Connect with us

DAKSHINA KANNADA

ಮೇಯರ್ ಪ್ರೇಮಾನಂದ ಶೆಟ್ಟಿ ಭೇಟಿ ಮಾಡಿದ ವಿಪಕ್ಷ ನಾಯಕ ಎಸಿ ವಿನಯ್ ರಾಜ್ ನೇತೃತ್ವದ ನಿಯೋಗ..

Published

on

ಮಂಗಳೂರು: ಮಹಾ ನಗರ ಪಾಲಿಕೆ ವಿಪಕ್ಷ ನಾಯಕ ಎ ಸಿ ವಿನಯರಾಜ್ ನೇತೃತ್ವದಲ್ಲಿ ಮ ನ ಪಾ ಸದಸ್ಯರ ನಿಯೋಗ ಮ ನ ಪಾ ಮಹಾ ಪೌರರಾದ ಪ್ರೇಮಾನಂದ ಶೆಟ್ಟಿ ಯವರನ್ನು ಭೇಟಿ ಮಾಡಿದರು.ಜೂನ್ ಮೊದಲನೇ ವಾರದಲ್ಲಿ ಮಂಗಳೂರಿಗೆ ಮುಂಗಾರು ಮಳೆ ಆಗಮಿಸಲಿದ್ದು, ಈಗಾಗಲೇ ಕೋರೋನ ಸೋಂಕನ್ನು ದೂರ ಮಾಡಲು ಜನತಾ ಕರ್ಫ್ಯೂ ಇದ್ದು ಕಾರ್ಮಿಕರ ಕೊರತೆಯಿದೆ.

ಎಲ್ಲ ವಾರ್ಡುಗಳ ಮಳೆ ನೀರು ಚರಂಡಿ ಹೂಳೆತ್ತುವ ಕಾಮಗಾರಿ ಶೀಘ್ರ ಮಾಡಿ ಮುಗಿಸಬೇಕಾಗಿದೆ. ಇಲ್ಲದೆ ಇದ್ದಲ್ಲಿ ಸರಕಾರ ಲಾಕ್ ಡೌನ್ ಮಾಡುವ ಬಗ್ಗೆ ಈಗಾಗಲೇ ಮುನ್ಸೂಚನೆ ನೀಡಿದ್ದು,

ಹಾಗೇನಾದರೂ ಆದಲ್ಲಿ ಮಳೆಗಾಲದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಹೆಚ್ಚಿನ ಅನಾಹುತ ಸಂಭವಿಸುವ ಪ್ರಮೇಯವಿದೆ. ಪ್ರಕೃತಿ ವಿಕೋಪ ಎದುರಿಸಲು 24×7 ಮಾದರಿಯಲ್ಲಿ ಕೆಲಸ ಮಾಡುವ ಟಾಸ್ಕ್ ಫೋರ್ಸ್ ಮಾಡಬೇಕಾಗಿದೆ.

ಅದರಲ್ಲಿ ಮರಗಳು ಉರುಳಿ ಬಿದ್ದಲ್ಲಿ ತಕ್ಷಣ ತೆರವು ಗೊಳಿಸುವ ತಂಡವನ್ನು ಕೂಡ ಸೇರಿಸಬೇಕಾಗುತ್ತದೆ ಎಂದು ಸಲಹೆ ನೀಡಿದರು.
ಮಾತ್ರವಲ್ಲದೆ ಸ್ವಯಂಘೋಷಿತ ಆಸ್ತಿ ತೆರಿಗೆ ಪಾವತಿ ಮಾಡಲು ಜನ ಆರ್ಥಿಕ ಸಂಕಷ್ಟದಲ್ಲಿ ಇರುವಾಗ ಕಷ್ಟಕರವಾಗಿದೆ ಮತ್ತು ಅದರಲ್ಲಿ ರಿಯಾಯಿತಿ ನೀಡುವಂತೆ ವಿನಂತಿ ಮಾಡಲಾಯಿತು.

ನಿಯೋಗದಲ್ಲಿ ಮಾಜಿ ಮಹಾ ಪೌರರುಗಳಾದ ಹಾಗು ಹಾಲಿ ಸದಸ್ಯರುಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಮೊಯಿಲಿ, ಮ ನ ಪಾ ಸದಸ್ಯರುಗಳಾದ ಪ್ರವೀಣ್ ಚಂದ್ರ ಅಳ್ವ ಹಾಗೂ ಅನಿಲ್ ಕುಮಾರ್ ಪೂಜಾರಿ ಉಪಸ್ಥಿತರಿದ್ದರು.

DAKSHINA KANNADA

ಕಡಬ: ಅಪಘಾತದ ಗಾಯಾಳು ವಾರದ ಬಳಿಕ ಚಿಕಿತ್ಸೆ ಫಲಿಸದೆ ಸಾವು

Published

on

ಕಡಬ: ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಒಂದು ವಾರದ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ ಪದ್ಮನಾಭ (48) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಮೇ 11 ರಂದು ರಾತ್ರಿ ಪದ್ಮನಾಭ ಅವರು ತಮ್ಮ ಸಹೋದರ ಸುದರ್ಶನ್ ಮತ್ತು ಸ್ನೇಹಿತರಾದ ಚೇತನ್ ಹಾಗೂ ಸತೀಶ್ ಎಂಬವರ ಜತೆ ಉಪ್ಪಿನಂಗಡಿ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ಪದ್ಮನಾಭ ಮತ್ತು ಸಂಗಡಿಗರು ಸಂಚರಿಸುತ್ತಿದ್ದ ಕಾರು ಮತ್ತು ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತಿತರ ಕ್ಷೇತ್ರಗಳಿಗೆ ಭೇಟಿ ನೀಡಿ ಶಿವಮೊಗ್ಗಕ್ಕೆ ವಾಪಸಾಗುತ್ತಿದ್ದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ನಡುವೆ ಢಿಕ್ಕಿ ಸಂಭವಿಸಿ ಅಪಘಾತ ನಡೆದಿತ್ತು. ಈ ಅವಘಡದಲ್ಲಿ ಪದ್ಮನಾಭ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಇದನ್ನೂ ಓದಿ: ಮುಂದಿನ 5 ದಿನ ಭಾರಿ ಮಳೆ, ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲೆ?

ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Continue Reading

DAKSHINA KANNADA

ಶಿರಾಡಿ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

Published

on

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಚಾಲಕನನ್ನು ಉತ್ತರಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಪುತ್ತೂರು: ಟೆಂಪೊ ಟ್ರಾವೆಲರ್‌ ಮತ್ತು ಕಾರು ಮುಖಾಮುಖಿ ಢಿಕ್ಕಿ

ಸದ್ಯಕ್ಕೆ ಟ್ಯಾಂಕರ್ ನಿಂದ ಯಾವುದೇ ಅನಿಲ ಸೋರಿಕೆ ಸಂಭವಿಸಿಲ್ಲ. ಆದರೆ ಸುರಕ್ಷತೆ ದೃಷ್ಟಿಯಿಂದ ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಯಿತು. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Continue Reading

DAKSHINA KANNADA

ಪುತ್ತೂರು: ಟೆಂಪೊ ಟ್ರಾವೆಲರ್‌ ಮತ್ತು ಕಾರು ಮುಖಾಮುಖಿ ಢಿಕ್ಕಿ

Published

on

ಪುತ್ತೂರು: ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರು ಮುಖಾಮುಖಿ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪ ತಡ ರಾತ್ರಿ ವೇಳೆ ಸಂಭವಿಸಿದ್ದು ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಾವಿನ ಹಣ್ಣು ತಿನ್ನುವಾಗ ಗಂಟಲಲ್ಲಿ ವಾಟೆ ಸಿಲುಕಿ ವ್ಯಕ್ತಿ ಸಾ*ವು

ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ಟೆಂಪೊ ಟ್ರಾವೆಲರ್‌ 50 ಮೀಟರ್ ದೂರಕ್ಕೆ ಖಾಸಗಿ ರಸ್ತೆಯಲ್ಲಿ ಮುಂದಕ್ಕೆ ಸಾಗಿ ನಿಂತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page