Connect with us

BANTWAL

Bantwala: ಅನಾಥವಾಗಿ ಪಾಳು ಬಿದ್ದ ಉಜಿರಂಡಿಪಲ್ಕೆಯ ಹಾಸ್ಟೆಲ್‌ ಕಟ್ಟಡ..!

Published

on

ವಿದ್ಯಾರ್ಥಿಗಳಿಗೆ ವಸತಿಯ ಜತೆಗೆ ಅನ್ನವನ್ನೂ ನೀಡಿದ್ದ ಹಾಸ್ಟೆಲ್ ಕಟ್ಟಡವೊಂದು ಇದೀಗ ಅನಾಥವಾಗಿ ಪಾಳು ಬಿದ್ದು ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.

ಬಂಟ್ವಾಳ: ಒಂದು ಕಾಲದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ವಸತಿಯ ಜತೆಗೆ ಅನ್ನವನ್ನೂ ನೀಡಿದ್ದ ಹಾಸ್ಟೆಲ್ ಕಟ್ಟಡವೊಂದು ಇದೀಗ ಅನಾಥವಾಗಿ ಪಾಳು ಬಿದ್ದು ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.

ನಿವೇಶನ ಹಾಗೂ ಕಟ್ಟಡದ ಮಾಲಕತ್ವ ಹೊಂದಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಯಾವುದೇ ಸರಕಾರಿ ಇಲಾಖೆಯ ಬಳಕೆಗೆ ನೀಡಲು ಸಿದ್ಧವಿದ್ದರೂ ಯಾರೂ ಕೂಡ ಬಳಸಲು ಮುಂದೆ ಬಂದಿಲ್ಲ.

ಇದು ಮಣಿನಾಲ್ಕೂರು ಗ್ರಾಮದ ಉಜಿರಂಡಿಪಲ್ಕೆಯಲ್ಲಿರುವ ಹಾಸ್ಟೆಲ್ ಕಟ್ಟಡದ ಸ್ಥಿತಿಯಾಗಿದೆ.

ಸುಮಾರು 28 ವರ್ಷಗಳ ಇತಿಹಾಸ ಹೊಂದಿರುವ ಈ ಕಟ್ಟಡದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ಕಾರ್ಯಾಚರಿಸುತ್ತಿದ್ದು, ಅಲ್ಲಿನ ವಿದ್ಯಾರ್ಥಿಗಳು ಪಕ್ಕದಲ್ಲೇ ಇರುವ ಮಣಿನಾಲ್ಕೂರು ಸರಕಾರಿ ಪ್ರೌಢಶಾಲೆಗೆ ತೆರಳುತ್ತಿದ್ದರು.

ಹಲವೆಡೆ ಹೊಸ ಪ್ರೌಢಶಾಲೆಗಳು ಮಂಜೂರಾದ ಪರಿಣಾಮ ಈ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಮುಚ್ಚಬೇಕಾದ ಸ್ಥಿತಿ ನಿರ್ಮಾಣವಾಯಿತು.

ಮುಚ್ಚಿದ ಹಾಸ್ಟೆಲ್ ಕಟ್ಟಡದಲ್ಲಿ ಸುಮಾರು 7 ವರ್ಷಗಳ ಹಿಂದೆ ಬಂಟ್ವಾಳಕ್ಕೆ ಮಂಜೂರಾದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯವನ್ನು ನಡೆಸುವುದಕ್ಕೆ ಕಟ್ಟಡ ಸಿಗದ ಹಿನ್ನೆಲೆಯಲ್ಲಿ ಇದೇ ಕಟ್ಟಡದಲ್ಲಿ ನಡೆಸಲಾಯಿತು.

ಆದರೆ ಇಲ್ಲಿಂದ ವಿದ್ಯಾರ್ಥಿಗಳು ಸುಮಾರು 2೦ ಕಿ.ಮೀ. ದೂರದಲ್ಲಿರುವ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ಗೆ ಆಗಮಿಸಬೇಕಾಗಿದ್ದು, ಹೀಗಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರಲು ಹಿಂದೇಟು ಹಾಕುತ್ತಿದ್ದರು.

ಈ ಕಾರಣದಿಂದ ಕೆಲವು ವರ್ಷಗಳ ಹಿಂದೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ತಲಪಾಡಿಯ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು.

ಹೀಗಾಗಿ ಈ ಕಟ್ಟಡ ಮತ್ತೆ ಹಾಗೇ ಪಾಳು ಬಿದ್ದ ಸ್ಥಿತಿಗೆ ಮುಂದುವರಿಯಿತು.

ಖಾಲಿ ಇರುವ ಹಾಸ್ಟೆಲ್ ಕಟ್ಟಡವನ್ನು ಬಳಸುವ ದೃಷ್ಟಿಯಿಂದ ಕಿಯೋನಿಕ್ಸ್ ಸಂಸ್ಥೆ ಹಿಂದುಳಿದ ವರ್ಗಗಳ ಇಲಾಖೆಯವರ ಬಳಿ ಕೇಳಿದ್ದು, ಇಲಾಖೆ ಕೂಡ ಅದಕ್ಕೆ ಒಪ್ಪಿಗೆಯನ್ನು ನೀಡಿತ್ತು.

ಆದರೆ ಈ ಪ್ರಸ್ತಾಪ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಹಾಸ್ಟೆಲ್ ಖಾಲಿಯಾಗಿದ್ದು, ಯಾವುದೇ ನಿರ್ವಹಣೆ ಇಲ್ಲದೆ ವರ್ಷ ಕಳೆದಂತೆ ಶಿಥಿಲಾವಸ್ಥೆಗೆ ತಲುಪುತ್ತಿದೆ.

ಪ್ರಸ್ತುತ ಕಟ್ಟಡದ ಸುತ್ತಲೂ ಪೊದೆ ಬೆಳೆದುಕೊಂಡಿದ್ದು, ಇನ್ನೂ ಒಂದಷ್ಟು ವರ್ಷಗಳ ಕಾಲ ಹಾಗೇ ಬಿಟ್ಟರೆ ಕುಸಿದು ಬೀಳುವ ಸಾಧ್ಯತೆಯೂ ಇದೆ.

ಹಾಸ್ಟೆಲ್ ಒಳ ಭಾಗದಲ್ಲಿ ಇದ್ದ ಬಹುತೇಕ ಸೊತ್ತುಗಳು ಈಗಾಗಲೇ ಕಳವಾಗಿ ಹೋಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

 

BANTWAL

ಸ್ಕೂಟರಿಗೆ ಢಿ*ಕ್ಕಿ ಹೊಡೆದ KSRTC ಬಸ್; ಸವಾರ ಸಾ*ವು

Published

on

ಬಂಟ್ವಾಳ: ಕೆ.ಎಸ್.ಆ‌ರ್.ಟಿ.ಸಿ ಬಸ್ಸು ಓವ‌ರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿ*ಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ಪಾಣೆಮಂಗಳೂರಿನ ನೆಹರೂನಗರದಲ್ಲಿ ತಡರಾತ್ರಿ ನಡೆದಿದೆ.


ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃ*ತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಬಿರುಗಾಳಿ; 25 ಮಂದಿ ಬಲಿ

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಡಿ*ಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಲಾರಿಗಳು ಪರಸ್ಪರ ಡಿಕ್ಕಿಯಾಗಿ ಪಲ್ಟಿ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಸಾ*ವು

Published

on

ಬಂಟ್ವಾಳ: ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾ*ವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಬಳಿ ಗುರುವಾರ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಕ್ಲೀನರ್ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪ*ಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಡಾಮರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.​​​​​

ಅಪ*ಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರುವ ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಮಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಮಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ ಪ್ರಕರಣ; ಎಸ್ಪಿ ಡಾ. ಅರುಣ್‌ ಹೇಳಿದ್ದೇನು?

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ದ್ವಿಚಕ್ರ ವಾಹನಕ್ಕೆ ಕಾರು ಡಿ*ಕ್ಕಿ; ಗಂ*ಭೀರ ಗಾಯಗೊಂಡಿದ್ದ ಸವಾರ ಸಾ*ವು

Published

on

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್‌(22) ಎಂಬಾತನಿಗೆ ಕಾರು ಡಿಕ್ಕಿಯಾಗಿ ಗಂ*ಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಈತ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಲಿಖಿತ್ ಮೇ 13ರ ಮಂಗಳವಾರ ಸಂಜೆ ಸುಮಾರು 5.30 ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿ*ಕ್ಕಿಯಾಗಿದೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣ; ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಅಪ*ಘಾತದಲ್ಲಿ ಗಂ*ಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page