Connect with us

bangalore

ಶಕ್ತಿ ಯೋಜನೆಯಡಿಯೇ ಮಹಿಳೆಯರಿಗೆ ಮತ್ತೊಂದು ಗುಡ್‌ನ್ಯೂಸ್ ಕೊಟ್ಟ ಸರ್ಕಾರ ..! ಅದೇನು ಗೊತ್ತಾ ?

Published

on

ಮಂಗಳೂರು/ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಕೊಟ್ಟ ಮಾತನ್ನು ಉಳಿಸಿಕೊಳ್ಲುವ ನಿಟ್ಟಿನಲ್ಲಿ ಅವುಗಳನ್ನು ಅಧಿಕಾರಕ್ಕೆ ಬಂದ ಅವಧಿಯಲ್ಲಿಯೇ ಯೋಜನೆಗಳೆಲ್ಲವನ್ನೂ ಜಾರಿಗೊಳಿಸಿತ್ತು. ಈ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವಾದ ‘ಶಕ್ತಿ ಯೋಜನೆ’ ಕೂಡ ಒಂದು. ಇದೀಗ ಸರ್ಕಾರವು ಈ ಯೋಜನೆಯಡಿಯೇ ಮತ್ತೊಂದು ಮಹತ್ತರ ಬದಲಾವಣೆ ತಂದಿದ್ದು, ಏನದು ಎಂಬ ಮಾಹಿತಿ ಇಲ್ಲಿದೆ…

ಶಕ್ತಿ ಯೋಜನೆಯಡಿ ಇಂದು ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾರೆ. ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಬಸ್‌ಗಳಲ್ಲಿ ನೂಕು ನುಗ್ಗಲು ಉಂಟಾಗುತ್ತಿದ್ದು ಇದನ್ನು ತಡೆಯಲು ಸರ್ಕಾರ ಮಹತ್ವದ ಕ್ರಮವನ್ನು ಕೈಗೊಂಡಿದೆ. ಅದೇನೆಂದರೆ ಬಸ್ ಸಂಖ್ಯೆಯಲ್ಲಿ ಇನ್ನೂ ಹೆಚ್ಚು ಮಾಡಿ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಶಕ್ತಿ ಯೋಜನೆಯ ಕುರಿತು ಸಾಮಾಜಿ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ಧರಾಮಯ್ಯ “ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ. ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದಿದ್ದಾರೆ.

bangalore

ಗ್ರೀನ್ ಜರ್ಸಿ ತೊಟ್ಟ ಬೆಂಗಳೂರಿಗೆ ಸತತ 4ನೇ ಜಯ ..! ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ದಾಖಲೆ ..!

Published

on

IPL 2025  :  ರಜತ್ ಪಟಿದಾರ್ ನಾಯಕತ್ವದ ಆರ್‌ಸಿಬಿ ತಂಡ ಈ ಸೀಸನ್​ನಲ್ಲಿ ನಾಲ್ಕನೇ ಗೆಲುವು ಸಾಧಿಸಿದೆ. ಈ ಎಲ್ಲಾ ನಾಲ್ಕು ಗೆಲುವುಗಳು ಇತರ ತಂಡಗಳ ವಿರುದ್ಧ ಅವರ ತವರಿನಲ್ಲಿ ಬಂದಿರುವುದು ವಿಶೇಷವಾಗಿದೆ. ನಿನ್ನೆ (ಏ.13) ಜೈಪುರದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 9 ವಿಕೆಟ್​ಗಳಿಂದ ಸೋತಿದೆ. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಅರ್ಧಶತಕಗಳ ಸಹಾಯದಿಂದ ಆರ್‌ಸಿಬಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಸೋಲಿಸಿತು.

ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 173 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್‌ಸಿಬಿ 17.3 ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 175 ರನ್ ಗಳಿಸುವ ಮೂಲಕ ಪಂದ್ಯವನ್ನು ಗೆದ್ದುಕೊಂಡಿತು. ಆರ್‌ಸಿಬಿ ಪರ ಸಾಲ್ಟ್ 33 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಆರು ಸಿಕ್ಸರ್‌ಗಳ ಸಹಾಯದಿಂದ 65 ರನ್ ಗಳಿಸಿದರೆ, ಕೊಹ್ಲಿ 45 ಎಸೆತಗಳಲ್ಲಿ ನಾಲ್ಕು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳ ಸಹಾಯದಿಂದ 62 ರನ್ ಗಳಿಸಿ ಅಜೇಯರಾಗುಳಿದರು. ಇವರಲ್ಲದೆ, ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ದೇವದತ್ ಪಡಿಕ್ಕಲ್ 28 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ ಅಜೇಯ 40 ರನ್ ಗಳಿಸಿದರು.

ವಿರಾಟ್ ಕೊಹ್ಲಿ ಅರ್ಧಶತಕ :

ರಾಜಸ್ಥಾನ ವಿರುದ್ಧ ವಿರಾಟ್ ಕೊಹ್ಲಿ ಅರ್ಧಶತಕ ಬಾರಿಸಿದ್ದಾರೆ. ಇದಕ್ಕಾಗಿ ಅವರು 39 ಎಸೆತಗಳನ್ನು ಎದುರಿಸಿದರು. ಈ ಮೂಲಕ ಅವರು ಇತಿಹಾಸ ಸೃಷ್ಟಿಸಿದ್ದಾರೆ. ವಾಸ್ತವವಾಗಿ, ಇದು ಅವರ ಟಿ20 ವೃತ್ತಿಜೀವನದ 100ನೇ ಅರ್ಧಶತಕವಾಗಿದೆ.

Continue Reading

bangalore

ತವರಿನಲ್ಲಿ ಭರ್ಜರಿ ಬ್ಯಾಟಿಂಗ್‌ನಿಂದ ಮಿಂಚಿದ ಕೆ.ಎಲ್.ರಾಹುಲ್ ..! ಆರ್‌ಸಿಬಿಗೆ ಭಾರೀ ಮುಖಭಂಗ ಮಾಡಿದ ಕನ್ನಡಿಗ ..!

Published

on

ಬೆಂಗಳೂರು : ತವರಿನಲ್ಲಿಯೇ ಆರ್‌ಸಿಬಿಗೆ ಭಾರೀ ಮುಖಭಂಗ ನಡೆದಿದೆ. ಅದೂ ಸಹ ಒಬ್ಬ ಕನ್ನಡಿಗನಿಂದ. ನಿನ್ನೆ (ಏ.11) ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಟಾಸ್ ಗೆದ್ದು, ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು. ಆರ್​ಸಿಬಿ ಪರ ಓಪನರ್ ಬ್ಯಾಟರ್ ಆಗಿ ಕ್ರೀಸ್​ಗೆ ಆಗಮಿಸಿದ ಫಿಲಿಪ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಆರಂಭದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಆದರೆ 7 ಓವರ್​ ಆಗುಷ್ಟರಲ್ಲಿ ಆರ್​ಸಿಬಿಯ ಚಿತ್ರಣವೇ ಬದಲಾಯಿತು. ಪ್ರಮುಖವಾದ 3 ವಿಕೆಟ್​ಗಳು ಉರುಳಿ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಕೊನೆಗೂ ತವರಿನ ಪಿಚ್​ನಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಅವರ ಬ್ಯಾಟಿಂಗ್ ಆರ್ಭಟದಿಂದ ರಾಯಲ್ ಚಾಲೆಂಜರ್ಸ್​ ಜೊತೆ ಡೆಲ್ಲಿ ಕ್ಯಾಪಿಟಲ್ಸ್​ 6 ವಿಕೆಟ್​ಗಳ ರೋಚಕ ಗೆಲವು ಪಡೆದಿದೆ. ಈ ಮೂಲಕ ಆರ್​ಸಿಬಿ ತನ್ನ ನೆಲದಲ್ಲಿಯೇ ಕನ್ನಡಿಗನಿಂದ ಭಾರೀ ಅವಮಾನಕ್ಕೆ ಒಳಗಾದಂತೆ ಆಗಿದೆ.

ಮೊದಲಿಗೆ ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ 20 ಓವರ್​ನಲ್ಲಿ 7 ವಿಕೆಟ್​ಗೆ 164 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನು ಹತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭವೇನೂ ಚೆನ್ನಾಗಿರಲಿಲ್ಲ. ಏಕೆಂದರೆ ಆರಂಭಿಕ ಬ್ಯಾಟ್ಸ್​ಮನ್​ಗಳಾದ ಫಾಫ್​ಡುಪ್ಲಿಸ್ಸಿ 2, ಮೆಕ್‌ಗುರ್ಕ್ 7, ಪೊರೆಲ್ 7 ರನ್​ ಹೀಗೆ ಬ್ಯಾಕ್ ಟು ಬ್ಯಾಕ್​ ವಿಕೆಟ್​ ಉರುಳಿದವು. ಈ ವೇಳೆ ಡೆಲ್ಲಿಗೆ ನೆರವಾಗಿದ್ದು ಕನ್ನಡಿಗ ಕೆ.ಎಲ್ ರಾಹುಲ್​. ಕೊನೆವರೆಗೂ ಕ್ರೀಸ್​ ಕಚ್ಚಿಕೊಂಡು ರಾಹುಲ್ ಬ್ಯಾಟಿಂಗ್ ಮಾಡಿದರು. ಸೋಲುವ ಪಂದ್ಯವನ್ನು ರಾಹುಲ್ ಅವರೇ ಗೆಲ್ಲಿಸಿಕೊಟ್ಟಿದ್ದಾರೆ ಎಂದರೆ ತಪ್ಪಾಗಲಾರದು.

ಕೆ.ಎಲ್​ ರಾಹುಲ್​ಗೆ ನಾಯಕ ಅಕ್ಷರ್ ಪಟೇಲ್ ಉತ್ತಮ ಸಾಥ್ ಕೊಟ್ಟರು. ಕೆ.ಎಲ್​ ರಾಹುಲ್ ಆರ್ಭಟದ ಬ್ಯಾಟಿಂಗ್​ನಿಂದ ಡೆಲ್ಲಿ ಕ್ಯಾಪಿಟಲ್ಸ್​ 17.5 ಓವರ್​​ಗಳಲ್ಲಿ 4 ವಿಕೆಟ್​ಗೆ 169 ರನ್​ಗಳನ್ನ ಗಳಿಸಿ ಅದ್ಭುತವಾದ ಗೆಲುವು ಪಡೆಯಿತು. ಈ ಪಂದ್ಯದಲ್ಲಿ ಡೆಲ್ಲಿ ತಂಡ ಇನ್ನೇನು ಸೋಲುತ್ತದೆ ಎಂದುಕೊಂಡಿದ್ದರು. ಆದರೆ ಪಂದ್ಯದಲ್ಲಿ ಮುಖ್ಯ ಪಾತ್ರ ವಹಿಸಿದ ಕೆ.ಎಲ್ ರಾಹುಲ್ ಗೆಲ್ಲುವವರೆಗೂ ಹೋರಾಡಿದರು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್​ ನಿನ್ನೆ (ಏ.10) ನಡೆದ ಟೂರ್ನಿಯಲ್ಲಿ 4 ಪಂದ್ಯಗಳನ್ನು ಆಡಿ, 4 ರಲ್ಲೂ ಅಮೋಘವಾದ ಗೆಲುವು ಸಾಧಿಸಿ 8 ಅಂಕಗಳನ್ನು ಪಡೆದುಕೊಂಡಿದೆ.

Continue Reading

bangalore

13 ಲಕ್ಷ ಸಾಲಕ್ಕೆ 63 ಲಕ್ಷ ಬಡ್ಡಿ ಸುಲಿಗೆ: ಮೂವರು ಅರೆಸ್ಟ್ ..

Published

on

ಮಂಗಳೂರು/ಬೆಂಗಳೂರು: ಉದ್ಯಮಿಯೊಬ್ಬರು ಪಡೆದಿದ್ದ 13 ಲಕ್ಷ ರೂ. ಸಾಲಕ್ಕೆ ಬಡ್ಡಿ ರೂಪದಲ್ಲಿ 63 ಲಕ್ಷ ರೂ. ಪಡೆದು ಮತ್ತೂ ಹಣಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿರುವ ಆರೋಪದಡಿ ಮೂವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ದೀಪಕ್‌, ಜಯಕುಮಾರ್‌ ಹಾಗೂ ಬಾಬು ಬಂಧಿತ ಆರೋಪಿಗಳು.

ಅಸಲು ತೀರಿಸಿದ ಬಳಿಕವೂ ಹಣಕ್ಕೆ ಬೇಡಿಕೆ:

“ಬಂಧಿತ ಆರೋಪಿ ದೀಪಕ್‌ನಿಂದ ಪಡೆದಿದ್ದ 13 ಲಕ್ಷಕ್ಕೆ ಪ್ರತಿಯಾಗಿ ಒಟ್ಟು 63 ಲಕ್ಷ ನೀಡಿದ್ದೇನೆ. ಜಯಕುಮಾರ್‌ನಿಂದ ಪಡೆದಿದ್ದ 8 ಲಕ್ಷಕ್ಕೆ ಪ್ರತಿಯಾಗಿ ಒಟ್ಟು 6.40 ಲಕ್ಷ ನೀಡಿದ್ದೇನೆ. ಅವರು ಕೊಟ್ಟ ಹಣಕ್ಕೆ ದುಬಾರಿ ಬಡ್ಡಿ ಸಮೇತ ಹಣ ವಾಪಾಸ್ ನೀಡಿದ್ದರೂ ಸಹ ಆರೋಪಿಗಳು ಇನ್ನೂ ಅಸಲು ತೀರಿಲ್ಲ ಎಂದು ಮತ್ತಷ್ಟು ಹಣಕ್ಕೆ ಬೇಡಿಕೆ ಇರಿಸುತ್ತಿದ್ದಾರೆ. ಪದೇ ಪದೇ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿದ್ದಾರೆ. ಇವರ ಹಿಂಸೆಯಿಂದ ನಾಲ್ಕು ಬಾರಿ ಆತ್ಮಹತ್ಯೆಗೆ ಯೋಚಿಸಿದ್ದೆ. ಒಂದು ವರ್ಷದ ಮಗಳ ಮುಖ ನೋಡಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟಿದ್ದೇನೆ. ಹೀಗಾಗಿ ಈ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಉದ್ಯಮಿ ರವಿ ದೂರಿನಲ್ಲಿ ವಿವರಿಸಿದ್ದಾರೆ.

ಲಕ್ಕಸಂದ್ರ ನಿವಾಸಿ ಉದ್ಯಮಿ ಎಂ.ರವಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page