Connect with us

FILM

5 ತಿಂಗಳ ನಂತರ ವಿಚ್ಛೇದನದ ಕುರಿತು ಮೌನ ಮುರಿದ ಎ. ಆರ್ ರೆಹಮಾನ್

Published

on

ಆಸ್ಕರ್ ಪ್ರಶಸ್ತಿ ವಿಜೇತ, ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ಇದೀಗ ಡಿವೋರ್ಸ್ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಎದುರಿಸಿದ ಟೀಕೆಗಳ ಕುರಿತಾಗಿ ಎ ಆರ್‌ ರೆಹಮಾನ್ ಮೌನ ಮುರಿದಿದ್ದಾರೆ.

1995ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಎ ಆರ್‌ ರೆಹಮಾನ್ ಹಾಗೂ ಸೈರಾ ಜೋಡಿ 19 ನವೆಂಬರ್ 2024ರಂದು ಡಿವೋರ್ಸ್ ಘೋಷಿಸಿದ್ದರು. ಆದರೆ ವಿಚ್ಛೇದನದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಎದುರಿಸಿದ ಟೀಕೆಗಳ ಬಗ್ಗೆ ಎ ಆರ್‌ ರೆಹಮಾನ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಡಿವೋರ್ಸ್ ಘೋಷಣೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಮತ್ತು ಟೀಕೆಗಳು ವ್ಯಕ್ತವಾಗಿತ್ತು. ಈ ಹಿನ್ನೆಲೆ ಎ. ಆರ್ ರೆಹಮಾನ್ ಮೌನಕ್ಕೆ ಶರಣಾಗಿದ್ದರು. ಈಗ ಸೈರಾ ಬಾನು ಜೊತೆಗಿನ ಡಿವೋರ್ಸ್ ಬಗ್ಗೆ ಮೊದಲ ಬಾರಿಗೆ ಮಾತನಾಡಿ, ಸಾರ್ವಜನಿಕ ಜೀವನವನ್ನು ಆಯ್ಕೆ ಮಾಡುವುದು ಉದ್ದೇಶಪೂರ್ವಕ. ಆದ್ದರಿಂದ ಪ್ರತಿಯೊಬ್ಬರೂ ವಿಮರ್ಶೆಗೆ ಒಳಗಾಗುತ್ತಾರೆ. ಶ್ರೀಮಂತ ವ್ಯಕ್ತಿಯಿಂದ ಹಿಡಿದು ದೇವರುಗಳವರೆಗೆ ಎಲ್ಲರೂ ವಿಮರ್ಶೆಗೆ ಒಳಗಾಗುತ್ತಾರೆ. ನಾನು ಹಾಗೆಯೇ ಎಂದಿದ್ದಾರೆ.

ಮುಂದುವರೆದು, ನಾನು ಯಾರದ್ದೋ ಕುಟುಂಬದ ಬಗ್ಗೆ ಕೆಟ್ಟದಾಗಿ ಹೇಳಿದರೆ, ನನ್ನ ಕುಟುಂಬದ ಬಗ್ಗೆ ಬೇರೆಯವರು ಮಾತನಾಡುತ್ತಾರೆ. ನಾವು ಭಾರತೀಯರು ಇದನ್ನು ನಂಬುತ್ತೇವೆ. ಯಾರೂ ಅನಗತ್ಯವಾಗಿ ಬೇರೆಯರ ಬಗ್ಗೆ ಮಾತನಾಡಬಾರದು, ಏಕೆಂದರೆ ಪ್ರತಿಯೊಬ್ಬರಿಗೂ ಸಹೋದರಿ, ಪತ್ನಿ, ತಾಯಿ ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುರಿದ 29 ವರ್ಷಗಳ ದಾಂಪತ್ಯ ಜೀವನ; ವಿಚ್ಛೇದನದ ಬಗ್ಗೆ ಎ.ಆರ್.ರೆಹಮಾನ್ ಏನಂದ್ರು?

ಸೈರಾ ಬಾನು ಅವರು ತಮ್ಮ ಕಾನೂನು ಪ್ರತಿನಿಧಿಗಳ ಮೂಲಕ ಈ ನಿರ್ಣಯ ಕೈಗೊಂಡಿದ್ದಾರೆ. ವಿಚ್ಛೇದನವು ವೈಯಕ್ತಿಕ ಸಮಸ್ಯೆಗಳ ಕಾರಣದಿಂದಾಗಿ ನಡೆದಿದ್ದು, ಬದಲಾಗಿ ಯಾವುದೇ ವೈಷಮ್ಯದಿಂದ ಅಲ್ಲ ಎಂದು ಎ ಆರ್ ರೆಹಮಾನ್ ಸ್ಪಷ್ಟಪಡಿಸಿದ್ದಾರೆ.

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading

FILM

ಕನ್ನಡದ ರಜನಿ ಚಿತ್ರದಲ್ಲಿ ವಿಲನ್ ಆಗಿದ್ದ ಬಾಲಿವುಡ್‌ನ ಖ್ಯಾತ ನಟ ಮುಕುಲ್ ದೇವ್ ನಿಧ*ನ

Published

on

ಮಂಗಳೂರು/ಮುಂಬೈ: ಕನ್ನಡದ ನಟ ಉಪೇಂದ್ರ ಅಭಿನಯದ ‘ರಜಿನಿ’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದ ಮುಕುಲ್ ದೇವ್ ಅವರು ನಿಧ*ನ ಹೊಂದಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ದಿನಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲದೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ನಿಧ*ನ ಹೊಂದಿದ್ದಾರೆ ಎಂದು ಸನ್ ಆಫ್ ಸರ್ದಾರ್ ಚಿತ್ರದ ವೇಳೆ ಅವರೊಂದಿಗೆ ಕೆಲಸ ಮಾಡಿದ ವಿಂದು ದಾರಾ ಸಿಂಗ್ ಮಾಹಿತಿ ನೀಡಿದ್ದಾರೆ.ನಟ ಮುಕುಲ್ ದೇವ್ ಹಿಂದಿಯ ಸನ್ ಆಫ್ ಸರ್ದಾರ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದರು.

ಮುಕುಲ್ ದೇವ್ ಅವರು 2009ರಲ್ಲಿ ರಿಲೀಸ್ ಆದ ‘ರಜನಿ’ ಚಿತ್ರದ ಮೂಲಕ ಕನ್ನಡಕ್ಕೆ ಬಂದರು. ಈ ಚಿತ್ರದಲ್ಲಿ ಅವರು ವಿಲನ್ ಪಾತ್ರ ಮಾಡಿದ್ದರು. 2016ರಲ್ಲಿ ಕನ್ನಡದಲ್ಲಿ ರಿಲೀಸ್ ಆದ ‘ನಾಗರಹಾವು’ ಸಿನಿಮಾ ಮಾಡಿದರು. ಅವರು ಹಿಂದಿ, ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲೂ ಕಾಣಿಸಿಕೊಂಡಿದ್ದರು. ಅವರು ಖಡಕ್ ವಿಲನ್ ಆಗಿ ಫೇಮಸ್ ಆಗಿದ್ದರು. 2022ರಲ್ಲಿ ರಿಲೀಸ್ ಆದ ‘ಅಂತ್ ದಿ ಎಂಡ್’ ಅವರು ನಟಿಸಿದ ಕೊನೆಯ ಸಿನಿಮಾ. ಇದಲ್ಲದೆ, ಧಾರಾವಾಹಿ ಹಾಗೂ ವೆಬ್ ಸೀರಿಸ್​ಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ 7ನೇ ತರಗತಿ ವಿದ್ಯಾರ್ಥಿ

ದೆಹಲಿಯಲ್ಲಿ ಪಂಜಾಬಿ ಕುಟುಂಬದಲ್ಲಿ ಜನಿಸಿದ ಮುಕುಲ್ ದೇವ್ ಜಲಂಧರ್ ಬಳಿಯ ಹಳ್ಳಿಯಲ್ಲಿ ಜನಿಸಿದ್ದರು. ಅವರ ತಂದೆ ಹರಿ ದೇವ್, ಸಹಾಯಕ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

Continue Reading

FILM

ತಂದೆ, ಅಕ್ಕನಿಗೆ ಬೆದರಿಕೆ ಹಾಕಿದ್ರಾ ಚೈತ್ರಾ ಕುಂದಾಪುರ; ಉಡುಪಿ ಎಸ್ ಪಿ ಏನಂದ್ರು?

Published

on

ಉಡುಪಿ: ಚೈತ್ರಾ ಕುಂದಾಪುರ ಅವರು ಮದುವೆಯಾಗಿ ಗಂಡನ ಮನೆಗೆ ತೆರಳಿದರೂ ವಿವಾದಗಳು ಆಕೆಯನ್ನು ಬೆಂಬತ್ತುತ್ತಲೇ ಇವೆ. ಇದೀಗ ಚೈತ್ರಾ ಅವರು ತಂದೆ ಮತ್ತು ಅಕ್ಕನಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಉಡುಪಿ ಜಿಲ್ಲಾ ಎಸ್.ಪಿ. ಡಾ. ಅರುಣ್‌ ಕುಮಾರ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ತಿಂಗಳ 15 ರಂದು ತಂದೆ ಬಾಲಕೃಷ್ಣ ನಾಯಕ್‌ ಕುಂದಾಪುರ ಟೌನ್‌ ಪೊಲೀಸ್‌ ಠಾಣೆಗೆ ತೆರಳಿ ಪುತ್ರಿ ಚೈತ್ರಾ ವಿರುದ್ಧ ದೂರೊಂದನ್ನು ಸಲ್ಲಿಸಿದ್ದಾರೆ. ‘ಕೆಲವು ವರ್ಷಗಳ ಹಿಂದೆ ಚೈತ್ರಾ ಅವರು ಇದ್ದ ಮನೆಯಲ್ಲಿ ತಂದೆ ವಾಸವಾಗಿದ್ದ ಸಂದರ್ಭ ಚೈತ್ರಾ ಬಂದು ಹಣ ಎಣಿಸುತ್ತಿದ್ದಾಗ ಅದನ್ನು ನೋಡಿ, ಇದು ಅಕ್ರಮವಾಗಿ ಗಳಿಸಿದ ಹಣ. ನಾನು ನಿಮ್ಮ ಜತೆ ಇರುವುದಿಲ್ಲ ಎಂದು ಹೇಳಿ ಹಿರಿಯ ಪುತ್ರಿ ಗಾಯತ್ರಿ ಅವರ ಮನೆಗೆ ಹೋಗಿ ವಾಸವಿರುವುದಾಗಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಸೆಕೆ ತಡೆಯಲಾಗದೆ ಎಟಿಎಂ ಒಳಗೆ ಕುಳಿತ ಫ್ಯಾಮಿಲಿ! ವೀಡಿಯೋ ವೈರಲ್

ಬಳಿಕ ಚೈತ್ರಾ ಅವರು ತಂದೆ ಬಾಲಕೃಷ್ಣ ನಾಯಕ್‌ ಮತ್ತು ಹಿರಿಯ ಪುತ್ರಿ ಗಾಯತ್ರಿ ಅವರಿಗೆ ಬೆದರಿಕೆ ಹಾಕಿ ಅವರ ಹೆಸರಿನಲ್ಲಿರುವ ಅಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಳ್ಳುವುದಾಗಿ ಹೇಳಿ ಹೋಗಿದ್ದಾಳೆ ಎಂಬುದಾಗಿ ದೂರಿನಲ್ಲಿ ವಿವರಿಸಲಾಗಿದೆ. ಈ ಬಗ್ಗೆ ಠಾಣೆಯಲ್ಲಿ ಕೇಸು ದಾಖಲಾದ ಬಳಿಕ ಚೈತ್ರಾ ಅವರು ಠಾಣೆಗೆ ಬಂದು, ಈ ವಿಚಾರವನ್ನು ತಾನು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ತಂದೆ ಬಾಲಕೃಷ್ಣ ನಾಯಕ್‌ ಅವರಿಗೆ ಇದೊಂದು ಸಿವಿಲ್‌ ವಿಚಾರ ಆಗಿರುವುದರಿಂದ ಕೋರ್ಟಿನಲ್ಲಿ ಬಗೆಹರಿಸಿಕೊಳ್ಳುವಂತೆ ಎಂಡೋರ್ಸ್‌ಮೆಂಟ್‌ನ್ನು ಕೊಡಲಾಗಿದೆ ಎಂದು ಎಸ್‌ಪಿ ಅವರು ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page