Connect with us

DAKSHINA KANNADA

ಪುತ್ತೂರು: ಹರಿಯುವ ನೀರಿನಿಂದ ವಿದ್ಯುತ್ ತಯಾರಿಸಿ ಆತ್ಮನಿರ್ಭರತೆಯನ್ನು ಸಾಧಿಸಿದ ಪ್ರಗತಿಪರ ಕೃಷಿಕ

Published

on

ಪುತ್ತೂರು: ದೇಶದಲ್ಲೇ ಎಷ್ಟೇ ವಿದ್ಯುತ್ ಸ್ಥಾವರಗಳು ಸ್ಥಾಪನೆಗೊಂಡರೂ ಗ್ರಾಮೀಣ ಭಾಗದಲ್ಲಿ ಮಾತ್ರ ವಿದ್ಯುತ್ ಸಮಸ್ಯೆ ಇಂದಿಗೂ ಬಗೆ ಹರಿದಿಲ್ಲ.ಆದರೆ ವಿದ್ಯುತ್ ಕೊರತೆ, ಸಮಸ್ಯೆ ಮೊದಲಾದ ಜಂಜಾಟಗಳಿಂದ ದೂರವೇ ಉಳಿದು ತಮ್ಮದೇ ಜಾಗದಲ್ಲಿ ನೈಸರ್ಗಿಕವಾಗಿ ಹರಿಯುವ ನೀರಿನಿಂದ ವಿದ್ಯುತ್ ತಯಾರಿಸುವ ಮೂಲಕ ವಿದ್ಯುತ್ ನಲ್ಲಿ ಆತ್ಮನಿರ್ಭರತೆಯನ್ನು ಸಾಧಿಸಿದ ಪ್ರಗತಿಪರ ಕೃಷಿಕರೊಬ್ಬರು ದಕ್ಷಿಣಕನ್ನಡ ಜಿಲ್ಲೆಯಲ್ಲಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಸುರೇಶ್ ಕಳೆದ 17 ವರ್ಷಗಳಿಂದ ವಿದ್ಯುತ್ ಗಾಗಿ ಸರಕಾರಕ್ಕೆ ಅಂಗಲಾಚದೆ ತನ್ನದೇ ಸ್ವಂತ ಜಲ ವಿದ್ಯುತ್ ಘಟಕವನ್ನು ಸ್ಥಾಪಿಸುವ ಮೂಲಕ ನಿರಂತರ ವಿದ್ಯುತ್ ಅನ್ನು ಪಡೆಯುತ್ತಿದ್ದಾರೆ. ತನ್ನ ತೋಟದ ಸುಮಾರು 60 ಅಡಿ ಎತ್ತರದಲ್ಲಿ ಹರಿಯುವ ಹಳ್ಳದ ನೀರನ್ನು ಕೊಳವೆಯ ಮೂಲಕ ಟರ್ಬನ್ ಗೆ ಹರಿಸುವ ಮೂಲಕ 2 ಕೆ.ವಿ ವಿದ್ಯುತ್ ಅನ್ನು ಪಡೆಯುತ್ತಿದ್ದಾರೆ.

6 ಇಂಚು ಅಗಲದ ಕೊಳವೆಯ ಮೂಲಕ ನೀರನ್ನು ಹರಿಸಿ , 4 ಇಂಚು, 3 ಇಂಚು, 2.5 ಇಂಚು ಹಾಗೂ 1.50 ಇಂಚುಗಳ ಪೈಪ್ ಗಳನ್ನು ಜೋಡಿಸಿ, ನೀರಿನ ಹರಿವಿನ ರಭಸವನ್ನು ಹೆಚ್ಚಿಸಿ, ಟರ್ಬೈನ್ ಗೆ 1 ಇಂಚಿನ ಪೈಪ್‌ನಿಂದ ನೀರನ್ನು ಬಿಡುವ ಮೂಲಕ ಟರ್ಬೈನ್ ಅನ್ನು ವೇಗವಾಗಿ ತಿರುಗಿಸಲಾಗುತ್ತದೆ.

ಈ ಟರ್ಬೈನ್ ಗೆ ಬೆಲ್ಟ್ ಅಳವಡಿಸಿ ಡೈನಮೋ ಮೂಲಕ ವಿದ್ಯುತ್ ಉತ್ಪಾದಿಸಲಾಗುತ್ತದೆ. ಮನೆಗೆ ಬೇಕಾದ ಎಲ್ಲಾ ವಿದ್ಯುತ್ ಸಲಕರಣೆಗೆ ಇದೇ ವಿದ್ಯುತ್ ಅನ್ನು ಉಪಯೋಗಿಸಲಾಗುತ್ತಿದ್ದು, ವರ್ಷಕ್ಕೆ 9 ತಿಂಗಳು ಇದೇ ವಿದ್ಯುತ್ ಅನ್ನು ಸುರೇಶ್ ಅವರು ಬಳಸುತ್ತಿದ್ದಾರೆ.

ಸರಿ ಸುಮಾರು 50 ರಿಂದ 60 ಸಾವಿರ ರೂಪಾಯಿಗಳನ್ನು ಖರ್ಚು ಮಾಡಿ ಅಳವಡಿಸಲಾಗಿರುವ ಈ ಟರ್ಬೈನ್ ಗೆ ಖರ್ಚು ಮಾಡಿದ ಹಣಕ್ಕಿಂತ ಎಷ್ಟೋ ಪಾಲು ಹಣವನ್ನು ವಿದ್ಯುತ್ ಬಿಲ್ ನಲ್ಲೇ ಉಳಿಸಿಕೊಂಡಿರುವ ಸುರೇಶ್ ತಮ್ಮಂತೆ ಇತರರೂ ಅವಕಾಶವಿದ್ದಲ್ಲಿ ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಲ್ಲಿ ತಮ್ಮಂತೆಯೇ ವಿದ್ಯುತ್ ನಲ್ಲಿ ಆತ್ಮನಿರ್ಭರತೆ ಸಾಧಿಸಲು ಸಾಧ್ಯವಿದೆ ಎನ್ನುತ್ತಾರೆ ಸುರೇಶ್.ಪ್ರಗತಿಪರ ಕೃಷಿಕರಾಗಿರುವ ಸುರೇಶ್ ನೈಸರ್ಗಿಕವಾಗಿ ಹರಿಯುವ ನೀರನ್ನೇ ತಮ್ಮ ತೋಟಗಳಿಗೆ ಬಳಸಿಕೊಳ್ಳುವ ಮೂಲಕ ಅಂತರ್ಜಲ ವೃದ್ಧಿಯಲ್ಲೂ ತಮ್ಮ ಪಾತ್ರ ನಿರ್ವಹಿಸುತ್ತಿದ್ದಾರೆ.

ಹರಿಯುವ ನೀರನ್ನು ತೋಟದ ತುಂಬಾ ನೀರಿನ ಗುಂಡಿಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಇವರ ತೋಟದಲ್ಲಿ ಇದೀಗ ಕೊಳವೆ ಬಾವಿಯನ್ನು ಬಳಸಲಾಗುತ್ತಿಲ್ಲ. ಈ ಕಿರು ಜಲವಿದ್ಯುತ್ ಘಟಕವನ್ನು ವೀಕ್ಷಿಸಲು ಹಾಗೂ ಮಾಹಿತಿ ಪಡೆದುಕೊಳ್ಳಲು ಊರು ಹಾಗೂ ಪರವೂರಿನಿಂದ ಹಲವರು ಸುರೇಶ್ ಅವರ ತೋಟಕ್ಕೆ ಬೇಟಿ ನೀಡುತ್ತಿದ್ದಾರೆ.

ಈ ಕಿರು ಜಲ ವಿದ್ಯುತ್ ಘಟಕವನ್ನು ವೀಕ್ಷಿಸಿದ ಮಂದಿ ಯಾವ ರೀತಿ ಬೃಹತ್ ಮಟ್ಟದ ಜಲ ವಿದ್ಯುತ್ ಘಟಕಗಳು ಕಾರ್ಯ ನಿರ್ವಹಿಸುತ್ತದೆ ಎನ್ನುವುದನ್ನು ಹತ್ತಿರದಿಂದಲೇ ನೋಡಿದಂತಾಗುತ್ತದೆ ಎನ್ನುತ್ತಾರೆ.ಎಲ್ಲಾ ವಿಚಾರಗಳಿಗೂ ಸರಕಾರವನ್ನು ಅವಲಂಭಿಸುವ ಜನರ ಮಧ್ಯೆ ಸುರೇಶ್ ಸ್ವಾವಲಂಭಿಯಾಗಿ ವಿದ್ಯುತ್ ಉತ್ಪಾದಿಸುವ ಮೂಲಕ ಗುರುತಿಸಿಕೊಂಡಿದ್ದಾರೆ.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading

DAKSHINA KANNADA

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಹುಭಾಷಾ ನಟಿ ನಯನ ತಾರಾ ದಂಪತಿ ಭೇಟಿ

Published

on

ಸುಬ್ರಹ್ಮಣ್ಯ: ಬಹುಭಾಷಾ ನಟಿ ನಯನ ತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆವ ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾದರು.

ಪತಿ ವಿಘ್ನೇಶ್‌ ಶಿವನ್ ಜೊತೆ ಆಗಮಿಸಿದ ನಯನ್ ತಾರಾ ದಂಪತಿಗೆ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರ ಉಪಸ್ಥಿತಿಯಲ್ಲಿ ಸಮಿತಿ ಪ್ರಮುಖರು ಸೇರಿ ಗೌರವ ಸಲ್ಲಿಸಿದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page