Connect with us

DAKSHINA KANNADA

ಮಹಾ ಕುಂಭಮೇಳದಲ್ಲಿ ಯು.ಟಿ. ಖಾದರ್; ನಾಗಾಸಾಧುಗಳು, ಅಘೋರಿಗಳ ಭೇಟಿ

Published

on

ಮಂಗಳೂರು/ಪ್ರಯಾಗ್‌ ರಾಜ್ : ತನ್ನ ಸರಳತೆ, ಜಾತ್ಯತೀತ ತತ್ವಗಳ ಅನುಕರಣೆಯಿಂದ ಹೆಸರುವಾಸಿಯಾಗಿರುವ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಏಕತೆ ಮತ್ತು ಕೋಮು ಸಾಮರಸ್ಯದ ಸಂಕೇತವಾಗಿ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ಸೌಹಾರ್ದ ಮೆರೆದಿದ್ದಾರೆ.

ಅವರು ನದಿಗೆ ಇಳಿದು ಪವಿತ್ರ ನೀರನ್ನು ಚಿಮುಕಿಸಿಕೊಂಡರಲ್ಲದೆ, ದೋಣಿ ವಿಹಾರ ನಡೆಸಿ ಮಹಾಕುಂಭದ ಸೊಬಗನ್ನು ಸವಿದರು.

ಉತ್ತರಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಶುಕ್ರವಾರ ಕುಂಭಮೇಳದಲ್ಲಿ ಪಾಲ್ಗೊಂಡ ಖಾದರ್, ನಾಗಾಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಅವರು ಅಲಹಾಬಾದ್‌ನಲ್ಲಿ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ ದರ್ಗಾ ಶರೀಪ್ಗೂ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

 

ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ನಾನು ಮತ್ತು ಮಿತ್ರರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದೇವೆ. ತುಂಬಾ ಖುಷಿಯಾಗಿದೆ. ಉತ್ತಮ ಅನುಭವ ಪಡೆದುಕೊಂಡೆ. ದೇಶದ ವಿವಿಧ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಲು ವಿಶೇಷ ಅವಕಾಶ ಲಭಿಸಿತು. ಇದು ವಿಶ್ವಾಸಭರಿತ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಖಾದರ್ ಹೇಳಿದ್ದಾರೆ.

DAKSHINA KANNADA

ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

Published

on

ಮಂಗಳೂರು: ನಗರದ ಕೋಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಮೇ 20 ರಂದು ಮತ್ತೆ ಕೈದಿಗಳ ನಡುವೆ ಹೊಡೆದಾಟ ನಡೆದಿರುವುದಾಗಿ ವರದಿಯಾಗಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಹಿಂದೂ ಕೈದಿಗೆ ಮತ್ತೋರ್ವ ಕೈದಿ ಮುನೀರ್ ಹೊಡೆದಿದ್ದಾನೆ. ಇದರಿಂದ, ಆಕ್ರೋಶಗೊಂಡ ಇತರ ಕೈದಿಗಳು ಮುನೀರ್ ಮೇಲೆ ಹಲ್ಲೆಗೆ ಮುಂದಾದರು.

ಇದನ್ನೂ ಓದಿ: ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

ತಕ್ಷಣ ಜಾಗೃತರಾದ ಜೈಲಿನ ಅಧಿಕಾರಿಗಳು ಮುನೀರ್ ಮೇಲೆ ಹಲ್ಲೆ ಮಾಡುವುದನ್ನು ತಪ್ಪಿಸಿದರು. ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ.

ಬರ್ಕೆ ಪೊಲೀಸರು ಜೈಲು ಆವರಣಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಪ್ರಸ್ತುತ ಹೆಚ್ಚಿನ ತನಿಖೆ ನಡೆಯುತ್ತಿದೆ.

Continue Reading

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

DAKSHINA KANNADA

ಶಾಸಕ ಹರೀಶ್ ಪೂಂಜಾ ವಿರುದ್ದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

Published

on

ಉಪ್ಪಿನಂಗಡಿ : ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿತ್ತು. ಇಂದು(ಮೇ 20) ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜಾಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ : ಶಿಶಿಲದ ಶ್ರೀ ಶಿಶಿಲೇಶ್ವರನಿಗೆ ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ

ಈ ನಡುವೆ ಪೊಲೀಸರು ಶಾಸಕ ಪೂಂಜಾ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಶಾಸಕ ಹರೀಶ್ ಪೂಂಜಾಗೆ ಮತ್ತೊಂದು ಹಿನ್ನಡೆಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page