Connect with us

ಕಾಸರಗೋಡು: ಗಲ್ಫ್‌ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು

Published

on

ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕುಂಬಳೆಯಲ್ಲಿ ಶನಿವಾರ ಸಂಜೆ ನಡೆದಿದೆ.

 

ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು. ಅನಾಸ್ ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಕಂದಮ್ಮನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ. ಊರಿಗೆ ಬಂದಿದ್ದ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ದೆಹಲಿ ಮತ ಏಣಿಕೆ ಆರಂಭ; ಗದ್ದುಗೆ ಏರುವವರು ಯಾರು?

Published

on

ಮಂಗಳೂರು/ಹೊಸದಿಲ್ಲಿ: ದೇಶದ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.5ರಂದು ಒಟ್ಟು ಶೇ.60.54ರಷ್ಟು ಮತದಾನವಾಗಿತ್ತು. ಶನಿವಾರ (ಫೆ.08) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಆಪ್, ಕಾಂಗ್ರೆಸ್ ಗೆ ಇದು ಮಹತ್ವದ ಚುನಾವಣೆಯಾಗಿದೆ. ಕಳೆದ ಎರಡು ಚುನಾವಣೆಗಳಲ್ಲಿ ಬಹುಮತ ಸಾಧಿಸಿ ಅಧಿಕಾರ ನಡೆಸಿರುವ ಅರವಿಂದ ಕೇಜಿವಾಲ್ ಅವರ ಆಮ್ ಆದ್ಮಿ ಪಕ್ಷವು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಅಂದಾಜಿನಲ್ಲಿದ್ದರೆ, ಬಿಜೆಪಿ ಮತ್ತು ಕಾಂಗ್ರೆಸ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಎಲ್ಲಾ ಪ್ರಶ್ನೆ, ಕುತೂಹಲಗಳಿಗೆ ಇಂದು ಉತ್ತರ ಸಿಗಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ ಮಗ ಆಯ್ಕೆ

ದಿಲ್ಲಿ ಗೆದ್ದವನು ದೇಶದ ದಿಲ್​ ಗೆದ್ದಂತೆ. ಆಮ್​​ ಆದ್ಮಿ, ಬಿಜೆಪಿ ನಡುವೆ ಟಗ್​ ಆಫ್ ವಾರ್​ ಏರ್ಪಟ್ಟಿದ್ದು, ಕಾಂಗ್ರೆಸ್​​ ಆಟಕ್ಕುಂಟು ಲೆಕ್ಕಕ್ಕಿಲ್ಲದ ಹೋರಾಟಕ್ಕಿಳಿದಿದೆ. ದೆಹಲಿ ವಿಧಾನಸಭಾ ದಂಗಲ್‌ನ ಕ್ಲೈಮ್ಯಾಕ್ಸ್​​ ಹಂತಕ್ಕೆ ಬಂದು ನಿಂತಿದೆ. ಇಂದ್ರಪ್ರಸ್ಥದ ಗದ್ದುಗೆ ಯಾರಿಗೆ ಅನ್ನೋ ಜನಾದೇಶ ಇಂದೇ ಪ್ರಕಟ ಆಗಲಿದೆ. ಮತಗಟ್ಟೆ ಸಮೀಕ್ಷೆಗಳು ಕೇಜ್ರಿ ಕಟ್ಟಿದ್ದ ವಾಲ್​​​​ ನೆಲಸಮವಾಗಲಿದ್ದು, ಹೂವು ಅರಳುವ ಸಮಯ ಅಂತ ಭವಿಷ್ಯ ನುಡಿದಿವೆ.

ಡೆಲ್ಲಿ ದಂಗಲ್ ದೇಶದ ರಾಜಧಾನಿ ಈಗ ಹೊಸ ಚರಿತ್ರೆ ಬರೆಯಲು ಹೊರಟಿದೆ. ಬುಧವಾರ ಮತದಾರ ಬರೆದ ಹಣೆಬರಹ ಇವತ್ತೇ ಪ್ರಕಟವಾಗಲಿದೆ.

 

Continue Reading

LATEST NEWS

ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಜಾರಕಿಹೊಳಿ ಮಗ ಆಯ್ಕೆ

Published

on

ಮಂಗಳೂರು/ಬೆಳಗಾವಿ: ಮಗಳು ಪ್ರಿಯಾಂಕಾ ಜಾರಕಿಹೊಳಿಯನ್ನು ಲೋಕಸಭೆ ಚುನಾವಣೆ ಮೂಲಕ ರಾಜಕೀಯ ಪ್ರವೇಶಿಸುವಂತೆ ಮಾಡಿದ್ದ ಸಚಿವ ಸತೀಶ್ ಜಾರಕಿಹೊಳಿ ಇದೀಗ ಮಗನನ್ನೂ ರಾಜಕೀಯ ಅಖಾಡಕ್ಕಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಪುತ್ರ ರಾಹುಲ್‌ ಜಾರಕಿಹೊಳಿ ರಾಜ್ಯ ಯುವ ಕಾಂಗ್ರೆಸ್ ಘಟಕಕ್ಕೆ ಪ್ರಧಾನ ಕಾರ್ಯದರ್ಶಿ ಆಯ್ಕೆಯಾಗಿದ್ದಾರೆ.

ರಾಹುಲ್‌ ಜಾರಕಿಹೊಳಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಗೋಕಾಕ್​ನ ಬಸವೇಶ್ವರ ವೃತ್ತದಲ್ಲಿ ಸಂಭ್ರಮಾಚರಣೆ ನಡೆದಿದೆ. ರಾಹುಲ್ ಬೆಂಬಲಿಗರು ಪಟಾಕಿ ಸಿಡಿಸಿ‌‌ ಸಂಭ್ರಮಾಚರಣೆ ಮಾಡಿದ್ದಾರೆ. ಇದೇ ವೇಳೆ, ಸತೀಶ್ ಜಾರಕಿಹೊಳಿ‌, ರಾಹುಲ್ ಜಾರಕಿಹೊಳಿ‌ ಪರ ಘೋಷಣೆ ಮೊಳಗಿದೆ.

ಇದನ್ನೂ ಓದಿ : ಆನ್ಲೈನ್ ವಂಚನೆ ; ಕೊನೆಗೂ ಪೊಲೀಸರ ಕೈವಶವಾದ ಖದೀಮ

ಇದೀಗ ರಾಹುಲ್‌ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದಂತಾಗಿದೆ. ಸತೀಶ್ ಜಾರಕಿಹೊಳಿ ಈಗಾಗಲೇ ಮಗಳನ್ನು ಸಂಸದೆ ಮಾಡಿದ್ದು, ಮಗನಿಗೆ ಪಕ್ಷ ಸಂಘಟನೆ ಜವಾಬ್ದಾರಿ ನೀಡುವ ಮುಖಾಂತರ ಪುತ್ರನ ರಾಜಕೀಯ ಭವಿಷ್ಯ ರೂಪಿಸಲು ಮಾಸ್ಟರ್​ಪ್ಲ್ಯಾನ್ ಮಾಡಿದ್ದಾರೆ.

Continue Reading

LATEST NEWS

ನೈಟ್ ನಿದ್ದೆ ಬರಲ್ವಾ ? ಸುಖ ನಿದ್ರೆಗೆ ಬೆಸ್ಟ್ ಆಯುರ್ವೇದಿಕ್ ಟಿಪ್ಸ್ ಇಲ್ಲಿದೆ..

Published

on

ಪ್ರಸ್ತುತ ದಿನಗಳಲ್ಲಿ ಒತ್ತಡ ಮತ್ತು ಬ್ಯುಸಿ ಲೈಫ್‌ನಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿವೆ. ಅದರಲ್ಲಿ ಮುಖ್ಯವಾಗಿ ನಿದ್ರಾಹೀನತೆ ಒಂದಾಗಿದ್ದು, ಇದನ್ನು ಎದುರಿಸೋದು ಸುಲಭವಲ್ಲ. ತಕ್ಷಣ ಇದರ ಬಗ್ಗೆ ನೋಡಿಕೊಳ್ಳದಿದ್ದರೆ ದೊಡ್ಡ ಹೆಲ್ತ್ ಪ್ರಾಬ್ಲಮ್ ಆಗುತ್ತೆ. ನಿದ್ರಾಹೀನತೆ ಸಮಸ್ಯೆ ಕಡಿಮೆ ಮಾಡಲು ಈ ಆಯುರ್ವೇದಿಕ್ ಟಿಪ್ಸ್ ಫಾಲೋ ಮಾಡುವುದು ಉತ್ತಮ.

ಸ್ಲೀಪ್ ಡಿಸಾರ್ಡರ್ ಎಂದು ಕರೆಯುವ ಈ ನಿದ್ರಾಹೀನತೆಯಿಂದ , ತಕ್ಷಣ ನಿದ್ದೆ ಬರದಿರುವುದು, ಕಡಿಮೆ ನಿದ್ದೆ, ಮೂಡ್ ಸರಿ ಇಲ್ಲದಿರುವುದು, ಕಡಿಮೆ ಏಕಾಗ್ರತೆ ಇಂತಹ ಹಲವು ಹೆಲ್ತ್ ಪ್ರಾಬ್ಲಮ್ಸ್ ಇರುತ್ತದೆ.ಹಾಗಾಗಿ ಇದನ್ನು ತಡೆಯಲು ಆಯುರ್ವೇದದಲ್ಲಿ ಕೆಲವು ಸಲಹೆಗಳಿದ್ದು, ಅದರಲ್ಲಿ ಪ್ರಮುಖ ಅಂಶಗಳು ಇಲ್ಲಿದೆ.

ಸ್ಲೀಪ್ ಡಿಸಾರ್ಡರ್ ತಡೆಯಲು 6 ಆಯುರ್ವೇದ ಸಲಹೆಗಳು :

ಆಹಾರ: ನಿದ್ರಾಹೀನತೆ ಇಲ್ಲದ ಲೈಫ್‌ಗೆ ಆಹಾರದಲ್ಲಿ ಪೌಷ್ಟಿಕಾಂಶ ಇರಬೇಕು. ನಿದ್ದೆಗೆ ಒಂದು ಗಂಟೆ ಮೊದಲು ಬಿಸಿ ಹಾಲು, ಬಾದಾಮಿ ಮತ್ತು ಕ್ಯಾಮೊಮೈಲ್/ಹರ್ಬಲ್ ಟೀ ಕುಡಿಯಿರಿ.
ಮಸಾಜ್: ತಲೆ ಮತ್ತು ದೇಹದ ಮಸಾಜ್ ಮನಸ್ಸು ಮತ್ತು ದೇಹವನ್ನು ರಿಲ್ಯಾಕ್ಸ್ ಮಾಡುತ್ತದೆ. ಬೃಂಗರಾಜ್ ಎಣ್ಣೆಯಿಂದ ತಲೆಗೆ ಮಸಾಜ್ ಮತ್ತು ಬಾದಾಮಿ ಎಣ್ಣೆಯಿಂದ ದೇಹಕ್ಕೆ ಮಸಾಜ್ ಮಾಡುವುದು ಒಳ್ಳೆಯದು.
ನಿದ್ದೆ ವಾತಾವರಣ: ಹಾಸಿಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಕ್ಲೀನ್ ಆಗಿರಬೇಕು ಮತ್ತು ಡಿಜಿಟಲ್ ಗ್ಯಾಜೆಟ್ಸ್ ಇರಬಾರದು. ಓದುವುದು, ಧ್ಯಾನ ಅಥವಾ ವಾಕಿಂಗ್ ಮಾಡಿ.
ವೈದ್ಯಕೀಯ ಸಹಾಯ: ನಿದ್ರಾಹೀನತೆಗೆ ಪರಿಹಾರ ಹುಡುಕುವಾಗ ಮತ್ತು ಆಯುರ್ವೇದ ಫಾಲೋ ಮಾಡುವಾಗ, ಕಾರಣಗಳನ್ನು ತಿಳಿದುಕೊಳ್ಳಲು ಮತ್ತು ಮೆಡಿಸಿನ್ ಬೇಕಿದ್ದರೆ ಡಾಕ್ಟರ್ ನೋಡಿ.
ಕೆಫೀನ್ ಅಥವಾ ಆಲ್ಕೋಹಾಲ್: ನಿದ್ದೆಗೆ ಮೊದಲು ಟೀ ಅಥವಾ ಕಾಫಿ ಕುಡಿಯಬೇಡಿ. ಇವೆರಡರಲ್ಲೂ ಕೆಫೀನ್ ಇರುವುದರಿಂದ ನಿದ್ದೆಗೆ ತೊಂದರೆ ಆಗುತ್ತದೆ. ಆಲ್ಕೋಹಾಲ್ ಕೂಡ ಒಂದು ಕಾರಣ.
ನಿದ್ದೆ ರೂಟೀನ್: ನಿದ್ದೆಗೆ ಮೊದಲು ಸ್ನಾನ ಮಾಡುವುದು ದೇಹವನ್ನು ರಿಲ್ಯಾಕ್ಸ್ ಮಾಡುತ್ತದೆ. ಲೂಸ್ ಡ್ರೆಸ್ ಹಾಕಿಕೊಳ್ಳಿ. ಕಣ್ಣಿಗೆ ಮಾಸ್ಕ್ ಹಾಕಿಕೊಳ್ಳಿ.

Continue Reading
Advertisement

Trending

Copyright © 2025 Namma Kudla News

You cannot copy content of this page