Connect with us

ಕೊರೊನಾ ಜಾಗೃತಿಯ ಕನ್ನಡ ಕಾಲರ್ ಟ್ಯೂನ್ ಧ್ವನಿ ಯಾರದು ಅಂತೀರಾ.?.. ಇವರದೇ ನೋಡಿ..

Published

on

ಕೊರೊನಾ ಜಾಗೃತಿಯ ಕನ್ನಡ ಕಾಲರ್ ಟ್ಯೂನ್ ಧ್ವನಿ ಯಾರದು ಅಂತೀರಾ.?.. ಇವರದೇ ನೋಡಿ..

ಪುತ್ತೂರು: ಕೊರೊನಾ ಅನ್ನೋ ಮಹಾಮಾರಿ ನಮ್ಮಲ್ಲೂ ವಕ್ಕರಿಸಿದ ಮೇಲೆ, ಕೊರೊನಾಗಿಂತ ಜಾಸ್ತಿ ಕಾಡಿದ್ದು ಕಾಲ್ ಮಾಡಬೇಕು ಅಂತ ಮೊಬೈಲ್ ಎತ್ತಿಕೊಂಡು ಡಯಲ್ ಮಾಡಿದಾಗ ಅದರಲ್ಲಿ ಬರುತ್ತಿದ್ದ ಕೊರೊನಾ ಜಾಗೃತಿ ಕಾಲರ್ ಟ್ಯೂನ್.

ಈ ಕಾಲರ್ ಟ್ಯೂನ್ ಗೆ ಸಾಕಷ್ಟು ಜನ ಕೆಂಡಾಮಂಡಲವಾಗಿದ್ರು. ಅಲ್ಲದೇ ಸಾಕಷ್ಟು ಟ್ರೋಲ್ ಗಳು ಕೂಡ ಈ ಕಾಲರ್ ಟ್ಯೂನ್ ಗಳ ಮೇಲಾಗಿತ್ತು.

ಅಷ್ಟಕ್ಕೂ ಆ ಜಾಗೃತಿ ಕಾಲರ್ ಟ್ಯೂನ್ ನಲ್ಲಿ ಕನ್ನಡದಲ್ಲಿ ಬರ್ತಾ ಇದ್ದ ಧ್ವನಿ ಯಾರದಿರಬಹುದು ಅನ್ನೋ ಕುತೂಹಲ ಹಲವರಿಗಿದ್ದಿರಬಹುದು.

ಆ ಕುತೂಹಲಕ್ಕೆ ಉತ್ತರ ಇಲ್ಲಿದೆ ನೋಡಿ..

ಎಸ್.. ಇತ್ತೀಚಿನ ದಿನಗಳಲ್ಲಿ ವಿಶ್ವದಾದ್ಯಂತ ಹಬ್ಬುತ್ತಿರುವ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮವರ ಧ್ವನಿ ಕಾಲರ್ ಟ್ಯೂನ್ ನ ಮೂಲಕ ಕೋಟ್ಯಂತರ ಜನರ ಕಿವಿಗೆ  ತಲುಪುತ್ತಿದೆ.

ಈ ಕನ್ನಡ ಭಾಷೆಯ ಕಾಲರ್ ಟ್ಯೂನ್ ಗೆ ಧ್ವನಿ ಕೊಟ್ಟ ಬಹುಮುಖ ಪ್ರತಿಭೆ ಡಾರೆಲ್ ಜೆಸಿಕಾ ಫೆರ್ನಾಂಡಿಸ್.

ಪ್ರಸ್ತುತ ದೆಹಲಿಯ ಕನ್ನಡ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ಕಳೆದ 7 ವರ್ಷಗಳಿಂದ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು,

ತನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮಂಗಳೂರಿನ ಕಪಿತಾನಿಯೊದಲ್ಲಿ ಪಡೆದು ಪದವಿ ಶಿಕ್ಷಣವನ್ನು ಮಂಗಳೂರಿನ ಅಲೋಶಿಯಸ್  ಕಾಲೇಜಿನಲ್ಲಿ ಪಡೆದಿರುತ್ತಾರೆ.

ಈ ಮಂಗಳೂರಿನ ಹುಡುಗಿಗೆ ಪುತ್ತೂರಿನ ನಂಟೂ ಇದೆ. ಇವರು ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಡಿಂಪಲ್ ಜೆನಿಫರ್ ಫೆರ್ನಾಂಡಿಸ್ ಇವರ ತಂಗಿಯೂ ಹೌದು.

ಜೆಸಿಕಾರವರಿಗೆ ಕೊರೋನಾ ಜಾಗೃತಿಯ ಕಾಲರ್ ಟ್ಯೂನ್ ಗೆ ಧ್ವನಿ ಕೊಡಲು ಪ್ರೇರೇಪಿಸಿದವರು ಖ್ಯಾತ ಯಕ್ಷಗಾನ ಕಲಾವಿದರಾದ ಸರವು ಕೃಷ್ಣ ಭಟ್.

ಇವರು ಜೆಸಿಕಾ ಕೆಲಸ ಮಾಡುತ್ತಿರುವ ಶಾಲೆಯ ಅಧ್ಯಕ್ಷರು ಕೂಡ ಹೌದು.

“ನಾನು ಸರವು ಕೃಷ್ಣ ಭಟ್ ಅವರು ಹೇಳಿದ್ರು ಅಂತ ಧ್ವನಿ ನೀಡಲು ಹೋಗಿದ್ದೆ. ಅವರು ಬಿಟ್ಟು ಬೇರೆ ಯಾರು ಹೇಳಿದ್ರೂ ನಾನು ಧ್ವನಿ ನೀಡಲು ಹೋಗುವ ಸಾಹಸ ಮಾಡೋದಿಲ್ಲ” ಎಂದು ನಗುತ್ತಾರೆ ಜೆಸಿಕಾ.

ಡಾರೆಲ್ ಜೆಸಿಕಾ ಇದುವರೆಗೆ 200 ಕ್ಕೂ ಹೆಚ್ಚು ಸರಕಾರದ ಯೋಜನೆಗಳಿಗೆ ಧ್ವನಿ ನೀಡಿದ್ದಾರೆ.

ತಮ್ಮ 24ನೇ ವಯಸ್ಸಿನಲ್ಲಿ ಧ್ವನಿ ನೀಡಲು ಆರಂಭಿಸಿದ ಇವರ ಧ್ವನಿ ಇಂದಿಗೂ ರೇಡಿಯೋ, ದೂರದರ್ಶನ ಗಳಲ್ಲಿ ಪ್ರಸಾರವಾಗುತ್ತಿದೆ.

ಇವರು  ಕಳೆದ 7 ವರ್ಷಗಳಿಂದ ಅನೇಕ ಜಾಹಿರಾತುಗಳಿಗೆ ಹಾಗೂ ಪ್ರಕಟಣೆಗಳಿಗೆ ಧ್ವನಿ ನೀಡಿದ್ದಾರೆ.

“ಪ್ರತಿಯೊಬ್ಬರ ಫೋನ್ ನಲ್ಲಿ ತನ್ನ ಧ್ವನಿ ಪ್ರಸಾರವಾಗಬಹುದು ಎಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ.

ಕನ್ನಡದಲ್ಲಿ ಕೋಟ್ಯಾಂತರ ಜನರಿಗೆ ಕೇಳಿಸುವ ಜಾಗೃತಿಯ ಧ್ವನಿ ನನ್ನದು ಎಂದು ಹೇಳಲು ಹೆಮ್ಮೆ ಅನಿಸುತ್ತದೆ” ಎಂದು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ ಜೆಸಿಕಾ.

ಚಿಕ್ಕ ವಯಸ್ಸಿನಲ್ಲಿ ಸೇನೆಗೆ ಸೇರುವ ಕನಸು ಹೊತ್ತುಕೊಂಡಿದ್ದ ಇವರು ತಮ್ಮ ಕಾಲೇಜು ದಿನಗಳಲ್ಲಿ NCC ಕೆಡೆಟ್ ಆಗಿ,

ಸಂತ ಅಲೋಶಿಯಸ್ ಕಾಲೇಜಿನ 2006-07 ನೇ ಸಾಲಿನ “ಬೆಸ್ಟ್ NCC ಕೆಡೆಟ್ “ಎಂಬ ಹೆಸರಿಗೆ ಭಾಜನರಾಗಿದ್ದಾರೆ.

NCC ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಹಾಗೂ ಪರೇಡ್ ಟ್ಯಾಲೆಂಟ್ ನಲ್ಲಿ ಬೆಳ್ಳಿಯ ಪದಕವನ್ನು  ಮುಡಿಗೇರಿಸಿಕೊಂಡಿದ್ದಾರೆ.

ಕ್ರೀಡೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಇವರು, ಖೋ ಖೋ, ಕಬಡ್ಡಿ, ತ್ರೋಬಾಲ್, ಟೆನ್ನಿಸ್, ಫುಟ್ಬಾಲ್, ಹ್ಯಾಂಡ್ಬಾಲ್, ಅಥ್ಲೆಟಿಕ್ಸ್ ಮುಂತಾದ ಕ್ರೀಡೆಯಲ್ಲಿ ಭಾಗವಹಿಸಿರುತ್ತಾರೆ.

ಜೆಸಿಕಾ ಅವರು ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು, 2010ರಲ್ಲಿ ರಾಜಸ್ತಾನ ದಲ್ಲಿ ನಡೆದ ರಾಷ್ಟ್ರ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಜೆಸಿಕಾ ಅವರು ಕ್ರೀಡಾ ಲೋಕಕ್ಕೆ ಮಾತ್ರ ಸೀಮಿತವಾಗಿರದೆ, ನಾಟಕ, ಚಿತ್ರಕಲೆ, ಡಾನ್ಸ್, ಮುಂತಾದ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಕಲಿಕೆಯಲ್ಲೂ ಇವರು ಎತ್ತಿದ ಕೈ. B.P.Ed ನಲ್ಲಿ 2ನೇ ರ್ಯಾಂಕ್ ಹಾಗೂ M.P.Ed ನಲ್ಲೂ 2ನೇ ರ್ಯಾಂಕ್ ಪಡೆದು ಸೈ ಎನಿಸಿಕೊಂಡಿದ್ದಾರೆ.

ಸೈನ್ಯದಲ್ಲಿ ಡ್ರಿಲ್ ಇನ್ಸ್ಟ್ರಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡೊರ್ಜೆ ಜೋಷ್ವಾ ಇವರೊಂದಿಗೆ ವಿವಾಹವಾದ ಇವರು ವಲೇರಿಯನ್ ಫೆರ್ನಾಂಡಿಸ್ ಹಾಗೂ ಲವೀನಾ ಫೆರ್ನಾಂಡಿಸ್ ದಂಪತಿಗಳ ಪುತ್ರಿ.

ಸದ್ಯ ಡಾರೆಲ್ ಜೆಸಿಕಾ ಫೆರ್ನಾಂಡಿಸ್ ಅವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂಬ ಆಶಯ ನಮ್ಮದು.. 

ಬರಹ: ಲಾವಣ್ಯ. ಎಸ್, ಪತ್ರಿಕೋದ್ಯಮ ವಿದ್ಯಾರ್ಥಿನಿ, ಸಂತ ಫಿಲೋಮಿನಾ ಕಾಲೇಜು ಪುತ್ತೂರು

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

Published

on

ಪುತ್ತೂರು: ಕೃಷ್ಣ ಜೆ ರಾವ್ ನಿಂದ ವಂಚನೆಗೊಳಗಾದ ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಳಿಕ ಮಗು ಕೊಟ್ಟು ಇದೀಗ ಮದುವೆ ಆಗುವುದಿಲ್ಲ ಎಂದು ವಂಚನೆ ಮಾಡಿದ ಪ್ರಕರಣದ ಸಂತ್ರಸ್ತೆ ಮನೆಗೆ ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿ ಸಂತ್ರಸ್ತೆ ಜೊತೆ ಮಾತುಕತೆ ನಡೆಸಿದರು.

ಈ ವೇಳೆ ಸಂತ್ರಸ್ತೆಯ ಮಗುವನ್ನು ನಾಗಲಕ್ಷ್ಮಿ ಚೌಧರಿ ಮುದ್ದಾಡಿದರು. ಅಲ್ಲದೆ ಸಂತ್ರಸ್ತೆಯ ಎಲ್ಲಾ ರೀತಿಯ ಹೋರಾಟಕ್ಕೆ ಜೊತೆಯಾಗಿರುವುದಾಗಿ ಭರವಸೆ ನೀಡಿದರು.

ಸಂತ್ರಸ್ತೆಗೆ ಶಿಕ್ಷಣ ಮುಂದುವರಿಸುವಂತೆ ಸಲಹೆ

ಅಲ್ಲದೇ, ಶಿಕ್ಷಣ ಮುಂದುವರಿಸುವಂತೆ ಸಂತ್ರಸ್ತೆಗೆ ನಾಗಲಕ್ಷ್ಮೀ ಅವರು ಸೂಚಿಸಿದರು. ಗಟ್ಟಿಯಾಗಿ ನಿಂತು ಸಂಕಷ್ಟ ಎದುರಿಸುವಂತೆ ಸಂತ್ರಸ್ತೆ ಮತ್ತು ಆಕೆಯ ತಾಯಿಗೆ ಮನವಿ ಮಾಡಿದರು. ಶಿಕ್ಷಣ ಮುಂದುವರಿಸಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಯಾವುದೇ ಕಾರಣಕ್ಕೂ ಜೀವನದಲ್ಲಿ ಕುಗ್ಗಿ ಕೆಟ್ಟ ನಿರ್ಧಾರ ತೆಗೆದುಕೊಳ್ಳದಂತೆ ಸಂತ್ರಸ್ತೆಗೆ ನಾಗಲಕ್ಷ್ಮಿ ಧೈರ್ಯ ತುಂಬಿದ್ದಾರೆ.

ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ!

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮಹಿಳಾ ಆಯೋಗ ತಾಯಿಯಂತೆ ಸಂತ್ರಸ್ತೆಯ ಪರ ನಿಲ್ಲುತ್ತದೆ, ಎಲ್ಲಾ ಸಂತ್ರಸ್ತ ಮಹಿಳೆಯರಿಗೆ ಆಯೋಗ ತಾಯಿಯಿದ್ದಂತೆ. ತಾಯಿ ಸ್ಥಾನದಲ್ಲಿ ನಿಂತು ಮಹಿಳೆಯ ಸಂಕಷ್ಟಗಳಿಗೆ ಸ್ಪಂದಿಸುತ್ತೇನೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು ಎಂದರು.

ಮುಂದುವರಿದು, ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ, ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

Continue Reading

DAKSHINA KANNADA

ನಾಳೆ ಒಟಿಟಿಯಲ್ಲಿ ರಿಲೀಸ್ ಆಗಲಿದೆ ಧರ್ಮ ಚಾವಡಿ ತುಳು ಸಿನಿಮಾ

Published

on

ಮಂಗಳೂರು:  ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ ಧರ್ಮ ಚಾವಡಿ ತುಳು ಸಿನಿಮಾ ಕಳೆದ ವರ್ಷ ಕರಾವಳಿಯಾದ್ಯಂತ ಬಿಡುಗಡೆಗೊಂಡು ಜನಮನ್ನಣೆ ಪಡೆದು ಯಶಸ್ವಿ ಚಿತ್ರಗಳ ಸಾಲಿಗೆ ಸೇರ್ಪಡೆಗೊಂಡಿದೆ. ಇದೀಗ ಈ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಿ ಜಗತ್ತಿನಾದ್ಯಂತ ಇರುವ ತುಳು ಸಿನಿಮಾ ಪ್ರೇಕ್ಷಕರಿಗೆ ವೀಕ್ಷಿಸಲು ಅವಕಾಶ ಕಲ್ಪಿಸಲು ಚಿತ್ರ ತಂಡ ನಿರ್ಧರಿಸಿದೆ.

ಚಿತ್ರದ ನಿರ್ದೇಶಕ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ಅವರು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿ, ನಾಳೆ  ಅಂದರೆ ಮಾರ್ಚ್ 6 ರಂದು ಧರ್ಮ ಚಾವಡಿ ಸಿನಿಮಾ ಟಾಕೀಸ್ ಆ್ಯಪ್ ಒಟಿಟಿ ಮೂಲಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಮುಂಬಯಿಯಲ್ಲಿ ಧರ್ಮ ಚಾವಡಿ ಚಿತ್ರದ ಯಶಸ್ವೀ 14 ಶೋ ನೀಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ನೆರೆಯ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮತ್ತು ಕಾಸರಗೋಡಿನಲ್ಲಿಯೂ ಚಿತ್ರ ಯಶಸ್ವೀ  ಪ್ರದರ್ಶನ ಕಂಡಿದೆ.

ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ ಎಂದು ವಿವರಿಸಿದರು. ಸುದ್ದಿಗೋಷ್ಟಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ, ನಟಿ ನೇಹಾ ಕೋಟ್ಯಾನ್, ಟಾಕೀಸ್ ಆ್ಯಪ್ ಒಟಿಟಿ ಇದರ ಅಡ್ಮಿನ್ ಎಕ್ಸಿಕ್ಯೂಟಿವ್ ಚಿದಾನಂದ್ ಪೈ ಮತ್ತು ಇತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಸ್ಟೇಟ್ ಬ್ಯಾಂಕ್ ಮೀನು ಮಾರ್ಕೆಟ್ ಅವ್ಯವಸ್ಥೆ-ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ

Published

on

ಮಂಗಳೂರು: ನಗರದ ಕೇಂದ್ರ ಭಾಗವಾದ ಸ್ಟೇಟ್ ಬ್ಯಾಂಕ್ ಪರಿಸರದ ಮೀನು ಮಾರುಕಟ್ಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಮಧ್ಯಾಹ್ನ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹಸಿ ಹಾಗೂ ಒಣಮೀನು ಮಾರುಕಟ್ಟೆಯ ಪ್ರತಿ ಮೂಲೆಗೂ ಭೇಟಿ ನೀಡಿದ ಅವರು, ಅಲ್ಲಿನ ಅವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ದಶಕಗಳಿಂದ ಮೀನು ಮಾರಾಟ ಮಾಡುತ್ತ ಜೀವನ ಸಾಗಿಸುತ್ತಿರುವ ನೂರಾರು ಮಹಿಳೆಯರು ತಮ್ಮ ಸಮಸ್ಯೆಗಳನ್ನು  ಅವರ  ಮುಂದೆ ಹಂಚಿಕೊಂಡರು.

ಪರಿಶೀಲನೆಯ ಬಳಿಕ ಮಾತನಾಡಿದ ಡಾ. ನಾಗಲಕ್ಷ್ಮಿ ಚೌಧರಿ , ಮಾರುಕಟ್ಟೆಯಲ್ಲಿ ಸಮರ್ಪಕ ನೈರ್ಮಲ್ಯದ ಕೊರತೆಯಿಂದ ದುರ್ವಾಸನೆ ವ್ಯಾಪಿಸಿದ್ದು, ದಿನವಿಡೀ ಕೆಲಸ ಮಾಡುವ ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ತಿಳಿಸಿದರು. ಮಾರುಕಟ್ಟೆ ಸ್ವಚ್ಛತೆಗೆ ಅಗತ್ಯವಾದ ನೀರಿನ ಸೌಲಭ್ಯವಿಲ್ಲದೆ ಇರುವುದೂ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ವ್ಯಾಪಾರಕ್ಕೆ ತಕ್ಕಷ್ಟು ಸ್ಥಳಾವಕಾಶದ ಕೊರತೆ ಹಾಗೂ ಭದ್ರತಾ ವ್ಯವಸ್ಥೆಯ ಅಭಾವದಿಂದ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದಾಗಿ ಮಹಿಳೆಯರು ದೂರಿದರು. ಈ ಎಲ್ಲ ವಿಚಾರಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಿದ್ದೇನೆ. ಮೀನುಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ನೂತನ ಮಾರುಕಟ್ಟೆಯಲ್ಲಿ ಅಗತ್ಯವಿರುವ ವೈಜ್ಞಾನಿಕ ಬದಲಾವಣೆಗಳನ್ನು ಮಾಡಿಸುವಂತೆ ಒತ್ತಾಯಿಸುತ್ತೇನೆ. ಮೀನು ಮಾರಾಟಗಾರ ಮಹಿಳೆಯರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ,” ಎಂದು ಡಾ. ನಾಗಲಕ್ಷ್ಮಿ ಚೌಧರಿ ಭರವಸೆ ನೀಡಿದರು.

 

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page