Connect with us

LATEST NEWS

ಡಿಜಿಟಲ್ ಅರೆಸ್ಟ್‌ಗೆ ಶಿಕ್ಷಕಿಗೆ ಹೃದಯಾಘಾತ : ಫೇಕ್ ಕಾಲ್‌ ಬಗ್ಗೆ ಇರಲಿ ಎಚ್ಚರ..!

Published

on

ಮಂಗಳೂರು ( ಆಗ್ರಾ ) : “ನಿಮ್ಮ ಮಗಳು ಸೆಕ್ಸ್‌ ಜಾಲದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿದ್ದಾಳೆ. ಆಕೆಯನ್ನು ಉಳಿಸಲು ರೂ.1 ಲಕ್ಷ ನೀಡಿ” ಇಂತಹ ಕರೆಯೊಂದನ್ನು ಸ್ವೀಕರಿಸಿದ ಮಹಿಳೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಸರ್ಕಾರಿ ಬಾಲಕಿಯ ಜ್ಯೂನಿಯರ್ ಹೈಸ್ಕೂಲ್‌ನಲ್ಲಿ ಶಿಕ್ಷಕಿಯೂ ಆಗಿದ್ದ ಮಹಿಳೆ ಮಗಳ ಕುರಿತಾದ ಈ ಕರೆಯಿಂದ ಇಹಲೋಕ ತ್ಯಜಿಸಿದ್ದಾರೆ.

ಸೆಪ್ಟಂಬರ್ 30 ರಂದು ಈ ಘಟನೆ ಆಗ್ರಾದಲ್ಲಿ ನಡೆದಿದ್ದು, 58 ವರ್ಷದ ಮಾಲ್ತಿ ವರ್ಮಾ ಎಂಬವರು ನಕಲಿ ಕರೆಯನ್ನೇ ಸತ್ಯವೆಂದು ನಂಬಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಮಾಲ್ತಿ ವರ್ಮಾ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದ ನಕಲಿ ಪೊಲೀಸ್ ಅಧಿಕಾರಿ, ಆಕೆಗೆ ನಿರಂತರ ಕರೆ ಮಾಡಿದ್ದಾನೆ. ಮಗಳ ಕುರಿತಾಗಿ ಆತ ಹೇಳಿದ ವಿಚಾರವನ್ನು ಸತ್ಯ ಎಂದು ನಂಬಿದ ಆಕೆ ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

ಮಗನಿಗೆ ಕರೆ ಮಾಡಿ ಮಗಳು ಈ ರೀತಿಯಾಗಿ ಸಿಕ್ಕಿಬಿದ್ದಿದ್ದು, ಆಕೆಯ ಬಿಡುಗಡೆಗೆ ಹಣ ಬೇಕು ತಕ್ಷಣ ಹಣ ಹಾಕು ಅಂದಿದ್ದಾರೆ. ಆದ್ರೆ ಕಾಲ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಮಗ ಇದೊಂದು ನಕಲಿ ಕಾಲ್ ಎಂಬುದಾಗಿ ತಾಯಿಗೆ ಮನವರಿಕೆ ಮಾಡಿದ್ದಾನೆ. ಆದ್ರೆ ವ್ಯಾಟ್ಸಾಪ್‌ ಡಿಪಿಯಲ್ಲಿ ಪೊಲೀಸ್ ಅಧಿಕಾರಿ ಫೋಟೋ ಹಾಕಿದ್ದ ವ್ಯಕ್ತಿ ಶಿಕ್ಷಕಿ ಮಾಲ್ತಿ ವರ್ಮಾ ಅವರಿಗೆ ಸತತ ನಾಲ್ಕು ಘಂಟೆಗಳ ಕಾಲ ಟಾರ್ಚರ್ ನೀಡಿದ್ದಾನೆ.

 

ಮಾಲ್ತಿ ವರ್ಮಾ ಅವರಿಗೆ ಕರೆ ಮಾಡಿದ್ದ ನಂಬರ್ ಪಾಕಿಸ್ತಾನದ ಕೋಡ್ ಹೊಂದಿದ್ದು ಈ ಕರೆ ನಕಲಿ ಎಂದು ಮಾಲ್ತಿ ವರ್ಮಾ ಅವರಿಗೆ ಮನವರಿಕೆ ಮಾಡಲಾಗಿತ್ತು. ಆದ್ರೆ ಮಗಳ ಬಗ್ಗೆ ಬಂದ ಕೆಟ್ಟ ವಾರ್ತೆ ಕೇಳಿದ್ದ ತಾಯಿ ಮಾಲ್ತಿ ವರ್ಮಾ ಅವರಿಗೆ ಆಘಾತ ಆಗಿತ್ತು. ಜೊತೆಗೆ ಆರೋಪಿ ನಿರಂತರ ನಾಲ್ಕು ಘಂಟೆಗಳ ಕಾಲ ಕರೆ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದು ಕೂಡಾ ಇವರಿಗೆ ಘಾಸಿಯಾಗಿದೆ. ಈ ಡಿಜಿಟಲ್‌ ಅರೆಸ್ಟ್‌ನಿಂದ ಭಯ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾದ ಮಾಲ್ತಿ ವರ್ಮಾ ಅವರಿಗೆ ಮನೆಗೆ ಬಂದ ಬಳಿಕ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿ ಆಗದೆ ಇಹಲೋಕ ತ್ಯಜಿಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಲಾಗುವುದು ಎಂದು ಆಗ್ರಾದ ಎಸಿಪಿ ಮಯಾಂಕ್ ತಿವಾರಿ ತಿಳಿಸಿದ್ದಾರೆ..

DAKSHINA KANNADA

ಜೂ.1ರಿಂದ ದ.ಕ. ಜಿಲ್ಲೆಯ ಕರಾವಳಿ ತೀರದಲ್ಲಿ ಮೀನುಗಾರಿಕೆ ನಿಷೇಧ

Published

on

ಮಂಗಳೂರು: ಮಳೆಗಾಲದ ಮೀನುಗಾರಿಕೆ ನಿಷೇಧ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಅದೇಶ ಹೊರಡಿಸಿದೆ.

ಜಿಲ್ಲೆಯ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯ ಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್‌ 1 ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಮಾತ್ರ ಅನುಮತಿಸಿದೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

ಮೀನುಗಾರಿಕೆ ನಿಷೇಧಿಸಿದ ಸರಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಮೀನುಗಾರರು ಈ ಆದೇಶವನ್ನು ಪಾಲಿಸಿ ಸಹಕರಿಸ ಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Continue Reading

LATEST NEWS

ವಿಜಯಪುರದಲ್ಲಿ ಭೀಕರ ಅಪ*ಘಾತ; ಸ್ಥಳದಲ್ಲೇ 6 ಮಂದಿ ಸಾ*ವು

Published

on

ಮಂಗಳೂರು/ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ರಾಷ್ಟ್ರೀಯ ಹೆದ್ದಾರಿ 50 ರ ಚತುಷ್ಪಥ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ.

ಮಹೀಂದ್ರ ಟಿಯುವಿ 300 ಕಾರು, ಕಂಟೇನರ್​, ಖಾಸಗಿ ಬಸ್​ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

ಘಟನಾ ಸ್ಥಳಕ್ಕೆ ಮನಗೂಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page