Connect with us

DAKSHINA KANNADA

ಪುತ್ತೂರು: ಲಾಡ್ಜ್‌ನಲ್ಲಿ ತಂಗಿದ್ದ ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಪರ ಸಂಘಟನೆಯಿಂದ ದಾಳಿ

Published

on

ಪುತ್ತೂರು: ಭಿನ್ನ ಕೋಮಿನ ಮಹಿಳೆ ಸೇರಿ ಮೂವರು, ಮೂರು ದಿನಗಳಿಂದ ಒಂದೇ ಲಾಡ್ಜ್‌ನಲ್ಲಿ ತಂಗಿದ್ದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದಾಳಿ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಈ ವೇಳೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.


ಘಟನೆ ಹಿನ್ನೆಲೆ
ಸೆ.18ರಂದು ಬೆಂಗಳೂರು ಮೂಲದ ಮಹಿಳೆ ಪುತ್ತೂರು ನಗರದ ಲಾಡ್ಜ್‌ನಲ್ಲಿ ತಂಗಿದ್ದರು.

ಆಕೆಯ ಕಾರು ಪ್ರಕರಣವೊಂದಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರ ವಶದಲ್ಲಿದ್ದು, ಇದನ್ನು ಬಿಡಿಸಲೆಂದು ನಗರಕ್ಕೆ ಆಗಮಿಸಿದ್ದಾರೆ.

ಈ ವೇಳೆ ಆಕೆಯ ಜೊತೆ ಉಳ್ಳಾಲ ಮೂಲದ ಹಾಗೂ ಬೆಂಗಳೂರಿನ ನಿವಾಸಿ ತಂಗಿದ್ದರು. ಸೆ.20ರಂದು ಸಂಜೆ ಇವರು ಲಾಡ್ಜ್ ನಲ್ಲಿ ಊಟ ಮಾಡುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ದಾಳಿ ನಡೆಸಿದೆ.

ತಕ್ಷಣವೇ ಸ್ಥಳಕ್ಕಾಗಮಿಸಿದ ಪೊಲೀಸರು ಮೂವರನ್ನು ಠಾಣೆಗೆ ಕರೆಯೊಯ್ದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹಿಳೆಯು ಐವರ ವಿರುದ್ದ ದೂರು ನೀಡಿದ್ದಾರೆ. ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹಿಂದೂ ಜಾಗರಣ ವೇದಿಕೆ ಆಗ್ರಹ

ಪುತ್ತೂರಿನ ವಸತಿಗೃಹಕ್ಕೆ ಹೊರಗಡೆಯಿಂದ ಅನೇಕರು ಬರುತ್ತಾರೆ. ಆದರೆ ವಸತಿಗೃಹಗಳು ತಂಗುವವರ ಆಧಾರ್ ಕಾರ್ಡ್ ಆಧಾರದಲ್ಲಿ ವಿಳಾಸ ದಾಖಲಿಸುತ್ತಿಲ್ಲ ಎಂಬ ಮಾಹಿತಿ ಇದೆ.

ಈ ನಿಟ್ಟಿನಲ್ಲಿ ಎಲ್ಲಾ ವಸತಿ ಗೃಹಗಳಿಗೆ ತಂಗಲು ಬರುವ ಗ್ರಾಹಕರ ಸರಿಯಾದ ದಾಖಲೆ ಇಟ್ಟುಕೊಳ್ಳುವಂತೆ ಮತ್ತು ಪೊಲೀಸರು ಈ ಕುರಿತು ಆಗಾಗ್ಗೆ ಪರಿಶೀಲನೆ ಮಾಡಬೇಕೆಂದು ಹಿಂದೂ ಜಾಗರಣ ವೇದಿಕೆ ಪುತ್ತೂರು ಘಟಕ ಆಗ್ರಹಿಸಿದೆ.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading

DAKSHINA KANNADA

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಹುಭಾಷಾ ನಟಿ ನಯನ ತಾರಾ ದಂಪತಿ ಭೇಟಿ

Published

on

ಸುಬ್ರಹ್ಮಣ್ಯ: ಬಹುಭಾಷಾ ನಟಿ ನಯನ ತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆವ ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾದರು.

ಪತಿ ವಿಘ್ನೇಶ್‌ ಶಿವನ್ ಜೊತೆ ಆಗಮಿಸಿದ ನಯನ್ ತಾರಾ ದಂಪತಿಗೆ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರ ಉಪಸ್ಥಿತಿಯಲ್ಲಿ ಸಮಿತಿ ಪ್ರಮುಖರು ಸೇರಿ ಗೌರವ ಸಲ್ಲಿಸಿದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page