Connect with us

LATEST NEWS

ಇಸ್ರೇಲ್-ಇರಾನ್ ಯುದ್ದದಲ್ಲಿ ಬಹಿರಂಗವಾಗಿ ಸೇರಿಕೊಂಡ ಅಮೆರಿಕ; ದಾಳಿಯ ಬೆನ್ನಲ್ಲೇ ಪ್ರತಿಕ್ರಿಯಿಸಿದ ಇರಾನ್

Published

on

ಮಂಗಳೂರು/ನವದೆಹಲಿ: ಅಮೆರಿಕ ಸೇನೆಯು ಇರಾನ್​ನ ಮೂರು ಪರಮಾಣು ಕೇಂದ್ರಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ಮೂಲಕ ಇಸ್ರೇಲ್-ಇರಾನ್ ಯುದ್ದದಲ್ಲಿ ಅಮೆರಿಕ ಬಹಿರಂಗವಾಗಿ ಸೇರಿಕೊಂಡಿದೆ. ಈ ದಾಳಿಯ ಬೆನ್ನಲ್ಲೇ ಇರಾನ್ ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ.


ಇರಾನ್​ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಸೇನೆಯು ವೈಮಾನಿಕ ದಾಳಿ ನಡೆದಿದೆ. ಈ ಕುರಿತು ಖುದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಮಾಹಿತಿ ನೀಡಿದ್ದು, ಇದೀಗ ಶಾಂತಿಯ ಸಮಯ ಎಂದಿದ್ದಾರೆ. ಒಂದೊಮ್ಮೆ ಈಗ ಶಾಂತಿ ಸ್ಥಾಪಿಸದಿದ್ದರೆ ಮತ್ತೊಮ್ಮೆ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ.

ಟ್ರಂಪ್ ಹೇಳಿದ್ದೇನು?
ದಾಳಿಯ ಬೆನ್ನಲ್ಲೇ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇರಾನ್‌ನ ಪರಮಾಣು ಸಾಮರ್ಥ್ಯವನ್ನು ನಾಶಪಡಿಸುವುದು ಹಾಗೂ ಭಯೋತ್ಪಾದನಾ ಪ್ರಾಯೋಜಿತ ರಾಷ್ಟ್ರದಿಂದ ಎದುರಾಗುವ ಭೀತಿಯಿಂದ ಜಗತ್ತನ್ನು ರಕ್ಷಿಸುವುದು ನಮ್ಮ ಗುರಿಯಾಗಿತ್ತು. ಇಂದು (ಶನಿವಾರ) ರಾತ್ರಿ, ನಾವು ನಡೆಸಿರುವ ದಾಳಿಯು ಅದ್ಭುತ ಯಶಸ್ಸನ್ನು ಕಂಡಿದೆ ಎಂದು ಜಗತ್ತಿಗೆ ಹೇಳಬಲ್ಲೆ. ಇರಾನ್‌ನ ಪರಮಾಣು ಕೇಂದ್ರಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಮಧ್ಯಪ್ರಾಚ್ಯವನ್ನು ಬೆದರಿಸುವ ಇರಾನ್‌ನಲ್ಲಿ ಈಗ ಶಾಂತಿ ಸ್ಥಾಪನೆಯಾಗಬೇಕು. ಅದನ್ನು ಮಾಡದಿದ್ದರೆ ಭವಿಷ್ಯದ ದಾಳಿಗಳು ಇನ್ನಷ್ಟು ಮಾರಕವಾಗಿರುತ್ತವೆ’ ಎಂದು ಅವರು ಎಚ್ಚರಿಸಿದ್ದಾರೆ.

ಮುಂದುವರೆದು ‘ಇರಾನ್‌ನಲ್ಲಿ ಶಾಂತಿ ನೆಲೆಸುತ್ತದೆ ಎಂದು ಭಾವಿಸುತ್ತೇನೆ. ಇಲ್ಲದಿದ್ದರೆ ಕಳೆದ ಎಂಟು ದಿನಗಳಲ್ಲಿ ಕಂಡಿರುವುದಕ್ಕಿಂತ ಹೆಚ್ಚಿನ ವಿನಾಶ ಉಂಟಾಗಲಿದೆ. ನೆನಪಿಡಿ, ಇನ್ನೂ ಹಲವು ಗುರಿಗಳು ಬಾಕಿ ಉಳಿದಿವೆ. ಇಂದಿನ ಗುರಿ ಅವೆಲ್ಲದಕ್ಕಿಂತಲೂ ಕಷ್ಟಕರವಾಗಿತ್ತು. ಬಹುಶಃ ಅತ್ಯಂತ ಮಾರಕವಾಗಿತ್ತು. ಮುಂದಿನ ಗುರಿಗಳು ಸುಲಭವಾಗಲಿವೆ. ಬೇಗನೇ ಶಾಂತಿ ನೆಲೆಸದಿದ್ದರೆ ಆ ಗುರಿಗಳನ್ನು ನಿಖರವಾಗಿ ಕೌಶಲ್ಯದಿಂದ ಹೊಡೆದುರುಳಿಸಲಿದ್ದೇವೆ. ನಾವು ಮಾಡಿದ್ದನ್ನು ಮಾಡಲು ಜಗತ್ತಿನ ಬೇರೆ ಯಾವುದೇ ಮಿಲಿಟರಿ ಶಕ್ತಿಗೂ ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ; ಭಾರತದಿಂದ ಇರಾನ್‌ಗೆ ಚಹಾ ರಫ್ತು ಸ್ಥಗಿತ

‘ಕಳೆದ 40 ವರ್ಷಗಳಿಂದ ಇರಾನ್ ‘ಅಮೆರಿಕಕ್ಕೆ ಸಾವು’, ‘ಇಸ್ರೇಲ್‌ಗೆ ಸಾವು’ ಎಂದು ಹೇಳುತ್ತಲೇ ಬಂದಿದೆ. ಅವರು ನಮ್ಮವರನ್ನು ಕೊಲುತ್ತಿದ್ದಾರೆ. 1,000ಕ್ಕೂ ಹೆಚ್ಚು ಜನರನ್ನು ಕಳೆದುಕೊಂಡಿದ್ದೇವೆ. ಅಲ್ಲದೆ ಮಧ್ಯಪ್ರಾಚ್ಯ ಹಾಗೂ ಜಗತ್ತಿನಾದ್ಯಂತ ಲಕ್ಷಾಂತರ ಜನರು ಸಾವಿಗೀಡಾಗಿದ್ದಾರೆ. ಇದನ್ನು ಹೀಗೆಯೇ ಮುಂದುವರಿಯಲು ಬಿಡುವುದಿಲ್ಲ ಎಂದು ಬಹಳ ಹಿಂದೆಯೇ ನಾನು ನಿರ್ಧರಿಸಿದ್ದೆ. ನಾನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಭಿನಂದಿಸಲು ಬಯುಸುತ್ತೇನೆ. ಈ ಅದ್ಭುತ ಕೆಲಸಕ್ಕಾಗಿ ಇಸ್ರೇಲ್ ಮಿಲಿಟರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಾವು ಒಂದು ತಂಡವಾಗಿ ಕೆಲಸ ಮಾಡಿದ್ದೇವೆ. ಅಲ್ಲದೆ ಇರಾನ್‌ ಬೆದರಿಕೆಯನ್ನು ನಿರ್ಮೂಲನೆ ಮಾಡುವತ್ತ ಬಹಳ ಮುಂದೆ ಸಾಗಿದ್ದೇವೆ’ ಎಂದು ಹೇಳಿದ್ದಾರೆ.

ಇರಾನ್ ಮೊದಲ ಪ್ರತಿಕ್ರಿಯೆ
ದಾಳಿ ವೇಳೆ ಪರಮಾಣು ಸೋರಿಕೆಯಾಗಿಲ್ಲ, ಮೂರು ಪರಮಾಣು ಕೇಂದ್ರಗಳನ್ನು ಮೊದಲೇ ಸ್ಥಳಾಂತರಿಸಲಾಗಿತ್ತು ಹಾಗಾಗಿ ಯಾವುದೇ ಪರಮಾಣು ಸೋರಿಕೆ ಸಂಭವಿಸಿಲ್ಲ ಎಂದು ಇರಾನ್ ಹೇಳಿದೆ. ಹಾಗೆಯೇ ಅಮೆರಿಕ ತಮ್ಮ ಮೇಲೆ ನಡೆಸಿದ ದಾಳಿಯನ್ನು ಇರಾನ್ ಖಂಡಿಸಿದ್ದು, ಇಂತಹ ದಾಳಿಗಳು ವಿಶ್ವದ ಶಾಂತಿಗೆ ಅಪಾಯಕಾರಿ. ಅಮೆರಿಕವು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆ ಮಾಡಿದೆ ಎಂದು ಹೇಳಿದೆ.

ಅಮೆರಿಕ ದಾಳಿಯನ್ನು ಖಂಡಿಸಿದ ಇರಾನ್ ವಿದೇಶಾಂಗ ಸಚಿವ
ಅಮೆರಿಕ ನಡೆಸಿದ ವೈಮಾನಿಕ ದಾಳಿಯನ್ನು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಖಂಡಿಸಿದ್ದಾರೆ. ಇರಾನ್ ಅಮೆರಿಕದ ದಾಳಿಯನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದೆ. ನೀವು ದಾಳಿಯನ್ನು ಆರಂಭಿಸಿದ್ದೀರಿ ಆದರೆ ಇದನ್ನು ನಾವು ಅಂತ್ಯಗೊಳಿಸುತ್ತೇವೆ ಎಂದು ಸ್ಪಷ್ಟ ಎಚ್ಚರಿಕೆ ರವಾನಿಸಿದೆ.

ಭೀಕರ ವಾಯು ದಾಳಿಯ ವೀಡಿಯೋ ಇಲ್ಲಿದೆ:

 

 

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page