Connect with us

BELTHANGADY

ದ್ವಿಚಕ್ರ ವಾಹನಕ್ಕೆ ಪಿಕ್‌ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!

Published

on

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ  ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ.

ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್‌ಅಪ್ ಡಿಕ್ಕಿ ಹೊಡೆದಿದೆ.  ಘಟನೆಯಿಂದ ದ್ವಿಚಕ್ರ ವಾಹನ ಸವಾರ ಪುರುಷೋತ್ತಮ(19 ವ)ರವರು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ದ್ವಿಚಕ ವಾಹನದಲ್ಲಿದ್ದ ಇನ್ನೋರ್ವ ಸಹಸವಾರ ತೌಫಿಕ್(18 ವ) ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿ ಹೊಡೆದ ಪಿಕ್‌ ಅಪ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಪಿಕ್‌ಅಪ್ ಡಿ*ಕ್ಕಿ ಹೊಡೆದ ರಭಸಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಲಾಯಿಲ ರಾಘವೇಂದ್ರ ನಗರದ ನಿವಾಸಿ ದಿ.ಜಯರಾಮ ಎಂಬವರ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

BELTHANGADY

ಧರ್ಮಸ್ಥಳ: ನೂತನ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿದ ಡಿಕೆಶಿ

Published

on

ಉಜಿರೆ: ಧರ್ಮಸ್ಥಳದಲ್ಲಿ ನಡೆಯುವ ಬಹುಮುಖಿ ಸೇವೆ ನಿಜಕ್ಕೂ ಶ್ಲಾಘನೀಯವಾಗಿದ್ದು, ಕಲ್ಯಾಣ ಮಂಟಪ ನಿರ್ಮಾಣದಂತ ಕಾರ್ಯ ಮಹತ್ತರದಾಗಿದೆ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ನೂತನವಾಗಿ ನಿರ್ಮಾಣವಾದ ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ಉದ್ಘಾಟಿಸಿದ್ದಾರೆ. ಶ್ರೀ ಉಮಾ ಮಹೇಶ್ವರ, ಶಿವ ಪಾರ್ವತಿ ಮತ್ತು ಗೌರಿ ಶಂಕರ ಎಂಬ ಮೂರು ಕಲ್ಯಾಣ ಮಂಟಪಗಳ ಸಮುಚ್ಚಯವನ್ನು ನಿರ್ಮಿಸಲಾಗಿದ್ದು, ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹಾಗೂ ಹಲವು ಗಣ್ಯರ ಸಮಕ್ಷಮದಲ್ಲಿ ಉದ್ಘಾಟನೆ ಮಾಡಲಾಗಿದೆ.

ಧರ್ಮಸ್ಥಳಕ್ಕೆ ರಾಜ್ಯದ ಮಾತ್ರವಲ್ಲದೆ ಹೊರ ರಾಜ್ಯದ ಜನರು ಕೂಡಾ ಮದುವೆ ಕಾರ್ಯಕ್ಕೆ ಬರುತ್ತಿದ್ದು, ಇಲ್ಲಿ ಮದುವೆಯಾದ್ರೆ ಜೀವನ ಉಜ್ವಲವಾಗುತ್ತದೆ ಎಂಬ ನಂಬಿಕೆ ಇರಿಸಿದ್ದಾರೆ. ಹೀಗಾಗಿ ಭಕ್ತರ ಆಸೆಯನ್ನು ನೆರವೇರಿಸುವ ಸಲುವಾಗಿ ಈ ಸುಸಜ್ಜಿತ ಕಲ್ಯಾಣ ಮಂಟಪದ ಸಮುಚ್ಚಯವನ್ನು ನಿರ್ಮಾಣ ಮಾಡಲಾಗಿದೆ.

ಈ ಸಂದರ್ಭ ಹರ್ಷೇಂದ್ರ ಹೆಗ್ಗಡೆ, ಸುರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜಾ, ರಕ್ಷಿತ್ ಶಿವರಾಂ ಮೊದಲಾದವರು ಉಪಸ್ಥಿತರಿದ್ದರು.

Continue Reading

BELTHANGADY

ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶದ ಬ್ಯಾನರ್‌ಗಳಿಗೆ ಹಾನಿ; ಕಿಡಿಗೇಡಿಗಳು ಪರಾರಿ

Published

on

ಬೆಳ್ತಂಗಡಿ: ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಎಂಬ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶ ಇಂದು (ಏ.20) ನಡೆಯಲಿದ್ದು, ಅದಕ್ಕೆ ಸಂಬಂಧಿಸಿ ಹಾಕಲಾಗಿದ್ದ ಹತ್ತಾರು ಬ್ಯಾನರ್‌ಗಳನ್ನು ಗುರುವಾಯನಕೆರೆಯ ಶಕ್ತಿನಗರದಲ್ಲಿ ಅಳವಡಿಸಲಾಗಿತ್ತು. ಆದರೆ ಯಾರೋ ಕಿಡಿಗೇಡಿಗಳು ಅವುಗಳನ್ನು ಹರಿದು ಹಾಕಿ ಪರಾರಿಯಾಗಿರುವ ಘಟನೆ ನಿನ್ನೆ (ಏ.19) ರಾತ್ರಿಯ ಸಂಭವಿಸಿದೆ.

ಸಮಾವೇಶದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಸಚಿವರಾದ ಚಲುವರಾಯಸ್ವಾಮಿ, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯ ಮಟ್ಟದ ಹಲವಾರು ನಾಯಕರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ತಾಲುಕಿನಾದ್ಯಂತ ವ್ಯಾಪಕ ಪ್ರಮಾಣದ ಪ್ರಚಾರ ಬ್ಯಾನರ್ , ಪಕ್ಷದ ಧ್ವಜಗಳು ಸೇರಿದಂತೆ ಬಂಟಿಂಗ್ಸ್ ಗಳನ್ನು ಅಳವಡಿಸಲಾಗಿತ್ತು.

ಆದರೆ ಆ ಬ್ಯಾನರ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿ ಪರಾರಿಯಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

BELTHANGADY

ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿ.ಕೆ.ಶಿವಕುಮಾರ್

Published

on

ಬೆಳ್ತಂಗಡಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು (ಎ.20) ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

ಬಳಿಕ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿ ಹುಂಡಿಗೆ ಕಾಣಿಕೆ ಹಾಕಿದರು. ಇದೇ ಸಂದರ್ಭದಲ್ಲಿ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಅರ್ಶಿವಾದ ಪಡೆದು ಬೆಳ್ತಂಗಡಿ ಕಾರ್ಯಕ್ರಮಕ್ಕೆ ಪ್ರಯಾಣ ಮಾಡಿದರು.

ಮಾಜಿ ಎಂ.ಎಲ್.ಸಿ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುನಿಯಲು ಉದಯ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್ ಕುಮಾರ್ ಸೇರಿದಂತೆ ಇನ್ನಿತರರು ಭಾಗಿಯಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page