Connect with us

DAKSHINA KANNADA

ಮಂಗ್ಳೂರಲ್ಲಿ ಖೋಟಾ ನೋಟು ಚಲಾವಣೆ ಆರೋಪ-ಇಬ್ಬರು ಅರೆಸ್ಟ್…

Published

on

ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.


ಈ ಕುರಿತು ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ ನಿವಾಸಿ ನಿಝಾಮುದ್ದೀನ್ ಯಾನೆ ನಿಝಾಮ್ (32) ಹಾಗು ಜಪ್ಪುವಿನ‌ ನಿವಾಸಿ ರಝೀಮ್ ಯಾನೆ‌ ರಾಫಿ (31) ಎಂಬವರನ್ನು ಬಂಧಿಸಲಾಗಿದೆ.

ಇವರಿಬ್ಬರು ಸೋಮವಾರ ನಗರದ ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ.


ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 4.50 ಲಕ್ಷ ರೂಪಾಯಿ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ.

ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಖೋಟಾ ನೋಟುಗಳನ್ನು ಪಡೆದಿರುವ ಆರೋಪಿಗಳು ನಗರದಲ್ಲಿ ಸ್ಕೂಟರ್‌ವೊಂದನ್ನು ಕದ್ದು ಅದರಲ್ಲಿ ಹಣ ಚಲಾವಣೆಗೆ ಯತ್ನಿಸುತ್ತಿದ್ದರು ಎಂದು ತಿಳಿಸಿದರು.

DAKSHINA KANNADA

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ; ಕಾರಣ ನಿಗೂಢ

Published

on

ಸುಳ್ಯ : ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಕಾರಣಗಳು ನಿಖರವಾಗಿರುವುದಿಲ್ಲ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲೂ ಅಂತಹದ್ದೇ ಘಟನೆಯೊಂದು ನಡೆದಿದೆ.

ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಡಬ : ಹಾಸ್ಟೆಲ್ ಮಕ್ಕಳ ಆಹಾರದಲ್ಲಿ ಹುಳ ಪತ್ತೆ

Published

on

ಕಡಬ : ಕಡಬ ತಾಲೂಕಿನಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಮಂಗಳೂರು ಲೋಕಾಯುಕ್ತ ಪೊಲೀಸರ ತಂಡವು ಇಲ್ಲಿನ ಸರಕಾರಿ ಹಾಸ್ಟೆಲಿಗೆ ದಿಢೀರ್ ಭೇಟಿ ನೀಡಿದ್ದು,ತಪಾಸಣೆ ನಡೆಸಿದೆ.

ಕಡಬದ ಸರಕಾರಿ ಕಾಲೇಜು ಪಕ್ಕದಲ್ಲಿರುವ ಬಾಲಕರ ವಸತಿಗೃಹದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಈ ಹಿಂದಿನಿಂದಲೂ ಆರೋಪಗಳು ಕೇಳಿಬರುತ್ತಿದ್ದು,ಮಕ್ಕಳ ಪೊಷಕರಾಗಲೀ ಇತರ ಯಾರೊಬ್ಬರೂ ಈ ಬಗ್ಗೆ ದೂರು ನೀಡುವುದಾಗಲೀ ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡುವುದಾಗಲೀ ಮಾಡುತ್ತಿರಲಿಲ್ಲ. ದ.ಕ. ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಇಲ್ಲಿಗಾಗಮಿಸಿ ತಪಾಸಣೆ ನಡೆಸಿದಾಗ ಅವ್ಯವಸ್ಥೆ ಅಧಿಕಾರಿಗಳ ಗಮನಕ್ಕೆ ಬಂದಿದೆ.

ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಮತ್ತು ಡಿವೈಎಸ್‌ಪಿ ಗಾನಾ ಪಿ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿಗಳು ವಸತಿಗೃಹದಲ್ಲಿ ತಪಾಸಣೆ ನಡೆಸಿದ್ದು ಕಳಪೆ ಆಹಾರ ಪೂರೈಕೆ, ಸಿಸಿ ಕ್ಯಾಮರಾ ಸರಿಯಿಲ್ಲದ ವಿಚಾರ, ಮ್ಯಾಟ್ ಮಾರಾಟ ಆರೋಪ, ಸುರಕ್ಷತಾ ಸಿಬ್ಬಂದಿ ವಾರ್ಡನ್ ಇಲ್ಲದಿರುವುದು ಸೇರಿದಂತೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ಮಕ್ಕಳಲ್ಲಿ ವಸತಿಗೃಹದ ಅವ್ಯವಸ್ಥೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಾರ್ಡನ್ ಸೇರಿದಂತೆ ಸಿಬ್ಬಂದಿಗಳು ಇಲ್ಲಿಗೆ ಬಾರದಿರುವ ಬಗ್ಗೆ ಮತ್ತು ಇಲ್ಲಿಗೆ ಬಂದಿರುವ ರಬ್ಬರ್ ಮ್ಯಾಟ್‌ಗಳಲ್ಲಿ ಸುಮಾರು 110 ಮ್ಯಾಟ್‌ಗಳು ಮಾರಾಟ ಮಾಡಿರುವ ಬಗ್ಗೆ ಮತ್ತು ಆಹಾರದ ಗುಣಮಟ್ಟದ ಬಗ್ಗೆ ಮಕ್ಕಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಡುಗೆ ಸಾಮಾಗ್ರಿಗಳನ್ನು ಸಂಗ್ರಹಿಸಿದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಆಹಾರ ಪದಾರ್ಥಗಳಲ್ಲಿ ಹುಳಗಳಿರುವುದನ್ನು ನೋಡಿದರು. ಹಾಜರಾತಿ ಪುಸ್ತಕದಲ್ಲಿ ಮಕ್ಕಳು ಮತ್ತು ಅಧಿಕಾರಿಗಳ ಸಹಿ ಇಲ್ಲದಿರುವ ಬಗ್ಗೆ ಮನಗಂಡರು.ಈ ಬಗ್ಗೆ ವರದಿ ತಯಾರಿಸಿ ಸರಕಾರಕ್ಕೆ ಸಲ್ಲಿಸುವುದಾಗಿ ಲೋಕಾಯುಕ್ತ ಎಸ್ಪಿ ಹೇಳಿದ್ದಾರೆ.

Continue Reading

DAKSHINA KANNADA

ಬಟ್ಟೆ ಅಂಗಡಿಯಲ್ಲಿನ ದರೋಡೆ ಪ್ರಕರಣಕ್ಕೆ ಟ್ವಿಸ್ಟ್; ಅಸಲಿ ಕಥೆನೇ ಬೇರೆ!

Published

on

ವಿಟ್ಲ: ಮಾ.18ರ ಮಧ್ಯಾಹ್ನ ವಿಟ್ಲದ ಬಟ್ಟೆ ಅಂಗಡಿಯಲ್ಲಿ ದರೋಡೆ ನಡೆದಿದೆ ಎಂಬ ರೀತಿಯಲ್ಲಿ ಚಿತ್ರಿಸಿ ಸಿಸಿಟಿವಿಯ ತುಣುಕುಗಳನ್ನು ಹಾಕಿ ವೈರಲ್ ಮಾಡಲಾಗಿತ್ತು. ಆದರೆ ಅಸಲಿಗೆ ನಡೆದದ್ದೇ ಬೇರೆ.


ಬಟ್ಟೆಯಂಗಡಿಯಾತ ವಿವಿಧ ವಿನ್ಯಾಸದ ಬಟ್ಟೆಗಳನ್ನು ತರಿಸಿಕೊಂಡು ಹಣ ನೀಡದೆ ಸತಾಯಿಸಿದ ಹಿನ್ನೆಲೆಯಲ್ಲಿ ವಿತರಣೆ ಮಾಡಿದಾತ ತಾನು ನೀಡಿದ್ದ ಬಟ್ಟೆಗಳನ್ನು ಅಂಗಡಿಯಿಂದ ಕೊಂಡೊಯ್ದಿದ್ದರು.

ಬಟ್ಟೆಗಳನ್ನು ಅಂಗಡಿಗೆ ವಿತರಣೆ ಮಾಡಿ, ಅದರ ಹಣವನ್ನು ತಿಂಗಳ ಕೊನೆಗೆ ಪಡೆದುಕೊಂಡು ಹೋಗಲಾಗುತ್ತಿತ್ತು. ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣೆ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊಂಡ ಬಟ್ಟೆ ಅಂಗಡಿಯಲ್ಲಿಯೂ ಇದೇ ಸಂಪ್ರದಾಯ ಚಾಲ್ತಿಯಲ್ಲಿತ್ತು.

ಬಟ್ಟೆ ಅಂಗಡಿ ಮಾಲಕ ಸುಮಾರು ಎರಡು ತಿಂಗಳುಗಳಿಂದ ಬಟ್ಟೆ ವಿತರಣೆ ಮಾಡಿದವನಿಗೆ 5,500 ರೂ. ಬಾಕಿ ಇರಿಸಿಕೊಂಡಿದ್ದ. ಇದರಿಂದ ರೋಸಿ ಹೋದ ವಿತರಕನು ಮಂಗಳವಾರ ಕಾರಿನಲ್ಲಿ ಬಂದು ತಾನು ನೀಡಿದ್ದ ಬಟ್ಟೆಗಳನ್ನು ಅಂಗಡಿಯಿಂದ ಹಿಂಪಡೆದುಕೊಂಡು ತೆರಳಿದ್ದಾನೆ. ಈ ಬಗ್ಗೆ ಎರಡು ಕಡೆಯವರೂ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page