತುರ್ತು ವರದಿ ಬೆನ್ನಲ್ಲೇ ಸಂಜೆ 6:30ಕ್ಕೆ ಸುರಕ್ಷಿತವಾಗಿ ವಿಮಾನ ಶ್ರೀನಗರದಲ್ಲಿ ಲ್ಯಾಂಡ್ ಆಗಿದೆ.

ಆಗಸದಲ್ಲೇ ಇರುವಾಗಲೇ ಆಲಿಕಲ್ಲು ಬಿದ್ದಿದ್ದರಿಂದ ವಿಮಾನದ ಮುಂದಿನ ಭಾಗ ಅಥವಾ ವಿಮಾನದ ಮೂಗಿನ ಭಾಗ ಹಾನಿಯಾಗಿದೆ. ಆದರೆ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರೆಲ್ಲ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಹಠಾತ್ ಆಲಿಕಲ್ಲು ಮಳೆ ಬೀಳುವಾಗ ವಿಮಾನದ ಕ್ಯಾಬಿನ್ ಸಿಬ್ಬಂದಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದ ವಿಮಾನ ಶ್ರೀನಗರವನ್ನು ಸುರಕ್ಷಿತವಾಗಿ ತಲುಪಿತು ಎಂದು ಹೇಳಲಾಗಿದೆ. ಈ ಭಯಾನಕ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Watch video

Continue Reading
Advertisement

Trending

Copyright © 2025 Namma Kudla News

You cannot copy content of this page