Connect with us

NATIONAL

ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ಅರೆಸ್ಟ್ ವಾರೆಂಟ್ ಜಾರಿ !

Published

on

ಮಂಗಳೂರು/ಬೆಂಗಳೂರು: ಟೀಮ್ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ವಿರುದ್ದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ವಾರೆಂಟ್ ಜಾರಿ ಮಾಡಲಾಗಿದೆ.

ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಪಿಎಫ್ ಹಣ ಪಾವತಿಸದೇ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಎಷ್ಟು ದಿನ ಅಂತಾ ಈ ತಾರತಮ್ಯ ಸಹಿಸೋಕೆ ಸಾಧ್ಯ; ಸ್ಪೋಟಕ ಹೇಳಿಕೆ ನೀಡಿದ ಅಶ್ವಿನ್ ತಂದೆ !

ರಾಬಿನ್ ಉತ್ತಪ್ಪ ಒಡೆತನದ ಕಂಪೆನಿಯು ಉದ್ಯೋಗಿಗಳ ಪಿಎಫ್ ಖಾತೆಗೆ ಹಣ ಹಾಕದೆ 23 ಲಕ್ಷ ರೂ. ವಂಚನೆ ಆರೋಪ ಕೇಳಿ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪಿಎಫ್ ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ಗೋಪಾಲ ರೆಡ್ಡಿ ಅವರು, ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಇದೇ ತಿಂಗಳು ನಾಲ್ಕರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ.

ಈ ಹಿನ್ನಲೆಯಲ್ಲಿ ರಾಬಿನ್ ಉತ್ತಪ್ಪ ಅವರಿಗೆ ನೋಟಿಸ್ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಆದರೆ ಪ್ರಸ್ತುತ ಆ ವಿಳಾಸದಲ್ಲಿ ಅವರು ವಾಸವಿಲ್ಲ. ಹೀಗಾಗಿ ಇದೀಗ ಉತ್ತಪ್ಪ ಅವರಿಗೆ ವಾರೆಂಟ್ ಜಾರಿಗೊಳಿಸಲಾಗಿದೆ.

ಸದ್ಯ ರಾಬಿನ್ ಉತ್ತಪ್ಪ ಭಾರತವನ್ನು ತೊರೆದು ದುಬೈನಲ್ಲಿ ನೆಲೆಸಿದ್ದಾರೆ. ಇದೀಗ ಅವರ ವಿರುದ್ದ ಪ್ರಕರಣ ದಾಖಲಾಗಿರುವ ಕಾರಣ ಬೆಂಗಳೂರಿಗೆ ಬರುವ ಸಾಧ್ಯತೆಯಿದೆ.

ಭಾರತ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಟೀಮ್ ಇಂಡಿಯಾ ಪರ ಒಟ್ಟು 59 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್​ನಲ್ಲಿ 934 ರನ್ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ 249 ರನ್ ಸಿಡಿಸಿದ್ದಾರೆ. ಇದರ ನಡುವೆ 7 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದೀಗ ನಿವೃತ್ತರಾಗಿರುವ ರಾಬಿನ್ ಕೆಲ ಲೀಗ್​​ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

DAKSHINA KANNADA

‘ಪೇಟಾ’ ಗೆ ಶಾಕ್‌ ಕೊಟ್ಟ ಸುಪ್ರೀಂ ಕೋರ್ಟ್‌ ತೀರ್ಪು; ಕಂಬಳಾಭಿಮಾನಿಗಳಿಗೆ ಗುಡ್‌ ನ್ಯೂಸ್!‌

Published

on

ನವದೆಹಲಿ: ಕಂಬಳವನ್ನು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ನಡೆಸಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ಇಂದು (ಮಾ.10) ವಜಾಗೊಳಿಸಿದೆ.

ಹೌದು.. ಕರ್ನಾಟಕ ಹೈಕೋರ್ಟ್‌ನ ಈ ಹಿಂದೆ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಘಟನೆ ‘ಪೇಟಾ’ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಬೆಂಗಳೂರಿನ ಕಂಬಳ ಆಯೋಜಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಪೇಟಾ ಪರ ವಕೀಲರು, ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳಲ್ಲಿ ಇದು ಸಾಂಪ್ರದಾಯಿಕ ಕ್ರೀಡೆಯಾಗಿದೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ‘ಬೆಂಗಳೂರಿನ ಸಂಪ್ರದಾಯ ಮತ್ತು ಸಂಸ್ಕೃತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಆದರೆ, ಈಗ ಈ ಕಾರ್ಯಕ್ರಮವನ್ನು ರಾಜ್ಯ ರಾಜಧಾನಿಯಲ್ಲಿ ನಡೆಸಲಾಗುತ್ತಿದೆ’ ಎಂದು ಹೇಳಿದರು.

ಈ ವಾದವನ್ನು ತಳ್ಳಿಹಾಕಿದ ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌ ಮತ್ತು ಸಂದೀಪ್‌ ಮೆಹ್ತಾ ಅವರಿದ್ದ ಪೀಠವು, ಸಾಂಸ್ಕೃತಿಕ ಪರಂಪರೆಯನ್ನು ಪಸರಿಸುವ ಹಕ್ಕನ್ನು ಎತ್ತಿ ಹಿಡಿದಿದೆ.

ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಮೆಹ್ತಾ ಅವರು,’ರಾಜ್ಯದ ಬೇರೆ ಭಾಗದ ಜನರು ಈ ಕ್ರೀಡೆ ಮತ್ತು ಸಂಸ್ಕೃತಿಯನ್ನು ತಿಳಿದುಕೊಳ್ಳಲಿ. ಇದಕ್ಕೆ ಯಾವುದೇ ಅಡೆತಡೆ ಬೇಡ. ಒಂದು ಸಂಸ್ಕೃತಿಯನ್ನು ರಾಜ್ಯದ ಇತರ ಭಾಗಗಳ ಜನರಿಗೂ ಪರಿಚಯಿಸುವುದರಲ್ಲಿ ತಪ್ಪೇನಿದೆ? ಅದನ್ನು ಕೇವಲ ಒಂದು ನಿರ್ದಿಷ್ಟ ಪ್ರದೇಶಕ್ಕೆ ಮಾತ್ರ ಏಕೆ ಸೀಮಿತಗೊಳಿಸಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಲ್ಲದೆ, ಅರ್ಜಿಯನ್ನು ವಜಾಗೊಳಿಸುವ ವೇಳೆ ಪೀಠವು, ‘ಮುಂಬರುವ ದಿನಗಳಲ್ಲಿ ನಾವು ಪೇಟಾ ಸಂಘಟನೆಗೂ ಕೆಲವು ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಬಂಟ್ವಾಳ ಮೂಡೂರು ಪಡೂರು ಜೋಡುಕರೆ ಕಂಬಳ : ಇಲ್ಲಿದೆ ಫಲಿತಾಂಶ

2023ರ ಮೇನಲ್ಲಿ, ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ‘ಜಲ್ಲಿಕಟ್ಟು’ ಮತ್ತು ಕಂಬಳಕ್ಕೆ ಅನುಮತಿ ನೀಡುವ ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದ ತಿದ್ದುಪಡಿ ಕಾಯ್ದೆಗಳ ಸಿಂಧುತ್ವವನ್ನು ಎತ್ತಿಹಿಡಿದಿತ್ತು. ಇದೀಗ ಮತ್ತೊಂದು ಐತಿಹಾಸಿಕ ತೀರ್ಪಿನೊಂದಿಗೆ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಂಬಳ ಆಯೋಜಿಸಲು ಇದ್ದ ಅಡ್ಡಿಗಳು ದೂರವಾದಂತಾಗಿದೆ. ಕರಾವಳಿಯ ಹೆಮ್ಮೆಯ ಸಂಪ್ರದಾಯವನ್ನು ದೇಶದಾದ್ಯಂತ ಪಸರಿಸಲು ಉತ್ಸುಕರಾಗಿರುವ ಕಂಬಳಾಭಿಮಾನಿಗಳಿಗೆ ಈ ತೀರ್ಪು ಭಾರಿ ಖುಷಿ ನೀಡುವುದರಲ್ಲಿ ಸಂದೇಹವೇ ಇಲ್ಲ.

Continue Reading

LATEST NEWS

5 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ ‘ಜ್ವಾಲಾ’

Published

on

ಮಂಗಳೂರು/ಮಧ್ಯಪ್ರದೇಶ :  ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾಗಿದ್ದ ಚೀತಾ ‘ಜ್ವಾಲಾ’ ಇಂದು(ಮಾ.09) ಐದು ಮರಿಗಳಿಗೆ ಜನ್ಮ ನೀಡಿದೆ.  ಜ್ವಾಲಾ ಐದು ಮರಿಗಳಿಗೆ ಜನ್ಮ ನೀಡುವ ಮೂಲಕ ದೇಶದಲ್ಲಿನ ಒಟ್ಟು ಚೀತಾಗಳ ಸಂಖ್ಯೆ ಇದೀಗ 53ಕ್ಕೆ ಏರಿದೆ.

ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಈ ಖುಷಿಯ ವಿಚಾರವನ್ನು ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ನಮೀಬಿಯಾದ ಚಿರತೆ ಜ್ವಾಲಾ ಇಂದು ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ್ದು, ಪ್ರಾಜೆಕ್ಟ್ ಚೀತಾಗೆ ಹೆಮ್ಮೆಯ ಕ್ಷಣ. ಈ ಜನನದೊಂದಿಗೆ, ಭಾರತದಲ್ಲಿ ಜನಿಸಿದ ಚಿರತೆಯ ಮರಿಗಳ ಸಂಖ್ಯೆ 33 ಕ್ಕೆ ಏರಿದೆ. ಇದು ಭಾರತದ ಚಿರತೆ ಸಂರಕ್ಷಣಾ ಪ್ರಯಾಣದಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು. ಈ ಸಾಧನೆಯು ಪಶುವೈದ್ಯರು, ಕ್ಷೇತ್ರ ಸಿಬ್ಬಂದಿ ಮತ್ತು ನೆಲದ ಮೇಲೆ ದಣಿವರಿವಿಲ್ಲದೆ ಕೆಲಸ ಮಾಡುತ್ತಿರುವ ಎಲ್ಲರ ಸಮರ್ಪಿತ ಪ್ರಯತ್ನಗಳು, ಕೌಶಲ್ಯ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಈ ಮರಿಗಳ ಆಗಮನದೊಂದಿಗೆ, ಭಾರತದಲ್ಲಿ ಒಟ್ಟು ಚೀತಾಗಳ ಸಂಖ್ಯೆಯು ಈಗ 53 ಕ್ಕೆ ತಲುಪಿದೆ. ವನ್ಯಜೀವಿ ಸಂರಕ್ಷಣೆಗೆ ಒಂದು ಐತಿಹಾಸಿಕ ಮತ್ತು ಹೃದಯಸ್ಪರ್ಶಿ ಕ್ಷಣ. ಜ್ವಾಲಾ ಮತ್ತು ಅವಳ ಮರಿಗಳು ಬಲವಾಗಿ ಬೆಳೆದು ಮುಂದೆ ಓಡಲಿ, ಭಾರತದ ಚಿರತೆಯ ಕಥೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ ಎಂಬುದಾಗಿ ಬರೆದುಕೊಂಡಿರುವ ಅವರು ಮರಿಗಳಿಗೆ ಜ್ವಾಲಾ ಹಾಲುಣಿಸುತ್ತಿರುವ ವೀಡಿಯೋ ಹಂಚಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ ‘ಗಾಮಿನಿ’ ಎಂಬ ಚೀತಾ ನಾಲ್ಕು ಮರಿಗಳಿಗೆ ಜನ್ಮ ನೀಡಿತ್ತು. ಈಗ ಜ್ವಾಲಾ ಐದು ಮರಿಗಳಿಗೆ ಜನ್ಮ ನೀಡಿರುವುದು ‘ಪ್ರಾಜೆಕ್ಟ್ ಚೀತಾ’ದ ಯಶಸ್ಸಿಗೆ ಮತ್ತಷ್ಟು ಬಲ ಕೊಟ್ಟಿದೆ.

ಇದನ್ನೂ ಓದಿ : 71 ಕಿ.ಮೀ ಉದ್ದದ ದೇಶದ ಮೊದಲ ರಿಂಗ್ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ

ಇದುವರೆಗೆ ಭಾರತದಲ್ಲಿ ಒಟ್ಟು 33 ಚೀತಾ ಮರಿಗಳು ಜನಿಸಿವೆ. ಇದು 10ನೇ ಯಶಸ್ವಿ ಹೆರಿಗೆಯಾಗಿದೆ. 70 ವರ್ಷಗಳ ಹಿಂದೆ ಭಾರತದಲ್ಲಿ ಅಳಿವಿನಂಚಿನಲ್ಲಿದ್ದ ಚೀತಾಗಳ ಸಂತತಿಯನ್ನು ಮರುಸ್ಥಾಪಿಸುವ  ಯೋಜನೆ ಇದಾಗಿದ್ದು, ಭಾರತ ಆ ನಿಟ್ಟಿನಲ್ಲಿ ಯಶಸ್ಸಿನತ್ತ ಸಾಗುತ್ತಿದೆ.

 

Continue Reading

LATEST NEWS

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆಯಲ್ಲಿ ಇಳಿಕೆ

Published

on

ಮಂಗಳೂರು/ಬೆಂಗಳೂರು : ಚಿನ್ನ ಭಾರತೀಯರಿಗೆ ಪ್ರಿಯವಾದ ಲೋಹ. ಶುಭ ಸಮಾರಂಭಗಳಿಗೆ ಚಿನ್ನ ಅಗತ್ಯವೆಂದು ಪರಿಗಣಿಸ್ಪಟ್ಟಿದೆ. ಆದರೆ,  ಇತ್ತೀಚೆಗಂತೂ ಚಿನ್ನದ ದರ ಏರುಗತಿಯಲ್ಲಿ ಸಾಗುತ್ತಿದೆ. ಇದೀಗ ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಹೌದು, ಚಿನ್ನದ ಬೆಲೆಯಲ್ಲಿ ಇಂದು(ಮಾ.09) ಇಳಿಕೆ ಕಂಡಿದೆ. 15,000 ರೂ. ಗಡಿಯೊಳಗೆ ಚಿನ್ನದ ದರ ಬಂದಿದೆ.

ಚಿನ್ನದ ದರ ಎಷ್ಟು?

ಇಂದು (ಮಾರ್ಚ್ 9) 24 ಕ್ಯಾರೆಟ್ ಚಿನ್ನದ ದರ ಗ್ರಾಂಗೆ 16,168 ಆಗಿದ್ದು, ನಿನ್ನೆಗಿಂತ 196 ಇಳಿಕೆಯಾಗಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನದ ದರ ಗ್ರಾಂಗೆ 14,820 ಆಗಿದ್ದು, ನಿನ್ನೆ ದಿನದ ಹೋಲಿಕೆಯಲ್ಲಿ 180 ಇಳಿಕೆ ಕಂಡಿದೆ.

10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,48,200 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,61,680 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 28,000 ರುಪಾಯಿ ಇದೆ.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,48,200 ರೂಪಾಯಿ ಆಗಿದೆ. ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರೂಪಾಯಿ ಇದೆ.

Continue Reading
Advertisement

Trending

Copyright © 2025 Namma Kudla News

You cannot copy content of this page