Connect with us

DAKSHINA KANNADA

ತೌಕ್ತೆ ಚಂಡಮಾರುತದ ಅಬ್ಬರಕ್ಕೆ ನಿಯಂತ್ರಣ ಕಳೆದುಕೊಂಡ ಟಗ್ :9ಮಂದಿ ಕಾರ್ಮಿಕರ ರಕ್ಷಣೆ..!

Published

on

 ಉಡುಪಿ: ಮಂಗಳೂರಿನ   ಅರಬ್ಬೀ ಸಮುದ್ರದಲ್ಲಿ   ಕಡಲು ಪ್ರಕ್ಷುಬ್ದಗೊಂಡಿದ್ದು,  ಕಳೆದೆರಡು ದಿನದಿಂದ ತೌಖ್ತೆ ಚಂಡ ಮಾರುತಕ್ಕೆ ನಿಯಂತ್ರಣ ಕಳೆದುಕೊಂಡ ಟಗ್ವೊಂದು ಕಾಪು ಕಡಲ ಕಿನಾರೆ ಯಿಂದ ಸುಮಾರು ಹದಿನೈದು ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ ಟಗ್ ನಲ್ಲಿ 9 ಮಂದಿ ಕಾರ್ಮಿಕರು ಸಿಲುಕಿಕೊಂಡಿದ್ದರು. ಸತತ ಎರಡು ದಿನಗಳಿಂದ ಇಂಡಿಯನ್ ಕೋಸ್ಟ್ ಗಾರ್ಡ್ ಹಾಗೂ ನೌಕಾದಳದಿಂದ  ಜಂಟಿ ಕಾರ್ಯಾಚರಣೆ ನಡೆದಿದೆ.

ಜಿಲ್ಲಾಡಳಿತ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಕಾರ್ಯಾಚರಣೆ ಶುರು ಮಾಡಲಾಗಿತ್ತು. ಆದರೆ ಸಮುದ್ರದ ಅಬ್ಬರದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗಿತ್ತು.

ಕೋಸ್ಟ್ ಗಾರ್ಡ್ ನ ಸ್ಫೀಡ್ ಬೋಟ್ ಕಾರ್ಯಾಚರಣೆ ಮೂಲಕ ಮೊದಲಿಗೆ 5 ಮಂದಿಯನ್ನು ರಕ್ಷಿಸಲಾಯಿತು. ಕೋಸ್ಟ್ ಗಾರ್ಡ್ ಶಿಪ್ ವರಾಹ ಮೂಲಕ ಸಿಬ್ಬಂದಿಯನ್ನು ದಡಕ್ಕೆ ಕರೆ ತರಲಾಗಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ನೇವಿ ಹೆಲಿಕಾಪ್ಟರ್ ಕೊಚ್ಚಿನ್ ನಿಂದ ಮಂಗಳೂರಿಗೆ ಬಂದಿದ್ದು, ಇಂದು ಮುಂಜಾನೆ ಅದರಲ್ಲಿ  ಉಳಿದ ನಾಲ್ವರನ್ನೂ ರಕ್ಷಣೆ ಮಾಡಲಾಗಿದೆ ಕೋಸ್ಟ್‌ಗಾರ್ಡ್‌ ಮತ್ತು  ನೌಕಾದಳ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಎಲ್ಲಾ 9 ಮಂದಿ‌ ಕಾರ್ಮಿಕರನ್ನೂ ರಕ್ಷಣೆ ಮಾಡಲಾಗಿದೆ.

ರಕ್ಷಿಸಿದ ಕಾರ್ಮಿಕರನ್ನು ಎನ್ ಎಂ ಪಿಟಿ ಬಂದರಿಗೆ ಕರೆತರಲಾಗುವುದು, ವೈದ್ಯರ ತಂಡ ಅವರ ಆರೋಗ್ಯ ತಪಾಸಣೆಗೆ ಸಜ್ಜಾಗಿ ನಿಂತಿದೆ

ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿದ್ದ 9 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಗೆ ಧನ್ಯವಾದಗಳು.

ಇಂದು ಮುಂಜಾನೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲರನ್ನೂ ರಕ್ಷಿಸಲಾಗಿದೆ. ಕಾರ್ಮಿಕರ ಆರೋಗ್ಯದ ತಪಾಸಣೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಲಾಗುತ್ತಿದೆ. ಎಂದು ಮುಖ್ಯಮಂತ್ರಿ ನೌಕಾಪಡೆಗೆ ಧನ್ಯವಾದ ತಿಳಿಸಿದ್ದಾರೆ.

BELTHANGADY

ಬೆಳ್ತಂಗಡಿ : ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ ಕಂಡು ಕಣ್ತುಂಬಿಸಿಕೊಂಡ ಭಕ್ತರು

Published

on

ಬೆಳ್ತಂಗಡಿ : ದೈವಾರಾಧನೆಯನ್ನು ಕರಾವಳಿ ಜನತೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುವ ಕಾರಣಕ್ಕಾಗಿಯೇ ಇಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಹಾಗಾಗಿ ಇಂದಿಗೂ ಸುಮಾರು 500 ಕ್ಕೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ಬೆಳ್ತಂಗಡಿ ತಾಲೂಕಿನ ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವಗುಳಿಗ ದೈವಗಳಿಗೆ ಏಕಕಾಲದಲ್ಲಿ ನಡೆದ ನರ್ತನ ಸೇವೆ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡಿದ್ದು, ಈ ಅಪರೂಪದ ಸೇವೆ ಇಡೀ ಕರಾವಳಿಯಲ್ಲಿಯೇ ಒಂದೇ ಸ್ಥಳದಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ.

“ಐದು ವರ್ಷಗಳ ಹಿಂದೆ ನಿಟ್ಟಡೆ ಗ್ರಾಮದ ಬರ್ಕಜೆ ಎಂಬ ಊರಿನಲ್ಲಿ ಪುನರ್ ನಿರ್ಮಾಣವಾದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವ ಗುಳಿಗ ದೈವಗಳು ಕ್ಷೇತ್ರಪಾಲಕರಾಗಿ ನೆಲೆಸಿದ್ದಾರೆ ಅನ್ನೋ ವಿಚಾರ ಗೊತ್ತಾಗಿತ್ತು. ಹೀಗಾಗಿ ಆ ಒಂಬತ್ತು ದೈವಗಳಿಗೂ ಏಕಕಾಲದಲ್ಲಿ ನರ್ತನ ಸೇವೆ ಮಾಡಲಾಗುತ್ತಿದೆ” ಎಂಬುವುದು ಆಡಳಿತ ಮುಖ್ಯಸ್ಥರ ಮಾತು. ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ಗುಳಿಗ ದೈವಗಳಿಗೆ ಮಾತ್ರ ನರ್ತನ ಸೇವೆ ನಡೆಯುತ್ತವೆ. ಆದರೆ, ಬರ್ಕಜೆಯಲ್ಲಿ ಒಂಬತ್ತು ಗುಳಿಗ ದೈವಗಳಿಗೆ ನರ್ತನ ಸೇವೆ ನೆರವೇರಿದೆ.

ಇದನ್ನೂ ಓದಿ : ಮಂಗಳೂರು : ಇಂದಿನಿಂದ 3 ದಿನ ಪಾಂಡೇಶ್ವರದಲ್ಲಿ ಬೃಹತ್ ಐಸ್‌ಕ್ರೀಂ ಪರ್ಬ

ಗುಳಿಗ ದೈವದ ಆರಾಧನೆ ಕರಾವಳಿ ಭಾಗದಲ್ಲಿ ಬಹು ಆಕರ್ಷಕ. ಅದರ ರೋಷಾವೇಷ ನೋಡೋದೇ ಒಂದು ರೋಮಾಂಚಕ ಅನುಭವ. ತುಳುನಾಡಿನಾದ್ಯಂತ ಆರಾಧಿಸಲ್ಪಡುವ ಗುಳಿಗ ದೈವಗಳು, ಕ್ಷೇತ್ರಪಾಲಕರಾಗಿ ನೆಲೆಸಿ, ಜನರ ಸಂಕಷ್ಟಗಳನ್ನು ನಿವಾರಣೆ ಮಾಡುತ್ತಾನೆ ಎಂಬ ನಂಬಿಕೆ ಭಕ್ತರದ್ದು. ಒಂದೇ ದಿನ ಒಂದೇ ಬಾರಿ ಈ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆದಿದ್ದು, ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಈ ಬಾರಿಯ ವಾರ್ಷಿಕ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಿತು. ಒಂಬತ್ತು ಮಂದಿ ದೈವ ನರ್ತಕರು ಏಕಕಾಲದಲ್ಲಿ ನವ ಗುಳಿಗನ ನೇಮೋತ್ಸವ ನಡೆಸಿಕೊಟ್ಟಿದ್ದು, ಈ ಅದ್ಭುತವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

Continue Reading

DAKSHINA KANNADA

ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ ಇನ್ನಿ*ಲ್ಲ

Published

on

ಕಿನ್ನಿಗೋಳಿ : ಕಿನ್ನಿಗೋಳಿಯ ಐಕಳ ಪೊಂಪೈ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಯೋಗಿಂದ್ರ ಬಿ. (62 )ಅವರು ಹೃದಯಘಾತದಿಂದ ಬುಧವಾರ ರಾತ್ರಿ ನಿ*ಧನ ಹೊಂದಿದರು.

ಮೂಲತಃ ಕಾಸರಗೋಡು ತಾಲೂಕಿನ ಬದಿಯಡ್ಕ ನಿವಾಸಿಯಾಗಿದ್ದ ಅವರು  1986ರಲ್ಲಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ಪೊಂಪೈ ಕಾಲೇಜಿಗೆ ವರ್ಗಾವಣೆಗೊಂಡು 21 ವರ್ಷಗಳ ವರೆಗೆ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

ಸಮಾಜಶಾಸ್ತ್ರ ವಿಭಾಗದಲ್ಲಿ ಉಪನ್ಯಾಸಕರಾಗಿ ಮತ್ತು ಮುಖ್ಯಸ್ಥರಾಗಿ ಒಟ್ಟು 36 ವರ್ಷಗಳ ಸೇವೆಯನ್ನು ಸಲ್ಲಿಸಿದ್ದ ಅವರು ಮಂಗಳೂರು ವಿಶ್ವ ವಿದ್ಯಾನಿಲಯದ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪೊಂಪೈ ಕಾಲೇಜಿನಲ್ಲಿ ಮೂರು ವರ್ಷಗಳ ಕಾಲ ಎನ್.ಎಸ್. ಎಸ್ ಕಾರ್ಯಕ್ರಮ ಅಧಿಕಾರಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ಹಾಗೂ ಹಲವು ವರ್ಷಗಳ ಕಾಲ ಸಹ ಕಾರ್ಯಕ್ರಮ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೃತರು‌ ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಮಂಗಳೂರು : ಹೆಂಡತಿಯನ್ನು ಕೊಲೆಗೈದ ಪ್ರಕರಣ; ಗಂಡನಿಗೆ ಜೀವಾವಧಿ ಶಿಕ್ಷೆ..

Published

on

ಮಂಗಳೂರು: ತನ್ನ ಪತ್ನಿಯನ್ನು ಕುಡಿದ ಅಮಲಿನಲ್ಲಿ ಪತಿ ಕೊಂದು ಬಳಿಕ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪ್ರಕರಣದ ಮುಖ್ಯ ಆರೋಪಿ ಪತಿಗೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ನಿನ್ನೆ (ಫೆ.6) ತೀರ್ಪು ನೀಡಿದೆ.

ಸುಳ್ಯದ ತೋಡಿಕಾನ ಅಂಡ್ಯಡ್ಕ ಸಿಆರ್‌ಸಿ ಕ್ವಾಟ್ರರ್ಸ್ ನಿವಾಸಿ ರಾಜ (64) ಶಿಕ್ಷೆಗೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ರಾಜ ತನ್ನು ಪತ್ನಿ ಕಮಲಾ (57) ಎಂಬಾಕೆಯನ್ನು ಕೊಲೆಗೈದ ಆರೋಪದಲ್ಲಿ ಸಿಕ್ಕಿಬಿದ್ದಿದ್ದ. 2022ರ ಸೆ.4ರಂದು ದಂಪತಿ ರಾಜಾ ಮತ್ತು ಕಮಲಾ ರಬ್ಬರ್ ಮ್ಯಾಪಿಂಗ್ ಕೆಲಸ ಕೇಳುತ್ತಾ ಬೆಳ್ತಂಗಡಿ ಕೊಯೂರು ಗ್ರಾಮದ ಅಲೆಕ್ಕಿ ಎಂಬಲ್ಲಿನಧರ್ಣಪ್ಪ ಗೌಡರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ಇವರಿಗೆ ರಬ್ಬರ್ ತೋಟದ ಶೆಡ್‌ನಲ್ಲೇ ವಾಸ್ತವ್ಯಕ್ಕೆ ಅವಕಾಶ ನೀಡಲಾಗಿತ್ತು.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಪ್ರಸ್ತುತ ಆರೋಪಿಗೆ ನ್ಯಾಯಲಯವು ಜಾವಾವಧಿ ಶಿಕ್ಷೆ ವಿಧಿಸಿ ಕಮಲಾ ಸಾವಿಗೆ ನ್ಯಾಯ ನೀಡಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page