Connect with us

BELTHANGADY

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ – ಭಕ್ತಿಯ ಆರಾಧನೆ ದೇವರಿಗೆ ಪ್ರಿಯ: ಸತೀಶ್ ಶೆಟ್ಟಿ

Published

on

ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

ಬೆಳ್ತಂಗಡಿ: ಶುದ್ಧ ಮನಸ್ಸಿನಿಂದ ದೇವರಿಗೆ ಶರಣಾದರೆ ಮಾನಸಿಕ ನೆಮ್ಮದಿಯ ಜತೆಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಆಡಂಬರದ ಆರಾಧನೆಗಿಂತ ಭಕ್ತಿಯ ಆರಾಧನೆ ದೇವರಿಗೆ ಪ್ರಿಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಹೇಳಿದರು.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾರಾವಿ ವಿಭಾಗದ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಶ್ರೀ ಉಮಾಮಹೇಶ್ವರ ದೇವಸ್ಥಾನ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಸಹಕಾರದೊಂದಿಗೆ ಮಂಗಳವಾರ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಜನರಲ್ಲಿ ಧಾರ್ಮಿಕಪ್ರಜ್ಞೆ ಜಾಗೃತಗೊಂಡಿದೆ. ಊರಿನ ಶ್ರದ್ಧಾಕೇಂದ್ರಗಳು ಬೆಳಗಿದಾಗ ಗ್ರಾಮ ಸುಬೀಕ್ಷೆಯಾಗುತ್ತದೆ ಎಂದರು.

ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಧ್ಯಕ್ಷತೆ ವಹಿಸಿ, 2024ರಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಆರಂಭವಾಗಲಿದೆ. ಭಕ್ತರ ಸಹಕಾರದಲ್ಲಿ ಸುಸಜ್ಜಿತ ಸಭಾಭವನ, ಸುರಕ್ಷತಾ ಕೊಠಡಿ, ಮುಖಮಂಟಪ ನಿರ್ಮಾಣಕ್ಕೆ ಯೋಜನೆ ಹಾಕಲಾಗಿದೆ. ಭಕ್ತರು ಹೆಚ್ಚಿನ ರೀತಿಯಲ್ಲಿ ಸಹಕಾರ ನೀಡಬೇಕು ಎಂದರು.

ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್ ಮಾತನಾಡಿ, ಶ್ರದ್ಧಾಕೇಂದ್ರಗಳು ಗ್ರಾಮದ ಅಭಿವೃದ್ಧಿಯ ಸಂಕೇತ. ಶಾಸಕ ಹರೀಶ್ ಪೂಂಜ ಅವರ ವಿಶೇಷ ಪ್ರಯತ್ನದಿಂದ ದೇವಸ್ಥಾನದ ಅಭಿವೃದ್ಧಿಗೆ ₹35 ಲಕ್ಷ ಅನುದಾನ ಮಂಜೂರಾಗಿದೆ ಎಂದರು.

ಮರೋಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪದ್ಮಶ್ರೀ ಜೈನ್, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಮುಂಬೈ ಘಟಕದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು, ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಸಂತೋಷಪೂಜಾರಿ, ಶುಭರಾಜ ಹೆಗ್ಡೆ, ಯೋಜನೆಯ ಸೇವಾ ಪ್ರತಿನಿಧಿಗಳಾದ ಹರಿಣಾಕ್ಷಿ, ಶಶಿಕಲಾ ಇದ್ದರು.

ಯೋಜನೆಯ ನಾರಾವಿ ವಲಯದ ಮೇಲ್ವಿಚಾರಕಿ ದಮಯಂತಿ ಸ್ವಾಗತಿಸಿದರು. ಪೂಜಾ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ: ದಾನಿಗಳಾದ ಎಂ.ಕೆ. ಆರಿಗ ಗಾಳಿವನ, ಚಿಕ್ಕಮೇಳದ ಜವಾಬ್ದಾರಿ ವಹಿಸಿದ್ದ ಸುರೇಶ್ ಜೈನ್ ಕೊಕ್ರಾಡಿ, ರಮೇಶ್ ಹೆಗ್ಡೆ ಶಾಶ್ವತ ನಿಲಯ, ಸ್ವಯಂ ಸೇವಕರಾದ ಸೋಮನಾಥ ಪೂಜಾರಿ ಹಿಮರಡ್ಡ, ವಸಂತ ಕುಮಾರ್ ಅಮ್ಮ ನಿವಾಸ, ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಕುಲಾಲ್ ಮರೋಡಿ ಅವರನ್ನು ಸನ್ಮಾನಿಸಲಾಯಿತು.

‘ಕುಮಾರ ಪಾತ್ರಿಗಳಿಗೆ ವೀಳ್ಯ’

ಮರೋಡಿ ದೇವಸ್ಥಾನಕ್ಕೆ ಬರುತ್ತಿದ್ದ ಕುಮಾರ ಪಾತ್ರಿ ಕೃಷ್ಣಪ್ಪ ಮಡಿವಾಳ ಕಳೆದ ವರ್ಷ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ದರಗುಡ್ಡೆ ನಾಗರಾಜ ಭಟ್ ಮಾರ್ಗದರ್ಶನದಲ್ಲಿ ನಡೆದ ಪ್ರಶ್ನಾಚಿಂತನೆ ಪ್ರಕಾರ ದೇವಸ್ಥಾನಕ್ಕೆ ಪೂರ್ಣಕಾಲಿಕ ಕುಮಾರ ಪಾತ್ರಿಗಳಾಗಿ ರಾಜೇಶ್ ಪೂಜಾರಿ ಸಾವ್ಯ ಮತ್ತು ಸಂತೋಷ್ ಇರುವೈಲು ಅವರಿಗೆ ವೀಳ್ಯ ನೀಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಹೇಳಿದರು.

ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಗೆ ಚಾಲನೆ

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಸಂಪ್ರದಾಯವಾಗಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಭಾನುವಾರ ಆರಂಭವಾಗಿದ್ದು, ಗುರುವಾರ ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಸೋಮವಾರ ತೋರಣ ಮುಹೂರ್ತ, ಧ್ವಜಾರೋಹಣ, ಅನ್ನಸಂತರ್ಪಣೆ, ಸಂಜೆ ದೊಡ್ಡ ರಂಗಪೂಜೆ, ವ್ಯಾಘ್ರ ಚಾಮುಂಡಿ, ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ, ಕುಣಿತ ಭಜನೆ ನಡೆಯಿತು. ನಂತರ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಬೆದ್ರ ಪಿಂಗಾರ ಕಲಾವಿದರಿಂದ ಭರಣಿ ಕೃತಿಕೆ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

BELTHANGADY

36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಚಾರ್ಮಾಡಿಯ ನಿವಾಸಿ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. 1990 ರಲ್ಲಿ ಈತನ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. 1992 ರಲ್ಲಿ ಇದನ್ನು ಎಲ್‌ಪಿಸಿ ಪ್ರಕರಣ ಎಂಬುದಾಗಿ ಪರಿಗಣಿಸಲಾಗಿತ್ತು. ಈತನ ಪತ್ತೆ ಹಚ್ಚುವ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ: ಕುಂದಾಪುರ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿ*ಕ್ಕಿ; ಸವಾರ ಸ್ಥಳದಲ್ಲೇ ಸಾ*ವು

ಇದೀಗ ಆರೋಪಿ ರವೀಂದ್ರನನ್ನು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ಪೊಲೀಸರು ದಸ್ತಗಿರಿ ಮಾಡಿ ಜನವರಿ 6 ರಂದು ಮಂಗಳವಾರ ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BELTHANGADY

ಬೆಳ್ತಂಗಡಿ: ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ

Published

on

ಬೆಳ್ತಂಗಡಿ: ತಾಲೂಕಿನ ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಮುಂಜಾನೆ ನಡೆದಿದೆ.


ಹಾಸನದಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಹಾಗೂ ಧರ್ಮಸ್ಥಳ ಕಡೆಯಿಂದ ಕೊಕ್ಕಡ ಕಡೆ ಹೋಗುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಇದ್ದ ಖಾಸಗಿ ಬಸ್ ಡಿಕ್ಕಿ ಆಗಿದ್ದು, ಪ್ರಯಾಣಿಕರಿಗೆ ಹಾಗೂ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿರುತ್ತದೆ.

ಇದನ್ನೂ ಓದಿ: ಬಸ್ ಹತ್ತುವ ವೇಳೆ ದುರಂ*ತ; ಆಯತಪ್ಪಿ ಕೆಳಗೆ ಬಿದ್ದು ಬಾಲಕಿ ಸಾ*ವು

ಸುಮಾರು ಒಂದು ಗಂಟೆಗಳ ಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Continue Reading

BELTHANGADY

ಬೆಳ್ತಂಗಡಿ: ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರ ಡಿ*ಕ್ಕಿಯಾಗಿ ವಯೋವೃದ್ಧ ಸಾ*ವು

Published

on

ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಯಂತ್ರವೊಂದು ಡಿಕ್ಕಿ ಹೊಡೆದು ವೃದ್ಧರೊಬ್ಬರು ಮೃತಪಟ್ಟ ಘಟನೆ ಮದ್ದಡ್ಕ ಮಸೀದಿ ಬಳಿ ನವೆಂಬರ್ 20 ರಂದು ಸಂಭವಿಸಿದೆ.


ಮೃತರನ್ನು ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ನಿವಾಸಿ ಹಂಝಾ (72) ಎಂದು ಗುರುತಿಸಲಾಗಿದೆ. ಇವರು ಪತ್ನಿ, ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಹಂಝಾ ಅವರು ಸೌದೆ ಕಡಿಯುವ ಕೆಲಸಕ್ಕೆಂದು ಮದ್ದಡ್ಕಕ್ಕೆ ಹೋಗಿದ್ದರು. ಅವರು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಚಾಲಕ ಬಿಹಾರಿ ರೈ ಎಂಬಾತ ಯಂತ್ರವನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ಹಿಂದಕ್ಕೆ ತೆಗೆದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡ ಹಂಝಾ ಅವರನ್ನು ತಕ್ಷಣವೇ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುತ್ತೂರು : ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕ ಆ*ತ್ಮಹ*ತ್ಯೆ

ಹಂಝಾ ಅವರದ್ದು ಬಡ ಕುಟುಂಬವಾಗಿದ್ದು, ತಮ್ಮ ವೃದ್ಧಾಪ್ಯದಲ್ಲೂ ಸೌದೆ ಕಡಿಯುವ ಕೆಲಸಕ್ಕೆ ಹೋಗುತ್ತಿದ್ದರು. ಅವರ ಕುಟುಂಬ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page