Connect with us

DAKSHINA KANNADA

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಏ. 1 ರಿಂದ ಔಷಧ ಬೆಲೆ ಶೇ. 12 ರಷ್ಟು ಹೆಚ್ಚಳ

Published

on

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಏಪ್ರಿಲ್ 1 ರಿಂದ ಅಗತ್ಯ ಔಷಧಗಳ ಬೆಲೆ ಏರಿಕೆ ಬಿಸಿ ತಟ್ಟಲಿದೆ.

ಸಾಮಾನ್ಯ ಬಳಕೆ ಔಷಧಿಗಳ ಬೆಲೆಯನ್ನು ಶೇಕಡ 12.12ರಷ್ಟು ಹೆಚ್ಚಳ ಮಾಡಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಅನುಮೋದನೆ ನೀಡಿದೆ.

ಇದು ಇದುವರೆಗಿನ ಅತ್ಯಧಿಕ ಎಂದು ಹೇಳಲಾಗಿದೆ. ಹೃದ್ರೋಗ ಔಷಧ, ನೋವು ನಿವಾರಕ, ಆಂಟಿ ಬಯೋಟೆಕ್, ಗಂಟಲಿಗೆ ಸಂಬಂಧಿಸಿದ ಔಷಧ, ಆಂಟಿ ಫಂಗಲ್, ಆಂಟಿ ಸೆಪ್ಟಿಕ್ ಸೇರಿದಂತೆ 800 ಔಷಧಗಳ ಬೆಲೆ ಹೆಚ್ಚಳ ಆಗಲಿದೆ.

ಕಳೆದ ವರ್ಷ ಶೇಕಡ 10.76ರಷ್ಟು ದರ ಏರಿಕೆ ಮಾಡಲಾಗಿತ್ತು. ಈ ವರ್ಷ ರಾಷ್ಟ್ರೀಯ ಔಷದ ಬೆಲೆ ನಿಯಂತ್ರಣ ಪ್ರಾಧಿಕಾರ ಶೇಕಡ 12.12ರಷ್ಟು ಬೆಲೆ ಏರಿಕೆಗೆ ಅನುಮೋದನೆ ನೀಡಿದೆ.

ಪ್ರಾಧಿಕಾರ ಬೆಲೆ ನಿಯಂತ್ರಿಸುವ 800 ಔಷಧಗಳನ್ನು ಶೆಡ್ಯೂಲ್ಡ್ ಡ್ರಗ್ಸ್ ಎಂದು ವರ್ಗೀಕರಿಸಲಾಗುತ್ತದೆ.

ನಾನ್ ಶೆಡ್ಯೂಲ್ಡ್ ಔಷಧಗಳ ಬೆಲೆಗಳು ಪ್ರಾಧಿಕಾರದ ನಿಯಂತ್ರಣದಲ್ಲಿ ಇರುವುದಿಲ್ಲ. ಅವುಗಳ ಬೆಲೆಯನ್ನು ವಾರ್ಷಿಕ ಶೇಕಡ 10 ರಷ್ಟು ಹೆಚ್ಚಳ ಮಾಡಲು ಅವಕಾಶ ಇರುತ್ತದೆ.

ಪ್ರಸ್ತುತ ಆರ್ಥಿಕ ಸಲಹೆಗಾರರ ಕಚೇರಿ, ಆಂತರಿಕ ವ್ಯಾಪಾರ ಪ್ರಚಾರ ಇಲಾಖೆ, ವಾಣಿಜ್ಯ ಮತ್ತು ಉದ್ಯಮ ಸಚಿವಾಲಯ ನೀಡಿದ ದತ್ತಾಂಶದ ಆಧಾರದ ಮೇಲೆ ಪ್ರತಿ ವರ್ಷ ಸಗಟು ಬೆಲೆ ಸೂಚ್ಯಂಕವನ್ನು ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಪರಿಷ್ಕರಿಸಿ ಅದರ ಆಧಾರದ ಮೇಲೆ ಔಷಧ ಬೆಲೆ ಏರಿಕೆ ಮಾಡಲಿದೆ.

ಇದರಲ್ಲಿ ನೋವು ನಿವಾರಕ, ಆ್ಯಂಟಿ ಬಯೋಟಿಕ್, ಉರಿಯೂತ ನಿವಾರಕ ಔಷಧ, ಹೃದ್ರೋಗ ಔಷಧ ಸೇರಿದಂತೆ ರಾಷ್ಟ್ರೀಯ ಅಗತ್ಯದ ಔಷಧಗಳ ಪಟ್ಟಿಯ 800 ಔಷಧಗಳು ಒಳಗೊಳ್ಳಲಿವೆ.

ಕಳೆದ ವರ್ಷ ಈ ಔಷಧಗಳ ಬೆಲೆಯನ್ನು ಶೇ. 10.76ರಷ್ಟು ಏರಿಕೆ ಮಾಡಲು ಎನ್‌ಪಿಪಿಎ ಅನುಮತಿ ನೀಡಿತ್ತು.

ಔಷಧಗಳ ಬೆಲೆ ವಿಪರೀತ ಏರಿಕೆಯ ಬಗ್ಗೆ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಬೇಕು ಎಂದು ಅಖಿಲ ಭಾರತ ಔಷಧ ಕ್ರಿಯಾ ಜಾಲದ ಸಹ ಸಂಚಾಲಕಿ ಮಾಲಿನಿ ಐಸೋಲಾ ಅವರು ತಿಳಿಸಿದ್ದಾರೆ.

ಈ ರೀತಿ ಮತ್ತೆ ಮತ್ತೆ ಬೆಲೆ ಏರಿಕೆಯು ಅಗತ್ಯ ಔಷಧಗಳ ಬೆಲೆ ನಿಗದಿಯ ಉದ್ದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ.

DAKSHINA KANNADA

ಫೆ.14ರಂದು 16ನೇ ವರ್ಷದ ಜಯ-ವಿಜಯ ಜೋಡುಕರೆ ಕಂಬಳ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಜಯ-ವಿಜಯ ಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಮಂಗಳೂರು ಇವರ ನೇತೃತ್ವದಲ್ಲಿ ಮನ್ಕು ತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೇಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಫೆ.14 ಮತ್ತು 15ರಂದು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ನಗರದ ಓಷಿಯನ್ ಪರ್ಲ್ ಹೊಟೇಲ್ ನಲ್ಲಿ ನಡೆಯಿತು. ಸುತೇಜ್ ಎಂಟರ್ ಪ್ರೈಸಸ್ ಮುಂಬಯಿ ಇದರ ಎಂಡಿ, ಹಾಗೂ ಕಂಬಳದ ಮಾರ್ಗದರ್ಶಕ ಎಚ್. ಸುಧಾಕರ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಮುಂದಾಳತ್ವದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ನಂತರ ಈ ಬಗ್ಗೆ ಸುಧಾಕರ್ ಶೆಟ್ಟಿ ಮಾತನಾಡಿ ಜಪ್ಪಿನಮೊಗರುವಿನಲ್ಲಿ ನಡೆಯುತ್ತಿರುವ ಕಂಬಳ ಅತ್ಯಂತ ವಿಶೇಷವಾದದ್ದು. ಯಾಕಂದ್ರೆ ಶಾಸಕ ವೇದವ್ಯಾಸ್ ಕಾಮತ್ ಅವರ ಸಹಕಾರದಿಂದ ವ್ಯವಸ್ಥಿತವಾಗಿ ಈಗ ನಡೆಯುತ್ತಿದೆ. ಕಂಬಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸ್ತಾರೆ. ಕಂಬಳವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: 33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

ಗೌರವಾಧ್ಯಕ್ಷ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ ಶ್ರೀ ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ ವೇದಮೂರ್ತಿ ಬ್ರಹ್ಮ ಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಉದ್ಯಮಿಗಳು ಸೇರಿದಂತೆ ಸಿನಿಮಾ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಕಂಬಳದಲ್ಲಿ 150ಕ್ಕೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಯ ವಿಜಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅನಿಲ್ ಶೆಟ್ಟಿ, ಕಾರ್ಯಾಧ್ಯಕ್ಷೆ ವೀಣಾಮಂಗಳ, ಮತ್ತೋರ್ವ ಕಾರ್ಯಾಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ತಿರುವೈಲುಗುತ್ತು, ಸಂದೀಪ್ ಶೆಟ್ಟಿ ಎಕ್ಕೂರು ಮತ್ತಿತ್ತರರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ: ಕಾಂಗ್ರೆಸ್ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ

Published

on

ಮಂಗಳೂರು: ರಾಮನ ಹೆಸರಿಟ್ಟರೆ ಕಾಂಗ್ರೆಸಿಗರಿಗೆ ಹೊಟ್ಟೆ ಉರಿ ಏಕೆ? ಕಾಂಗ್ರೆಸ್ ನಲ್ಲಿರುವ ಹಿಂದೂಗಳಿಗೆ ರಾಮ ದೇವರಲ್ಲವೇ ಎಂದು ಶಾಸಕ ವೇದವ್ಯಾಸ ಕಾಮತ್‌ ಕೇಂದ್ರ ಸರಕಾರದ ವಿಬಿ- ಜಿ- ರಾಮ್‌- ಜಿ- ಕಾಯ್ದೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿ ರಾಮನ ಹೆಸರು ಬಂತು ಎಂದಾಗ ಕಾಂಗ್ರೆಸಿಗರು ಅಲರ್ಜಿ ತರ ಮಾತನಾಡುವುದೇಕೆ? ಮನ್ ರೇಗಾ ಹೆಸರನ್ನು ನರೇಗಾ ಎಂದು ಬದಲಿಸಿದ್ದು ಕಾಂಗ್ರೆಸ್ ಅಲ್ಲವೇ ಎಂದರು.

ವೋಟ್‌ ಬ್ಯಾಂಕಿಗಾಗಿ ಕಾಂಗ್ರೆಸ್‌ ಮಾಡುತ್ತಿರುವ ರಾಜಕಾರಣ ಈಗ ಜನರಿಗೆ ಅರ್ಥವಾಗಿದೆ. ದೇಶದ ಬೆರಳೆಣಿಕೆಯ ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಆಡಳಿತವಿದೆ. ಕಾಂಗ್ರೆಸಿಗರಿಗೆ ರಾಮನ ಶಾಪ ಇದೆ, ಇದನ್ನು ಸರಿ ಮಾಡಲು ಮೊದಲು ಕಲಿಯಿರಿ ಎಂದವರು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ದೇವಸ್ಥಾನದ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾಕಬಾರದೆಂಬ ಹೇಳಿಕೆ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ

ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸವಿಲ್ಲ. ರಾಜ್ಯದಲ್ಲಿ ಅವರದೇ ಸರಕಾರವಿದೆ. ಆವರ ಆಡಳಿತ ವೈಫಲ್ಯಗಳನ್ನು ಸರಿಪಡಿಸುವ ಸಾಮರ್ಥ್ಯ ಅವರಿಗಿಲ್ಲ. ಮಂಗಳೂರಿನಲ್ಲಿ ಈ- ಖಾತಾ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಜೈಲಿನ ಜಾಮರ್ ಸಮಸ್ಯೆ ನಿವಾರಣೆ ಮಾಡುವ ಸಾಮರ್ಥ್ಯ ಇಲ್ಲ. ಮೂಡಾ, ತಾಲೂಕು ಕಚೇರಿಗಳು ಸಮಸ್ಯೆಗಳ ಆಗರವಾಗಿವೆ ಎಂದು ಟೀಕಿಸಿದರು.

Continue Reading

DAKSHINA KANNADA

33ನೇ ವರ್ಷದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ 33ನೇ ವರ್ಷದ ಹೊನಲು ಬೆಳಕಿನ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಇಂದು ಬೆಳಿಗ್ಗೆ ಆರಂಭಗೊಂಡಿದೆ.

ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ತೆಂಗಿನ ಕಾಯಿ ಒಡೆಯುವ ಮೂಲಕ ಉದ್ಘಾಟನೆ ನರೆವೇರಿಸಿದರು.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ನಗರಸಭೆ ಮುಖ್ಯಾಧಿಕಾರಿ ವಿದ್ಯಾ ಕಾಳೆ, ಪದ್ಮನಾಭ ಶೆಟ್ಟಿ, ಜಯಂತ್ ನಡುಬೈಲು, ಸುಂದರ ಗೌಡ, ಉದ್ಯಮಿ ದಿವ್ಯಾ ಶೆಟ್ಟಿ, ಡಾ ಶರತ್‌ ಶೆಟ್ಟಿ, ಬಾಬು ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಅಡ್ವೆ ನಂದಿಕೂರು 33ನೇ ವರ್ಷದ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟ; ಇಲ್ಲಿದೆ ಫಲಿತಾಂಶ

ನೇಗಿಲು ಹಿರಿಯ, ನೇಗಿಲು ಕಿರಿಯ, ಕನೆಹಲಗೆ, ಅಡ್ಡ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ ವಿಭಾಗಗಳಲ್ಲಿ ಕಂಬಳ ನಡೆಯಿತು. ಕಳೆದ ವರ್ಷ ಪುತ್ತೂರು ಕಂಬಳದಲ್ಲಿ ಕರೆಯಲ್ಲೆ ರಾಜ್ಯಮಟ್ಟದ ಕೆಸರು ಗದ್ದೆ ಓಟ ಸ್ಪರ್ಧೆ ಏರ್ಪಡಿಸಲಾಗಿತ್ತು . ಈ ವರ್ಷ ಇದರ ಜೊತೆಗೆ ಮೊದಲ ಬಾರಿ ರಿಲೇ ಸ್ಪರ್ಧೆ ಏರ್ಪಡಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page