Connect with us

FILM

ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲು

Published

on

ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್‌ ರಾಜ್‌ ದಿಢೀರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಅಭಿಮಾನಿಗಳಲ್ಲಿ ಆತಂಕ ಉಂಟು ಮಾಡಿದೆ.


ನಟ ವಿನೋದ್‌ ರಾಜ್‌ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ನೆಲಮಂಗಲದಲ್ಲಿರುವ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ವಿನೋದ್‌ ರಾಜ್‌ ಅವರಿಗೆ ಸದ್ಯ ಆಪರೇಷನ್ ಮಾಡಲಾಗಿದೆ ಎಂದು ವರದಿಯಾಗಿದೆ. ಅವರ ಆರೋಗ್ಯದ ಬಗ್ಗೆ ಇನ್ನಷ್ಟು ಮಾಹಿತಿ ವೈದ್ಯರಿಂದ ತಿಳಿದು ಬರಬೇಕಿದೆ.

ಇದನ್ನೂ ಓದಿ : ಇನ್ಮುಂದೆ ಮಂಗಳೂರಿನಿಂದ ಅಬುದಾಬಿಗೆ ಪ್ರತಿದಿನ ಸಂಚರಿಸಲಿದೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್..

ನಟನಾಗಿ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದ ವಿನೋದ್ ರಾಜ್ ಮೆಚ್ಚುಗೆ ಗಳಿಸಿದ್ದಾರೆ. ಇತ್ತೀಚೆಗೆ ನೆಲಮಂಗಲದ ಕರೆಕಲ್ ಕ್ರಾಸ್​ನಿಂದ ಸೋಲದೇವನಹಳ್ಳಿವರೆಗೂ ಗುಂಡಿ ಬಿದ್ದ ರಸ್ತೆ ಹಾಗೂ ಕೆಟ್ಟು ಹೋದ ರಸ್ತೆಗಳನ್ನು ಸರಿ ಪಡಿಸಿದ್ದರು. ಈ ಮೂಲಕ ಮಳೆಗಾಲ ಆರಂಭವಾಗುವ ಮೊದಲೇ ವಿನೋದ್ ರಾಜ್ ರಸ್ತೆಯನ್ನು ರಿಪೇರಿ ಮಾಡಿ ಜನಮನ ಗೆದ್ದಿದ್ದರು.

Advertisement
Click to comment

Leave a Reply

Your email address will not be published. Required fields are marked *

FILM

‘ಸ್ಪಿರಿಟ್’ ಸಿನಿಮಾದಿಂದ ಹೊರಬಂದ ದೀಪಿಕಾ ಪಡುಕೋಣೆ!

Published

on

ಮಂಗಳೂರು/ಮುಂಬೈ : ನಟಿ ದೀಪಿಕಾ ಪಡುಕೋಣೆ ತಾಯ್ತನದ ಸಂಭ್ರಮದಲ್ಲಿದ್ದಾರೆ. ಈ ನಡುವೆ ಅವರು ಸಿನಿಮಾಗಳಿಗೆ ಮತ್ತೆ ಬಣ್ಣ ಹಚ್ಚುವ ಮೂಲಕ ಸೆಕೆಂಡ್ ಇನ್ನಿಂಗ್ಸ್ ಆರಂಭಿಸುವ ತಯಾರಿಯಲ್ಲಿದ್ದರು. ಸಿನಿಮಾ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದರು.

ಹೌದು, ಅರ್ಜುನ್ ರೆಡ್ಡಿ, ಅನಿಮಲ್ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಸಿನಿಮಾ ಒಪ್ಪಿಕೊಂಡಿದ್ದರು ದೀಪಿಕಾ. ಈ ಚಿತ್ರಕ್ಕೆ ‘ಸ್ಪಿರಿಟ್’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ನಾಯಕನಾಗಿ ನಟಿಸುತ್ತಿದ್ದರು. ಕಲ್ಕಿ ಚಿತ್ರದ ಬಳಿಕ ಮತ್ತೊಮ್ಮೆ ಪ್ರಭಾಸ್ ಜೊತೆ ದೀಪಿಕಾ ಕಾಣಿಸಿಕೊಳ್ಳಲು ಅಣಿಯಾಗಿದ್ದರು.

ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ ಎಂಬ ವಿಚಾರಕ್ಕಿಂತಲೂ ಸುದ್ದಿಯಾಗಿದ್ದು ಆಕೆಯ ಸಂಭಾವನೆ. ಹೌದು, ನಟರಿಗೆ ಸರಿಸಮಾನವಾಗಿ ನಾಯಕಿಯರು ಸಂಭಾವನೆ ಪಡೆಯುತ್ತಿದ್ದು, ದೀಪಿಕಾ ಕೂಡ ಕೋಟಿಗಟ್ಟಲೆ ಸಂಭಾವನೆ ಪಡೆಯುತ್ತಿದ್ದಾರೆ. ದೀಪಿಕಾ ಸ್ಪಿರಿಟ್ ಚಿತ್ರಕ್ಕೆ 20 ಕೋಟಿ ಸಂಭಾವನೆ ಕೇಳಿದ್ದಾರೆ ಎನ್ನಲಾಗಿದೆ. ಅದಕ್ಕೆ ಚಿತ್ರತಂಡವೂ ಒಪ್ಪಿಕೊಂಡಿತ್ತು ಎನ್ನಲಾಗಿದೆ.

ಇದನ್ನೂ ಓದಿ : ಕಾನ್ ಚಿತ್ರೋತ್ಸವದಲ್ಲಿ ಕಂಗೊಳಿಸಿದ ‘ಸಿಂದೂರ’; ಗಮನ ಸೆಳೆದ ಐಶ್ವರ್ಯಾ ರೈ, ಅದಿತಿ ರಾವ್ ಹೈದರಿ

ಆದ್ರೆ, ಇದೀಗ ನಿರಾಸೆಯುಂಟು ಮಾಡುವ ಸುದ್ದಿ ಬಂದಿದೆ.  ಸದ್ಯ ದೀಪಿಕಾ ಈ ಚಿತ್ರದಿಂದ ಹೊರ ಬಂದಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಇದಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ, ದೀಪಿಕಾ ಚಿತ್ರತಂಡಕ್ಕೆ ಹಲವು ಷರತ್ತುಗಳನ್ನು ವಿಧಿಸಿದ್ದರಂತೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಸ್ಪಿರಿಟ್‌ನ ಮೂಲ ತೆಲುಗು. ಆದರೆ, ದೀಪಿಕಾ ತೆಲುಗಿನಲ್ಲಿ ಡೈಲಾಗ್ಸ್ ಹೇಳಲ್ಲ ಎಂದಿದ್ದಾರಂತೆ. 8 ಗಂಟೆ ಕೆಲಸ ಮಾಡಿ ನಂತರ ಒಂದು ಸೆಕೆಂಡ್ ಕೂಡ ಅಲ್ಲಿರುವುದಿಲ್ಲ ಎಂದಿದ್ದಾರೆ. ಹೀಗಾಗಿ ಚಿತ್ರತಂಡ ಅವರನ್ನು ಕೈ ಬಿಟ್ಟಿದೆ ಎಂಬ ಗಾಸಿಪ್‌ಗಳು ಹರಿದಾಡುತ್ತಿವೆ.

Continue Reading

FILM

‘ಕನ್ನಡ ಸಿನಿಮಾ ಹಿಂದಿಗೆ ಡಬ್ ಮಾಡಬೇಡಿ’ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಸೋನು ನಿಗಮ್

Published

on

ಒಂದಾದ ಮೇಲೆ ಒಂದರಂತೆ ವಿವಾದ ಮಾಡಿಕೊಳ್ಳುತ್ತಲೇ ಇರುವ ಗಾಯಕ ಸೋನು ನಿಗಮ್ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ‘ಕನ್ನಡ ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್​ನಲ್ಲಿ ಭಯೋತ್ಪಾದನಾ ದಾಳಿ ಆಯಿತು’ ಎಂದು ಹೇಳಿ ಕನ್ನಡಿಗರನ್ನು ಕೆಣಕಿ ಸುದ್ದಿ ಆಗಿದ್ದರು. ಇದೀಗ ಮತ್ತೊಮ್ಮೆ ಸೋನು ನಿಗಮ್ ಹೆಸರಿನ ಟ್ವಿಟರ್ ಖಾತೆಯಿಂದ ಮಾಡಿದ ಟ್ವೀಟ್ ಒಂದು ಚರ್ಚೆಗೆ ಕಾರಣ ಆಗಿದೆ.

ಹೌದು.. ಬೆಂಗಳೂರಿನ SBI ಬ್ಯಾಂಕ್‌ನಲ್ಲಿ ಮ್ಯಾನೇಜರ್ ಕನ್ನಡ ಮಾತನಾಡಲು ನಿರಾಕರಿಸಿದ ಘಟನೆ ವಿವಾದ ಸೃಷ್ಟಿಸಿದ್ದು, ಈ ಕುರಿತು ಕನ್ನಡ ಪರ ಹೋರಾಟಗಾರರ ಪ್ರತಿಭಟನೆಗೆ ಮಣಿದ ಮ್ಯಾನೇಜರ್ ಕ್ಷಮೆ ಕೋರಿದ್ದರೂ ಈ ಕುರಿತ ವಿವಾದ ಮಾತ್ರ ಯಾಕೋ ಇನ್ನೂ ತಣ್ಣಗಾಗುವಂತೆ ಕಾಣುತ್ತಿಲ್ಲ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ವಿಷಯದಲ್ಲಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೇ ಸೋನು ನಿಗಮ್ ಮಾಡಿದ ಟ್ವೀಟ್ ಒಂದು ವೈರಲ್ ಆಗಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

ತೇಜಸ್ವಿ ಸೂರ್ಯ ಹೇಳಿದ್ದೇನು?
‘ಎಸ್​ಬಿಐ ಬ್ಯಾಂಕ್​ನ ಬ್ರ್ಯಾಂಚ್ ಮ್ಯಾನೇಜರ್ ಅವರ ಈ ರೀತಿಯ ದುಂಡಾವರ್ತನೆ ಸಹಿಸಲು ಆಗದು. ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಂದರ್ಭದಲ್ಲಿ, ಅದರಲ್ಲಿಯೂ ಬ್ಯಾಂಕಿಂಗ್ ವಲಯದಲ್ಲಿ ಗ್ರಾಹಕರು ಮಾತನಾಡುವ ಸ್ಥಳೀಯ ಭಾಷೆಯಲ್ಲಿಯೇ ವ್ಯವಹರಿಸತಕ್ಕದ್ದು. ಕರ್ನಾಟಕದಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ಸ್ಥಳೀಯ ಕನ್ನಡಿಗರನ್ನು ಪರಿಗಣಿಸುವಂತೆ ನಾನು ಸಂಸತ್ತಿನ ಒಳಗೆ ಮತ್ತು ಹೊರಗೆ ಹಲವು ಬಾರಿ ಪ್ರಸ್ತಾಪಿಸಿದ್ದೇನೆ. ಇತ್ತೀಚೆಗಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಮುಂದೆಯೂ ನಾನು ಇದನ್ನೇ ಪುನರುಚ್ಚರಿಸಿ, ಸ್ಥಳೀಯ ಭಾಷೆ ಬಲ್ಲವರನ್ನೇ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿದ್ದು, ಈ ಕುರಿತಂತೆ DFS ನೀತಿಯಡಿಯಲ್ಲಿಯೇ ನೇಮಕಾತಿ ಕೈಗೊಳ್ಳುವಂತೆ ಎಸ್​ಬಿಐ ಬಳಿ ವಿನಂತಿಸುತ್ತೇನೆ. ಈ ರೀತಿಯ ವರ್ತನೆ ತೋರಿರುವ ಬ್ಯಾಂಕ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸಂಬಂಧಪಟ್ಟವರ ಬಳಿ ನಾನು ಒತ್ತಾಯಿಸಿದ್ದು, ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಬ್ಯಾಂಕಿಂಗ್ ವಲಯ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ಅಗತ್ಯತೆ ಇದೆ’ ಎಂದಿದ್ದರು.

ಕನ್ನಡ ಸಿನಿಮಾ ಹಿಂದಿಗೆ ಡಬ್ ಮಾಡಬೇಡಿ: ಸೋನು ನಿಗಮ್
ಸಂಸದ ತೇಜಸ್ವಿ ಸೂರ್ಯರ ಈ ಟ್ವೀಟ್‌ಗೆ ಸೋನು ನಿಗಮ್ ಕಿಡಿಕಾರಿದ್ದು,‘ಕನ್ನಡ ಸಿನಿಮಾ ಹಿಂದಿಗೆ ಡಬ್​ ಮಾಡಬೇಡಿ. ಕನ್ನಡ ಸಿನಿಮಾನ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಬೇಡಿ. ತೇಜಸ್ವಿ ಸೂರ್ಯ ಅವರೇ ಇದನ್ನು ಕನ್ನಡ ಹೀರೋಗಳಿಗೆ ಹೇಳುವ ಗಟ್ಸ್ ನಿಮಗೆ ಇದೆಯೇ ಅಥವಾ ನೀವೋಬ್ಬ ಭಾಷಾ ಹೋರಾಟಗಾರ ಅಷ್ಟೆಯೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಸೋನು ನಿಗಮ್ ಹೀಗೆ ಹೇಳಿದ್ರಾ?
ಅಷ್ಟಕ್ಕೂ, ಸೋನು ನಿಗಮ್ ಹೆಸರಿನ ಟ್ವಿಟರ್ ಖಾತೆಯಿಂದ ಮಾಡಿದ ಟ್ವಿಟ್ ಗಾಯಕ ಸೋನು ನಿಗಮ್ ಅವರದಲ್ಲ. ಸೋನು ನಿಗಮ್ ಟ್ವಿಟರ್ ಬಳಕೆ ಮಾಡೋದು ಬಿಟ್ಟು 7 ವರ್ಷಗಳೇ ಆಗಿವೆ. ಆದರೆ, ಅವರ ಹೆಸರಲ್ಲಿ ಬೇರೊಬ್ಬರು ಖಾತೆ ತೆರೆದಿದ್ದಾರೆ. ಈ ಬಗ್ಗೆ ಸೋನು ನಿಗಮ್ ಪ್ರಶ್ನೆ ಮಾಡಿದ್ದರು. ಆದರೆ, ಆ ವ್ಯಕ್ತಿ ನನ್ನ ಹೆಸರು ಸೋನು ನಿಗಮ್ ಎಂದು ದಾಖಲೆ ನೀಡಿದ್ದರು. ಕೆಲವರು ತಪ್ಪಾಗಿ ಅರ್ಥೈಸಿಕೊಂಡು ಸೋನು ನಿಗಮ್​ಗೆ ಬೈಯ್ಯುತ್ತಿದ್ದಾರೆ.

 

Continue Reading

FILM

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ

Published

on

ಮಂಗಳೂರು/ಬೆಂಗಳೂರು: ‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಖ್ಯಾತಿ ಪಡೆದ ಹಾಸ್ಯ ನಟ ಮಡೆನೂರು ಮನು ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.

ಕಾಮಿಡಿ ಕಿಲಾಡಿಗಳು ಸೀಸನ್ -2′ ಮೂಲಕ ಜನಮನ ಗೆದ್ದಿದ್ದ ಮಡೆನೂರು ಮನು ಮೇಲೆ ಕಿರುತೆರೆ ನಟಿಯೊಬ್ಬರು ಅತ್ಯಾ*ಚಾರ ಆರೋಪವನ್ನು ಮಾಡಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಮದುವೆ ಆಗುವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಿಸಿಕೊಂಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಜತೆಯಲ್ಲಿ ಕೆಲಸ ಮಾಡಿದ್ದ ಸಹ ಕಲಾವಿದೆಯೇ. ನಟನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವೀಕ್ಷಕರಿಗೆ ಗುಡ್​ ಬೈ ಹೇಳಲು ಮುಂದಾದ ಕನ್ನಡದ ಟಾಪ್ ಸೀರಿಯಲ್ ಸೀತಾರಾಮ

ಇನ್ನೂ ತನ್ನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗ್ತಿದ್ದಂತೆ ನಟ ಮಡೆನೂರು ಮನು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ನಾಳೆ(ಮೇ.23) ರಿಲೀಸ್ ಆಗಲಿದೆ. ಈ ಸಂದರ್ಭದಲ್ಲಿಯೇ ನಟನ ವಿರುದ್ದ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ತಂಡಕ್ಕೆ ಹಿನ್ನಡೆ ಆಗುವ ಸಾಧ್ಯತೆ ಇದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page