Connect with us

FILM

ನಟಿ ಮೇಲೆ ಲೈಂ*ಗಿಕ ದೌರ್ಜ*ನ್ಯ ಪ್ರಕರಣ : ನಟ ದಿಲೀಪ್ ಖುಲಾಸೆ

Published

on

ಮಂಗಳೂರು/ಕೊಚ್ಚಿ : ಬಹುಭಾಷಾ ನಟಿಗೆ ಲೈಂ*ಗಿಕ ಕಿರುಕು*ಳ ನೀಡಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್‌ರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ. ಹಾಗೆಯೇ, ಸುನೀಲ್ ಎನ್.ಎಸ್. ಅಲಿಯಾಸ್ ಪಲ್ಸರ್ ಸುನಿ ಸೇರಿದಂತೆ 6 ಮಂದಿಯನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ.

2017 ರಲ್ಲಿ ನಟಿಯನ್ನು ಅಪಹರಿಸಿ ಲೈಂ*ಗಿಕ ದೌರ್ಜ*ನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಸುದೀರ್ಘ ವಿಚಾರಣೆ ನಡೆಸಿದ ಎರ್ನಾಕುಲಂ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯ ಇಂದು(ಡಿ.08) ಮಹತ್ವದ ತೀರ್ಪು ಪ್ರಕಟಿಸಿದ್ದು, ನಟ ದಿಲೀಪ್‌ರನ್ನು ಖುಲಾಸೆಗೊಳಿಸಿದೆ. ಈ ಪ್ರಕರಣದಲ್ಲಿ ಎನ್.ಎಸ್.ಸುನಿಲ್ ಅಲಿಯಾಸ್ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಬಿ.ಮಣಿಕಂದನ್, ವಿ.ಪಿ.ವಿಜೀಶ್, ಎಚ್. ಸಲೀಂ(ವಡಿವಲ್ ಸಲೀಂ) ಮತ್ತು ಪ್ರದೀಪ್ ಅವರನ್ನು ತಪ್ಪಿತಸ್ಥರೆಂದು ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ ವರ್ಗೀಸ್ ಘೋಷಿಸಿದರು.

ಇದನ್ನೂ ಓದಿ : ಹಾಲಿನ ಟ್ಯಾಂಕರ್‌ಗೆ ಡಿ*ಕ್ಕಿಯಾಗಿ ಸುಟ್ಟು ಕರಕಲಾದ ಕಾರು

ತಮಿಳು, ತೆಲುಗು ಹಾಗೂ ಮಲಯಾಳ ಭಾಷೆಯಲ್ಲಿ ನಟಿಸಿದ್ದ ನಟಿಯೊಬ್ಬರನ್ನು ಅಪಹರಿಸಿ, ಅವರ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿತ್ತು ಎಂದು 2017ರಲ್ಲಿ ದೂರು ನೀಡಲಾಗಿತ್ತು. ನಟ ದಿಲೀಪ್ ಸೇರಿದಂತೆ 10 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಕೃತ್ಯದಲ್ಲಿ ನೇರವಾಗಿ ಭಾಗವಹಿಸದಿದ್ದರೂ ಘಟನೆಯ ಮುಖ್ಯ ಸೂತ್ರಧಾರ ನಟ ದಿಲೀಪ್‌ ಕುಮಾರ್‌ ಎಂಬುದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿತ್ತು. ಸಂತ್ರಸ್ತ ನಟಿಯ ಮೇಲಿನ ವೈಯಕ್ತಿಕ ದ್ವೇಷದಿಂದ ಅತ್ಯಾ*ಚಾರಕ್ಕೆ ಸುಪಾರಿ ನೀಡಿದ್ದರು ಎಂದು ದಿಲೀಪ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಆದರೆ, ದಿಲೀಪ್ ಇದನ್ನು ಅಲ್ಲಗಳೆದಿದ್ದು, ತಾನೇನು ತಪ್ಪು ಮಾಡಿಲ್ಲವೆಂದು ವಾದಿಸಿದ್ದರು.

BIG BOSS

ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

Published

on

ಮಂಗಳೂರು/ಬೆಂಗಳೂರು : ಬಿಗ್ ಬಾಸ್ ಸೀಸನ್ 12 ಮುಕ್ತಾಯದ ಹಂತದಲ್ಲಿದೆ. ಒಬ್ಬೊಬ್ಬರೇ ಹೊರ ನಡೆದಿದ್ದಾರೆ. ಈಗ ಉಳಿದಿರೋದು ಕೇವಲ ಐದು ಮಂದಿ. ಮಿಡ್ ವೀಕ್ ಎಲಿಮಿನೇಷನ್‌ ಮೂಲಕ ಧ್ರುವಂತ್ ಹೊರಬಂದಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಲೇ ಧ್ರುವಂತ್ ಬದಲಾಗಿದ್ದಾರೆ.

ಬದಲಾಯ್ತು ಗೆಟಪ್:

ಬಿಗ್ ಬಾಸ್ ಮನೆಯೊಳಗಿದ್ದಾಗ ತಮ್ಮದೇ ಆದ ರೀತಿಯಲ್ಲಿ ಆಟವಾಡಿದ್ದರು ಧ್ರುವಂತ್. ಚರ್ಚೆ, ಜಗಳ, ವಾದದಲ್ಲೂ ಧ್ರುವಂತ್ ಇದ್ದರು. ಎಲ್ಲರೊಂದಿಗೆ ಜಗಳವಾಡುತ್ತಿದ್ದ ಧ್ರುವಂತ್‌ರನ್ನು ಕಿಚ್ಚ ಕ್ಲಾಸ ತೆಗೆದುಕೊಂಡಿದ್ದೂ ಇದೆ. ದೊಡ್ಮನೆಯೊಳಗೆ ‘ಜೈ ಮಹಾಕಾಳ್’ ಎನ್ನುತ್ತಾ ಖ್ಯಾತರಾಗಿದ್ದ ಧ್ರುವಂತ್ ಸೀಕ್ರೆಟ್ ರೂಮಿಗೂ ಹೋಗಿದ್ದರು. ಅಲ್ಲೂ ರಕ್ಷಿತಾ ಶೆಟ್ಟಿ ಜೊತೆ ಅವರ ಜಗಳ ಸಿಕ್ಕಾಪಟ್ಟೆ ಸದ್ದು ಮಾಡಿತ್ತು.

ಬಿಗ್ ಬಾಸ್ ಮನೆಯಲ್ಲಿ ತನ್ನ ಉದ್ದ ಕೂದಲನ್ನು ಜುಟ್ಟು ಕಟ್ಟಿಕೊಂಡು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದ ಧ್ರುವಂತ್, ಇದೀಗ ಜುಟ್ಟಿಗೆ ಕತ್ತರಿ ಹಾಕಿಸಿಕೊಂಡಿದ್ದಾರೆ. ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಕಣ್ಣು ಬಣ್ಣದ ಥಾರ್‌ನಲ್ಲಿ ಬಂದಿಳಿದ ಧ್ರುವಂತ್, ಅಭಿಮಾನಿಗಳನ್ನು ಭೇಟಿಯಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಬಳಿಕ ಸೆಲೂನ್‌ಗೆ ಹೋದ ಅವರು ಕೂದಲು ಕತ್ತರಿಸಿಕೊಂಡಿದ್ದಾರೆ. ಸ್ಟೈಲಿಷ್ ಹೇರ್ ಸ್ಟೈಲ್ ಮಾಡಿಕೊಂಡು ಡಿಫರೆಂಟ್ ಲುಕ್‌ನಲ್ಲಿ ಕಂಗೊಳಿಸಿದ್ದಾರೆ. ಅಂತ್ಯ ಅಲ್ಲ….ಇದು ಹೊಸ ಆರಂಭ ಎಂಬುದಾಗಿ ಟ್ಯಾಗ್ ಲೈನ್‌ನೊಂದಿಗೆ ವೀಡಿಯೋ ಹಂಚಿಕೊಂಡಿದ್ದು, ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ : ‘ಅಶ್ವಿನಿ ಗೌಡಗೆ ಕನ್ನಡ ಬರೆಯೋಕೆ ಬರಲ್ಲ’ ಎಂಬ ಟೀಕೆಗೆ ಸ್ಪಷ್ಟೀಕರಣ ಕೊಟ್ಟ ಕರವೇ ನಾರಾಯಣ ಗೌಡ!

ಅಂದಹಾಗೆ, ಇಂದು(ಜ.17) ಬಿಗ್ ಬಾಸ್ ಪ್ರಿ ಫಿನಾಲೆ ನಡೆಯಲಿದೆ. ನಾಳೆ(ಜ.18) ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ,ರಘು, ಧನುಷ್, ಅಶ್ವಿನಿ ಗೌಡರಲ್ಲಿ ಯಾರು ಬಿಗ್ ಬಾಸ್ ಟ್ರೋಫಿ ಗೆಲ್ತಾರೆ ಅನ್ನೋದು ಸದ್ಯದ ಕುತೂಹಲ.

Continue Reading

DAKSHINA KANNADA

ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಭೇಟಿ; ಮಗನಿಗಾಗಿ ಪ್ರಾರ್ಥನೆ

Published

on

ಉಳ್ಳಾಲ : ಕರಾವಳಿಯ ಕಾರಣಿಕ ಕ್ಷೇತ್ರ ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಶುಕ್ರವಾರ(ಜ.17) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳೂರಿಗೆ ಯಾರು ಬಂದರು ಕೊರಗಜ್ಜನ ಕ್ಷೇತ್ರಕ್ಕೆ ಬಂದೇ ಬರ್ತಾರೆ. ಯಾರೇ ಬಂದರೂ ಕೊರಗಜ್ಜ ಅವರ ಬಯಕೆಗಳನ್ನು ಈಡೇರಿಸುತ್ತಾರೆ. ನನ್ನ ಮಗ, ಮಗಳು, ಅಳಿಯ ಎಲ್ಲರೂ ಇಲ್ಲಿಗೆ ಬಂದಿದ್ದಾರೆ. ನನಗೂ ಇಲ್ಲಿಗೆ ಬರಲು ಬಹಳ ಆಸೆ ಇತ್ತು ಅದು ಇಂದು ನೆರವೇರಿದೆ. ಪುತ್ರ ಅಹಾನ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಬಾರ್ಡರ್ -2 ಚಿತ್ರ ಬಿಡುಗಡೆಯಾಗುತ್ತಿದೆ. ಅದರ ಯಶಸ್ಸಿಗಾಗಿ ಆಶೀರ್ವಾದ ಬೇಡಲು ಇಲ್ಲಿಗೆ ಬಂದಿದ್ದೇನೆ.

ತುಳು ಭಾಷೆ, ಸಂಸ್ಕೃತಿಯನ್ನು ಜಗತ್ತಿಗೆ ಪಸರಿಸುವ ಉದ್ದೇಶದಿಂದ ಈಗಾಗಲೇ ‘ಜೈ’ ತುಳು  ಸಿನಿಮಾದಲ್ಲಿ ನಟಿಸಿದ್ದೇನೆ. ತುಳು,ಕನ್ನಡ ಸಿನೆಮಾದಲ್ಲಿ ಸದ್ಯಕ್ಕೆ ಬೇರೆ ಯೋಜನೆಗಳಿಲ್ಲ ಎಂದರು.

ಇದನ್ನೂ ಓದಿ : ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಧಮಾಕಾ: ಒಂದೇ ದಿನ ಎರಡು ಸಿನಿಮಾಗಳು ತೆರೆಗೆ!

ಕುತ್ತಾರು ಕೊರಗತನಿಯ ಆದಿಸ್ಥಳ ಕ್ಷೇತ್ರದ ಪರವಾಗಿ ನಟ ಸುನೀಲ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಮುಂಬಯಿ ಉದ್ಯಮಿ ವಿವೇಕ್ ಶೆಟ್ಟಿ ಬೊಲ್ಯಗುತ್ತು,ಕುತ್ತಾರು ಕೊರಗತನಿಯ ಆದಿಕ್ಷೇತ್ರದ ಮಹಾಬಲ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಶ್ರೀರಾಮ್ ರೈ ಮೊದಲಾದವರು ಉಪಸ್ಥಿತರಿದ್ದರು.

Continue Reading

FILM

ರಚಿತಾ ರಾಮ್ ಅಭಿಮಾನಿಗಳಿಗೆ ಡಬಲ್ ಧಮಾಕಾ: ಒಂದೇ ದಿನ ಎರಡು ಸಿನಿಮಾಗಳು ತೆರೆಗೆ!

Published

on

ಹೀರೋ/ಹೀರೋಯಿನ್‌ಗಳ ಸಿನಿಮಾಗಳು ಸಾಮಾನ್ಯವಾಗಿ ಒಂದೇ ದಿನ ಬಿಡುಗಡೆ ಆಗೊದು ಕಡಿಮೆ. ಆದರೆ, ಕೆಲವೊಮ್ಮೆ ಈ ರೀತಿ ಆಗಿದ್ದು ಇದೆ. ಇದೀಗ ಜನವರಿ 23ರಂದು ಸ್ಯಾಂಡಲ್‌ವುಡ್‌ ‘ಡಿಂಪಲ್‌ ಕ್ವೀನ್‌’ ರಚಿತಾ ರಾಮ್‌ ನಟಿಸಿರುವ ಎರಡು ಸಿನಿಮಾಗಳು ರಿಲೀಸ್‌ ಆಗುತ್ತಿದೆ. ಒಂದರಲ್ಲಿ ರಚಿತಾ ಸಖತ್‌ ರಗಡ್‌ ಆಗಿ ಕಾಣಿಸಿಕೊಂಡರೆ, ಮತ್ತೊಂದರಲ್ಲಿ ಹಳ್ಳಿ ಹುಡುಗಿಯಾಗಿ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಒಂದೇ ದಿನ ಎರಡು ಭಿನ್ನ ಪಾತ್ರಗಳಲ್ಲಿ ರಚಿತಾ ರಾಮ್ ಅಬ್ಬರಿಸಲು ಸಜ್ಜಾಗಿದ್ದಾರೆ.


ರಚಿತಾ ರಾಮ್‌, ಅನಿಲ್‌ ಕುಮಾರ್ ನಿರ್ದೇಶನದ ‘ಕಲ್ಟ್‌’ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಜನವರಿ 16ರಂದು ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಿದ್ದು, ಜನರ ಮನಸ್ಸನ್ನು ಸೆಳೆದಿದೆ. ಮಲೈಕಾ ಮಸುಪಾಲ್ ಕೂಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಈ ಸಿನಿಮಾ ಜನವರಿ 23ರಂದು ತೆರೆಕಾಣಲಿದೆ.

ಈ ಸಿನಿಮಾದಲ್ಲಿ ರಚಿತಾ ರಾಮ್‌ ಎರಡು ಶೇಡ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ರೇಲರ್‌ನಲ್ಲಿ ಒಂದು ಶೇಡ್‌ ಮಾತ್ರ ತೋರಿಸಲಾಗಿದೆ. ಇನ್ನೊಂದು ಶೇಡ್‌ನನ್ನು ಸಿನಿಮಾದಲ್ಲಿ ನೋಡಬೇಕು ಎಂಬುದು ರಚಿತಾ ರಾಮ್‌ ಅಭಿಪ್ರಾಯ.

ಇದನ್ನೂ ಓದಿ: ಪೀಕಬೂ ಮೂಲಕ ಅಮೂಲ್ಯ ಕಂಬ್ಯಾಕ್; ಹೀರೋ ಯಾರು ಗೊತ್ತಾ!?

ದುನಿಯಾ ವಿಜಯ್, ರಾಜ್‌ ಬಿ ಶೆಟ್ಟಿ ಮೊದಲಾದವರು ಅಭಿನಯಿಸಿರುವ, ಜಡೇಶ್​ ಕುಮಾರ್ ಹಂಪಿ ನಿರ್ದೇಶನದ ‘ಲ್ಯಾಡ್‌ಲಾರ್ಡ್‌’ ಸಿನಿಮಾವು ಕೂಡ ಜನವರಿ 23ರಂದೇ ಬಿಡುಗಡೆಗೊಳ್ಳಲಿದೆ. ಇದು ಅಳಿದು ಉಳಿದವರ ಕಥೆ ಎನ್ನಲಾಗಿದೆ. ಹೇಮಂತ್‌ ಗೌಡ ಕೆಎಸ್‌ ಸಂಗೀತ ಸಂಯೋಜನೆ ಮಾಡಿದ್ದು, ಇದರ ಟಿಸರ್‌ ಜನರ ಗಮನ ಸೆಳೆದಿದೆ. ದೊಡ್ಡ ಮಟ್ಟದಲ್ಲಿ ಸತ್ಯ ಪ್ರಕಾಶ್‌ ನಿರ್ಮಾಣದ ಈ ಸಿನಿಮಾ ಜನರಲ್ಲಿ ನಿರೀಕ್ಷೆಯನ್ನು ಹುಟ್ಟುಹಾಕಿದೆ. ರಚಿತಾ ರಾಮ್‌ ನಟೆನೆಯ ಎರಡು ಸಿನಿಮಾಗಳು ಒಂದೇ ದಿನ ತೆರೆ ಕಾಣುತ್ತಿದೆ ಎಂಬುದೇ ವಿಶೇಷ.

Continue Reading
Advertisement

Trending

Copyright © 2025 Namma Kudla News

You cannot copy content of this page