Connect with us

BELTHANGADY

ಬೆಳ್ತಂಗಡಿ :   ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿ..!

Published

on

ಬೆಳ್ತಂಗಡಿ :   ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿ..!

ಬೆಳ್ತಂಗಡಿ:  ಆಟೋ ಚಾಲಕನಿಗೆ ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪ ನಿಡಿಗಲ್ ಸೀಟು ಎಂಬಲ್ಲಿ ನಡೆದಿದೆ.

ಉಜಿರೆ ಗ್ರಾಮದ ಗುರಿಪಳ್ಳ ಮಾಳಿಗೆ ಮನೆ ನಿವಾಸಿ ಸದಾನಂದ (58)ಎಂಬವರ ಆಟೋ ರಿಕ್ಷಾವನ್ನು ಬಾಡಿಗೆ ಪಡೆದು ಸೀಟು ಕಾಡಿನ ಸನಿಹದಲ್ಲಿ ಬರುತ್ತಿದ್ದಂತೆ ಚೂರಿ ಇರಿದು ಆರೋಪಿ ಪರಾರಿಯಾಗಿದ್ದಾನೆ.

ಆರೋಪಿಯನ್ನು ಗುರಿಪಳ್ಳ ನಿವಾಸಿ ಚಂದ್ರ ಶೇಖರ್ ಎಂದು ಗುರುತಿಸಲಾಗಿದೆ.

ಕುತ್ತಿಗೆಗೆ ಭಾಗಕ್ಕೆ ಗಾಯಗೊಂಡ ಆಟೋ ಚಾಲಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ಸ್ಥಳಕಾಗಮಿಸಿ ಘಟನೆಗೆ ಸಂಬಂಧಿಸಿ ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲು ಮಾಡಿದ್ದಾರೆ.

BELTHANGADY

ಬೆಳ್ತಂಗಡಿ: ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಹೃದಯಾ*ಘಾತದಿಂದ ಸಾ*ವು

Published

on

ಬೆಳ್ತಂಗಡಿ: ಹೃದಯಾ*ಘಾತದಿಂದ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಸಾ*ವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಸತೀಶ್ (46) ಮೃ*ತ ದುರ್ದೈವಿ. ಎಂದಿನಂತೆ ಇಂದು ಬೆಳಗ್ಗೆ ಸ್ನಾನ ಮಾಡಿ ವಾಪಸ್ ಬರುವಾಗ ಸತೀಶ್ ಕುಸಿದು ಬಿದ್ದಿದ್ದರು. ತಕ್ಷಣವೇ ಪತ್ನಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾರೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗುಂಡ್ಯ ಹೊಳೆಯಲ್ಲಿ ಅಪರಿಚಿತ ಗಂಡಸಿನ ಶ*ವ ಪತ್ತೆ

ಸತೀಶ್ ಮೂಲತಃ ಹಾಸನ ಜಿಲ್ಲೆಯವರಾಗಿದ್ದು, ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಮೃ*ತರು ಪತ್ನಿ, ಓರ್ವ ಮಗನನ್ನು ಅಗಲಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ನೇ*ಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ವಿವಾಹಿತ ಮಹಿಳೆ

Published

on

ಬೆಳ್ತಂಗಡಿ : ವಿವಾಹಿತ ಮಹಿಳೆಯೋರ್ವಳು ತಾಯಿ ಮನೆಯಲ್ಲಿ ನೇ*ಣುಬಿಗಿದು ಆತ್ಮಹ*ತ್ಯೆಗೆ ಶರಣಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಮಗಳು ರಮ್ಯಾ(32) ಮನೆಯ ಕೊಣೆಯಲ್ಲಿ ಜುಲೈ 12 ರಂದು ಮಧ್ಯಾಹ್ನ ನೇ*ಣುಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧ*ನ

ರಮ್ಯಾಗೆ ಆರೋಗ್ಯ ಸಮಸ್ಯೆ ಕಾಡುತ್ತಿದ್ದು, ತಾಯಿ ಮನೆಗೆ ಬಂದಿದ್ದ ರಮ್ಯಾ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಮಹತ್ಯೆ ಪ್ರಕರಣ ದಾಖಲಾಗಿದೆ.

Continue Reading

BELTHANGADY

ನಮ್ಮ ಕುಡ್ಲ ವಾಹಿನಿಯ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ

Published

on

ಧರ್ಮಸ್ಥಳ: 25 ವರ್ಷಗಳಿಂದ ನಿಖರ ಸುದ್ದಿಗಳೊಂದಿಗೆ ಸಂಪರ್ಕದಲ್ಲಿ ಇಟ್ಟಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತುಳು ವಾರ್ತಾ ವಾಹಿನಿ “ನಮ್ಮ ಕುಡ್ಲ” ಕ್ಕೆ ರಜತ ಮಹೋತ್ಸವ ಸಂಭ್ರಮ. ಸಣ್ಣ ಸುದ್ದಿ ಸಂಸ್ಥೆಯಾಗಿ ಪ್ರಾರಂಭವಾದ ಈ ಸಂಸ್ಥೆ ಇಂದು ದೇಶದಾದ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮವಾಗಿ ಬೆಳೆದು ನಿಂತಿದೆ. ಇದೀಗ ನಮ್ಮ ಕುಡ್ಲ ವಾಹಿನಿಯ 25ನೇ ವರ್ಷದ ಸಂಭ್ರಮದ ಅಂಗವಾಗಿ ಆಗಸ್ಟ್ 12 ಕ್ಕೆ “ನಮ್ಮ ಕುಡ್ಲ ಬೊಳ್ಳಿ ಪರ್ಬ 2025’’ ಎಂಬ ಕಾರ್ಯಕ್ರಮವು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಆ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬೆಳ್ಳಿಹಬ್ಬದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು ನಮ್ಮ ಕುಡ್ಲ ಸತತ 25 ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಬಿತ್ತರಿಸಿಕೊಂಡು ಬರುತ್ತಿದೆ. ಅಲ್ಲದೇ ಧರ್ಮಸ್ಥಳದಲ್ಲಿ ನಡೆಯುವ ಹಲವಾರು ಕಾರ್ಯಕ್ರಮದ ನೇರಪ್ರಸಾರವನ್ನು ಯಶಸ್ವಿಗೊಳಿಸಿದೆ. ಇದೇ ರೀತಿ 25 ವರ್ಷ, 50, 100 ವರ್ಷವಾಗಿ ಮುಂದುವರಿಯಲಿ ಎಂದು ಶುಭ ನುಡಿದರು.

ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಮಾತನಾಡಿ ಕರಾವಳಿ ಕರ್ನಾಟಕದ ಹೆಮ್ಮೆಯ ಚಾನೆಲ್ ಆಗಿದ್ದು, ನಮ್ಮ ಕುಡ್ಲ ವಾಹಿನಿ ತುಳು ಸಂಸ್ಕೃತಿಯನ್ನು ಜಗತ್ತಿನಾದ್ಯಂತ ಬಿಂಬಿಸುವುದರ ಜೊತೆಗೆ ಎಲ್ಲಾ ಕ್ಷೇತ್ರಗಳಲ್ಲೂ ನಡೆಯುವಂತಹ ವೈವಿಧ್ಯಮಯ ಕಾರ್ಯಕ್ರಮಗಳ ಸುದ್ದಿ ಹಾಗೂ ನೇರಪ್ರಸಾರಗಳನ್ನು ಮಾಡುತ್ತಿದೆ. ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುವ ಲಕ್ಷದೀಪ, ನಡಾವಳಿ, ಮಹಾಮಸ್ತಕಾಭಿಷೇಕ, ಮಕ್ಕಳ ಮೇಳ ಮತ್ತು ವಿಶ್ವ ತುಳು ಸಮ್ಮೇಳನ ಹೀಗೆ ಕ್ಷೇತ್ರದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮವನ್ನು ನಮ್ಮ ಕುಡ್ಲ ಚಾನೆಲ್ ತಪ್ಪಿಸದೇ ಜನರಿಗೆ ತಲುಪಿಸಲು ಕೆಲಸವನ್ನು ಮಾಡುತ್ತಿದೆ. ನಿನ್ನೆ ಮೊನ್ನೆ ಆರಂಭವಾದ ಸಂಸ್ಥೆಗೆ ಇದೀಗ 25 ವರ್ಷ ತುಂಬಿದೆ. ಮುಂದೆಯೂ ಹೆಚ್ಚಿನ ಕಾರ್ಯಕ್ರಮಗಳನ್ನು ಮನೆಯಲ್ಲೇ ಕುಳಿತು ನೋಡುವ ಹಾಗೆ ಬಿತ್ತರಿಸುವಂತಾಗಲಿ ಎಂದು ಹೇಳಿದರು.

ಇದನ್ನೂ ಓದಿ: ಆಗಸ್ಟ್ 12 ರಂದು ‘ನಮ್ಮ ಕುಡ್ಲ’ ವಾಹಿನಿಯ ಬೆಳ್ಳಿ ಹಬ್ಬ ಕಾರ್ಯಕ್ರಮ

ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರೂ ಶೆಟ್ಟಿ, ಧರ್ಮಸ್ಥಳ ಐಟಿ ಡಿವಿಜನ್‌ನ ಮ್ಯಾನೇಜರ್ ಮಲ್ಲಿನಾಥ್ ಜೈನ್, ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರ, ಸಿಒಒ ಕದ್ರಿ ನವನೀತ್ ಶೆಟ್ಟಿ, ಹಿರಿಯ ಕ್ಯಾಮೆರಾ ಮನ್‌ ಶ್ರೀಕಾಂತ್ ರಾವ್‌, ಸಂತೋಷ್ ದೇವಾಡಿಗ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page