Connect with us

DAKSHINA KANNADA

ಆಸ್ಪತ್ರೆಯಲ್ಲೇ ಜೀವನ ಸಾಗಿಸುತ್ತಿರುವ ಮಹಿಳೆ; ಸಣ್ಣ ಪ್ರಾಯದಲ್ಲೇ ಹಲವು ಶಸ್ತ್ರ ಚಿಕಿತ್ಸೆ

Published

on

ಸುಳ್ಯ: ಮಹಿಳೆಯೊಬ್ಬರು ಅಪರೂಪದ ಕಾಯಿಲೆಗೆ ತುತ್ತಾಗಿ ತಮ್ಮ 34ರ ಹರೆಯದಲ್ಲೇ ಇದೀಗ 13ನೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ.ಚಾಂದಿನೆ ಎಮಬ ಹೆಸರಿನ ಮಹಿಳೆಗೆ ಆಸ್ಪತ್ರೆಯೇ ಬದುಕಾಗಿಬಿಟ್ಟಿದೆ. ಶಸ್ತ್ರ ಚಿಕಿತ್ಸೆ ಮಾತ್ರವಲ್ಲದೆ ಈಗಾಗಲೇ ಕೃತಕ ಉಸಿರಾಟ, ಶಾಕ್ ಟ್ರೀಟ್ಮೆಂಟ್, ಕಿಮೋಥೆರಪಿ ಸೇರಿದಂತೆ ಕಳೆದ 31 ವರ್ಷಗಳಲ್ಲಿ ತಮ್ಮ ಜೀವನವನ್ನು ಬಹುತೇಕವಾಗಿ ಆಸ್ಪತ್ರೆಯಲ್ಲೇ ಕಳೆದಿರುವ ಮಹಿಳೆಯ ಬದುಕು ನಿಜಕ್ಕೂ ಮೈ ನಡುಗಿಸುವಂತದ್ದು.

ಬದುಕಲ್ಲಿ ಏನಿಲ್ಲದಿದ್ದರೂ ಪರವಾಗಿಲ್ಲ ಆದರೆ ಆರೋಗ್ಯವೊಂದು ಸರಿ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ಇದರಿಂದಲೇ ಕನ್ನಡದಲ್ಲಿ ‘ಆರೋಗ್ಯವೇ ಭಾಗ್ಯ’ ಎಂಬ ಗಾದೆಯೂ ಇದೆ. ಅನೇಕರು ತಮ್ಮ ಜೀವನದಲ್ಲಿ ಆಸ್ಪತ್ರೆಯ ಮೆಟ್ಟಿಲನ್ನೇ ಹತ್ತಿರುವುದಿಲ್ಲ. ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಂಡು, ಗಟ್ಟಿ ಮುಟ್ಟಾಗಿ ಇರುತ್ತಾರೆ. ಇನ್ನು ಕೆಲವರು ಆಗಾಗ ಕಾಯಿಲೆ, ರೋಗಗಳನ್ನು ತಂದಳೆದುಕೊಂಡು ಸದಾ ಆಸ್ಪತ್ರೆಯತ್ತ ಮುಖ ಮಾಡಿರುತ್ತಾರೆ. ಆದರೆ, ಇಲ್ಲೊಬ್ಬಳು ಮಹಿಳೆಗೆ ಆಸ್ಪತ್ರೆಯೇ ಬದುಕಾಗಿದೆ. ಈಕೆಯ ಕರುಣಾಜನಕ ಕಥೆ ಕೇಳಿದ್ರೆ ಖಂಡಿತ ಕಣ್ಣಂಚಲ್ಲಿ ನೀರು ಬರುತ್ತದೆ.

ಚಾಂದಿನಿಗೆ ಇರುವ ಖಾಯಿಲೆ ಏನು ?

ಸುಳ್ಯದ ನಾವೂರಿನ ದಿ. ಧನಂಜಯ ಮತ್ತು ಸರೋಜನಿ ದಂಪತಿ ಪುತ್ರಿ ಚಾಂದಿನಿಗೆ ತನ್ನ 3ರ ಹರೆಯದಲ್ಲೇ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿತ್ತು. ತನ್ನ ದೇಹವನ್ನು ಆವರಿಸಿಕೊಂಡ ಕಾಯಿಲೆಯ ಅರಿವೇ ಇಲ್ಲದ ಚಾಂದಿನಿ 7ನೆ ತರಗತಿ ವರೆಗೂ ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ಕಲಿತರಾದರೂ ಬಳಿಕ ಸಾಂಪ್ರದಾಯಿಕ ಶಾಲಾ, ಕಾಲೇಜು ಶಿಕ್ಷಣದಿಂದ ವಂಚಿತರಾದರು. ತಿಂಗಳಲ್ಲಿ 10 ದಿನ ಮನೆಯಲ್ಲಿದ್ದರೆ, ಉಳಿದ 20 ದಿನ ಆಸ್ಪತ್ರೆಯಲ್ಲಿ ಇರಬೇಕಾಗಿದ್ದ ಚಾಂದಿನಿಗೆ ತಾಯಿಯೇ ಶಿಕ್ಷಕಿಯಾದರು.

ಬಡತನದ ನಡುವೆಯೂ ತನ್ನ ಮಗಳ ಚಿಕಿತ್ಸೆಗಾಗಿ ತಂದೆ ತನ್ನ ದುಡಿಮೆಯ ಹಣವನ್ನೆಲ್ಲಾ ವಿನಿಯೋಗಿಸಿದರು. ಈ ರೀತಿ 19 ವರ್ಷಗಳ ಕಾಲ ಯಾರೊಬ್ಬರಲ್ಲೂ ಕೈಚಾಚದೆ ಚಾಂದಿನಿ ತಂದೆ ಮಗಳಿಗೆ ಚಿಕಿತ್ಸೆ ಕೊಡಿಸಿದ್ದರು. ಈ ನಡುವೆ ಸ್ಟಿರಾಯಿಡ್ ಸೇವನೆಯ ಪರಿಣಾಮ ಚಾಂದಿನಿ ಕಣ್ಣಿನ ದೃಷ್ಟಿ ಹೀನಗೊಂಡವು. ಈ ಸಂದರ್ಭ ಪೋಷಕರೇ ಮಗಳ ಕಣ್ಣಾಗಿ ಕಾಪಾಡಿದರು. ಅನಾರೋಗ್ಯದ ನಡುವೆಯೂ ಚಾಂದಿನಿಯವರ ಕಲಿಕೆಯ ಆಸಕ್ತಿ ಕಡಿಮೆಯಾಗಿರಲಿಲ್ಲ. ಹಾಗಾಗಿ 7ನೆ ತರಗತಿ ಪರೀಕ್ಷೆಯನ್ನು ಶಿಕ್ಷಕರ ಸಹಕಾರದೊಂದಿಗೆ ಖಾಸಗಿಯಾಗಿ ಬರೆದು ಉತ್ತೀರ್ಣರಾದರು.

10ನೆ ತರಗತಿ ಪರೀಕ್ಷೆ ವೇಳೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಾಂದಿನಿಗೆ ವಿಶೇಷ ಮುತುವರ್ಜಿ ಮೇರೆಗೆ ಆಂಬುಲೆನ್ಸ್‌ನಲ್ಲಿ ತೆರಳಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು. 10ನೆ ತರಗತಿ ಪಾಸ್ ಆದ ಚಾಂದಿನಿ ತಮ್ಮ ಅನಾರೋಗ್ಯದ ಜತೆಯಲ್ಲೇ ಖಾಸಗಿ ಉದ್ಯೋಗವೊಂದಕ್ಕೆ ಸೇರಿ ಪಿಯುಸಿ ಪರೀಕ್ಷೆ ಬರೆದರು. ಈ ನಡುವೆ ಚಾಂದಿನಿಯ ಅನಾರೋಗ್ಯದ ಅರಿವಿದ್ದರೂ ಕಾಸರಗೋಡಿನ ಬಂದಡ್ಕದ ಪುರುಷೋತ್ತಮ ಅವರು 2013ರಲ್ಲಿ ಚಾಂದಿನಿ ಅವರ ಕೈ ಹಿಡಿದರು. ಪತಿಯ ಪ್ರೀತಿ, ಆರೈಕೆಯ ಜತೆಯಲ್ಲಿ ಪದವಿ ಪರೀಕ್ಷೆಯನ್ನೂ ಖಾಸಗಿಯಾಗಿ ಚಾಂದಿನಿ ಮುಗಿಸಿದ್ದು, ಪಂಜದ ಮೊರಾರ್ಜಿ ದೇಸಾಯಿ ವಿದ್ಯಾಸಂಸ್ಥೆಯಲ್ಲಿ ವೃತ್ತಿ ನಿರ್ವಹಿಸುತ್ತಿದ್ದಾರೆ. 6 ವರ್ಷದ ಪುಟ್ಟ ಕಂದಮ್ಮನ ತಾಯಿಯಾಗಿಯೂ ತನ್ನ ಕರ್ತವ್ಯ ನಿರ್ವಹಿಸುತ್ತಿರುವ ಚಾಂದಿನಿಯವರ ಆಸ್ಪತ್ರೆ ಬದುಕು ಮಾತ್ರ ಮುಂದುವರಿದಿದೆ.

 

ಇದನ್ನೂ ಓದಿ : ಪಿಸಿಒಡಿ, ಪಿಸಿಒಎಸ್ ಸಮಸ್ಯೆ ಎದುರಿಸುತ್ತಿದ್ದೀರಾ ? ಹಾಗಾದ್ರೆ ಇದನ್ನು ಸೇವಿಸಿ !!

 

ಇಷ್ಟೇ ಅಲ್ಲದೆ ಹೈಪರ್ ಐಜಿಇ ಮೆಡಿಕೇಟೆಟ್ ಮಸ್ಟ್ ಸೆಲ್ ಆಕ್ಟಿವೇಶನ್ ಸಿಸ್ಟಮ್ (Hyper IGE Medicated Mast cell activation syndrome) ಎಂಬ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿ ಹೃದಯದ ಬಲಭಾಗದಲ್ಲಿ ಟ್ಯೂಮರ್ ಆಗಿರುವುದು ಇತ್ತೀಚೆಗೆ ಪತ್ತೆಯಾಗಿದೆ. ಇದೀಗ ಬೆಂಗಳೂರಿನ ಆಸ್ಪತ್ರೆಯಲ್ಲಿ ಇದಕ್ಕಾಗಿ ಶಸ್ತ್ರ ಚಿಕಿತ್ಸೆಗೆ ತೆರಳುವಂತೆ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯ ವೈದ್ಯರು ಸೂಚನೆ ನೀಡಿದ್ದಾರೆ.

ಇದು ಸುಳ್ಯದ ಚಾಂದಿನಿ ಪುರುಷೋತ್ತಮ ಅವರ ಬದುಕಿನ ಕಥೆ. ಚಾಂದಿನಿ ಅವರಿಗೆ ಸುಮಾರು ಮೂರು ವರ್ಷ ಪ್ರಾಯವಿದ್ದಾಗ ಆರೋಗ್ಯದ ಸಮಸ್ಯೆ ಕಂಡುಬಂದಿತ್ತು. ಅಂದಿನಿಂದ ಆಸ್ಪತ್ರೆ ಮೆಟ್ಟಿಲು ಹತ್ತುತ್ತಲೇ ಬದುಕು ಸಾಗಿಸಿದ ಚಾಂದಿನಿಗೆ “ಬದುಕಿನಲ್ಲಿ ನಾಳೆ ಇದೆ” ಎನ್ನುವ ಭರವಸೆ, ವಿಶ್ವಾಸದಿಂದ ಇಂದು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಆರೋಗ್ಯಕ್ಕಾಗಿ ಸುಮಾರು 70 ಲಕ್ಷ ಖರ್ಚು ಮಾಡಿದ್ದಾರೆ. ಹಲವು ಬಾರಿ ಆಪರೇಷನ್‌ ಆಗಿದೆ. ಕೃತಕ ಉಸಿರಾಟ, ವಿದ್ಯುತ್‌ ಟ್ರೀಟ್‌ಮೆಂಟ್‌ ಹೀಗೆ ಹಲವು ಚಿಕಿತ್ಸೆಗಳು ನಡೆದಿದೆ. ಇತ್ತೀಚೆಗೆ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಅಲ್ಲಿನ ಬಿಲ್ ಮೊತ್ತ ಪಾವತಿಸಲು ಸಾಧ್ಯವಾಗದೆ ದಯಾ ಮರಣ ಪಾಲಿಸುವಂತೆ ಚಾಂದಿನಿಯವರು ಸರಕಾರಕ್ಕೆ ಪತ್ರ ಬರೆದಿದ್ದರು. ಚಾಂದಿನಿಗೆ, ಅವರ ಚಿಕಿತ್ಸೆಗೆ ಈಗಾಗಲೇ ಸಾಕಷ್ಟು ಸಹೃದಯಿಗಳು ಸಹಕರಿಸಿದ್ದಾರೆ. ಮುಂದೆಯೂ ಸಹಕಾರದ ಅಗತ್ಯವಿದೆ. ನೆರವು ನೀಡಲು ಇಚ್ಚಿಸುವ ಸಹೃದಯಿಗಳು ಸಹಾಯ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಕುಟುಂಬವಿದೆ.

DAKSHINA KANNADA

ಕಾರು – ಆಟೋ ನಡುವೆ ಅಪ*ಘಾತ; ಮೂವರಿಗೆ ಗಂಭೀರ ಗಾ*ಯ

Published

on

ಪುತ್ತೂರು: ಕಾರು ಮತ್ತು ಆಟೋ ನಡುವೆ ಅಪ*ಘಾತ ಸಂಭವಿಸಿ ಮೂವರು ಗಾ*ಯಗೊಂಡಿರುವ ಘಟನೆ ಮಂಜಲ್ಪಡ್ಪು ಎಂಬಲ್ಲಿ ನಡೆದಿದೆ.

ಆಟೋ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಪಜೀರ್ ನಿವಾಸಿ, ಸುನಿಲ್ ಪಿಂಟೋ(37), ಪಜೀರ್ ನಿವಾಸಿಗಳಾದ ಉಸ್ಮಾನ್(57)  ಮತ್ತು ವಿದ್ಯಾರ್ಥಿನಿ ಫಾತಿಮತ್ ಮುರ್ಷಿದಾ(17) ಗಾ*ಯಾಳುಗಳು.

ಸುನಿಲ್ ಮತ್ತು ಉಸ್ಮಾನ್ ಅವರ ಕಾಲುಗಳಿಗೆ ತೀವ್ರ ಏಟು ತಗುಲಿದ್ದು, ಮುರ್ಷಿದಾ ಅವರ ತಲೆಗೆ ಗಾ*ಯವಾಗಿದೆ. ಮೂವರಿಗೂ ಪುತ್ತೂರಿನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪಜೀರ್‌ನಿಂದ ಆಟೋ ಬಾಡಿಗೆಗೆ ಗೊತ್ತು ಮಾಡಿಕೊಂಡು ಔಷಧಕ್ಕೆಂದು ಬಂದಿದ್ದ ಉಸ್ಮಾನ್ ಮರಳುವಾಗ ಪುತ್ತೂರು ಹೊರವಲಯದ ಕುಂಬ್ರದ ಶಿಕ್ಷಣ ಸಂಸ್ಥೆಯೊಂದರಲ್ಲಿ ಕಲಿಯತ್ತಿರುವ ತನ್ನ ಮೊಮ್ಮಗಳು ಮುರ್ಷಿದಾಳನ್ನು ಕೂರಿಸಿಕೊಂಡು ಪಜೀರ್‌ನತ್ತ ಹೋಗುತ್ತಿದ್ದರು.

ಇದನ್ನೂ ಓದಿ : ರಕ್ಷಿತಾ ಚಪ್ಪಲಿ ತೋರಿಸಿದ್ದು ನಿಜಾನಾ? ಸುದೀಪ್ ಬಿಚ್ಚಿಟ್ರು ಅಸಲಿ ಸತ್ಯ!

ಮಂಜಲ್ಪಡ್ಪು ತಲುಪುವಾಗ ಎದುರಿನಿಂದ ಬರುತ್ತಿದ್ದ ಕಾರೊಂದು ಲಾರಿಯನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಆಟೋ ಮತ್ತು ಕಾರಿನ ನಡುವೆ ಮಖಾಮುಖಿ ಡಿ*ಕ್ಕಿ ಸಂಭವಿಸಿದೆ. ಘಟನೆಯಿಂದ ಕಾರು ಮತ್ತು ಆಟೋಗಳೆರಡೂ ಜಖಂಗೊಂಡಿದೆ. ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಕಟೀಲು ಏಳೂ ಮೇಳಕ್ಕೆ ನಂದಿನಿಯ ಶೃಂಗದ ಸೇವೆ

Published

on

ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತರ ಯಕ್ಷಗಾನ ಮಂಡಳಿಯ ಏಳೂ ಮೇಳಗಳ ಆರಂಭತ್ಸೋತ್ಸವ ಶುಭ ಸಂದರ್ಭದಲ್ಲಿ ಸ್ವರ್ಗೀಯ ಮಚ್ಚಾರು ಪಡಿಲು ಶ್ಯಾಮಲ ಚಂದು ಪೂಜಾರಿಯವರ ಸ್ಮರಣಾರ್ಥ ಪದ್ಮನಾಭ ಕಟೀಲು ದುಬಾಯಿ ಮತ್ತು ಮನೆಯವರಿಂದ ಕಟೀಲು ಏಳೂ ಮೇಳಕ್ಕೆ ನಂದಿನಿಯ ಶೃಂಗದ ಸೇವೆ ಸಮರ್ಪಿಸಲಿದ್ದಾರೆ.

ನ.16ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಯಕ್ಷಗಾನ ಮಂಡಳಿಯ ಏಳನೆಯ ಮೇಳದ ಪದಾರ್ಪಣೆ ಹಾಗೂ ಏಳು ಮೇಳಗಳ ತಿರುಗಾಟ ಆರಂಭ ಸಲುವಾಗಿ ನವೆಂಬರ್ 15ರಂದು ಬಜಪೆಯಿಂದ ಕಟೀಲುವರೆಗೆ ಮೇಳಗಳ ದೇವರು, ಪರಿಕರಗಳ ಮೆರವಣಿಗೆ ನಡೆಯಲಿದೆ.

Continue Reading

DAKSHINA KANNADA

ಆಲ್ ನ್ಯೂ ಹ್ಯೂಂಡೈ ವೆನ್ಯೂ ಬೆಳ್ತಂಗಡಿ ಮಾರುಕಟ್ಟೆಗೆ ಬಿಡುಗಡೆ

Published

on

ಬೆಳ್ತಂಗಡಿ: ಅದ್ವೈತ್ ಹುಂಡೈ ಕಂಪೆನಿ ತನ್ನ ವಿಶಿಷ್ಟ ಗುಣಮಟ್ಟ ಮತ್ತು ಸೇವೆಯಿಂದ ವಿಶ್ವಾಸಾರ್ಹ ಗ್ರಾಹಕರನ್ನು ಹೊಂದಿದೆ. ಇದು ಕರ್ನಾಟಕದಾದ್ಯಂತ 23 ಶೋ ರೂಂಗಳು, 37 ಸೇವಾ ಕೇಂದ್ರಗಳು, 4 ಪ್ರಿ-ಒನ್ಡ್ ಕಾರು ಶೋರೂಮ್‌ಗಳ ಬೃಹತ್ ಜಾಲ ಬಲದಿಂದ ದೇಶದ ಅಗ್ರಗಣ್ಯ ಡೀಲರ್ ಆಗಿರುವ ಅದ್ವೈತ್ ಹ್ಯೂಂಡೈ ದಕ್ಷಿಣ ಮಂಗಳೂರಿನ ಬೈಕಂಪಾಡಿ ಕುಂಟಿಕಾನ, ಸುಳ್ಯ, ಬೆಳ್ತಂಗಡಿಯಲ್ಲಿ ಸೇವಾ ಕೇಂದ್ರವನ್ನು ಹೊಂದಿದೆ. ಹುಂಡೈ ವೆನ್ಯೂ ಅನ್ನು ಮೊದಲು 2019 ರಲ್ಲಿ ಬಿಡುಗಡೆ ಮಾಡಲಾಯಿತು.


ಇದೀಗ ನೂತನ ಆಲ್ ನ್ಯೂ ಹ್ಯೂಂಡೈ ವೆನ್ಯೂ ಕಾರು ಬೆಳ್ತಂಗಡಿ ಮಾರುಕಟ್ಟೆಗೆ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ಬೆಳ್ತಂಗಡಿಯ ಅದ್ವೈತ್ ಹೂಂಡೈ ಶೋರೂಂನಲ್ಲಿ ನೆರೆವೇರಿತು.
ನೂತನ ಕಾರನ್ನು ರೈಡಿಂಗ್ ಜೋಡಿ ಯೂಟ್ಯೂಬ್ ಚಾನೆಲ್‌ನ ಶ್ಯಾಮ್ ಪ್ರಸಾದ್ ಕಾಮತ್ ಮತ್ತು ಶೈನಿ ಕಾಮತ್ ಲೋಕಾರ್ಪಣೆಗೊಳಿಸಿ ಶುಭ ಹಾರೈಸಿದರು.

2019ರಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡ ಹ್ಯೂಂಡೈ ವೆನ್ಯೂ ಇದೀಗ 6 ವರ್ಷಗಳ ಬಳಿಕ ಹೊಸ ರೂಪದಲ್ಲಿ 2ನೇ ಪೀಳಿಗೆಯ ಆಲ್ ನ್ಯೂ ವೆನ್ಯೂ ಭಾರತೀಯ ಗ್ರಾಹಕರಿಗೆ ಪರಿಚಯವಾಗಿದ್ದು, ಹೊಸ ತಂತ್ರಜ್ಞಾನ, ಭದ್ರತೆ ಮತ್ತು ಶೈಲಿಯ ಪರಿಪೂರ್ಣ ಮಿಶ್ರಣವಾದ ಹೊಸ ಹ್ಯೂಂಡೈ ವೆನ್ಯೂ ತನ್ನ ವಿನೂತನ ಶೈಲಿ ನಮತ್ತು ಆಧುನಿಕ ತಂತ್ರಜ್ಞಾನದಿಂದ ವಾಹನ ಪ್ರಿಯರ ಗಮನ ಸೆಳೆದಿದೆ.

ಹ್ಯೂಂಡೈಯ ಹೊಸ ತಲೆಮಾರಿನ ವೆನ್ಯೂ ವಾಹನ ಪ್ರಿಯರ ಹೊಸ ಆಕರ್ಷಣೆ ಆಗಿ ಮೂಡಿ ಬಂದಿದೆ. ಬಿಡುಗಡೆ ಸಮಾರಂಭದಲ್ಲಿ ಬೆಳ್ತಂಗಡಿ ಅದ್ವೈತ್ ಹುಂಡೈ ಇದರ ಮಾರಾಟ ವ್ಯವಸ್ಥಾಪಕ ಭರತ್ ಶೆಟ್ಟಿ, ಸೇವಾ ವ್ಯವಸ್ಥಾಪಕ ವಿಷ್ಣು ಕುಮಾರ್, ಬಾಡಿ ಶಾಪ್ ಮ್ಯಾನೇಜರ್ ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.

ಇದನ್ನು ಓದಿ: ‘ಆಲ್ ನ್ಯೂ ಹ್ಯೂಂಡೈ ವೆನ್ಯೂ’ ಕಾರು ಮಂಗಳೂರು ಮಾರುಕಟ್ಟೆಗೆ ಬಿಡುಗಡೆ

ಹ್ಯೂಂಡೈ ವೆನ್ಯೂ ಕಾರಿನ ವಿಶಿಷ್ಟ ಗುಣಲಕ್ಷಣಗಳ ಬಗ್ಗೆ ನೋಡೋದಾದ್ರೆ 65 ಕ್ಕೂ ಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ವಿಶಿಷ್ಟ ವಿನ್ಯಾಸ, ಕಾರ್ಯಕ್ಷಮತೆಯುಳ್ಳ ಚಾಲಿತ ಚಕ್ರಗಳು, ಬ್ರಾಂಡೆಡ್ ಡ್ಯುಯಲ್-ಟೋನ್ ಲೆದರೆಟ್ ಸೀಟು, 6 ಏರ್‌ಬ್ಯಾಗ್‌ಗಳು, 360 ಡಿಗ್ರಿ ಕ್ಯಾಮೆರಾಗಳು, ಹೊಸ ಮಾದರಿಯು ಉತ್ತಮ ನಿಲುಗಡೆ ಶಕ್ತಿಯನ್ನು ನೀಡಲು ನಾಲ್ಕು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಇದು ಆಟೋ ಹೋಲ್ಡ್‌ನೊಂದಿಗೆ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಅನ್ನು ಸಹ ಒಳಗೊಂಡಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page