Connect with us

LATEST NEWS

ಚರಂಡಿಯಲ್ಲಿ ಮೃತದೇಹ ಪತ್ತೆ; ಆ ಒಂದು ಮೂಗುತ್ತಿಯಿಂದ ಬಯಲಾಯ್ತು ಭಯಾನಕ ಕೊಲೆ ರಹಸ್ಯ

Published

on

ಜೀವನದಲ್ಲಿ ಕೆಲವೊಮ್ಮೆ ನಾವು ಮಾಡುವ ಸಣ್ಣ ತಪ್ಪೇ ನಮ್ಮನ್ನು ಸಂಕಷ್ಟಕ್ಕೆ ಸಿಕ್ಕಿಹಾಕಿಸುತ್ತದೆ. ಅದರಲ್ಲೂ ಕೆಲವೊಬ್ಬರು ತಮ್ಮನ್ನು ಅತೀ ಬುದ್ಧಿವಂತರೆಂದು ಭಾವಿಸಿರುತ್ತಾರೆ. ಬಹಳ ಯೋಚಿಸಿ ಉಪಾಯ ಮಾಡಿ ಸಂಚು ರೂಪಿಸಿದವರೂ ಏನೋ ಒಂದು ಸಣ್ನ ಸುಳಿವು ಬಿಟ್ಟು ಅದರಿಂದಾಗಿ ಸಿಕ್ಕಿ ಬೀಳುವಂತಹ ಅದೆಷ್ಟೋ ಪ್ರಕರಣಗಳನ್ನು ನಾವು ನೋಡಿದ್ದೇವೆ. ಇದೀಗ ನವದೆಹಲಿಯಲ್ಲಿ ನಡೆದಿರುವ ಅ ಭೀಕರ ಕೊಲೆ ಪ್ರಕರಣವೂ ಅಂತಹದ್ದೇ ಆಗಿದೆ. 

ನವದೆಹಲಿ : ದೆಹಲಿಯ ಉದ್ಯಮಿಯೊಬ್ಬ ಬಹಳ ಉಪಾಯ ಮಾಡಿ ತನ್ನ ಹೆಂಡತಿಯನ್ನು ಕೊಂದಿದ್ದ. ಯಾರಿಗೂ ಗೊತ್ತಾಗಬಾರದೆಂದು ಮುನ್ನೆಚ್ಚರಿಕಾ ಕ್ರಮವನ್ನು ಕೂಡ ತೆಗೆದುಕೊಂಡಿದ್ದ. ಎಲ್ಲವೂ ಆತ ಹಾಕಿದ ಸಂಚಿನಂತೆಯೇ ನಡೆದಿತ್ತು. ತಾನು ಸಿಕ್ಕಿಬೀಳುವುದಿಲ್ಲ ಎಂಬ ಬಂಡು ಧೈರ್ಯದಲ್ಲಿದ್ದ ಆರೋಪಿ ಇದೀಗ ಜೈಲು ಕಂಬಿ ಎಣಿಸುತ್ತಿದ್ದಾನೆ. ಹೆಂಡತಿಯ ಮೂಗುತ್ತಿಯಿಂದಾಗಿ ಗಂಡನ ಬೀಕರ ಕೊಲೆ ಪ್ರಕರಣ ಬಯಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಸಂಪೂರ್ಣ ಮಾಹಿತಿ

ಸೀಮಾ ಸಿಂಗ್ ಹಾಗೂ ದೆಹಲಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅನಿಲ್ ಕುಮಾರ್‌ಗೆ 20 ವರ್ಷಗಳ ಹಿಂದೆ ವಿವಾಹವಾಗಿತ್ತು. ಆದರೆ ಸೀಮಾಳ ಶವ ಮಾರ್ಚ್ 15ರಂದು ದೆಹಲಿಯ ಚರಂಡಿಯಲ್ಲಿ ಪತ್ತೆಯಾಗಿತ್ತು. ಅನಿಲ್ ತನ್ನ ಪತ್ನಿಯ ಕುಟುಂಬಕ್ಕೆ ತಾನು ಯಾರೊಂದಿಗೂ ಮಾತನಾಡುವ ಮನಸ್ಥಿತಿಯಲ್ಲಿಲ್ಲ ಎಂದು ಹೇಳುತ್ತಲೇ ಇದ್ದ. ಸುಮಾರು ಒಂದು ತಿಂಗಳ ಹಿಂದೆಯೇ ಆತ ತನ್ನ ಹೆಂಡತಿಯನ್ನು ಕೊಂದಿದ್ದ. ಸೀಮಾಳ ಪೋಷಕರು ಮಗಳೆಲ್ಲಿ ಎಂದು ಕೇಳಿದಾಗ ಮಾತು ಮರೆಸುತ್ತಿದ್ದ.

ಕೊಳೆತ ಶವ ಪತ್ತೆ :

ಆದರೆ ಏ.1 ರಂದು ಬೆಡ್‌ಶೀಟ್‌ನಲ್ಲಿ ಸುತ್ತಿ ಕಲ್ಲು ಮತ್ತು ಸಿಮೆಂಟ್ ಚೀಲಕ್ಕೆ ಕಟ್ಟಲಾದ ಭಯಾನಕ ಸ್ಥಿಯಲ್ಲಿ ಸೀಮಾ ಸಿಂಗ್ ಶವ ಪತ್ತೆಯಾಘಿತ್ತು. ಆಕೆಯ ಕೊಳೆತ ಶವ ಪತ್ತೆಯಾದ ನಂತರ, ಪೊಲೀಸರು ತನಿಖೆ ಆರಂಭಿಸಿದರು. ಮೃತ ಮಹಿಳೆಯ ದೇಹದ ಮೇಲೆ ಮೂಗುತಿಯನ್ನು ನೋಡಿದ ಪೊಲೀಸರು ಸುತ್ತಮುತ್ತಲಿನ ಆಭರಣದ ಅಂಗಡಿಯ ದಾಖಲೆಗಳನ್ನು ಪರಿಶೀಲಿಸಿದರು. ಅಲ್ಲಿ ಅನಿಲ್ ಕುಮಾರ್ ಅವರ ಹೆಸರಿನಲ್ಲಿ ಬಿಲ್ ಇದ್ದ ಕಾರಣ ಆರೋಪಿ ಪತಿಯನ್ನು ಪತ್ತೆಹಚ್ಚಲು ಸುಲಭವಾಯಿತು. ಅನಿಲ್ ಕುಮಾರ್ ದೆಹಲಿಯಲ್ಲಿ ಆಸ್ತಿ ವ್ಯಾಪಾರಿಯಾಗಿದ್ದು, ಗುರುಗ್ರಾಮ್‌ನ ತೋಟದ ಮನೆಯಲ್ಲಿ ವಾಸಿಸುತ್ತಿದ್ದರು.

ಕೊಲೆ ರಹಸ್ಯ ಬಯಲು :

ಶವವಾಗಿ ಪತ್ತೆಯಾದ ಸೀಮಾ ಅನಿಲ್ ಹೆಂಡತಿ ಎಂದು ತಿಳಿದ ಪೊಲೀಸರು ನೇರವಾಗಿ ಅನಿಲ್ ಮನೆಗೆ ಬಂದು ‘ಸೀಮಾ ಸಿಂಗ್ ಜೊತೆ ಮಾತನಾಡಬೇಕು’ ಎಂದು ಹೇಳಿದ್ದಾರೆ. ಈ ವೇಳೆ ಅನಿಲ್ ‘ಆಕೆ ಮೊಬೈಲನ್ನು ಮನೆಯಲ್ಲೇ ಬಿಟ್ಟು ಬೃಂದಾವನಕ್ಕೆ ಹೋಗಿದ್ದಾಳೆ’ ಎಂದು ಹೇಳಿದ್ದನು. ಇದರಿಂದ ಪೊಲೀಸರು ಅನುಮಾನಗೊಂಡು ಅನಿಲ್ ಕುಮಾರ್ ಅವರ ದೆಹಲಿ ಮೂಲದ ಕಚೇರಿಗೆ ಹೋದರು. ಅಲ್ಲಿ ಅವರಿಗೆ ಸೀಮಾಳ ತಾಯಿಯ ಫೋನ್ ನಂಬರ್ ಸಿಕ್ಕಿತು.

ಸೀಮಾ ಸಿಂಗ್ ತಾಯಿಯನ್ನು ವಿಚಾರಿಸಿದಾಗ ‘ತಾವು ತಮ್ಮ ಮಗಳೊಂದಿಗೆ ಒಂದು ತಿಂಗಳಿನಿಂದ ಮಾತನಾಡಿಲ್ಲ. ಆಕೆ ಹೇಗಿದ್ದಾಳೋ ಗೊತ್ತಿಲ್ಲ’ ಎಂದರು. ‘ಅಳಿಯ ಅನಿಲ್ ಕುಮಾರ್ ಆಕೆ ಜೈಪುರಕ್ಕೆ ಹೋಗಿದ್ದಾಳೆ ಎಂದು ಹೇಳಿದ್ದಾರೆ’ ಎಂದು ತಿಳಿಸಿದರು. ಇದರಿಂದ ಪೊಲೀಸರು ಅನುಮಾನ ಬಲವಾಗಿ, ಅನಿಲ್ ಕುಮಾರ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ತಾನೇ ಹೆಂಡತಿಯ ಕತ್ತು ಹಿಸುಕಿ ಕೊಂದಿದ್ದಾಗಿ ಅನಿಲ್ ಒಪ್ಪಿಕೊಂಡಿದ್ದಾನೆ. ಸದ್ಯ ಅನಿಲ್‌ನ್ನು ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

DAKSHINA KANNADA

ಶಾಸಕ ಹರೀಶ್ ಪೂಂಜಾ ವಿರುದ್ದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

Published

on

ಉಪ್ಪಿನಂಗಡಿ : ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿತ್ತು. ಇಂದು(ಮೇ 20) ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜಾಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ : ಶಿಶಿಲದ ಶ್ರೀ ಶಿಶಿಲೇಶ್ವರನಿಗೆ ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ

ಈ ನಡುವೆ ಪೊಲೀಸರು ಶಾಸಕ ಪೂಂಜಾ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಶಾಸಕ ಹರೀಶ್ ಪೂಂಜಾಗೆ ಮತ್ತೊಂದು ಹಿನ್ನಡೆಯಾಗಿದೆ.

Continue Reading

FILM

35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

Published

on

ಮಂಗಳೂರು/ಚೆನ್ನೈ: ವಯಸ್ಸು 47 ಆಗಿದ್ದರೂ ಬ್ಯಾಚುಲರ್ ಆಗಿಯೇ ಉಳಿದಿದ್ದ ನಟ ವಿಶಾಲ್ ಕೊನೆಗೂ ಏಕಾಂಗಿ ಜೀವನಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಕೊನೆಗೂ ವಿಶಾಲ್ ಅವರು ಮದುವೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅವರು ಕೈ ಹಿಡಿಯಲಿರುವ ವಧು ಯಾರು ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

ಹೌದು, ವಿಶಾಲ್ ಕೃಷ್ಣ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಹಾಗಾದರೆ ಹುಡುಗಿ ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ತಮಿಳು ಚಿತ್ರರಂಗದ ಖ್ಯಾತ ನಟಿ ಸಾಯಿ ಧನ್ಶಿಕಾ ಜೊತೆ ವಿಶಾಲ್ ಹಸೆಮಣೆ ಏರಲಿದ್ದಾರೆ. ಇದು ಲವ್ ಮ್ಯಾರೇಜ್ ಕೂಡ ಹೌದು. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ.

ಕಳೆದ 15 ವರ್ಷಗಳಿಂದ ಪರಿಚಿತರಾಗಿರುವ ಧನ್ಶಿಕಾ ಜೊತೆ ವಿಶಾಲ್ ಮದುವೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ‘ಯೋಗಿದ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶಾಲ್, ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಅವರ ಆಶೀರ್ವಾದೊಂದಿಗೆ ನಾನು ಅವಳನ್ನು ಪರಿಚಯಿಸುತ್ತಿದ್ದೇನೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

ಬಳಿಕ ಮಾತನಾಡಿದ ಧನ್ಶಿಕಾ, ನಮ್ಮ ಸುದ್ದಿ ವರದಿ ವೈರಲ್ ಆದ ನಂತರ ನಮ್ಮ ಸಂಬಂಧವನ್ನು ಅಧಿಕೃತಗೊಳಿಸುವಂತೆ ಒತ್ತಾಯಿಸಲಾಯಿತು ಎಂದರು. ನಾವಿಬ್ಬರು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಲು ಬಯಸಿರಲಿಲ್ಲ. ಆದಾಗ್ಯೂ, ಇಂದು ಬೆಳಗ್ಗೆ ಸುದ್ದಿ ವರದಿ ವೈರಲ್ ಆಯಿತು. ಹೀಗಾಗಿ ಮರೆಮಾಡಲು ಏನೂ ಉಳಿದಿಲ್ಲ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಆಗಸ್ಟ್‌ 29ರಂದು ವಿಶಾಲ್ ಅವರ ಹುಟ್ಟುಹಬ್ಬ. ಅದೇ ದಿನ ವಿವಾಹ ನಿಶ್ಚಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್‌ ಖುಷ್‌ ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page