Connect with us

ಹೀನಾಯ ಪರಿಸ್ಥಿತಿಯಲ್ಲೂ ಬಡರೋಗಿಯ ಪ್ರಾಣದೊಂದಿಗೆ ಚೆಲ್ಲಾಟವಾಡಿದ ಖಾಸಗಿ ಆಸ್ಪತ್ರೆ

Published

on

ಹೀನಾಯ ಪರಿಸ್ಥಿತಿಯಲ್ಲೂ ಬಡರೋಗಿಯ ಪ್ರಾಣದೊಂದಿಗೆ ಚೆಲ್ಲಾಟವಾಡಿದ ಖಾಸಗಿ ಆಸ್ಪತ್ರೆ

ಮಂಗಳೂರು: ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕಾದವರು ಮಾಹಿತಿ ಕೊರತೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಇದೀಗ ಇತ್ತ ಹಣವೂ ಇಲ್ಲದೇ ಅತ್ತ ರೋಗಿಯ ಪ್ರಾಣವನ್ನು ಉಳಿಸಿಕೊಳ್ಳಲಾಗದೆ ಚಡಪಡಿಸಿದ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಾರ್ಚ್ 28 ರಂದು, ಮಂಗಳೂರಿನ ಕೆ.ಎಂ.ಸಿ ಅತ್ತಾವರ ಆಸ್ಪತ್ರೆಗೆ ಅನಾರೋಗ್ಯ ದಿಂದ ಬಳಲುತ್ತಿದ್ದ ಬಂಟ್ವಾಳದ ಲಕ್ಷ್ಮಣ ಭಂಡಾರಿ (48) ಎಂಬವರನ್ನು ಸಂಬಂಧಿಕರು ದಾಖಲು ಮಾಡಿರುತ್ತಾರೆ.

ದಾಖಲು ಮಾಡಲು ಬಂದವರಿಗೆ ವೆನ್ಲಾಕ್ ಆಸ್ಪತ್ರೆ ಕೋವಿಡ್ 19 ಆಸ್ಪತ್ರೆ ಎಂಬುದು ತಿಳಿದಿರಲಿಲ್ಲ. ಮಾಹಿತಿ ಕೊರತೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ದಾಖಲಾದ ಕೂಡಲೇ ಕೆ.ಎಂ.ಸಿ ಆಸ್ಪತ್ರೆ ಅವರಿಂದ ಮುಂಗಡ ಹಣ 80000/- ವನ್ನು ಕೂಡಲೇ ಪಾವತಿ ಮಾಡಲು ಒತ್ತಾಯಿಸಿರುವುದರಿಂದ, ರೋಗಿಯ ಸಂಬಂಧಿಕರು ತಮ್ಮಲ್ಲಿದ್ದ ಹಣ ಕೊಟ್ಟು, ಒಡವೆಗಳನ್ನು ಅಡವಿಟ್ಟು ಉಳಿದ ಹಣ ಕಟ್ಟಿರುತ್ತಾರೆ.

ಆದ್ರೆ ವಿಪರ್ಯಾಸ ಅಂದ್ರೆ ವೆನ್ ಲಾಕ್ ಆಸ್ಪತ್ರೆಗೆ ದಾಖಲಾಗಿ ಕೆ.ಎಂ.ಸಿ ಆಸ್ಪತ್ರೆಯವರಿಗೆ ರಶೀದಿ ತಂದರೆ,

ಅದ್ರಲ್ಲಿ ‘ಆಯುಷ್ಮಾನ್ ಯೋಜನೆ’ ಮಾಡಿ ಚಿಕಿತ್ಸಾ ವೆಚ್ಚದಲ್ಲಿ ಡಿಸ್ಕೌಂಟ್ ಮಾಡಬಹುದೆಂಬ ಕನಿಷ್ಟ ಮಾಹಿತಿಯನ್ನು ಆ ರೋಗಿಯ ಸಂಬಂಧಿಕರಿಗೆ  ಖಾಸಗಿ ಆಸ್ಪತ್ರೆಯವರು ಒದಗಿಸಿರುವುದಿಲ್ಲ.

ಇದೀಗ ನಿನ್ನೆ (ಎಪ್ರಿಲ್ 9) ಆ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುತ್ತಾರೆ.

ಈಗ ಅವರ ಮೃತದೇಹ ಪಡೆಯಲು ಬಾಕಿ ಉಳಿದಿರುವ 55000/- ರೂಪಾಯಿ ಹಣವನ್ನು ಕೂಡಲೇ ಕಟ್ಟಬೇಕೆಂದು ಸತಾಯಿಸುತ್ತಿದ್ದಾರೆ.

ಕೊರೊನಾದಂತಹ ಮಹಾಮಾರಿ ಬಂದು ಜನರನ್ನು ಸತಾಯಿಸುತ್ತಿರುವ ಇತ್ತೀಚಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಯವರು ದರ್ಪ ತೋರಿಸಿರುವುದು ಎಷ್ಟರಮಟ್ಟಿಗೆ ಸರಿ.

ಈ ಬಗ್ಗೆ ಜನನಾಯಕರು ಗಮನಹರಿಸಿ ಸರಿಯಾದ ಕ್ರಮ ಕೈಗೊಳ್ಳಬೇಕಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ರೋಗಿಯ ಸಂಬಂಧಿಕರ ದೂರವಾಣಿಗೆ ಕರೆ ಮಾಡಬಹುದು.

ದೂರವಾಣಿ ಸಂಖ್ಯೆ: 7259634266

Advertisement
Click to comment

Leave a Reply

Your email address will not be published. Required fields are marked *

LATEST NEWS

ಅಪ್ಪನೊಂದಿಗೆ ಹಾಲು ತರಲು ಹೋದಾಗ ನಡೆದ ದುರಂತ; ಸ್ಕೂಲ್ ಬಸ್ ಹರಿದು ಇಬ್ಬರು ಕಂದಮ್ಮಗಳು ಸಾವು

Published

on

ಬೆಂಗಳೂರು: ಶಾಲಾ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಎರಡು ಪುಟ್ಟ ಕಂದಮ್ಮಗಳು ಕೊನೆಯುಸಿರೆಳೆದ ಘಟನೆ ಇಂದು ಬೆಳಿಗ್ಗೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಕಾನ್ಸ್‌ಟೇಬಲ್ ನಾಗನಗೌಡ ಅವರ 2 ವರ್ಷದ ಮಗಳು ವರ್ಷ ಹಾಗೂ ಅವರ ಅಣ್ಣನ ಮಗಳು 4 ವರ್ಷದ ಭಾನು ಎಂದು ಗುರುತಿಸಲಾಗಿದೆ.

ನಗರದ ಸಿಎಆರ್ ವಿಭಾಗದಲ್ಲಿ ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ನಾಗನಗೌಡ ಎಂಬುವವರು ಇಂದು ಬೆಳಿಗ್ಗೆ ತಮ್ಮ ಬೈಕ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ಹೊರಟಿದ್ದರು.

ಥಣಿಸಂದ್ರದ ಮುಖ್ಯರಸ್ತೆಯ ಬಳಿ ಚಲಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಶಾಲಾ ಬಸ್ ಅಚಾನಕ್ಕಾಗಿ ಟರ್ನ್ ಪಡೆದುಕೊಂಡಿದೆ. ಈ ವೇಳೆ ಬೈಕ್‌ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿದ್ದ ನಾಗನಗೌಡ ಮತ್ತು ಇಬ್ಬರು ಮಕ್ಕಳು ರಸ್ತೆಗೆ ಬಿದ್ದಿದ್ದಾರೆ.

ದುರದೃಷ್ಟವಶಾತ್, ಮಕ್ಕಳಿಬ್ಬರು ನೇರವಾಗಿ ಬಸ್ಸಿನ ಚಕ್ರದ ಕೆಳಗೆ ಬಿದ್ದಿದ್ದು, ಚಾಲಕ ಬ್ರೇಕ್ ಹಾಕುವಷ್ಟರಲ್ಲಿ ಬಸ್ ಮಕ್ಕಳ ಮೇಲೆ ಹರಿದಿದೆ. ತಲೆಗೆ ಗಂಭೀರ ಗಾಯಗಳಾದ ಪರಿಣಾಮ ಎರಡು ಮತ್ತು ನಾಲ್ಕು ವರ್ಷದ ಇಬ್ಬರು ಪುಟಾಣಿಗಳು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಐಟಿಐ ವಿದ್ಯಾರ್ಥಿಗಳ ಮಧ್ಯೆ ಚೂರಿ ಇರಿತ-ಇಬ್ಬರಿಗೆ ಗಾಯ

ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

LATEST NEWS

ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ ಕೋಟಿ ಕೋಟಿ ವಂಚನೆ

Published

on

ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ನೀಡಿದ ಭರವಸೆಯನ್ನು ನಂಬಿದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿದ್ದಾಗಿ ದೂರು ನೀಡಲಾಗಿದೆ. ಆಕೆ ಜೊತೆ ಪತಿ ಕೂಡಾ ಕೈಜೋಡಿಸಿದ್ದಾರೆ.

2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು. ಈ ನಡುವೆ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡು ಮಂಗಳೂರಿನಲ್ಲೂ ಇದೇ ರೀತಿ ಮೋಸ ಮಾಡಿದ್ದಾರೆ.

ಇದನ್ನೂ ಓದಿ: ಮದುವೆ ಮನೆ ಬಫೆ ಆ್ಯಪ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಯುವಕನಿಗೆ ಕೊಲೆ ಬೆದರಿಕೆ!

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ದೊರಕಿಸಿಕೊಡುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Continue Reading

LATEST NEWS

‘ಸಾರಿ ಮಮ್ಮಿ-ಪಾಪ, ಐ ಲವ್ ಯು’ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Published

on

ಬೀದರ್‌: 10ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದುರದೃಷ್ಟಕರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.


ಶರತ್ ಪರಮೇಶ್ವರ್(16), ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿ. ವಿದ್ಯಾರ್ಥಿಯು ಸಾಯುವ ಮೊದಲು “Sorry Mummy, Papa… I Love You” ಮತ್ತು “Keep Smile Forever” ಎಂದು ಬರೆದ ಹೃದಯವಿದ್ರಾವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಬಾಲಕ ಪರೀಕ್ಷೆಗೆ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಕಂಡ್ಲೂರು ಸೇತುವೆ ಬಳಿ ಅಕ್ರಮ ಮರಳು ಅಡ್ಡೆಗೆ ದಾಳಿ; 11 ಮಂದಿ ಆರೋಪಿಗಳ ಬಂಧನ

ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page