Connect with us

LATEST NEWS

ಮೊದಲ ರಾತ್ರಿಯೇ ಅಸಹಜ ಬೇಡಿಕ್ಕೆ ಇಟ್ಟ ವಧು; ದಾಂಪತ್ಯಕ್ಕೆ ಮಂಗಳ ಹಾಡಿದ ವರ

Published

on

ಮಂಗಳೂರು/ಉತ್ತರ ಪ್ರದೇಶ: ಮದುವೆಯ ರಾತ್ರಿ ವಧು ಬಹಿರಂಗವಾಗಿ ಬಿ*ಯರ್ ಮತ್ತು ಗಾಂ*ಜಾಕ್ಕೆ ಬೇಡಿಕೆ ಇಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದಿದೆ. ಮೊದಮೊದಲು ತಮಾಷೆಯಾಗಿರಬಹುದು ಎಂದುಕೊಂಡಿದ್ದು, ಆಕೆ ಗಂಭೀರವಾಗಿಯೇ ಇದನ್ನು ಕೇಳಿದ್ದಳು ಎಂದು ತಿಳಿದು ವರ ಕುಟುಂಬದವರಿಗೆ ತಿಳಿಸಿದಾಗ ವಿಷಯ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.

ಮದುವೆ ಎನ್ನುವುದು ಬ್ರಹ್ಮ ಹಾಕಿದ ಗಂಟಾಗಿರುತ್ತದೆ. ಕೆಲವರು ಇಷ್ಟ ಪಟ್ಟು ಮದುವೆಯಾದರೆ, ಮತ್ತೂ ಕೆಲವರು ಮದುವೆಯಾಗಿ ಇಷ್ಟಪಡುತ್ತಾರೆ. ಮದುವೆಯ ಮೊದಲ ರಾತ್ರಿ ಎನ್ನುವುದು ಪ್ರತಿಯೊಬ್ಬರ ಜೀವನದಲಲ್ಲೂ ಅವಿಸ್ಮರಣೀಯ ದಿನವಾಗಿರುತ್ತದೆ. ಎರಡು ಜೀವಗಳು ಪೂರ್ತಿ ಜಗವನ್ನೇ ಮರೆತು ಒಬ್ಬರಲ್ಲೊಬ್ಬರು ಬೆರೆಯುವ ಸುಂದರ ದಿನ. ಆದರೆ ಉತ್ತರ ಪಪ್ರದೇಶದ ಜೋಡಿಗೆ ಮದುವೆಯ ಮೊದಲ ರಾತ್ರಿಯೇ ಕರಾಳ ರಾತ್ರಿಯಾಗಿತ್ತು. ಹಾಗಾದರೆ ಅಷ್ಟಕ್ಕೂ ಅಲ್ಲಿ ನಡೆದದ್ದು ಏನು ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಇಬ್ಬರೂ ಪರಸ್ಪರ ಒಪ್ಪಿಗೆ ಸೂಚಿಸಿ ಪ್ರೀತಿಯಿಂದ ಮದುವೆಯಾಗಿದ್ದರು. ಹೊಸ ಜೀವನ ಆರಂಭಿಸುವ ಉತ್ಸಾಹದಲ್ಲಿದ್ದರು. ಆದರೆ  ಮೊದಲರಾತ್ರಿಯಲ್ಲಿ ವಧು ಗಾಂಜಾ ಹಾಗೂ ಬಿಯರ್ ಕೊಡಿ ಎಂದು ಕೇಳಿದಾಗ ವರ ಬೆಚ್ಚಿಬಿದ್ದಿದ್ದಾನೆ. ಅಷ್ಟೇ ಅಲ್ಲದೆ ಕೂಡಲೇ ಮದುವೆಯನ್ನು ರದ್ದುಪಡಿಸುವ ನಿರ್ಧಾರಕ್ಕೆ ಬಂದಿದ್ದಾನೆ. ಈ ವಿಚಾರವನ್ನು ಮನೆಯವರಿಗೆ ತಿಳಿಸಿದಾಗ ಕೋಲಾಹಲ ಸೃಷ್ಟಿಯಾಗಿತ್ತು. ಸ್ವಲ್ಪ ಸಮಯದ ಬಳಿಕ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಅವರು ದಂಪತಿಯನ್ನು ಒಟ್ಟಿಗೆ ಇರುವಂತೆ ಮನವೊಲಿಸಲು ಪ್ರಯತ್ನಿಸಿದರು. ಆದರೆ ವರನ ನಿರ್ಧಾರ ದೃಢವಾಗಿತ್ತು, ಯಾರ ಮಾತನ್ನೂ ಕೇಳುವ ಸ್ಥಿತಿಯಲ್ಲಿರಲಿಲ್ಲ. ಈ ವಿಲಕ್ಷಣ ಘಟನೆಯು ಸಾಮಾಜಿಕ ಮಾಧ್ಯಮದಾದ್ಯಂತ ಚರ್ಚೆಯ ಅಲೆಯನ್ನು ಹುಟ್ಟುಹಾಕಿದೆ, ವಧುವಿನ ಅಸಾಮಾನ್ಯ ಬೇಡಿಕೆಗಳ ಕೇಳಿ ಜನರಿಗೆ ಆಶ್ಚರ್ಯವಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸುತ್ತಲೇ ದಾಂಪತ್ಯ ಮುರಿಯದಂತೆ ಜೊಡಿಸುವ ಪ್ರಯತ್ಸಲ್ಲಿದ್ದಾರೆ.

DAKSHINA KANNADA

ಗುಂಡ್ಯದಲ್ಲಿ ಮತ್ತೆ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಅಪಘಾತ

Published

on

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ.

ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಆತಂಕಕಾರಿ ಸಂಗತಿಯೆಂದರೆ ಎರಡು ದಿನಗಳ ಹಿಂದೆಯಷ್ಟೇ (ಮೇ.18) ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡ ಘಟನೆ ನಡೆದಿತ್ತು. ಇದೀಗ ಅದೇ ಜಾಗದಲ್ಲಿ ಮತ್ತೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯ ಆರ್ಭಟ; ಮಂಗಳೂರು ನಿವಾಸಿ ಸಹಿತ ಇಬ್ಬರ ಸಾವು

ಈ 2 ಅಪಘಾತಗಳು ಸಾರ್ವಜನಿಕರಲ್ಲಿ ತೀವ್ರ ಕಳವಳ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವುದರ ಜೊತೆಗೆ, ಚಾಲಕರಿಗೆ ಸೂಕ್ತ ತರಬೇತಿ ಮತ್ತು ಎಚ್ಚರಿಕೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

LATEST NEWS

ಉತ್ತರಪ್ರದೇಶದಲ್ಲಿ ಎರಡು ರೈಲುಗಳ  ಹಳಿ ತಪ್ಪಿಸುವ ಯತ್ನ

Published

on

ಮಂಗಳೂರು/ಹರ್ದೋಗ್ : ಎರಡು ರೈಲುಗಳ  ಹಳಿತಪ್ಪಿಸುವ ಯತ್ನ ಉತ್ತರ ಪ್ರದೇಶದ ಹರ್ದೋಮ್ ಜಿಲ್ಲೆಯಲ್ಲಿ ನಡೆದಿದೆ. ಲೋಕೋ ಪೈಲಟ್‌ಗಳ ಸಮಯಪ್ರಜ್ಞೆಯಿಂದಾಗಿ ಹಳಿ ತಪ್ಪಿಸುವ ಯತ್ನ ವಿಫಲಗೊಳಿಸಲಾಗಿದೆ ಎಂದು ವರದಿಯಾಗಿದೆ.

ಸೋಮವಾರ(ಮೇ 19) ಸಂಜೆ, ದಲೇಲ್‌ನಗರ ಮತ್ತು ಉಮರ್ತಾಲಿ ನಿಲ್ದಾಣಗಳ ನಡುವಿನ ಕಿ.ಮೀ ಮಾರ್ಕರ್ 1129/14 ಬಳಿ ದು*ಷ್ಕರ್ಮಿಗಳು ಕೃ*ತ್ಯ ಎಸಗಿದ್ದಾರೆ. ಮರದ ದಿಮ್ಮಿಗಳನ್ನು ಅರ್ಥಿಂಗ್ ವೈರ್ ಬಳಸಿ ಹಳಿಗೆ ಕಿಡಿಗೇಡಿಗಳು ಕಟ್ಟಿದ್ದರು ಎಂದು ತಿಳಿದುಬಂದಿದೆ.

ಲಖನೌ ಕಡೆಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ (20504) ನ ಲೋಕೋ ಪೈಲಟ್ ಅಡಚಣೆಯನ್ನು ಗಮನಿಸಿ ತುರ್ತು ಬ್ರೇಕ್ ಹಾಕಿದರು. ಮರದ ದಿಮ್ಮಿ ತೆರವು ಮಾಡಿ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಇದನ್ನೂ ಓದಿ : ಬೆಳ್ತಂಗಡಿಯ ಆಕಾಂಕ್ಷ ನಿಗೂಢ ಸಾ*ವು ಪ್ರಕರಣ; ಸೂಕ್ತ ತನಿಖೆಗೆ ಪಂಜಾಬ್‌ ಸರ್ಕಾರಕ್ಕೆ ದಿನೇಶ್‌ ಗುಂಡೂರಾವ್‌ ಒತ್ತಾಯ

ರಾಜಧಾನಿ ಎಕ್ಸ್‌ಪ್ರೆಸ್ ಬಳಿಕ ಕಠೋಡಮ್ ಎಕ್ಸ್‌ಪ್ರೆಸ್ (15044) ನ  ಹಳಿತಪ್ಪಿಸಲು ಎರಡನೇ ಪ್ರಯತ್ನ ಮಾಡಲಾಗಿದೆ. ಲೋಕೊ ಪೈಲಟ್‌ ಸಮಯಪ್ರಜ್ಞೆಯಿಂದ ದುರಂ*ತ ತಪ್ಪಿದೆ.  ರೈಲ್ವೆ ಪೊಲೀಸ್, ರೈಲ್ವೆ ರಕ್ಷಣಾ ಪಡೆ ಮತ್ತು ಸ್ಥಳೀಯ ಪೊಲೀಸರ ತಂಡಗಳು  ದು*ಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ನೇಣುಹಾಕಿಕೊಂಡು ಯುವಕ ಆತ್ಮಹ*ತ್ಯೆ

Published

on

ಉಳ್ಳಾಲ: ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಘಟನೆ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇ 19ರಂದು ನಡೆದಿದೆ.

ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ವೃತ್ತಿಯಲ್ಲಿ ಪೇಂಟರ್‌ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆಯ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು.

ಬಳಿಕ ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹ*ತ್ಯೆ

ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಘಟನೆ ಸಂಬಂಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page