Connect with us

FILM

ಮಂಥರೆಯಾಗಿ ಮೊದಲ ಬಾರಿ ಯಕ್ಷಗಾನದಲ್ಲಿ ಮಿಂಚಿದ ನಟಿ ಉಮಾಶ್ರೀ

Published

on

ಮಂಗಳೂರು/ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ (ಜ.17) ರಾತ್ರಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀಯವರು ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನದಲ್ಲಿ ಮಂಥರೆ ಪಾತ್ರದಲ್ಲಿ ಅಭಿನಯಿಸಿದರು.

ಯಕ್ಷಗಾನ ರಂಗದಲ್ಲಿ ಹಾಸ್ಯಗಾರರು ನಿರ್ವಹಿಸುವ ಪಾತ್ರಗಳಲ್ಲಿ ಒಂದು ಎಂದೇ ಪರಿಗಣಿಸಲ್ಪಟ್ಟ ಮಂಥರೆಯ ವೇಷದೊಂದಿಗೆ ಮೊದಲ ಬಾರಿಗೆ ಯಕ್ಷರಂಗದಲ್ಲಿ ಉಮಾಶ್ರೀಯವರು ಪಾತ್ರ ನಿರ್ವಹಿಸಿದರು.
ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗ ನಡೆಯಿತು.

ಪೆರ್ಡೂರು ಮೇಳದ ಪ್ರಧಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಪದ್ಯಕ್ಕೆ ಹೆಜ್ಜೆ ಹಾಕುತ್ತಾ ತನ್ನ ಅಭಿನಯದ ಚಾಕಚಕ್ಯತೆಯನ್ನು ತೋರುತ್ತಾ ರಂಗಸ್ಥಳವೇರಿದ ನಟಿಗೆ ಕೂತುಹಲಕಾರಿಯಾಗಿ ಕಾಯುತ್ತಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಕೈಕೇಯಿ ಪಾತ್ರದಲ್ಲಿ ಖ್ಯಾತ ಸ್ತ್ರೀ ಪಾತ್ರಧಾರಿ ಯಲಗುಪ್ಪ ಸುಬ್ರಮಣ್ಯ ಹೆಗಡೆ ಉಮಾಶ್ರೀಯವರೊಂದಿಗೆ ಸಂಭಾಷಣೆಯಲ್ಲಿ ಗಮನ ಸೆಳೆದರು.

ಇದನ್ನೂ ಓದಿ: ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಮಂಥರೆ ಪಾತ್ರವನ್ನು ಉಮಾಶ್ರೀ ಅವರು ತುಂಬಾನೇ ಚೆನ್ನಾಗಿ ಮಾಡಿದ್ದಾರೆ. ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರೋ ಉಮಾಶ್ರೀ ಅವರು, ಈ ಒಂದು ಮಂಥರೆ ಪಾತ್ರದ ಮೂಲಕವೇ ಹೊನ್ನಾವರದ ಜನರ ಹೃದಯ ಗೆದ್ದಿದ್ದಾರೆ ಅಂತಲೂ ಹೇಳಬಹುದು.

ಉಮಾಶ್ರೀ ಮಂಥರೆ ಪಾತ್ರ ಮಾಡಲು ಕಾರಣ ಏನು?
ಉಮಾಶ್ರೀ ಅವರಿಗೆ ಮಂಥರೆ ಪಾತ್ರ ಹೊಸದೇ ಆಗಿದೆ. ಇಲ್ಲಿವರೆಗೂ ಈ ರೀತಿಯ ಪಾತ್ರ ಮಾಡಿದ್ದೇ ಇಲ್ಲ. ಆದರೆ, ಈ ಒಂದು ಪಾತ್ರ ಮಾಡೋಕೆ ಕಾರಣವೂ ಇದೆ. ಆ ಕಾರಣದ ಹೆಸರು ರಾಮಚಂದ್ರ ಚಿಟ್ಟಾಣಿ ಅಂತಲೇ ಹೇಳಬೇಕಾಗುತ್ತದೆ.

ಯಕ್ಷಗಾನದಲ್ಲಿ ದಿಗ್ಗಜ ಕಲಾವಿದರ ಸಾಲಿನಲ್ಲಿ ರಾಮಚಂದ್ರ ಚಿಟ್ಟಾಣಿಯವರೂ ಒಬ್ಬರು. ದಿವಂಗತ ರಾಮಚಂದ್ರ ಚಿಟ್ಟಾಣಿಯವರಿಗೆ ಉಮಾಶ್ರೀ ಯಕ್ಷಗಾನದಲ್ಲಿ ಪಾತ್ರ ಮಾಡಬೇಕೆಂದಿತ್ತಂತೆ. ಮಂಥರೆ ಪಾತ್ರ ಮಾಡುವಂತೆ ಕೇಳಿದಾಗ ಉಮಾಶ್ರೀ ನನಗೆ ಯಕ್ಷಗಾನದಲ್ಲಿ ಅನುಭವವಿಲ್ಲ. ಹೀಗಾಗಿ ಹೇಗೆ ಮಾಡಲಿ ಎಂದು ಹಿಂದೇಟು ಹಾಕಿದ್ದರಂತೆ.

ಇತ್ತೀಚೆಗೆ ಅವರ ಮಗ ಸುಬ್ರಹ್ಮಣ್ಯ ಚಿಟ್ಟಾಣಿಯವರು ಮಂಥರೆಯ ಪಾತ್ರ ಮಾಡಲು ಕೋರಿಕೊಂಡಾಗ ರಾಮಚಂದ್ರ ಚಿಟ್ಟಾಣಿಯವರ ಮೇಲಿನ ಗೌರವದಿಂದ ಪಾತ್ರ ಮಾಡಲು ಒಪ್ಪಿಕೊಂಡರಂತೆ. ಈ ಮೂಲಕ ಅವರ ಆತ್ಮಕ್ಕೆ ತೃಪ್ತಿ ಸಿಗಲಿ ಎಂದು ಪಾತ್ರ ಮಾಡಲು ಒಪ್ಪಿಕೊಂಡೆ ಎಂದಿದ್ದಾರೆ.

ನಿನ್ನೆ ರಾತ್ರಿ ನಡೆದ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯ ಪಾತ್ರದಲ್ಲಿ ಮಿಂಚಿದ ಉಮಾಶ್ರೀ ತಮ್ಮೊಳಗಿನ ಮತ್ತೊಂದು ಪ್ರತಿಭೆಯ ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದ್ದಾರೆ.

FILM

ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ?

Published

on

ಮಂಗಳೂರು/ಬೆಂಗಳೂರು : ಪ್ರತಿ ವರ್ಷ ದರ್ಶನ್ ಅವರ ಜನ್ಮದಿನ ಅದ್ದೂರಿಯಾಗಿರುತ್ತದೆ. ಆದರೆ ಈ ವರ್ಷ ಬೆನ್ನು ನೋವಿನ ಕಾರಣದಿಂದ ಅವರು ಫ್ಯಾನ್ಸ್ ಜೊತೆ ಬರ್ತ್​ಡೇ ಸೆಲೆಬ್ರೇಟ್ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಶನಿವಾರ (ಫೆ.8) ಅವರು ವಿಡಿಯೋ ಮೂಲಕ ಮಾಹಿತಿ ನೀಡಿದ್ದರು.

ಇದರಿಂದ ದರ್ಶನ್ ಅಭಿಮಾನಿಗಳು ನಿರಾಶೆಗೊಂಡಿದ್ದರು. ಆದರೆ ಫ್ಯಾನ್ಸ್ ನಿರಾಶರಾಗುವ ಅವಶ್ಯಕತೆ ಇಲ್ಲ. ಯಾಕೆಂದರೆ, ಅವರ ಜನ್ಮದಿನದಂದೇ ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ. ಈ ಬಗ್ಗೆ ದರ್ಶನ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಹುಟ್ಟುಹಬ್ಬದ ದಿನವೇ (ಫೆ.16) ‘ಡೆವಿಲ್’ ಸಿನಿಮಾದ ಟೀಸರ್ ಬಿಡುಗಡೆ ಆಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ನ್ಯೂಸ್ ಕೇಳಿ ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಬಹುನಿರೀಕ್ಷಿತ ‘ಡೆವಿಲ್’ ಚಿತ್ರದ ಟೀಸರ್ ನೋಡಲು ದರ್ಶನ್ ಅಭಿಮಾನಿಗಳು ಕಾಯುತ್ತಿದ್ದಾರೆ.

ದರ್ಶನ್ ಅವರು ‘ಡೆವಿಲ್’ ಸಿನಿಮಾದ ಕೆಲಸ ಶುರು ಮಾಡಿದ್ದರು. ‘ಮಿಲನ’ ಪ್ರಕಾಶ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2024ರಲ್ಲೇ ಈ ಸಿನಿಮಾ ತೆರೆಕಾಣಬೇಕಿತ್ತು. ಆದರೆ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರಿಂದ ಶೂಟಿಂಗ್ ನಿಂತಿತ್ತು.

ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್​ ಆಗುವುದಕ್ಕೂ ಮುನ್ನ ‘ಡೆವಿಲ್’ ಸಿನಿಮಾದ ಶೂಟಿಂಗ್​​ನಲ್ಲಿ ಪಾಲ್ಗೊಂಡಿದ್ದರು. ಒಂದು ಟೀಸರ್ ಕೂಡ ಬಿಡುಗಡೆ ಮಾಡಲಾಗಿತ್ತು. ದರ್ಶನ್ ಜಾಮೀಮಿನ ಮೇಲೆ ಹೊರಗೆ ಬಂದ ಬಳಿಕ ಚಿತ್ರದ ಕೆಲಸಗಳಿಗೆ ಮತ್ತೆ ಚಾಲನೆ  ಸಿಕ್ಕಿದೆ.

ಇದನ್ನೂ ಓದಿ: ಅಭಿಮಾನಿಗಳಿಗೆ ನಿರಾಸೆ…ಗೆಳತಿಯ ಆಸೆ ಈಡೇರಿಸುತ್ತೇನೆ ಎಂದ ಡಿಬಾಸ್

ಫೆಬ್ರವರಿ 22 ರ ನಂತರ ಚಿತ್ರೀಕರಣದಲ್ಲಿ ದರ್ಶನ್ ಪಾಲ್ಗೊಳ್ಳಲಿದ್ದಾರೆ. ಡೆವಿಲ್ ಚಿತ್ರವನ್ನು ಮಿಲಿನ್ ಪ್ರಕಾಶ್ ನಿರ್ದೇಶಿಸುತ್ತಿದ್ದು, ರಚನಾ ರೈ ದರ್ಶನ್ ಜೊತೆಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ದರ್ಶನ್ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳದಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದರೆ, ಅರ್ಧಕ್ಕೆ ನಿಂತಿದ್ದ ಬ್ಲಾಕ್ ಬ್ಲಸ್ಟರ್ ಸಿನಿಮಾ ಮತ್ತೆ ವೇಗ ಪಡೆದು ಫೆಬ್ರವರಿ 16ರಂದು ಟೀಸರ್ ಬಿಡುಗಡೆ ಮಾಡುತ್ತಿರುವುದು ದರ್ಶನ್ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

 

 

Continue Reading

BIG BOSS

ಮಾನ್ಸಿ ಜೋಶಿಯ ಅರಶಿಣ ಶಾಸ್ತ್ರದಲ್ಲಿ ಮಿಂಚಿದ ಮೋಕ್ಷಿತಾ ಪೈ

Published

on

ಪಾರು ದಾರಾವಾಹಿಯ ನಟಿ ಮೋಕ್ಷಿತಾ ಪೈ ಬಿಗ್‌ಬಾಸ್ ಸೀಸನ್ 11 ರಲ್ಲಿ ತಮ್ಮ ನಡೆ-ನುಡಿ, ಆಟದ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದರು. ಬಿಗ್‌ಬಾಸ್‌ನಿಂದ ಬಂದ ಬಳಿಕ ಇದೀಗ ತನ್ನ ಸ್ನೇಹಿತೆ ಮಾನ್ಸಿ ಜೋಶಿಯ ಅರಶಿಣ ಶಾಸ್ತ್ರದಲ್ಲಿ ಮಿಂಚಿದ್ದಾರೆ.

ಓಪನ್ ಹೇರ್ ಬಿಟ್ಕೊಂಡು, ಕಟ್ಟಿಗೆ ಗ್ಲಾಸ್ ಹಾಕೊಂಡು, ಹಳದಿ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಡಿಫ್ರೆಂಟ್ ಲುಕ್‌ನಲ್ಲಿ ಬಂದಂತಹ ಮೋಕ್ಷಿತಾಳನ್ನು ನೋಡಿ ಅಲ್ಲಿಯ ಅತಿಥಿಗಳು ಖುಷಿ ಪಟ್ಟಿದ್ದಾರೆ.

ಇನ್ನು ಮಾನ್ಸಿ ಹಾಗೂ ಮೋಕ್ಷಿತಾ ಪಾರು ಸೀರಿಯಲ್‌ನಲ್ಲಿ ನಟಿಸುತ್ತಿದ್ದರು. ಅಂದಿನಿಂದ ಇಂದಿನವರೆಗೆ ಇವರ ನಡುವಿನ ಗೆಳೆತನ ಮುಂದುವರಿದಿದೆ. ರಾಘವ್ ಎಂಬುವವನನ್ನು ಮಾನ್ಸಿ ವಿವಾಹವಾಗಲಿದ್ದು, ಫೆಬ್ರವರಿ 16 ರಂದು ಈ ಜೋಡೆಯ ಕಲ್ಯಾಣ ನಡೆಯಲಿದೆ.

ಬಿಗ್‌ಬಾಸ್ ಕನ್ನಡ ಸೀಸನ್ 11 ರಲ್ಲಿ ಸ್ಫರ್ಧಿಯಾಗಿ ಭಾಗವಹಿಸಿ, ಫಿನಾಲೆ ಸುತ್ತಿನವರೆಗೂ ಆಗಮಿಸಿದ ಮೋಕ್ಷಿತಾ, ಮೂರನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಇವರಿಗೆ ಅಪಾರ ಅಭಿಮಾನಿಗಳೂ ಇದ್ದಾರೆ.

Continue Reading

FILM

‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ಗಾಗಿ ‘ಮೀರಾ’ ಚಿತ್ರ ಬಿಡುಗಡೆ ಮುಂದಕ್ಕೆ!

Published

on

ಮಂಗಳೂರು:  ಬಹುನಿರೀಕ್ಷಿತ ಮೀರಾ ತುಳು ಸಿನಿಮಾದ ಬಿಡುಗಡೆ ದಿನಾಂಕ ಈ ಹಿಂದೆ ಫೆಬ್ರವರಿ 21ಕ್ಕೆ ಘೋಷಿಸಲಾಗಿತ್ತು.  ಇದೀಗ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವ ಕಾರಣದಿಂದ  ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ. ಹಾಗಾಗಿ ಮೀರಾ ಚಿತ್ರ  ಮಾರ್ಚ್ 21ಕ್ಕೆ ಮೀರಾ ತೆರೆಗೆ ಬರಲಿದೆ.

ತುಳು ಸಿನೆಮಾಗಳಿಗೆ ಥಿಯೇಟರ್ ಕೂಡಾ ಕಡಿಮೆ ಇರುವ ಕಾರಣ ಪೈಪೋಟಿಯಿಂದ ಎಲ್ಲರಿಗೂ ನಷ್ಟ ಆಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಮಾಡಲಾಗಿದೆ.

ಧನ್ಯವಾದ ತಿಳಿಸಿದ  ಚಿತ್ರತಂಡ :

ಸುದ್ದಿಗೋಷ್ಟಿ ನಡೆಸಿ ಎರಡು ಚಿತ್ರತಂಡ ಈ ಬಗ್ಗೆ ಮಾಹಿತಿ ನೀಡಿತು.  ನಟ ವಿನೀತ್ ಕುಮಾರ್ ಮಾತನಾಡಿ,  ತುಳು ಸಿನಿಮಾಗಳಿಗೆ ಸೀಮಿತ ಮಾರುಕಟ್ಟೆ ಇದೆ. ಈ ಕಾರಣದಿಂದ ಸಿನಿಮಾಗಳ ಮಧ್ಯೆ ಸ್ಪರ್ಧೆ ಬೇಡ ಎಂಬ ಕಾರಣಕ್ಕೆ ಲಂಚುಲಾಲ್ ಮತ್ತವರ ತಂಡ ಈ ನಿರ್ಧಾರ ಮಾಡಿದೆ. ಇದಕ್ಕಾಗಿ ಮೀರಾ ಚಿತ್ರತಂಡಕ್ಕೆ ಅಭಿನಂದನೆಗಳು. ನಮ್ಮದು ಬಿಗ್ ಬಜೆಟ್ ಸಿನಿಮಾವಾಗಿರುವ ಕಾರಣಕ್ಕೆ ಬಹಳಷ್ಟು ಕಷ್ಟಪಟ್ಟು ಸಿನಿಮಾ ಬಿಡುಗಡೆ ಮಾಡಿದ್ದೇವೆ. ತುಳುವರು ಎಲ್ಲರೂ ಸಿನಿಮಾ ನೋಡಿ ಎರಡೂ ಸಿನಿಮಾಗಳಿಗೆ ನಿಮ್ಮ ಬೆಂಬಲ ಇರಲಿ ಎಂದರು.

ರಾಹುಲ್ ಅಮೀನ್ ಮಾತನಾಡಿ, ಈಗ ಕಲಾವಿದರ ಸಂಘ ಒಬ್ಬ ಒಳ್ಳೆಯ ಅಧ್ಯಕ್ಷರ ಕೈಯಲ್ಲಿದೆ ಅನ್ನುವುದು ನಮಗೆ ಹೆಮ್ಮೆ ಉಂಟುಮಾಡಿದೆ. ಈ ಹಿಂದೆ ಒಂದೇ ದಿನ ಎರಡು ಸಿನಿಮಾಗಳು ಬಿಡುಗಡೆಯಾದ ಉದಾಹರಣೆ ನಮ್ಮಲ್ಲಿತ್ತು. ಹೀಗಿರುವಾಗ ಸಿನಿಮಾ ಬಿಡುಗಡೆಗೆ ಮೂರು ವಾರ ಇದ್ದರೂ  ನಮ್ಮ ಸಿನಿಮಾಕ್ಕೆ ಬೇಕಾಗಿ ತಮ್ಮ ಸಿನಿಮಾ ಬಿಡುಗಡೆಯನ್ನೇ ಮುಂದಕ್ಕೆ ಹಾಕಿರುವುದು ಶ್ಲಾಘನೀಯ. ಇದಕ್ಕಾಗಿ ಲಂಚುಲಾಲ್ ಅವರಿಗೆ ಧನ್ಯವಾದಗಳು ಎಂದರು.

ಇದನ್ನೂ ಓದಿ : ಅಭಿಮಾನಿಗಳಿಗೆ ನಿರಾಸೆ…ಗೆಳತಿಯ ಆಸೆ ಈಡೇರಿಸುತ್ತೇನೆ ಎಂದ ಡಿಬಾಸ್

ಪತ್ರಿಕಾಗೋಷ್ಟಿಯಲ್ಲಿ ಲಂಚುಲಾಲ್, ಪ್ರಕಾಶ್ ಧರ್ಮನಗರ,  ಅಶ್ವಥ್, ಸುಹಾನ್ ಪ್ರಸಾದ್, ಯತೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page