Connect with us

BANTWAL

ಬಂಟ್ವಾಳ: ಅಕಾಲಿಕ ಮಳೆಗೆ ಭರಸಿಡಿಲು ಬಡಿದು ಮನೆಗೆ ಹಾನಿ

Published

on

ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ವಿದ್ಯುತ್ ಪರಿಕರಗಳೆಲ್ಲಾ ಹಾನಿಯಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮ ಕಾವಳಕಟ್ಟೆ ಎಂಬಲ್ಲಿ ನಡೆದಿದೆ.

ಕಾವಳಕಟ್ಟೆಯ ಎಂ.ಪಿ ಸರ್ಕಲ್ ನಿವಾಸಿ ಸೈಫುಲ್ಲಾ ಅವರ ಮನೆಗೆ ಸಿಡಿಲು ಬಡಿದಿದೆ. ಇದರಿಂದಾಗಿ ಅವರ ಮನೆಯ ಕರೆಂಟ್‌ನ ಮೀಟರ್, ಫ್ಯಾನ್, ಟಿ.ವಿ ಹಾಗೂ ಕೆಲ ವಸ್ತುಗಳು ವಿದ್ಯುತ್‌ನ ಅಘಾತಕ್ಕೆ ಸುಟ್ಟು ಕರಕಲಾಗಿದೆ.

ಆದರೆ ಮನೆ ಮಂದಿಗೆ ಯಾವೂದೇ ರೀತಿಯ ಅಪಾಯ ಸಂಭವಿಸಲಿಲ್ಲ. ಸ್ಥಳಕ್ಕೆ ಜಿ.ಪಂ ಮಾಜಿ ಸದಸ್ಯ ಬಿ. ಪದ್ಮಶೇಖರ್ ಜೈನ್ ಅವರು ಆಗಮಿಸಿ ವೀಕ್ಷಣೆ ಮಾಡಿದ್ದಾರೆ. ಬಳಿಕ ಮೆಸ್ಕಾಂ ಹಾಗೂ ಕಂದಾಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading

BANTWAL

ಸ್ಕೂಟರಿಗೆ ಢಿ*ಕ್ಕಿ ಹೊಡೆದ KSRTC ಬಸ್; ಸವಾರ ಸಾ*ವು

Published

on

ಬಂಟ್ವಾಳ: ಕೆ.ಎಸ್.ಆ‌ರ್.ಟಿ.ಸಿ ಬಸ್ಸು ಓವ‌ರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿ*ಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ಪಾಣೆಮಂಗಳೂರಿನ ನೆಹರೂನಗರದಲ್ಲಿ ತಡರಾತ್ರಿ ನಡೆದಿದೆ.


ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃ*ತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಬಿರುಗಾಳಿ; 25 ಮಂದಿ ಬಲಿ

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಡಿ*ಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಲಾರಿಗಳು ಪರಸ್ಪರ ಡಿಕ್ಕಿಯಾಗಿ ಪಲ್ಟಿ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಸಾ*ವು

Published

on

ಬಂಟ್ವಾಳ: ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾ*ವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಬಳಿ ಗುರುವಾರ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಕ್ಲೀನರ್ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪ*ಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಡಾಮರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.​​​​​

ಅಪ*ಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರುವ ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಮಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಮಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ ಪ್ರಕರಣ; ಎಸ್ಪಿ ಡಾ. ಅರುಣ್‌ ಹೇಳಿದ್ದೇನು?

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page