Connect with us

FILM

5 ವರ್ಷಗಳಿಂದ ಪ್ರೀತಿ- 3 ಬಾರಿ ಗರ್ಭಿಣಿ ಇದೀಗ ಕೊಲೆ ಬೆದರಿಕೆ’ ಮಾಜಿ ಸಚಿವ ಮಣಿಕಂಠನ್ ವಿರುದ್ಧ ಚಿತ್ರ ನಟಿ ಚಾಂದಿನಿ ಗಂಭೀರ ಆರೋಪ

Published

on

ಚೆನೈ : ಮದುವೆ ಹೆಸರಲ್ಲಿ ನಂಬಿಸಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ತಮಿಳುನಾಡಿನ ಮಾಜಿ ಸಚಿವ ಮಣಿಕಂಠನ್ ವಿರುದ್ಧ ನಟಿ ಚಾಂದಿನಿ ಚೆನ್ನೈ ಪೊಲೀಸ್​ ಆಯುಕ್ತರ ಕಚೇರಿಗೆ ದೂರು ನೀಡಿದ್ದಾರೆ.

​​ದೂರಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಚಾಂದಿನಿ, ಸುಮಾರು ಐದು ವರ್ಷಗಳಿಂದ ಮಣಿಕಂಠನ್​ ನನ್ನ ಜೊತೆ ವಾಸವಿದ್ದರು. ನಾನು ಅವರನ್ನು ಪ್ರೀತಿಸುತ್ತಿದ್ದೇನೆ ಮತ್ತು ಮದುವೆ ಆಗಬೇಕೆಂದುಕೊಂಡಿದ್ದೇನೆ.

ನಮ್ಮ ನಡುವೆ ದೈಹಿಕ ಸಂಬಂಧವು ನಡೆದಿದ್ದು, ಮೂರು ಬಾರಿ ಗರ್ಭಿಣಿಯಾಗಿದ್ದೆ. ಆದರೆ, ಬಲವಂತದಿಂದ ಗರ್ಭ ತೆಗೆಸಿದ್ದಾರೆಂದು ಚಾಂದಿನಿ ದೂರಿದ್ದಾರೆ.

ಮದುವೆ ಆಗುವಂತೆ ಕೇಳಿದರೆ ತನ್ನ ಗುಂಡಾಗಳನ್ನು ಬಿಟ್ಟು ಬೆದರಿಸುತ್ತಾರೆ. ನನ್ನ ಕುಟುಂಬಕ್ಕೂ ಬೆದರಿಕೆ ಹಾಕಿದ್ದಾರೆ. ನನಗೂ ನಿರಂತರವಾಗಿ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ.

ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಚಾಂದಿನಿ ಮನವಿ ಮಾಡಿಕೊಂಡಿದ್ದಾರೆ.ಚಾಂದಿನಿ ನೀಡಿರುವ ದೂರಿಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಮಣಿಕಂಠನ್​, ಅವಳು ಯಾರೆಂಬುದು ಸಹ ನನಗೆ ತಿಳಿದಿಲ್ಲ ಎಂದಿದ್ದಾರೆ.

ನಾನು ಸಚಿವನಾಗಿದ್ದ ಸಮಯದಲ್ಲಿ ಅನೇಕರು ನನ್ನ ಭೇಟಿ ಮಾಡಿದ್ದಾರೆ. ಇದೇ ರೀತಿ ನಟಿ ಚಾಂದಿನಿ ಸಹ ಭೇಟಿ ಮಾಡಿರಬಹುದೆಂದು ಹೇಳಿದ್ದಾರೆ.

ಭೇಟಿಯ ವೇಳೆ ಫೋಟೋ ತೆಗೆದುಕೊಂಡು ತಪ್ಪಾಗಿ ದೂರನ್ನು ನೀಡಿದ್ದಾರೆ. ನನಗೆ ಈಗಾಗಲೇ ಮದುವೆ ಆಗಿದ್ದು, ಮೂರು ಮಕ್ಕಳಿದ್ದಾರೆ. ನನ್ನ ಹೆಸರನ್ನು ಕೆಡಿಸಲು ರಾಜಕೀಯ ವಿರೋಧಿಗಳು ಚಾಂದಿನಿಯನ್ನು ಛೂ ಬಿಟ್ಟಿದ್ದಾರೆ.

ಮೂರು ದಿನಗಳ ಹಿಂದೆ ಅಪರಿಚಿತನೊಬ್ಬ ಕರೆ ಮಾಡಿ ಚಾಂದಿನಿಯನ್ನು ಭೇಟಿ ಮಾಡಿದ್ದರ ಬಗ್ಗೆ ಫೋಟೋಗಳು ಇವೆ ಎಂದು ಬೆದರಿಕೆ ಹಾಕಿದ್ದ.

ಅವರು ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಡುತ್ತಿದ್ದಾರೆ. ನಾನು ಒಪ್ಪಿಕೊಳ್ಳಲಿಲ್ಲ. ನಾನು ಈ ಪ್ರಕರಣವನ್ನು ಕಾನೂನಾತ್ಮಕವಾಗಿಯೇ ಎದುರಿಸುತ್ತೇನೆಂದು ಹೇಳಿದ್ದಾರೆ.

FILM

ಮಂಗಳೂರಿನಲ್ಲಿಯೂ ಆಫ್ರೋ ಟಪಾಂಗ್ ಹವಾ; ಪ್ರಮೋಷನ್‌ಗಾಗಿ ಆಗಮಿಸಿದ ಚಿತ್ರತಂಡ

Published

on

ಮಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಚೊಚ್ಚಲ ಸಿನಿಮಾ ‘45’.  ಈ ಸಿನಿಮಾದ ಆಫ್ರೋ ಟಪಾಂಗ್ ಹಾಡು ಭಾರೀ ಸದ್ದು ಮಾಡುತ್ತಿದ್ದು, ಇದೀಗ ಈ ಹಾಡಿನ  ಪ್ರಮೋಷನ್ ಗಾಗಿ ಆಗಮಿಸಿದ್ದ ಚಿತ್ರತಂಡ ಮಂಗಳೂರಿನ ಫೋರಂ ಫಿಜಾ ಮಾಲ್ ನಲ್ಲಿ ನೆರೆದಿದ್ದ ಸಿನಿಮಾ ಪ್ರೇಮಿಗಳು ಮತ್ತು ಅಭಿಮಾನಿಗಳನ್ನು ಮೋಡಿ ಮಾಡಿತು. ನಿರ್ದೇಶಕ ಅರ್ಜುನ್ ಜನ್ಯ, ರಾಜ್ ಬಿ. ಶೆಟ್ಟಿ, ಗಾಯಕರಾದ ನಿಶಾನ್ ರೈ, ಎಂ.ಸಿ.ಬಿಜು ಅವರಿಗೆ ನಿರೂಪಕಿ ಅನುಶ್ರೀ ಶೆಟ್ಟಿ ಸಾಥ್ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಹಾಡಿನ ನೃತ್ಯ ಪ್ರದರ್ಶನ ನೆರೆದಿದ್ದವರ ಮನಸೂರೆಗೊಳಿಸಿತು. ಹಾಡಿಗೆ ರಾಜ್ ಬಿ ಶೆಟ್ಟಿ ಟಪಾಂಗುಚ್ಚಿ ಕುಣಿಯುವ ಮೂಲಕ ಮತ್ತಷ್ಟು ಮನರಂಜಿಸಿದರು. ಜೊತೆಗೆ ಆ್ಯಂಕರ್ ಅನುಶ್ರಿ ಅವರ ನಿರೂಪಣೆ ಕಾರ್ಯಕ್ರಮಕ್ಕೆ ಮತ್ತಷ್ಟು ಕಿಕ್ ನೀಡಿತು.

ಬಳಿಕ ಮಾಧ್ಯಮಗಳ ಜೊತೆಗೆ ಮಾತಾಡಿದ ಅರ್ಜುನ್ ಜನ್ಯ, ಮಂಗಳೂರಿನ ಜನ ಬಹಳ ಒಳ್ಳೆಯವರು. ಇಲ್ಲಿಗೆ ಪ್ರತೀ ಬಾರಿ ಬಂದಾಗಲೂ ಒಳ್ಳೆಯ ಫೀಲ್ ಉಂಟಾಗುತ್ತೆ. ಹಾಗಾಗಿ ಸಿನಿಮಾದಲ್ಲಿ ನಿಶಾನ್ ರೈ ಬರೆದಿರುವ ತುಳು ಸಾಹಿತ್ಯವಿರುವ ಹಾಡನ್ನು ಅಳವಡಿಸಲಾಗಿದೆ. ಈಗಾಗಲೇ ಹಾಡು 25 ಮಿಲಿಯನ್ ವೀಕ್ಷಣೆ ಪಡೆಯುವ ಸನಿಹದಲ್ಲಿಯುವುದು ಖುಷಿ ಎನಿಸುತ್ತಿದೆ. ರೀಲ್ಸ್ ಮೂಲಕವೇ ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದ ಉಗಾಂಡಾ ದೇಶದ ಹಳ್ಳಿಯ ಮಕ್ಕಳ ತಂಡ ‘ಗೆಟ್ಟೋ ಕಿಡ್ಸ್’ ಅನ್ನು 45 ಸಿನಿಮಾದ ಟಪಾಂಗ್ ಹಾಡಿನಲ್ಲಿ ಕುಣಿಸಿರುವುದು ಸಿನಿಮಾದ ವಿಶೇಷವಾಗಿದೆ. ಚಿತ್ರವು ಡಿಸೆಂಬರ್ 25 ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು.

ನಟ ರಾಜ್ ಬಿ ಶೆಟ್ಟಿ ಮಾತನಾಡಿ, 45 ಸಿನಿಮಾದಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಅವರೊಂದಿಗೆ ನಟಿಸಿರುವುದು ರೋಮಾಂಚನಕಾರಿ ಅನುಭವ. ಸಿನಿಮಾ ಚೆನ್ನಾಗಿ ಮೂಡಿಬಂದಿದ್ದು ಆಫ್ರೋ ಟಪಾಂಗ್ ಹಾಡಿಗೆ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ತುಳುವರು ಸಿನಿಮಾ ನೋಡಿ ಎಂದರು.

ಫೋರಂ ಫಿಜಾ ಮಾಲ್‌ನ ಬಿ.ಎಂ.ಫಾರೂಕ್ ಚಿತ್ರತಂಡದ ಕಲಾವಿದರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿ, ಚಿತ್ರತಂಡ ಒಳ್ಳೆಯ ಪ್ರಯತ್ನಕ್ಕೆ ಕೈಹಾಕಿದೆ. ತುಳು ಸಾಹಿತ್ಯವನ್ನು ಹಾಡಿನಲ್ಲಿ ಬಳಕೆ ಮಾಡಿರುವುದು ನಮಗೆ ಹೆಮ್ಮೆಯ ವಿಚಾರ ಎಂದರು.

ಇದನ್ನೂ ಓದಿ : ಪ್ರೀಮಿಯರ್ ಶೋ ನೋಡಿ ‘ಜೈ’ ಅಂದ್ರು ಪ್ರೇಕ್ಷಕರು

ಅನುಶ್ರೀ  ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಜನ ಉಪಸ್ಥಿತರಿದ್ದು ಕಾರ್ಯಕ್ರಮ ವೀಕ್ಷಿಸಿದರು.

Continue Reading

FILM

ಪ್ರೀಮಿಯರ್ ಶೋ ನೋಡಿ ‘ಜೈ’ ಅಂದ್ರು ಪ್ರೇಕ್ಷಕರು

Published

on

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ಹೊಸ ತುಳು ಚಲನ ಚಿತ್ರ ‘ಜೈ’ ನವೆಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಅದರ ಪ್ರೀಮಿಯರ್ ಶೋ ಇಂದು(ನ.09) ಮಂಗಳೂರಿನ ಭಾರತ್ ಸಿನಿಮಾ ಚಿತ್ರ ಮಂದಿರದಲ್ಲಿ ಭರ್ಜರಿಯಾಗಿ ನಡೆಯಿತು.  ನಟ ರಾಜ್ ದೀಪಕ್ ಶೆಟ್ಟಿ ಸೇರಿದಂತೆ ಹಲವಾರು ಕಲಾವಿದರು ಮತ್ತು ಅಭಿಮಾನಿಗಳು ಪ್ರೀಮಿಯರ್ ಶೋ ಉದ್ಘಾಟನೆ ವೇಳೆ ಉಪಸ್ಥಿತರಿದ್ದರು.

ಬಿಗ್ ಬಜೆಟ್‌ನ ಈ ಚಿತ್ರ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಗೊಂಡಿದೆ. ಈಗಾಗಲೇ ಚಿತ್ರದ ಹಾಡುಗಳು, ಟೀಸರ್, ಟ್ರೇಲರ್ ಎಲ್ಲವೂ  ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿಸಿದೆ. ಅಂದಹಾಗೆ, ಈ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ನಟಿಸಿರೋದು ಪ್ರಮುಖ ಆಕರ್ಷಣೆ.

ಗಿರಿಗಿಟ್, ಗಮ್ಜಾಲ್ ಮತ್ತು ಸರ್ಕಸ್ ಚಿತ್ರದ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ‘ಜೈ’ ಎಂಬ ಮಹತ್ವಾಕಾಂಕ್ಷೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ.  ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್ ಹಾಗೂ ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಆ್ಯಕ್ಷನ್, ಡ್ರಾಮಾ ಮತ್ತು ಎಮೋಷನ್‌ಗಳ ಸಮನ್ವಯವಿದೆ. ರೂಪೇಶ್ ಶೆಟ್ಟಿಗೆ  ನಾಯಕಿಯಾಗಿ ಅದ್ವಿತಿ ಶೆಟ್ಟಿ ಜೊತೆಯಾಗಿದ್ದಾರೆ.

ಚಿತ್ರದ ಕಥೆ ಹಾಗೂ ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಅವರು ಬರೆದಿದ್ದಾರೆ. ಕ್ಯಾಮೆರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ ಅವರದ್ದು ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ : ಉರ್ವ ಮಾರಿಯಮ್ಮ ಕ್ಷೇತ್ರ : ಡಿ.25 ಮತ್ತು 26 ರಂದು ನವಾಕ್ಷರಿ ಮಹಾಮಂತ್ರ ಯಾಗ

ನವೆಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿರುವ ‘ಜೈ’ ಚಲನ ಚಿತ್ರದ  ಪ್ರಿಮಿಯರ್ ಶೋ ಈಗಾಗಲೇ ಹಲವಾರು ಕಡೆ ನೆರವೇರಿದೆ. ಮಂಗಳೂರಿನಲ್ಲಿ ಇಂದು(ನ.09) ನೆರವೇರಿದ್ದು, ಚಿತ್ರ  ನೋಡಿದ ಪ್ರೇಕ್ಷಕರು ಜೈ ಎಂದಿದ್ದಾರೆ.

 

 

Continue Reading

FILM

20 ವರ್ಷದ ಯುವತಿ ವಿರುದ್ದ ಕೇಸ್ ದಾಖಲಿಸಿದ ಖ್ಯಾತ ನಟಿ ಅನುಪಮಾ ಪರಮೇಶ್ವರನ್‌; ಪೋಸ್ಟ್‌ನಲ್ಲೇನಿದೆ?

Published

on

ಖ್ಯಾತ ನಟಿ ಅನುಪಮಾ ಪರಮೇಶ್ವರನ್ ಅವರು 20 ವರ್ಷದ ಯುವತಿ ವಿರುದ್ದ ಕೇರಳ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ.

ಹೌದು, ಬಹುಭಾಷಾ ನಟಿ ಅನುಪಮಾ ಪರಮೇಶ್ವರನ್ ಅವರ ಫೋಟೋವನ್ನು ಆಕ್ಷೇಪಾರ್ಹ ರೀತಿಯಲ್ಲಿ ಎಡಿಟ್ ಮಾಡಿ, ಸುಳ್ಳು ಮಾಹಿತಿ ನೀಡಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ನಟಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಅನುಪಮಾ ಪರಮೇಶ್ವರನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ಒಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನನ್ನ ಫೋಟೋ ಬಳಸಿಕೊಂಡು, ತಪ್ಪು ಮಾಹಿತಿಯನ್ನು ಹಬ್ಬಿಸಲಾಗುತ್ತಿದೆ. ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ರೀತಿ ಬಳಸಿಕೊಂಡು ನನ್ನ ಪರಿಚಯದವರು ಹಾಗೂ ಕುಟುಂಬದವರನ್ನು ಟ್ಯಾಗ್ ಮಾಡಲಾಗುತ್ತಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ನೋವುಂಟಾಗಿದೆ” ಎಂದು ನಟಿ ಬರೆದುಕೊಂಡಿದ್ದಾರೆ.

“ಈ ಬಗ್ಗೆ ತನಿಖೆ ಮಾಡಿದಾಗ ಗೊತ್ತಾಗಿದ್ದು ಏನೆಂದರೆ, ನನ್ನ ಬಗ್ಗೆ ದ್ವೇಷ ಹರಡಲು ಮತ್ತು ನನ್ನ ಬಗ್ಗೆ ಕೆಟ್ಟ ಕಮೆಂಟ್ ಮಾಡಲು ಒಬ್ಬರೇ ವ್ಯಕ್ತಿ ಹಲವು ಫೇಕ್ ಅಕೌಂಟ್ ಮಾಡಿಕೊಂಡಿದ್ದಾರೆ. ಇದು ಗೊತ್ತಾದಾಗ ನಾನು ಕೇರಳ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದೆ. ಈ ಕೃತ್ಯದ ಹಿಂದೆ ಇರುವ ವ್ಯಕ್ತಿ ಯಾರು ಎಂಬುದು ಪೊಲೀಸರ ಸಹಕಾರದಿಂದ ತಿಳಿಯಿತು” ಎಂದಿದ್ದಾರೆ ಅನುಪಮಾ ಪರಮೇಶ್ವರನ್.

ಇದನ್ನೂ ಓದಿ: ವಿಶ್ವಕಪ್ ಗೆದ್ದ ರಿಚಾ ಘೋಷ್‌ಗೆ ಪೊಲೀಸ್ ಹುದ್ದೆ; ನೇಮಕಾತಿ ಪತ್ರ ಹಸ್ತಾಂತರಿಸಿದ ಸಿಎಂ ಮಮತಾ ಬ್ಯಾನರ್ಜಿ

‘ನನಗೆ ಆಶ್ಚರ್ಯ ಆಗಿದ್ದು ಏನೆಂದರೆ, ಈ ಕೃತ್ಯ ಮಾಡಿರುವುದು ತಮಿಳುನಾಡಿನ 20 ವರ್ಷದ ಹುಡುಗಿ! ಆಕೆಯ ವಯಸ್ಸನ್ನು ಗಮನದಲ್ಲಿಟ್ಟುಕೊಂಡು ಅವಳ ಗುರುತನ್ನ ಬಹಿರಂಗ ಮಾಡುತ್ತಿಲ್ಲ. ಯಾಕೆಂದರೆ, ಆಕೆಯ ಭವಿಷ್ಯ ಮತ್ತು ಮನಶಾಂತಿಗೆ ತೊಂದರೆ ಆಗಬಾರದು’ ಎಂದು ಅನುಪಮಾ ಪರಮೇಶ್ವರನ್ ಅವರು ಹೇಳಿದ್ದಾರೆ. ಅವರ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ನೋಡಿ, ಎಲ್ಲರಿಗೂ ಒಂದು ವಿಷಯ ಅರ್ಥವಾಗಬೇಕು.. ಮೊಬೈಲ್ ಫೋನ್ ಮತ್ತು ಸೋಷಿಯಲ್ ಮೀಡಿಯಾ ಇದೆ ಎಂದ ಮಾತ್ರಕ್ಕೆ ಬೇರೆಯವರ ಘನತೆಗೆ ಧಕ್ಕೆ ತರುವ ಅಧಿಕಾರ ಯಾರಿಗೂ ಇಲ್ಲ. ಆನ್‌ಲೈನ್‌ಲ್ಲಿ ನೀವು ಮಾಡುವ ಎಲ್ಲಾ ಕೆಲಸಕ್ಕೂ ಹೆಜ್ಜೆ ಗುರುತುಗಳು ಇರುತ್ತವೆ.. ಎಲ್ಲದಕ್ಕೂ ಉತ್ತರ ಕೊಡಬೇಕಾಗಿ ಬರುತ್ತದೆ. ನಾನು ಹಾಕಿರುವ ಕೇಸ್ ತನಿಖೆ ನಡೆಯುತ್ತಿದೆ. ಆಕೆಯೂ ಅಷ್ಟೇ, ತಾನು ಮಾಡಿದ ಕೆಟ್ಟ ಕೆಲಸಕ್ಕೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page