Connect with us

FILM

ನಂದಿನಿ ಧಾರಾವಾಹಿ ನಟನ ವಿರುದ್ಧ ಅರೆಸ್ಟ್ ವಾರೆಂಟ್-ಪತ್ನಿಯಿಂದ ದೂರು

Published

on

ತಮಿಳು ನಂದಿನಿ ಧಾರಾವಾಹಿಯಲ್ಲಿ ನಾಯಕ ನಟನಾಗಿ ಜನಪ್ರಿಯತೆ ಪಡೆದಿದ್ದ ರಾಹುಲ್‌ ರವಿ ವಿರುದ್ಧ ಪತ್ನಿಗೆ ಕಿರುಕುಳ ನೀಡರುವ ಆರೋಪ ಕೇಳಿ ಬಂದಿದೆ. ಚೆನ್ನೈ ಪೊಲೀಸರು ಬಂಧನ ವಾರೆಂಟ್‌ ಜಾರಿ ಮಾಡಿದ್ದು ನಟ ಕಾಣೆಯಾಗಿದ್ದಾರೆ. ರಾಹುಲ್‌ ರವಿ ವಿರುದ್ಧ ಅವರ ಪತ್ನಿ ಕಿರುಕುಳ ದೂರು ದಾಖಲಿಸಿದ್ದರು. ದೂರಿನ ಬಳಿಕ ಬಂಧನ ಭೀತಿಯಿಂದ ರಾಹುಲ್‌ ತಲೆಮರೆಸಿಕೊಂಡಿದ್ದರು.
ರಾಹುಲ್‌ ರವಿ ಅವರು ತಮಿಳು ಕಿರುತೆರೆಯ ಜನಪ್ರಿಯ ನಟ.ತಮಿಳು ಭಾಷೆಯಲ್ಲಿ ನಂದಿನಿ ಧಾರಾವಾಹಿಯಲ್ಲಿ ನಟಿಸಿ ಅದನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಪ್ರಸಾರ ಮಾಡಲಾಗುತ್ತಿತ್ತು. ಈ ಮೂಲಕ ಕನ್ನಡ ಟಿವಿ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ರಾಹುಲ್‌ ರವಿ ಅದಾದ ಬಳಿಕ ಹಲವು ಟಿವಿ ಕಾರ್ಯಕ್ರಮಗಳು, ಸಿನಿಮಾಗಳಲ್ಲಿ ಅವಕಾಶ ಪಡೆದಿದ್ದರು. ಇವರು 2020ರಲ್ಲಿ ಲಕ್ಷ್ಮಿಯನ್ನು ಮದುವೆಯಾಗಿದ್ದರು.


ಕೆಲವು ದಿನಗಳ ಹಿಂದೆ ಲಕ್ಷ್ಮಿ ಅವರು ರಾಹುಲ್‌ ವಿರುದ್ಧ ಚೆನ್ನೈ ಪೊಲೀಸರಿಗೆ ಕಿರುಕುಳದ ದೂರು ನೀಡಿದ್ದರು.ಲಕ್ಷ್ಮೀಯವರನ್ನು ವಿವಾಹವಾದ ಮೂರೇ ವರ್ಷಗಳಲ್ಲಿ ಇವರಿಬ್ಬರ ನಡುವೆ ಜಗಳ ಆರಂಭವಾಗಿತ್ತು. ರಾಹುಲ್‌ ರವಿ ಅವರು ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿತ್ತು.


ಇದೇ ಕಾರಣಕ್ಕೆ ಇವರಿಬ್ಬರ ನಡುವೆ ಜಗಳವಾಗಿದೆ ಎಂದು ವರದಿಗಳು ತಿಳಿಸಿವೆ.ರಾಹುಲ್‌ ರವಿ ಅವರು ಮದುವೆಯಾದ ಬಳಿಕವೂ ಬೇರೆ ಯುವತಿ ಜತೆ ಆತ್ಮೀಯತೆ, ಸಂಬಂಧ ಹೊಂದಿದ್ದರು ಎಂದು ಪತ್ನಿ ಆರೋಪಿಸಿದ್ದರು. ತನ್ನ ಪತಿಗೆ ಬೇರೆ ಯುವತಿ ಜತೆ ಸಂಬಂಧ ಇರುವ ವಿಚಾರ ತಿಳಿದ ಬಳಿಕ ಲಕ್ಷ್ಮೀ ಅವರು ನೇರವಾಗಿ ಪೊಲೀಸರ ಜತೆ ಯುವತಿ ಇರುವ ಅಪಾರ್ಟ್‌ಮೆಂಟ್‌ಗೆ ಮಧ್ಯರಾತ್ರಿ ಹೋಗಿದ್ದರು. ಈ ಸಂದರ್ಭದಲ್ಲಿ ತನ್ನ ಪತಿ ಬೇರೊಬ್ಬ ಯುವತಿ ಜತೆ ಬೆಡ್‌ರೂಂನಲ್ಲಿರುವುದನ್ನು ತಿಳಿದುಬಂದಿತ್ತು. ನಂದಿನಿ ಧಾರಾವಾಹಿ ನಟನ ವಿರುದ್ಧ ಲಕ್ಷ್ಮೀ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

FILM

35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

Published

on

ಮಂಗಳೂರು/ಚೆನ್ನೈ: ವಯಸ್ಸು 47 ಆಗಿದ್ದರೂ ಬ್ಯಾಚುಲರ್ ಆಗಿಯೇ ಉಳಿದಿದ್ದ ನಟ ವಿಶಾಲ್ ಕೊನೆಗೂ ಏಕಾಂಗಿ ಜೀವನಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಕೊನೆಗೂ ವಿಶಾಲ್ ಅವರು ಮದುವೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅವರು ಕೈ ಹಿಡಿಯಲಿರುವ ವಧು ಯಾರು ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

ಹೌದು, ವಿಶಾಲ್ ಕೃಷ್ಣ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಹಾಗಾದರೆ ಹುಡುಗಿ ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ತಮಿಳು ಚಿತ್ರರಂಗದ ಖ್ಯಾತ ನಟಿ ಸಾಯಿ ಧನ್ಶಿಕಾ ಜೊತೆ ವಿಶಾಲ್ ಹಸೆಮಣೆ ಏರಲಿದ್ದಾರೆ. ಇದು ಲವ್ ಮ್ಯಾರೇಜ್ ಕೂಡ ಹೌದು. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ.

ಕಳೆದ 15 ವರ್ಷಗಳಿಂದ ಪರಿಚಿತರಾಗಿರುವ ಧನ್ಶಿಕಾ ಜೊತೆ ವಿಶಾಲ್ ಮದುವೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ‘ಯೋಗಿದ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶಾಲ್, ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಅವರ ಆಶೀರ್ವಾದೊಂದಿಗೆ ನಾನು ಅವಳನ್ನು ಪರಿಚಯಿಸುತ್ತಿದ್ದೇನೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

ಬಳಿಕ ಮಾತನಾಡಿದ ಧನ್ಶಿಕಾ, ನಮ್ಮ ಸುದ್ದಿ ವರದಿ ವೈರಲ್ ಆದ ನಂತರ ನಮ್ಮ ಸಂಬಂಧವನ್ನು ಅಧಿಕೃತಗೊಳಿಸುವಂತೆ ಒತ್ತಾಯಿಸಲಾಯಿತು ಎಂದರು. ನಾವಿಬ್ಬರು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಲು ಬಯಸಿರಲಿಲ್ಲ. ಆದಾಗ್ಯೂ, ಇಂದು ಬೆಳಗ್ಗೆ ಸುದ್ದಿ ವರದಿ ವೈರಲ್ ಆಯಿತು. ಹೀಗಾಗಿ ಮರೆಮಾಡಲು ಏನೂ ಉಳಿದಿಲ್ಲ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಆಗಸ್ಟ್‌ 29ರಂದು ವಿಶಾಲ್ ಅವರ ಹುಟ್ಟುಹಬ್ಬ. ಅದೇ ದಿನ ವಿವಾಹ ನಿಶ್ಚಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್‌ ಖುಷ್‌ ಆಗಿದ್ದಾರೆ.

Continue Reading

FILM

ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

Published

on

ಮಂಗಳೂರು/ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಈ ವೇಳೆ ಒಂದಷ್ಟು ಅಚ್ಚರಿಯ ಘಟನೆ ನಡೆದಿದೆ.

ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಆಗಮಿಸಿದರು.

ಮೊದಲಿಗೆ ಪವಿತ್ರಾಗೌಡ ಅವರಿಂದ ದೂರ ನಿಂತಿದ್ದ ದರ್ಶನ್, ನ್ಯಾಯಾಧೀಶರು 1ನೇ ಆರೋಪಿತೆ ಪಕ್ಕ ನಿಲ್ಲಿ ಎಂದು ಸೂಚಿಸಿದ್ದಾರಂತೆ. ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್‌ನಲ್ಲಿ ಅಕ್ಕ-ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ದಾಸ ಗಪ್‌ ಚುಪ್ ಆಗಿದ್ದರಂತೆ. ಕೋರ್ಟ್‌ನಿಂದ ಹೊರ ಬರುತ್ತಿದ್ದಂತೆ ದರ್ಶನ್‌ ಕೈನ ಪವಿತ್ರಾ ಹಿಡಿದುಕೊಂಡಿದ್ದರು.

ಆದರೆ ಕೋರ್ಟ್​ನಿಂದ ಹೊರಹೋಗುವಾಗ ಜನ ಜಂಗುಳಿ ಇತ್ತು. ಈ ಕಾರಣಕ್ಕೆ ದರ್ಶನ್ ಹಾಗೂ ಪವಿತ್ರಾ ಕೈ ಕೈ ಹಿಡಿದು ಬಂದಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನೂ ಲಿಫ್ಟ್‌ನಲ್ಲಿ ನಟ ದರ್ಶನ್‌ಗೆ ಪವಿತ್ರಾಗೌಡ ಅವರು ದುಂಬಾಲು ಬಿದ್ದು ಮಾತನಾಡಿಸಿದರು. ಕೈ ಹಿಡಿದು ಫೋನ್ ನಂಬರ್ ನೀಡುವಂತೆ ಒತ್ತಾಯ ಮಾಡಿದರು. ಕೊನೆಗೆ ದರ್ಶನ್ ಅವರು ತನ್ನ ಮೊಬೈಲ್‌ ಸಂಖ್ಯೆಯನ್ನೂ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page