Connect with us

LATEST NEWS

ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ

Published

on

ಮಂಗಳೂರು/ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಸೋಮವಾರ (ಜನವರಿ 20ರಂದು) ಕ್ಯಾಪಿಟಲ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅಮೆರಿಕ ಅಧ್ಯಕ್ಷರ ಪದಗ್ರಹಣವು ಈ ರೀತಿ ಒಳಾಂಗಣದಲ್ಲಿ ಆಗುತ್ತಿರುವುದು 40 ವರ್ಷಗಳಲ್ಲಿ ಇದೇ ಮೊದಲು.

ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಿಂದಾಗಿ ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಸ್ಥಳ ಬದಲಾಗಿದೆ. ಹೊರಾಂಗಣದಲ್ಲಿ ನಡೆಯಬೇಕಿದ್ದ ಪ್ರಮಾಣವಚನ ಕಾರ್ಯಕ್ರಮವು US ಕ್ಯಾಪಿಟಲ್ ಒಳಗೆ ನಡೆಯಲಿದೆ. ಅದಕ್ಕೆ ಕಾರಣ ವಿಪರೀತ ಚಳಿ. 40 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಮೆರಿಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವ್ಯತ್ಯಾಸ ಆಗಿದೆ. ಈ ಸಮಾರಂಭವು ಸಾಂಪ್ರದಾಯಿಕವಾಗಿ ಯುಎಸ್ ಕ್ಯಾಪಿಟಲ್‌ನ ಹೊರಗಿನ ನ್ಯಾಷನಲ್ ಮಾಲ್‌ನಲ್ಲಿ ನಡೆಯುತ್ತಿತ್ತು.

ಇದನ್ನೂ ಓದಿ:WATCH : ಆ ಒಂದು ರೀಲ್ಸ್‌ನಿಂದ ಗಿನ್ನಿಸ್ ದಾಖಲೆ ಬರೆದ ಕೇರಳದ ಯುವಕ

‘ಆರ್ಕ್ಟಿಕ್ ಸ್ಪೋಟದಿಂದಾಗಿ ತೀವ್ರ ಚಳಿಗಾಳಿ ಬೀಸುತ್ತಿದ್ದು, ಜನರು ಪರಿತಪಿಸುತ್ತಿದ್ದಾರೆ. ನಾಗರಿಕರು ಸಂಕಷ್ಟ ಅನುಭವಿಸುವುದನ್ನು ನೋಡಲಾರೆ. ಹಾಗಾಗಿ, ಪ್ರಮಾಣವಚನ, ಪ್ರಾರ್ಥನೆ ಮತ್ತು ಇತರ ಭಾಷಣ ಕಾರ್ಯಕ್ರಮಗಳನ್ನು ಯುಎಸ್ ಕ್ಯಾಪಿಟಲ್‌ಗೆ ಸ್ಥಳಾಂತರಿಸುವಂತೆ ಆದೇಶಿಸಿದ್ದೇನೆ’ ಎಂದು ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್’ನಲ್ಲಿ ಟ್ರಂಪ್ ಹೇಳಿದ್ದಾರೆ.

ಜನವರಿ 20ರಂದು ಟ್ರಂಪ್ ಪ್ರಮಾಣವಚನ ನಡೆಯುವ ಸಮಯಕ್ಕೆ ವಾಷಿಂಗ್ಟನ್‌ನ ತಾಪಮಾನವು-7 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದರೆ, ತಂಪು ಗಾಳಿ ಬೀಸುವುದರಿಂದ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

40 ವರ್ಷಗಳ ಹಿಂದೆ ಇದೇ ರೀತಿ ಆಗಿತ್ತು
ಅಮೆರಿಕದ ಮಾಜಿ ಅಧ್ಯಕ್ಷ ರೊನಾಲ್ಡ್ ರೇಗನ್ ಕೂಡ ಚಳಿಯಿಂದಾಗಿ ಪ್ರಮಾಣ ವಚನ ಸಮಾರಂಭದ ಸ್ಥಳ ಬದಲಾಯಿಸಿದ್ದರು. 1985ರಲ್ಲೂ ಇದೇ ರೀತಿ ಆಗಿತ್ತು. ರಿಪಬ್ಲಿಕನ್ ಪಕ್ಷದಿಂದ ಚುನಾಯಿತರಾಗಿದ್ದ ರೊನಾಲ್ಡ್ ರೇಗನ್ ಅವರು ತೀವ್ರ ಚಳಿಯಿಂದಾಗಿ ಪದಗ್ರಹಣ ಕಾರ್ಯಕ್ರಮವನ್ನು ರೋಟುಂಡಾದಲ್ಲಿ ನಡೆಸಿದ್ದರು. ಆಗ, ತಾಪಮಾನವು-23 ಡಿಗ್ರಿ ಸೆಲ್ಸಿಯಸ್‌ನಿಂದ-29 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು.

LATEST NEWS

ಏರುತ್ತಿರುವ ಬಿಸಿಲಿನ ಧಗೆ, ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

Published

on

ರಾಯಚೂರು: ರಾಜ್ಯದಲ್ಲಿ ಈಗಾಗಲೇ ಬೇಸಿಗೆ ಆರಂಭವಾಗಿದ್ದು, ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಳವಾಗುತ್ತಿದೆ. ಹೀಗಾಗಿ ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಯಾರೂ ಹೊರಗೆ ಬರಬೇಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಉಷ್ಣಾಂಶ ಹೆಚ್ಚಳ ಹಾಗೂ ಗಾಳಿಯಲ್ಲಿ ತೇವಾಂಶ ಕಡಿಮೆ ಆಗಿರುವ ಹಿನ್ನೆಲೆ ಜನರಿಗೆ ಹಗಲು ಮತ್ತು ರಾತ್ರಿಯ ವೇಳೆ ಸಹ ಸೆಖೆಯ ಅನುಭವವಾಗುತ್ತಿದೆ. ಒಟ್ಟಾರೆ ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರಾಸರಿಗಿಂತ ಹೆಚ್ಚು ತಾಪಮಾನ ದಾಖಲಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ ಎಂದರು.

ಬಿಸಿಲು ಹೆಚ್ಚಾಗುತ್ತಿರುವುದರಿಂದ ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದರು.

Continue Reading

LATEST NEWS

ಕಲಿಕೆಯಲ್ಲಿ ಹಿಂದುಳಿದಿದ್ದ ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿದ ತಂದೆ

Published

on

ಆಂಧ್ರಪ್ರದೇಶ: ಶಾಲೆಯಲ್ಲಿ ಮಕ್ಕಳು ಓದಿನಲ್ಲಿ ಹಿಂದಿ ಇದ್ದರಿಂದ ಬೇಸರಗೊಂಡು ತಂದೆಯು ತನ್ನ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿಯಲ್ಲಿ ನಡೆದಿದೆ.

ತಂದೆ ಚಂದ್ರಕಿಶೋರ್ ಹಾಗೂ ಮಕ್ಕಳಾದ ಜೋಶಿಲ್ ಹಾಗೂ ನಿಖಿಲ್ ಸಾವಿಗೀಡಾದವರು. ಚಂದ್ರಕಿಶೋರ್ ಸ್ಥಳೀಯ ಒಎನ್‌ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದರು. ತನ್ನ ಒಬ್ಬರು ಮಕ್ಕಳು ಶಾಲೆಯಲ್ಲಿ ಓದಿನಲ್ಲಿ ಹಿಂದೆ ಇರುವುದೇ ಈತನಿಗೆ ದೊಡ್ಡ ಚಿಂತೆಯಾಗಿತ್ತು. ಹಾಗಾಗಿ ಒಂದು ದಿನ ಪತ್ನಿ ಮತ್ತು ಮಕ್ಕಳನ್ನು ತನ್ನ ಕಚೇರಿಗೆ ಕರೆದು ಬಳಿಕ ಪತ್ನಿಯನ್ನು ಕಛೇರಿಯಲ್ಲೇ ಇರುವಂತೆ ಹೇಳಿ ಇಬ್ಬರು ಮಕ್ಕಳನ್ನು ಶಾಲೆಯ ಸಮವಸ್ತ್ರದ ಅಳತೆಯನ್ನು ತೆಗೆಯಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಹೇಳಿ ಹೋಗಿದ್ದಾನೆ.

ಆದರೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿ ನೀರು ತುಂಬಿದ ಬಕೆಟ್‌ನಲ್ಲಿ ಇಬ್ಬರು ಮಕ್ಕಳ ಮುಖವನ್ನು ಮುಳುಗಿಸಿ ಕೊಂದಿದ್ದಾನೆ. ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಪತಿ ಬಹಳ ಸಮಯವಾದರೂ ಹಿಂತಿರುಗದಿದ್ದಾಗ, ತನುಜಾ ತನ್ನ ಸಹೋದ್ಯೋಗಿಗಳೊಂದಿಗೆ ಮನೆಗೆ ಹೋಗಿದ್ದಾಳ ಕಿಟಕಿಯಿಂದ ಮನೆಯೊಳಗೆ ನೋಡಿದಾಗ, ಪತಿ ಮತ್ತು ಮಕ್ಕಳು ಸತ್ತಿರುವುದು ಕಂಡು ಬಂದಿದೆ.

ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದು, ಚಂದ್ರಕಿಶೋರ್ ಬರೆದಿರುವ ಡೆತ್ ನೋಟ್ ಸ್ಥಳದಲ್ಲಿ ಪತ್ತೆಯಾಗಿದೆ.

Continue Reading

FILM

ರೀಲ್ಸ್ ರಾಣಿ ರೇಷ್ಮಾ ಆಂಟಿ ಕಿಡ್ನಾಪ್

Published

on

ಮಂಗಳೂರು/ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ‘ಹಾಯ್ ಫ್ರೆಂಡ್ಸ್ ಏನ್ ಗೊತ್ತಾ’ ಅಂತ ಹೇಳುತ್ತಲೇ ವಿಡಿಯೋ ಮಾಡಿ ಫೇಮಸ್ ಆಗಿದ್ದ ರೇಷ್ಮಾ ಯಾಸಿನ್ ಸಖತ್ ಸುದ್ದಿಯಲ್ಲಿದ್ದಾರೆ. ಆದರೆ ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.


ಗಿಚ್ಚಿ ಗಿಲಿಗಿಲಿ ಸೀಸನ್ 3ರ ಸ್ಪರ್ಧಿಯಾಗಿ ಇಡೀ ಕರ್ನಾಟಕಕ್ಕೆ ಫೇಮಸ್ ಆಗಿರುವ ರೇಷ್ಮಾ ಯಾಸಿನ್ ಅವರು ತಮ್ಮ ವೈರಲ್ ವಿಡಿಯೋಗಳಿಂದಲೇ ಇಂದು ಸೆಲಿಬ್ರಿಟಿಯಾಗಿದ್ದಾರೆ. ಜನರು ಸಹ ರೇಷ್ಮಾ ಅವರ ವಿಡಿಯೋಗಳಿಗೆ ಪ್ರೀತಿಯನ್ನು ನೀಡುತ್ತಿದ್ದು, ಅಧಿಕ ವ್ಯೂವ್ಸ್ ಪಡೆದುಕೊಳ್ಳುತ್ತಿರುತ್ತವೆ. ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದ ರವಿ ಮಂಡ್ಯ
ಸದ್ಯ ವೈರಲ್ ವಿಡಿಯೋದಲ್ಲಿ ಹಾಯ್ ಫ್ರೆಂಡ್ಸ್. ನೀವು ನನ್ನನ್ನು ಎಷ್ಟು ಬೆಳೆಸಿದ್ದೀರಿ ಅಂದ್ರೆ ರವಿ ಮಂಡ್ಯ ಅವರನ್ನು ನಾನು ಪರ್ಸನಲ್ ಮೇಕಪ್ ಮ್ಯಾನ್ ಆಗಿ ಇಟ್ಕೊಂಡಿದ್ದೇನೆ ಎಂದು ರೇಷ್ಮಾ ಆಂಟಿ ಹೇಳುತ್ತಾರೆ. ಇದಕ್ಕೆ ಕೋಪಗೊಳ್ಳುವ ರವಿ ಮಂಡ್ಯ, ಒಮಿನಿ ವ್ಯಾನ್ ಡಿಕ್ಕಿ ಓಪನ್ ಮಾಡುತ್ತಾರೆ. ನಂತರ ರೇಷ್ಮಾ ಕೈ-ಕಾಲುಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಡಿಕ್ಕಿಯೊಳಗೆ ಹಾಕುತ್ತಾರೆ. ಬಿದ್ಕೋ ಕಪಿ ಮುಂಡೆದೆ, ಇನ್ನೊಂದ್ ಸಾರಿ ಆ ಕಟ್ಟಪ್ಪನ ಜೊತೆ ನೀನು ವಿಡಿಯೋನೇ ಮಾಡಬಾರದು. ನಿನ್ನನ್ನು ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದು ವ್ಯಾನ್ ಚಾಲನೆ ಮಾಡಿಕೊಂಡು ಹೋಗುತ್ತಾರೆ.

ಇದನ್ನೂ ಓದಿ: ಶ್ರೀಲೀಲಾ ಅಭಿನಯದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್!

ಈ ರೀಲ್ಸ್‌ ನೋಡಿದ ನೆಟ್ಟಿಗರು, ಅಣ್ಣ ತುಂಬಾ ಉಪಕಾರ ಮಾಡಿದ್ರಿ, ಫಸ್ಟ್ ತಗೊಂಡ್ ಹೋಗಿ ಕೆಆರ್‌ಎಸ್ ಡ್ಯಾಮ್‌ಗೆ ಆಕ್ಬಿಡು ದೇವರು ಒಳ್ಳೇದ್ ಮಾಡ್ತಾನೆ ನಿನಗೆ ಎಂದು ತಮ್ಮ ಗೋಳು ತೋಡಿಕೊಂಡಿದ್ದಾರೆ. ಇವ್ಳ ಕರ್ಕೊಂಡು ಹೋಗಿ ಕಾಡಲ್ಲಿ ಬಿಟ್ ಬಂದ್ಬಿಡು ಇಲ್ಲಿ ಇವರ ಕಾಟ ತಡೆಯೋಕೆ ಆಗ್ತಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page