Connect with us

ನಟ ದರ್ಶನ್ ಸಂಕ್ರಾಂತಿ ಆಚರಣೆ…ಪತ್ನಿ ಮಾಡಿರುವ ಪೋಸ್ಟ್ ವೈರಲ್!

Published

on

ಮಂಗಳೂರು/ಮೈಸೂರು : ಪ್ರತೀ ವರ್ಷ ನಟ ದರ್ಶನ್ ತಮ್ಮ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬ ಆಚರಿಸುತ್ತಾರೆ. ಎತ್ತುಗಳು, ಹಸುಗಳನ್ನು ಸ್ನಾನ ಮಾಡಿಸಿ, ಅಲಂಕಾರ ಮಾಡಿ ಕಿಚ್ಚು ಹಾಯಿಸುತ್ತಾರೆ. ಆದರೆ, ಈ ವರ್ಷ ದರ್ಶನ್ ಏನು ಮಾಡುತ್ತಿದ್ದಾರೆ ಎಂಬ ಕುತೂಹಲ ಇತ್ತು. ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಿಂದ ಜಾಮೀನು ಪಡೆದಿರುವ ದರ್ಶನ್ ಈ ಬಾರಿ ಸಂಕ್ರಾಂತಿ ಆಚರಿಸಿದ್ದಾರಾ ಎಂಬ ಕುತೂಹಲ ಮನೆ ಮಾಡಿತ್ತು.

ಈ ಕುತೂಹಲವನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ತಣಿಸಿದ್ದಾರೆ. ತನ್ನ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಅವರು ಸ್ಟೋರಿ ಹಾಕಿದ್ದಾರೆ. ಈ ಮೂಲಕ ಫಾರ್ಮ್ ಹೌಸ್‌ನಲ್ಲಿ ದರ್ಶನ್ ಜೊತೆ ಸಂಕ್ರಾಂತಿ ಆಚರಿಸುತ್ತಿದ್ದಾರೆ ಅನ್ನೋದು ಕನ್ಫಮ್ ಆಗಿದೆ.

ಸದ್ಯ ಈ ಫೋಟೋ ವೈರಲ್ ಆಗಿದೆ. ದರ್ಶನ್ ಹಾಗೂ ವಿಜಯಲಕ್ಷ್ಮಿ ಮೈಸೂರಿನ ತಮ್ಮ ಫಾರ್ಮ್ ಹೌಸ್‌ನಲ್ಲಿದ್ದಾರೆ. ಅಲ್ಲಿ ಪ್ರಾಣಿಗಳ ಆರೈಕೆ ಮಾಡುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಮಹಾಕುಂಭ ಮೇಳದಲ್ಲಿ ಖ್ಯಾತ ನಟಿಯಿಂದ ಶಿವ ತಾಂಡವ ಪಠಣ

ಈ ಫೋಟೋದಲ್ಲಿ ಇಬ್ಬರೂ ಮುಖ ತೋರಿಸಿಲ್ಲ.  ಪ್ರಾಣಿಗಳತ್ತ ನೋಡುತ್ತಿರುವಂತೆ ಫೋಟೋ ಕ್ಲಿಕ್ಕಿಸಲಾಗಿದೆ. ಬೆನ್ನಿನ ಭಾಗ ಮಾತ್ರ ತೋರಿಸಲಾಗಿದೆ  ವಿಜಯಲಕ್ಷ್ಮಿ ತನ್ನ ಮುದ್ದಿನ ನಾಯಿಯನ್ನು ಫಾರ್ಮ್ ಹೌಸ್‌ಗೆ ಕೊಂಡೊಯ್ದಿದ್ದು, ಈ ಫೋಟೋದಲ್ಲಿ ನಾಯಿಯೂ ಇರುವುದನ್ನು ಕಾಣಬಹುದು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಮಹಾಕುಂಭಮೇಳದಲ್ಲಿ ಮತ್ತೆ ಅ*ಗ್ನಿ ಅವಘ*ಡ

Published

on

ಮಂಗಳೂರು/ಪ್ರಯಾಗ್‌ರಾಜ್ : ಮಹಾಕುಂಭಮೇಳದಲ್ಲಿ ಒಂದಿಲ್ಲೊಂದು ದುರಂ*ತ ಸಂಭವಿಸುತ್ತಿದೆ. ಇದೀಗ ಮತ್ತೆ ಅಗ್ನಿ ಅವ*ಘಡ ಉಂಟಾಗಿದೆ. ಇಂದು (ಫೆ.07)ಸೆಕ್ಟರ್ 18ರ ಶಂಕರಾಚಾರ್ಯ ಮಾರ್ಗ್ ನಲ್ಲಿ ಬೃಹತ್ ಅ*ಗ್ನಿ ಅವ*ಘಡ ಸಂಭವಿಸಿದೆ. ತಕ್ಷಣ ಸ್ಥಳಕ್ಕೆ ಅ*ಗ್ನಿಶಾಮಕ ದಳ ಆಗಮಿಸಿ ಕಾರ್ಯಾಚರಣೆಯಲ್ಲಿ ನಿರತವಾಗಿದೆ. ಮಹಾಕುಂಭ ಮೇಳದಲ್ಲಿ ಸಂಭವಿಸಿದ ಮೂರನೇ ಅ*ಗ್ನಿ ಅವ*ಘಡ ಇದಾಗಿದೆ.

ಜನವರಿಯಲ್ಲಿ ಮೇಳ ಮೈದಾನದ ಸೆಕ್ಟರ್ 19 ರಲ್ಲಿ ಸಿಲಿಂಡರ್ ಸ್ಫೋ*ಟಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಸಾ*ವು ನೋ*ವುಗಳು ವರದಿಯಾಗಿರಲಿಲ್ಲ. ಬಳಿಕ, ಜನವರಿ 25 ರಂದು, ಮೇಳ ಮೈದಾನದ ಸೆಕ್ಟರ್ 2 ರಲ್ಲಿ ಮತ್ತೊಮ್ಮೆ ಬೆಂಕಿ ಕಾಣಿಸಿಕೊಂಡಿತ್ತು. ಬೆಳಗಿನ ಜಾವ ಎರಡು ಕಾರುಗಳು ಬೆಂ*ಕಿಗೆ ಆ*ಹುತಿಯಾದವು. ಮೌನಿ ಅಮಾವಾಸ್ಯೆಯಂದು ಕಾಲ್ತು*ಳಿತ ಉಂಟಾಗಿತ್ತು. ಪರಿಣಾಮ 30 ಜನರು ಸಾ*ವನ್ನಪ್ಪಿದ್ದರು.

ಇದನ್ನೂ ಓದಿ : ಬಾಲಿವುಡ್ ಕಿಂಗ್ ಖಾನ್ ಪುತ್ರನಿಗೆ ಬೆಂಬಲ ನೀಡಿದ ಚಿತ್ರರಂಗ !

45 ದಿನಗಳ ಕಾಲ ನಡೆಯಲಿರುವ ಮಹಾಕುಂಭ ಮೇಳದಲ್ಲಿ ಫೆಬ್ರವರಿ 12 ರಂದು ನಡೆಯುವ ಮಾಘಿ ಪೂರ್ಣಿಮೆಯನ್ನು ಬಹಳಷ್ಟು ಜನರು ಸೇರುವ ಸಾಧ್ಯತೆ ಇದೆ. ಮಹಾಕುಂಭಮೇಳ 2025ರ ಫೆಬ್ರವರಿ 26 ರಂದು ಅಂತಿಮ ಅಮೃತ ಸ್ನಾನದೊಂದಿಗೆ ಮುಕ್ತಾಯಗೊಳ್ಳಲಿದೆ.

Continue Reading

LATEST NEWS

3 ವರ್ಷದ ‌ಬಾಲಕಿಯ ಕೆನ್ನೆಗೆ ಬರೆ ಹಾಕಿದ ಅಂಗನವಾಡಿ ಕಾರ್ಯಕರ್ತೆ

Published

on

ಬಾಗಲಕೋಟೆ: 3 ವರ್ಷದ ಪುಟಾಣಿ ಮಗುವಿನ ಕೆನ್ನೆಯ ಮೇಲೆ ಅಡುಗೆ ಮಾಡುವ ಸೌಟಿನಿಂದ ಕೆನ್ನೆಗೆ ಬರೆ ಎಳೆದ ಘಟನೆ ಮುಧೋಳ ತಾಲೂಕಿನ ಗುಲಗಾ ಜಂಬಗಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡಲಾಗಿದೆ.

ಮಗುವಿನ ಕೆನ್ನೆಯ ಮೇಲೆ ಅಂಗನವಾಡಿ ಸಹಾಯಕಿ ಶಾರವ್ವ ಪಂಚಗಾವಿ ಅಡುಗೆ ಮಾಡುವ ಸೌಟಿನಿಂದ ಕೆನ್ನೆಗೆ ಬರೆ ಎಳೆದಿದ್ದಳು. ಮನೆಗೆ ಬಂದ ಮಗಳ ಮುಖವನ್ನು ನೋಡಿ ಕೋಪಗೊಂಡ ತಂದೆ ಪ್ರದೀಪ್ ಬಾಗಲಿ ಅವ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ದೂರು ನೀಡಿದ್ದಾರೆ.

ಇವರ ದೂರನ್ನು ಆಧರಿಸಿ ತನಿಖೆ ನಡೆಸಲಾಗಿತ್ತು. ಬಳಿಕ ಮುಧೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಅಂಗನವಾಡಿ ಸಹಾಯಕಿ ಬಾಲಕಿ ಕೆನ್ನೆಗೆ ಬರೆ ಎಳೆದಿದ್ದು ದೃಢಪಟ್ಟಿದೆ.

ಕರ್ತವ್ಯ ನಿರ್ಲಕ್ಷ್ಯ ಎಸಗಿದ್ದಕ್ಕೆ ಅಂಗನವಾಡಿ ಸಹಾಯಕಿ ಶಾರವ್ವ ಪಂಚಗಾವಿ ಮತ್ತು ಕಾರ್ಯಕರ್ತೆ ಶೋಭಾ ಹೊಳೆಪ್ಪನವರ್ ಅವರನ್ನು ಮುಧೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Continue Reading

FILM

ನಟಿಯಾಗಿದ್ದ ಸಾಯಿಪಲ್ಲವಿ ಗಮನ ಈಗ ನಿರ್ದೇಶನದತ್ತ

Published

on

ಸಾಕಷ್ಟು ಮೇಕಪ್ ಮಾಡಿಕೊಂಡು, ಗ್ಲಾಮರಸ್ ಡ್ರೆಸ್ ಹಾಕಿಕೊಂಡು ನಟಿಯರು ಮಿಂಚುತ್ತಿರುವ ಈ ಕಾಲದಲ್ಲಿ ದಕ್ಷಿಣದ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಸಾಯಿ ಪಲ್ಲವಿ ತಮ್ಮ ಸರಳತೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಪ್ರಸ್ತುತ ಸಾಯಿ ಪಲ್ಲವಿ ಅವರು ನಿರ್ದೇಶನದತ್ತ ಗಮನ ಹರಿಸುವ ಆಲೋಚನೆ ಹೊಂದಿದ್ದು, ಭವಿಷ್ಯದ ಯೋಜನೆಯ ಬಗ್ಗೆ ನಟ ನಾಗ ಚೈತನ್ಯ ಮಾತನಾಡಿದ್ದಾರೆ.

ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಥಾಂಡೇಲ್’ ಸಿನಿಮಾ ಇಂದು (ಫೆ.7) ರಿಲೀಸ್ ಆಗಿದ್ದು, ಬಹು ನಿರೀಕ್ಷೆ ಸೃಷ್ಟಿಸಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಅವರ ಪಾತ್ರ ಹೆಚ್ಚು ಹೈಲೈಟ್ ಆಗುವ ನಿರೀಕ್ಷೆ ಇದೆ. ಈ ಚಿತ್ರ ಪ್ರಚಾರ ವೇಳೆ ಅವರ ನಿರ್ದೇಶನದ ಪ್ಲ್ಯಾನ್ ಬಗ್ಗೆ ನಟ ಮಾತನಾಡಿದ್ದಾರೆ. ಸಂದರ್ಶನದ ವೇಳೆ ನೆರೆದಿದ್ದ ಅಭಿಮಾನಿಗಳಿಗೆ ಪ್ರಶ್ನೆ ಮಾಡಲು ಅವಕಾಶ ನೀಡಲಾಗಿದ್ದು, ಸಾಯಿ ಪಲ್ಲವಿ ಅವರಿಗೆ ‘ನೀವು ಫಿಲ್ಮ್ ಡೈರೆಕ್ಷನ್ ಮಾಡುವ ಸಾಧ್ಯತೆ ಇದೆಯೇ’ ಎಂದು ಕೇಳಲಾಯಿತು. ಇದಕ್ಕೆ ‘ಇಲ್ಲ’ ಎನ್ನುವ ಉತ್ತರವನ್ನು ಅವರು ನೀಡಿದರು. ‘ಇದು ಸುಳ್ಳು. ಒಂದು ಸಿನಿಮಾ ನಿರ್ದೇಶನ ಮಾಡಬಹುದು ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ. ನನ್ನನ್ನು ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳೋದಾಗಿಯೂ ಹೇಳಿದ್ದಾರೆ’ ಎಂದು ನಾಗ ಚೈತನ್ಯ ಅವರು ವಾದಿಸಿದಾಗ ‘ಅದು ನನಗೆ ನೆನಪಿದೆ’ ಎಂದು ಸಾಯಿ ಪಲ್ಲವಿ ಹೇಳಿದರು.

ಇದನ್ನೂ ಓದಿ : ಬಾಲಿವುಡ್ ಕಿಂಗ್ ಖಾನ್ ಪುತ್ರನಿಗೆ ಬೆಂಬಲ ನೀಡಿದ ಚಿತ್ರರಂಗ !

ಸಿನಿಮಾ ನಿರ್ದೇಶನದ ಮಾತುಕಥೆ ಮುಗಿದ ಬಳಿಕ, ಫ್ಯಾನ್ಸ್ಫ ಫುಲ್ ಥ್ರಿಲ್ ಆಗಿದ್ದಾರೆ. ಈ ಹೊಸ ಚಿತ್ರ ಶೀಘ್ರವೇ ಸೆಟ್ಟೇರಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಆದರೆ, ನಿರ್ದೇಶನ ಮಾಡೋದು ಅದು ಅಷ್ಟು ಸುಲಭದ ಮಾತಲ್ಲ. ಸಿನಿಮಾ ನಿರ್ದೇಶಿಸಲು ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಆ ಬಳಿಕವೇ ಸಿನಿಮಾ ನಿರ್ದೇಶನಕ್ಕೆ ಇಳಿಯಬೇಕಾಗುತ್ತದೆ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಹಿಂದಿ ಭಾಷೆಯ ಈ ಚಿತ್ರದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಮನಾಗಿ ರಣಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page