Connect with us

BANTWAL

ಬಂಟ್ವಾಳ: ಕಾರಿಂಜ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾದ ಕೋತಿರಾಜ್

Published

on

ಬಂಟ್ವಾಳ: ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಹೆಸರು ಪಡೆದ ಕೋತಿರಾಜ್ ಅವರು ಪ್ರಥಮ ಬಾರಿಗೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ.

ಮಾ.23 ರಂದು ಆದಿತ್ಯವಾರ ಬಂಡೆ ಏರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಟ್ರಸ್ಟ್ ವೊಂದನ್ನು ನಡೆಸುವ ಕೋತಿರಾಜ್, ಆ ಮೂಲಕ ಇನ್ನಷ್ಟು ಸಮಾಜ ಸೇವೆ ಮಾಡಲು ಆರ್ಥಿಕ ಸಹಾಯ ಧನದ ಅವಶ್ಯಕತೆ ಇದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳದ ಪುರಾಣ ಪ್ರಸಿದ್ಧ ದೇವಾಲಯದ ಬೆಟ್ಟವನ್ನೇರಲು ಸಿದ್ಧತೆ ನಡೆಸಿದ್ದಾರೆ. ದೇವಸ್ಥಾನ ಹಾಗೂ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ಈ ಬಗ್ಗೆ ಅಧಿಕೃತವಾಗಿ ಪತ್ರವನ್ನು ನೀಡಿದ ಅವರು ಬೆಳ್ತಂಗಡಿ ಬಂಟ್ವಾಳ ತಾಲೂಕಿನ ಜನರ ಸಹಕಾರ ಯಾಚಿಸಿದ್ದಾರೆ.

BANTWAL

ಬೀಗ ಮುರಿದು ಬಟ್ಟೆ ಮಳಿಗೆಯಲ್ಲಿ ಕಳ್ಳತನ ಪ್ರಕರಣ; ಒಬ್ಬ ಆರೋಪಿ ಅಂದರ್

Published

on

ಬಂಟ್ವಾಳ: ಬಟ್ಟೆ ಮಳಿಗೆಯೊಂದರ ಬೀಗ ಮುರಿದು ನಗದು ದೋಚಿದ ಘಟನೆ ಮಂಗಳೂರಿನ ಫರಂಗಿಪೇಟೆಯಲ್ಲಿ ನಡೆದಿತ್ತು. ಇದೀಗ ಪ್ರಕರಣವನ್ನು ಬೇಧಿಸುವಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಡ್ಯಾರು ಗ್ರಾಮದ ಕಣ್ಣೂರು ನಿವಾಸಿ ನಝೀ‌ರ್ ಮಹಮ್ಮದ್ ಬಂಧಿತ ಆರೋಪಿಯಾಗಿದ್ದು, ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ನಝೀರ್‌ನಿಂದ 1,09,490 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಎ. 11ರ ತಡರಾತ್ರಿ ಫರಂಗಿಪೇಟೆಯ ವಿಶ್ವಾಸ್ ಸಿಟಿ ಸೆಂಟರ್ ಸಂಕೀರ್ಣದಲ್ಲಿದ್ದ ವೈಟ್‌ಲೆ ‌ನ್ ಕಿಡ್ಸ್ ವರ್ಲ್ಡ್ ಬಟ್ಟೆ ಮಳಿಗೆಯ ಶಟರ್‌ನ ಬೀಗ ಮುರಿದು ಒಳಪ್ರವೇಶಿಸಿ ಕ್ಯಾಶ್ ಕೌಂಟರ್‌ನಲ್ಲಿದ್ದ ಸುಮಾರು 4 ಲಕ್ಷ ರೂ.ಗಳನ್ನು ಕಳವು ಮಾಡಿದ್ದಾನೆ ಎಂದು ಮಾಲಕ ಇರ್ಫಾನ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಬಂಧಿತ ಆರೋಪಿ ನಝೀರ್ ಮಹಮ್ಮದ್‌ನು ಕಳೆದ ವರ್ಷ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಟಿವಿಎಸ್ ಶೋರೂಮ್‌ನ ಗಾಜು ಒಡೆದು ಹಣ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್‌ಪೆಕ್ಟ‌ರ್ ಶಿವಕುಮಾ‌ರ್ ಬಿ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Continue Reading

BANTWAL

ಕ್ರೈಸ್ತ ಬಾಂಧವರಿಂದ ಈಸ್ಟರ್ ಸಂಭ್ರಮ ; ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತರು ಪಾಲು

Published

on

ಬಂಟ್ವಾಳ : ಕರಾವಳಿಯ ಕ್ರೈಸ್ತರು ನಿನ್ನೆ (ಏ.19) ಏಸುಕ್ರಿಸ್ತರು ಮರಣ ಗೆದ್ದು ಪುನರುತ್ಥಾನರಾದ ಹಬ್ಬವಾದ ಈಸ್ಟರ್ ಹಬ್ಬವನ್ನು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಿದ್ದಾರೆ. ಹಾಗಾಗಿ ಚರ್ಚ್‌ಗಳಿಗೆ ತೆರಳಿದ ಕ್ರೈಸ್ತರು ವಿವಿಧ ಧಾರ್ಮಿಕ ವಿಧಿಗಳಲ್ಲಿ ಭಾಗವಹಿಸಿದರು.

ಪೆರುವಾಯಿ ಫಾತಿಮಾ ಮಾತೆಯ ಇಗರ್ಜಿಯಲ್ಲಿ ಫಾ. ಸೈಮನ್ ಡಿಸೋಜಾ ನೇತೃತ್ವದಲ್ಲಿ ಈಸ್ಟರ್ ಆಚರಿಸಲಾಯಿತು. ಚರ್ಚ್ ಆವರಣದಲ್ಲಿ ಆಶಿರ್ವಚನ ಹಾಗೂ ಮೊಂಬತ್ತಿ ಮೆರವಣಿಗೆ ನಡೆಯಿತು. ಬಳಿಕ ಚರ್ಚ್ ನಲ್ಲಿ ಸ್ತೋತ್ರ ಹಾಡಲಾಯಿತು. ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ದೇವರ ವಾಕ್ಯ ವಾಚನ, ಕೀರ್ತನೆ ಗಾಯನ ಹಾಗೂ ಧರ್ಮಗುರುಗಳಿಂದ ಪ್ರವಚನ ನಡೆಯಿತು.

ಪವಿತ್ರಸ್ನಾನದ ಪ್ರತಿಜ್ಞೆ ನವೀಕರಿಸಲಾಯಿತು. ಪವಿತ್ರ ಜಲ ಆಶೀರ್ವದಿಸಲಾಯಿತು. ಧಾರ್ಮಿಕ ವಿಧಿಯಲ್ಲಿ ನೂರಾರು ಮಂದಿ ಭಾಗವಹಿಸಿದ್ದರು. ಉಪಾಧ್ಯಕ್ಷ ಡೆನಿಸ್ ಮೊಂತೇರೊ, ಕಾರ್ಯದರ್ಶಿ ವೈಲೆಟ್ ಕುವೆಲ್ಲೊ ಇದ್ದರು. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಅತೀ ವಂದನೀಯ ಪೀಟರ್ ಪಾವ್ಲ್ ಸಲ್ಡಾನ್ಹಾ ಅವರು ರೊಸಾರಿಯೊ ಕ್ಯಾಥೆಡ್ರಲ್‌ನಲ್ಲಿ ಬಲಿಪೂಜೆ ನೆರವೇರಿಸಿದರು.

Continue Reading

BANTWAL

ಬಂಟ್ವಾಳ: ನಿಯಂತ್ರಣ ‌ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಸ್ಕೂಟರ್; ಸವಾರ ದುರ್ಮರಣ

Published

on

ಬಂಟ್ವಾಳ: ಸ್ಕೂಟರ್ ಒಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಎಪ್ರಿಲ್‌ 15ರ ರಂದು ರಾತ್ರಿ ಕಳ್ಳಿಗೆ ಗ್ರಾಮದ ವಿರಾಜೆ ಎಂಬಲ್ಲಿ ಸಂಭವಿಸಿದೆ.

ಕಳ್ಳಿಗೆ ಗ್ರಾಮದ ಕಾರೆಜಾಲ್‌ ನಿವಾಸಿ ಮೆಲ್‌ ರಾಯ್‌ ಡೇಸಾ (25) ಮೃತಪಟ್ಟ ಯುವಕ. ಖಾಸಗಿ ಬ್ಯಾಂಕೊಂದರ ಉದ್ಯೋಗಿಯಾಗಿದ್ದ ಮೆಲ್‌ ರಾಯ್‌ ಡೇಸಾ ಅವರು ಕೆಲಸ ಮುಗಿಸಿ ಮನೆಗೆ ತೆರಳಲು ಬ್ರಹ್ಮರಕೋಟ್ಲು ಕಡೆಯಿಂದ ಕಳ್ಳಿಗೆ ಮಾರ್ಗದಲ್ಲಿ ಸ್ಕೂಟರ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಕೂಟರ್‌ ಸಮೇತ ಹೊಂಡಕ್ಕೆ ಬಿದ್ದ ಕಾರಣ ತೀವ್ರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಗಮನಿಸಿ ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಅಷ್ಟರಲ್ಲಿ ಅವರು ಮೃತ ಪಟ್ಟಿದ್ದರು. ತೊಡಂಬಿಲ ಚರ್ಚ್ ನ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಮೆಲ್‌ ರಾಯ್‌ ಅವರು ಐಸಿವೈಎಂ ತೊಡಂಬಿಲ ಘಟಕದ ಅಧ್ಯಕ್ಷರಾಗಿದ್ದರು. ಘಟನೆಗೆ ಸಂಬಂಧಿಸಿ ಬಂಟ್ವಾಳ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page