Connect with us

ಕೊರೊನಾ ಹೊಡೆತಕ್ಕೆ ನಲುಗಿದ ಮಂಗಳೂರಿನ ಪ್ರಥಮ ರಿಕ್ಷಾ ಚಾಲಕ ….!!

Published

on

ಮಂಗಳೂರು : ಕೊರೊನಾ ಮಹಾಮಾರಿ ಎಲ್ಲರ ಬದುಕನ್ನೂ ಸರ್ವ ನಾಶ ಮಾಡಿಬಿಟ್ಟಿದೆ. ದುಡಿದು ತಿನ್ನುವ ದಿನಕೂಲಿ ನೌಕರರಿಂದ ಹಿಡಿದು, ಪ್ರಾಮಾಣಿಕವಾಗಿ ಆಟೋ ರಿಕ್ಷಾ ಓಡಿಸಿ ಬದುಕು ಹೊರೆಯುತ್ತಿದ್ದ ಜೀವಗಳೂ ಇಂದು ಕೊರೊನಾದಿಂದಾಗಿ ಒಂದು ಹೊತ್ತಿನ ಊಟಕ್ಕೂ ಪರದಾಡ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿ ಕಳೆದ 60 ವರ್ಷಗಳಿಂದ ಆಟೋರಿಕ್ಷಾ ಓಡಿಸುತ್ತಾ ಕಾಯಕಯೋಗಿ, ಸಾರಥಿ ನಂಬರ್‌ ಒನ್‌ ಎನ್ನುವ ಹೆಗ್ಗಳಿಕೆ ಪಡೆದ ಆಟೋರಿಕ್ಷ ಚಾಲಕರೊಬ್ಬರು, ಬಾಡಿಗೆ ಇಲ್ಲದೆ, ಅನಾರೋಗ್ಯದಲ್ಲಿರುವ ಪತ್ನಿಯನ್ನು ಸಲಹುತ್ತಾ ಕಣ್ನೀರಿಡುತ್ತಿದ್ದಾರೆ……


85ರ ಇಳಿ ವಯಸ್ಸಲ್ಲೂ ಎಳೆಯರಂತಹ ಉತ್ಸಾಹ. 65 ವರ್ಷಗಳಿಂದ ಆಟೋ ರಿಕ್ಷಾ ಚಾಲಕನ ವೃತ್ತಿ. ಇದುವರೆಗೂ ಒಂದೇ ಒಂದು ಪೊಲೀಸ್‌ ಕೇಸ್‌ ಇಲ್ಲದೆ, ಅಪಘಾತ ಎಸಗದೆ ನಿಷ್ಠೆಯಿಂದ ದುಡಿಯುತ್ತಿರುವ ಕಾಯಕಯೋಗಿ. ವಿಶೇಷವೆಂದರೆ ಮಂಗಳೂರಿನಲ್ಲಿ ಪ್ರಪ್ರಥಮವಾಗಿ ಓಡಾಟ ನಡೆಸಿದ ರಿಕ್ಷಾದ ಚಾಲಕ. ಇವರೇ ಮಂಗಳೂರಿನ ಜಪ್ಪು ನಿವಾಸಿ ಮೊಂತು ಲೋಬೋ. ಅವರೇ ಇಳಿ ವಯಸ್ಸಿನಲ್ಲಿಯೂ ಉತ್ಸಾಹದಿಂದ ಆಟೋ ಓಡಿಸುತ್ತಿರುವವರು. ಮಕ್ಕಳಿದ್ದರೂ ಅನಾರೋಗ್ಯದಲ್ಲಿರುವ ಪತ್ನಿಯನ್ನು ತಾನೇ ದುಡಿದು ಸಲಹುತ್ತಿರುವ ಇವರು ಇಳಿ ಹರೆಯದಲ್ಲೂ ಯಾರ ಬಳಿಯೂ ಕೈಚಾಚದೇ ಆಟೋರಿಕ್ಷಾದ ಬಾಡಿಗೆಯಿಂದ ಸ್ವಾವಲಂಬಿ ಜೀವನ ನಡೆಸುತ್ತಿದ್ದವರು. ಆದರೆ ಇವರ ಬದುಕಿನಲ್ಲೂ ಇಂದು ಕೊರೊನಾ ಆಘಾತ ತಂದಿಟ್ಟಿದೆ. ಲಾಕ್‌ ಡೌನ್‌ನಿಂದ ಕಳೆದ ನಾಲ್ಕೈದು ತಿಂಗಳಿನಿಂದ ದುಡಿಮೆ ಇಲ್ಲ. ಆಟೋ ಓಡಿಸಿದರೂ ಬಾಡಿಗೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ.


ದೇವರ ದಯೆ, ತಾಯಿ-ತಂದೆಯ ಆಶೀರ್ವಾದ, ನನ್ನ ಪ್ರಯತ್ನ ಮತ್ತು ಜನರ ಸಹಕಾರದಿಂದ ಒಂದೇ ಒಂದು ಅಪಘಾತ ಎಸಗಿಲ್ಲ. ಆದರೆ ಇದೀಗ ಕೊರೊನಾದಿಂದಾಗಿ ಬದುಕೇ ನರಕವಾಗಿದೆ. ಕೆಲಸ ಇಲ್ಲದೆ ಹೊತ್ತು ಹೋಗುತ್ತಿಲ್ಲ. ಸಹೃದಯರು ತಮಗೆ ನೆರವಾಗಬೇಕಾಗಿದೆ ಎನ್ನುತ್ತಾರೆ ಅವರು.

Advertisement
Click to comment

Leave a Reply

Your email address will not be published. Required fields are marked *

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

LATEST NEWS

ರಾಜ್ಯ ಸರ್ಕಾರ ಮಂಡಿಸಿದ್ದು ನಿರಾಶಾದಾಯಕ ಬಜೆಟ್: ಉದಯ್ ಕುಮಾರ್ ಶೆಟ್ಟಿ

Published

on

ಉಡುಪಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ. ಯಾವುದೇ ದೂರದೃಷ್ಟಿ ಇಲ್ಲದ ಕಾಟಾಚಾರದ ಬಜೆಟ್ ಇದಾಗಿದೆ. ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ರು. ಆದರೆ ಬಹುಪಾಲು ಯೋಜನೆಗಳು ಹಳ್ಳ ಹಿಡಿದಿದೆ ಎಂದು ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ ವ್ಯಂಗ್ಯವಾಡಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಕರಾವಳಿ ಜಿಲ್ಲೆಗಳಿಗೆ ವಿಶೇಷ ಸವಲತ್ತುಗಳು ನೀಡಬೇಕು ಅನ್ನೊ‌ ನಿರೀಕ್ಷೆ ಇತ್ತು ಅದ್ರೆ ಯಾವುದೇ ಸೌಲಭ್ಯ ನೀಡಿಲ್ಲ. ಯುವ ನಿಧಿ ಯೋಜನೆಯನ್ನು ಆರಂಭಿಸಿದ್ರು ಯುವಜನತೆಗೆ ಪ್ರಯೋಜನ ಅಗಿಲ್ಲ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಆಶಾದಾಯಕ ಬಜೆಟ್ ಅನ್ನೋ ನಿರೀಕ್ಷೆ ಸುಳ್ಳಾಗಿದೆ. ಗೋವು ಸಾಗಾಟ ಬಗ್ಗೆ ಕಟ್ಟುನಿಟ್ಟಾದ ಕ್ರಮಕ್ಕೆ ಸರ್ಕಾರ ಮುಂದಾಗಿಲ್ಲ. ಇನ್ನು ಗೋ ರಕ್ಷಣೆ ಶಿಬಿರ ನಡೆಸಲು ಕಾಂಗ್ರೆಸ್ ಮುಂದಾಗಿರೋದು ಅಭಾಸ ಸಂಗತಿ ಎಂದು ಹೇಳಿದರು.

Continue Reading

DAKSHINA KANNADA

ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ

Published

on

ಮಂಗಳೂರು: ನಗರದ ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ. ರಾಜ್ಯ ಸರಕಾರ ಈ ಯೋಜನೆಗೆ ಚಿಕ್ಕಾಸು ನೀಡದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ದಿನೇಶ್ ಗುಂಡೂ ರಾವ್ ಅವರು ಶಿಲಾನ್ಯಾಸ ನೆರವೇರಿಸಿದ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗರಂ ಆಗಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಪಚ್ಚನಾಡಿ ಎಸ್.ಟಿ.ಪಿ ಆವರಣದಲ್ಲಿ ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಗುದ್ದಲಿ ಪೂಜೆ ನಡೆಸಿ, ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವಾಸ್ತವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವು ಕ್ಷೇತ್ರದ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳಿಂದ ನಯಾ ಪೈಸೆ ನೀಡಿಲ್ಲ. ಮೊದಲು ಆ ಅನುದಾನ ಬಿಡುಗಡೆಗೊಳಿಸಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿ. ಸ್ವಚ್ಛ ಭಾರತ ಮಿಷನ್ 2.0 ಮತ್ತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಡಿ, ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎಸ್.ಟಿ.ಪಿ. ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಇದು ಸಂಪೂರ್ಣ ಕೇಂದ್ರ ಸರಕಾರದ ಅನುದಾನವಾಗಿದೆ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾದ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ಸಹಿತ ಇಲ್ಲಿನ ಸಂಸದರಿಗೆ ಸರಿಯಾಗಿ ಮಾಹಿತಿ ನೀಡದಿರುವುದು ಮಂಗಳೂರಿಗೆ ಹಾಗೂ ಇಲ್ಲಿನ ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

Continue Reading
Advertisement

Trending

Copyright © 2025 Namma Kudla News

You cannot copy content of this page