Connect with us

DAKSHINA KANNADA

ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ಭಾವಪೂರ್ಣ ಬೀದಿ ನಾಟಕ

Published

on

ಕಾಸರಗೋಡು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಷನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದೀರ್ಘಕಾಲೀನ ಪರಿಣಾಮಗಳು, ಅದರಲ್ಲೂ ವಿಶೇಷವಾಗಿ ಯುವ ಸಮುದಾಯದ ಮೇಲೆ ಬೀರುವ ಪರಿಣಾಮಗಳನ್ನು ಸ್ಪಷ್ಟವಾಗಿ ಸಾರ್ವಜನಿಕರಿಗೆ ಪರಿಚಯಿಸುವುದು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಕಾರ್ಯಶಾಸ್ತ್ರ (MSW) ವಿದ್ಯಾರ್ಥಿಗಳು ಸ್ನೇಹಾಲಯ ತಂಡದೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಕಲಾತ್ಮಕವಾಗಿ ತಮ್ಮ ಸಂದೇಶವನ್ನು ಸಾರ್ವಜನಿಕರ ಮುಂದಿಟ್ಟು ಜನಮನ ಗೆದ್ದರು.

ಕಾರ್ಯಕ್ರಮಕ್ಕೆ ಗಣ್ಯ ಅತಿಥಿಗಳಾಗಿ ಕಾಸರಗೋಡು ಜಿಲ್ಲೆಯ ಉಪ ಪೊಲೀಸ್ ಅಧೀಕ್ಷಕ (ಎಎಸ್ಪಿ) ಶ್ರೀ ಪಿ. ಬಾಲಕೃಷ್ಣ ನಾಯರ್, ಹೊಸದುರ್ಗ ಠಾಣೆಯ ವೃತ್ತ ನಿರೀಕ್ಷಕ (ಸಿ.ಐ) ಅಜಿತ್ ಕುಮಾರ್, ಮಂಜೇಶ್ವರ ಠಾಣೆಯ ಸಿ.ಐ ಶ್ರೀ ಅನುಪ್ ಹಾಗೂ ಸ್ನೇಹಾಲಯ ಡಿ ಅಡಿಕ್ಶನ್ ಕೇಂದ್ರದ ಕಾರ್ಯನಿರ್ವಾಹಕ, ನಿರ್ದೇಶಕ ಶ್ರೀ ಜೋಸೆಫ್ ಕ್ರಾಸ್ತಾ ಅವರು ಪ್ರಮುಖರಾಗಿ ಉಪಸ್ಥಿತರಿದ್ದರು.

ಸ್ನೇಹಾಲಯ ಡಿ ಅಡಿಕ್ಷನ್ ಸೆಂಟರ್ ಕುರಿತು ಶ್ಲಾಘನೆ ವ್ಯಕ್ತಪಡಿಸಿದ ಪೊಲೀಸ್ ಅಧಿಕಾರಿಗಳು, ಕಾಸರಗೋಡು ಜಿಲ್ಲೆಯಲ್ಲಿನ ಮಾದಕವಸ್ತು ಬಳಕೆಯಲ್ಲಿರುವ ಯುವಜನತೆಗೆ ಸೂಕ್ತ ಚಿಕಿತ್ಸೆ ನೀಡಲು ಇರುವ ಮೂಲಭೂತ ಸೌಲಭ್ಯಗಳ ಕೊರತೆ ಕುರಿತು ಚಿಂತೆಯನ್ನು ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಸ್ನೇಹಾಲಯವು ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಅಮೋಘ ಸೇವೆಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಜೊತೆಗೆ, ಇತ್ತೀಚೆಗೆ ಈ ಸಂಸ್ಥೆಯು ಸ್ಥಾಪಿಸಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳೊಂದಿಗೆ ಆರಂಭಿಸಿರುವ ಸ್ನೇಹಾಲಯ ಡಿ ಅಡಿಕ್ಷನ್ ಸೆಂಟರ್ ಕುರಿತು ಅವರು ತಮ್ಮ ಸಂತೋಷ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದಲ್ಲಿ ಮಾತನಾಡಿದ ಶ್ರೀ ಜೋಸೆಫ್ ಕ್ರಾಸ್ತಾ, ಸ್ನೇಹಾಲಯದಲ್ಲಿ ಲಭ್ಯವಿರುವ ವಿವಿಧ ಚಿಕಿತ್ಸೆ ವಿಧಾನಗಳು, ವೈಯಕ್ತಿಕ ಪುನರ್ವಸತಿ ಕಾರ್ಯಕ್ರಮಗಳು ಹಾಗೂ ಕುಟುಂಬ ಜವಾಬ್ದಾರಿಗಳ ಜತೆಗೆ ಒಡನಾಡಿ ಬೆಳೆಸುವ ದಿಶೆಯ ಸೇವೆಗಳ ಬಗ್ಗೆ ವಿವರಿಸಿದರು. ಮಾದಕವಸ್ತುಗಳ ಮೋಹದಿಂದ ಮುಕ್ತವಾಗಿರುವ ಸಮುದಾಯ ನಿರ್ಮಾಣಕ್ಕೆ ಸ್ನೇಹಾಲಯ ತೊಡಗಿಸಿಕೊಂಡಿರುವ ನಿಷ್ಠೆ ಹಾಗೂ ಸೇವಾಭಾವನೆಗೆ ಅವರು ಬದ್ಧರಾಗಿರುವುದನ್ನು ಸ್ಪಷ್ಟಪಡಿಸಿದರು.
ಸಮಾರಂಭದ ಅಂತ್ಯದಲ್ಲಿ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಸ್ನೇಹಾಲಯ ತಂಡದ ಈ ಸಾಮಾಜಿಕ ಜವಾಬ್ದಾರಿಯ ಕಾರ್ಯಕ್ರಮವನ್ನು ಶ್ರದ್ದೆಯಿಂದ ವೀಕ್ಷಿಸಿ ಎಲ್ಲಾ ಕಲಾವಿದರನ್ನು ತುಂಬು ಹ್ರದಯದಿಂದ ಅಭಿನಂದಿಸಿದರು.

 

DAKSHINA KANNADA

ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಬಿಜೆಪಿ ಮುಖಂಡನ ಉಚ್ಚಾಟನೆ

Published

on

ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂ*ಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ ಸಫಲ್ಯ ವಿರುದ್ಧ  ಬಿಜೆಪಿ ಕ್ರಮ ಕೈಗೊಂಡಿದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಿರುವ ಬಗ್ಗೆ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ತಿಳಿಸಿದೆ. ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ ಪಂಚಾಯತ್‌ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಪುತ್ತೂರು ಗ್ರಾಮಾಂತರ ಮಂಡಲ  ಅಧ್ಯಕ್ಷ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.

ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಾರ್ಟಿಯಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪದ್ಮನಾಭ ಸಫಲ್ಯ ಹಾಗೂ ಮನೆ ಸಮೀಪದ‌ ಮಹಿಳೆಗೂ ರಸ್ತೆ ವಿಚಾರದಲ್ಲಿ ವಿವಾದ ಇತ್ತು. ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿದ್ದ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ಪೆಹಲ್ಗಾಮ್ ದಾಳಿ : ಮೂವರು ಉಗ್ರರ ಫೋಟೋ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ!

ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಲಾಗಿದೆ.  ಪದ್ಮನಾಭ ಸಫಲ್ಯನ ಅಸಭ್ಯ ವರ್ತನೆಯ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

Continue Reading

DAKSHINA KANNADA

ಮಂಗಳೂರು : ಟಿಂಟೆಡ್ ಗ್ಲಾಸ್‌ ಅಳವಡಿಸಿದ್ದ ಕಾರುಗಳ ಮೇಲೆ ಬಿತ್ತು ಕೇಸ್

Published

on

ಮಂಗಳೂರು : ಬ್ಲಾಕ್ ಫಿಲ್ಮ್, ಸನ್ ಫಿಲ್ಮ್ ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಮಂಗಳೂರು ನಗರ ಪೊಲೀಸರು ಪತ್ತೆ ಹಚ್ಚಿ ಕಾರುಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

10 ದಿನದಲ್ಲಿ 500ಕ್ಕೂ ಅಧಿಕ ಕಾರುಗಳ ವಿರುದ್ಧ ಕೇಸ್ :

ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್‌ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಪೊಲೀಸರು ಸೂಕ್ತ ತಿಳುವಳಿಕೆಯನ್ನು ನೀಡಿದರು.

ಇದನ್ನೂ ಓದಿ : ಉಡುಪಿ : ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು

ಸರ್ವೋಚ್ಚ ನ್ಯಾಯಾಲಯದ ಆದೇಶ :

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲಾಯಿತು. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ತಿಳುವಳಿಕೆ ನೀಡಲಾಯಿತು.

ವಿಡಿಯೋ ನೋಡಿ :

Continue Reading

BELTHANGADY

ನಿದ್ದೆ ಮಾತ್ರೆ ಸೇವನೆ ತಾಯಿ ಮಗ ಆತ್ಮಹತ್ಯೆ ಯತ್ನ ; ಡೆತ್‌ನೋಟ್‌ನಲ್ಲಿ ಏನಿದೆ ..?

Published

on

ಬೆಳ್ತಂಗಡಿ : ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ (ಮೇ.12) ಸಂಭವಿಸಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞರಾಮನ್ ನಾಯ‌ರ್ ಅವರ ಪತ್ನಿ ಕಲ್ಯಾಣಿ (96) ಸಾವನ್ನಪ್ಪಿದರೆ, ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರಾವಸ್ಥೆಯಲ್ಲಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯವೇ ಈ ದುರ್ಘಟನೆಗೆ ಮುಕ್ಯ ಕಾರಣ ಎನ್ನಲಾಗಿದೆ.

ಮಲಗಿದ ಸ್ಥಿತಿಯಲ್ಲಿ ತಾಯಿ- ಮಗ :

ಕಲ್ಯಾಣಿ ಮತ್ತು ಜಯರಾಂ ಅವರ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು ಗಮನಿಸಿ ನೆರೆ ಹೊರೆಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊರವರು ಸೇರಿ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಡೆತ್‌ನೋಟ್‌ನಲ್ಲಿ ಏನಿದೆ ..?

ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.

ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page