Connect with us

LATEST NEWS

ಮಡಿಕೇರಿ ಹೋಂಸ್ಟೇಯಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವು

Published

on

ಮಡಿಕೇರಿ: ಕೊಡಗಿಗೆ ಪ್ರವಾಸಕ್ಕೆಂದು ಬಂದು ಮಡಿಕೇರಿಯ ಹೋಂಸ್ಟೇ ಯಲ್ಲಿ ತಂಗಿದ್ದ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮುಂಬೈ ಮೂಲದ ಈಶ್ವರ್ ಅವರ ಮಗಳು ವಿಘ್ನೇಶ್ವರಿ(24) ಮೃತ ಯುವತಿಯಾಗಿದ್ದು, ಇದೇ ಶನಿವಾರ ಕೊಡಗು ಜಿಲ್ಲೆಗೆ ತನ್ನ ನಾಲ್ವರು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದರು.

ಮಡಿಕೇರಿ ನಗರದ ನ್ಯೂ ಕೂರ್ಗ್ ವ್ಯಾಲಿ ಹೋಂಸ್ಟೇನಲ್ಲಿ ತಂಗಿದ್ದರು. ಬಳಿಕ ಕೊಡಗಿನ ಪ್ರವಾಸಿತಾಣಗಳಿಗೆ ಭೇಟಿ ನೀಡಿದ ಯುವತಿಯರ ತಂಡ ಭಾನುವಾರವೂ ಜಿಲ್ಲೆಯ ವಿವಿಧ ಪ್ರವಾಸಿತಾಣಗಳಿಗೆ ಭೇಟಿ ನೀಡಿದ್ದಾರೆ.

ಭಾನುವಾರ ರಾತ್ರಿ ಸ್ನಾನಕ್ಕೆಂದು ವಿಘ್ನೇಶ್ವರಿ ಬಾತ್ ರೂಮಿಗೆ ತೆರಳಿದ್ದ ಯುವತಿ ಬಾತ್ ರೂಮಿನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಬಾತ್ ರೂಮಿಗೆ ಅಳವಡಿಸಿದ್ದ ಗೀಸರ್ ನಿಂದ ಗ್ಯಾಸ್ ಲೀಕ್ ಆಗಿ ಯುವತಿ ಮೃತಪಟ್ಟಿರಬಹುದು ಎನ್ನಲಾಗಿದೆ. ಯುವತಿ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಜೊತೆಯಲ್ಲಿದ್ದ ಉಳಿದ ನಾಲ್ವರು ಯುವತಿಯರು ಹೋಂಸ್ಟೇ ಮಾಲೀಕನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.

ನಂತರ ತಕ್ಷಣವೇ ಮಾಲೀಕ ಮುಕ್ತರ್ ಸ್ಥಳಕ್ಕೆ ಬಂದಿದ್ದಾರೆ. ಆದರೆ ಅಷ್ಟರಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಿ ಬಳಿಕ ಪೋಷಕರಿಗೆ ಹಸ್ತಾಂತರ ಮಾಡಿದ್ದಾರೆ.

ಘಟನೆ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕರಿತಂತೆ ಮಾತನಾಡಿರುವ ಯುವತಿಯ ತಂದೆ ಈಶ್ವರ್, ನನ್ನ ಮಗಳು ಆರೋಗ್ಯವಾಗಿದ್ದಳು.

ನಿತ್ಯ ವಾಕ್ ಕೂಡ ಮಾಡುತ್ತಿದ್ದಳು. ಎರಡು ದಿನ ಕೊಡಗಿನ ಪ್ರವಾಸಿ ಸ್ಥಳಗಳಲ್ಲಿ ಚೆನ್ನಾಗಿಯೇ ಓಡಾಡಿ ನೋಡಿದ್ದಾಳೆ. ಆದರೆ ನಿನ್ನೆ ರಾತ್ರಿ ಇದ್ದಕ್ಕಿದ್ದಂತೆ ಮೃತಪಟ್ಟಿರುವುದು ಅನುಮಾನ ಮೂಡಿಸಿದೆ.

ಈ ಕುರಿತು ಸರಿಯಾದ ತನಿಖೆ ಮಾಡಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಹೋಂಸ್ಟೇ ಮಾಲೀಕ ಮುಕ್ತರ್ ಗ್ಯಾಸ್ ಗೀಜರ್ ಗೆ ಕನೆಕ್ಷನ್ ಕೊಟ್ಟಿಲ್ಲ. ಹೇಗೆ ಮೃತಪಟ್ಟಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

BIG BOSS

ರೀಲ್ಸ್‌ ಮಾಡಿ ಅರೆಸ್ಟ್ ಆಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌, ರಜತ್‌ ಮಧ್ಯರಾತ್ರಿಯೇ ರಿಲೀಸ್‌

Published

on

ಬೆಂಗಳೂರು: ಲಾಂಗ್‌ ಹಿಡಿದು ರೀಲ್ಸ್‌ ಮಾಡಿ ಅರೆಸ್ಟ್ ಆಗಿದ್ದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗಳಾದ ವಿನಯ್‌ ಮತ್ತು ರಜತ್‌ ಕೇಸ್‌ಗೆ ಇದೀಗ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

ಬಸವೇಶ್ವರ ನಗರ ಪೊಲೀಸರು ನಿನ್ನೆ ಮಧ್ಯರಾತ್ರಿಯೇ ಅವರನ್ನು ಬಿಡುಗಡೆ ಮಾಡಿದ್ದಾರೆ. ಸಿನಿಮೀಯ ಶೈಲಿಯಲ್ಲಿ ಲಾಂಗ್‌ ಹಿಡಿದು 18 ಸೆಕೆಂಡ್‌ಗಳ ಕಾಲ ರೀಲ್ಸ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಜತ್ ಹಾಗೂ ವಿನಯ್ ಇವರನ್ನು ನಿನ್ನೆ ಮಧ್ಯಾಹ್ನ ಬಂಧಿಸಿದ್ದರು. ಆದರೆ ಮಧ್ಯರಾತ್ರಿಯೇ ವಿಚಾರಣೆ ನಡೆಸಿ ಬಿಡುಗಡೆಗೊಳಿಸಿದ್ದಾರೆ.

ಶಸ್ತ್ರಾಸ್ತ್ರ ಕಾಯ್ದೆಯಡಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಆದರೆ, ತಾವು ರೀಲ್ಸ್‌ಗೆ ಬಳಸಿರುವುದು ಫೈಬರ್‌ ಮಚ್ಚು ಎಂದು ಪೊಲೀಸರಿಗೆ ತಿಳಿಸಿದ್ದಾರೆ. ರೀಲ್ಸ್‌ನಲ್ಲಿ ಬಳಸಿದ್ದ ಮಚ್ಚನ್ನು ಆರೋಪಿಗಳು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳ ಮಾತನ್ನೇ ನಂಬಿ ಫೈಬರ್ ಮಚ್ಚು ಎನ್ನುವ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ.

ಬೆಳಗ್ಗೆ 10:30 ಕ್ಕೆ ಬರುವಂತೆ ನೋಟಿಸ್ ನೀಡಿ ಆರೋಪಿಗಳನ್ನು ಪೊಲೀಸರು ಕಳುಹಿಸಿದ್ದರು. ಸಾಮಾನ್ಯ ಜನರು ಇದ್ದಿದ್ದರೆ ಇದೇ ರೀತಿ ಮಾಡುತ್ತಿದ್ದರಾ ಪೊಲೀಸರು ಎಂಬ ಪ್ರಶ್ನೆ ವ್ಯಕ್ತವಾಗಿದೆ.

Continue Reading

DAKSHINA KANNADA

ಜಸ್ಟ್ ಪಾಸ್ ಮಾಡಲು ದೈವಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿ..! ಹುಂಡಿಯಲ್ಲಿ ಪತ್ತೆಯಾದ ಚೀಟಿ..!

Published

on

ಉಡುಪಿ :  ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಕೋರಿಕೊಂಡ ಪತ್ರವೊಂದು ವೈರಲ್ ಆಗಿದೆ.

ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ ಇರುತ್ತದೆ. ಟಾಪರ್ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಗಿಂತ ಅಂಕ ಕಡಿಮೆ ಬಾರದಿರಲಿ ಅನ್ನೋ ಟೆನ್ಷನ್ ಇದ್ರೆ, ಸಾಮಾನ್ಯ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಹೇಗಾದ್ರೂ ಹೆಚ್ಚಿನ ಅಂಕ ಗಳಿಸಬೇಕು ಅನ್ನೋ ಚ್ಯಾಲೆಂಜ್ ಇರುತ್ತದೆ. ಆದ್ರೆ ಕಲಿಕೆಯಲ್ಲಿ ತೀರಾ ಹಿಂದೆ ಉಳಿದ ವಿದ್ಯಾರ್ಥಿಗಳು ಜಸ್ಟ್ ಪಾಸ್ ಆದ್ರೆ ಸಾಕು ಅಂತಿರ್ತಾರೆ. ಅಂತಹ ಒಬ್ಬ ವಿದ್ಯಾರ್ಥಿ ದೈವದ ಹುಂಡಿಯಲ್ಲಿ ಚೀಟಿ ಬರೆದು ಅಂಕಗಳ ಆಪ್ಷನ್ ಕೊಟ್ಟು ಇಷ್ಟಾದ್ರೂ ಕೊಡಿಸು ದೇವರೆ ಅಂತ ಬೇಡಿಕೊಂಡಿದ್ದಾನೆ.

ಕುಂದಾಪುರ ಹೊಳ ಮಗ್ಗಿ ಹೊರ ಬೊಬ್ಬರ್ಯ ದೇವಸ್ಥಾನದ ಕಾಣಿಕೆ ಹುಂಡಿಯ ಲೆಕ್ಕಚಾರ ನಡೆಯುವಾಗ ಈ ಪತ್ರ ಲಭ್ಯವಾಗಿದೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿದ್ಯಾರ್ಥಿಯ ಬದ್ಧತೆಯ ಬಗ್ಗೆ ಚರ್ಚೆ ನಡೆದಿದೆ. ಜಸ್ಟ್ ಪಾಸ್ ಮಾಡುವ ಅಂಕ ನೀಡು ಅಂತ ದೈವದ ಬಳಿ ಕೋರಿಕೆ ಇಟ್ಟಿರುವ ವಿದ್ಯಾರ್ಥಿ ಅಂಕಗಳ ಅಪ್ಷನ್ ನೀಡಿದ್ದಾನೆ. ಪ್ರತಿಯೊಂದು ಸಬ್ಜೆಕ್ಟ್‌ ಗೆ ಎಷ್ಟು ಎಷ್ಟು ಸಿಗಬೇಕು ಎಂದು ದೈವದ ಬಳಿ ಕೋರಿಕೆ ಇಟ್ಟಿದ್ದಾನೆ. ಇದಕ್ಕಿಂತ ಕಡಿಮೆ ಬೇಡವೇ ಬೇಡ ದೇವರೆ ಅಂತ ಹೊರ ಬೊಬ್ಬರ್ಯ ದೈವಕ್ಕೆ ಮನವಿ ಮಾಡಿಕೊಂಡಿದ್ದಾನೆ.

Continue Reading

DAKSHINA KANNADA

ಬಂಜಾರ ಸಮೂದಾಯದೊಳಗೆ ಒಡಕು ಮೂಡಿಸಿತಾ ಮಲ್ಪೆ ಹಲ್ಲೆ ಪ್ರಕರಣ..!?

Published

on

ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು ಹಾಗೂ ಬಿಜೆಪಿ ನಾಯಕರ ನಡೆಯನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಇವರಿಬ್ಬರ ನಡುವೆ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಬಂಜಾರ ಸಮೂದಾಯದವರು ಹೆಣಗಾಡುತ್ತಿದ್ದಾರೆ.


ಮಲ್ಪೆಯಲ್ಲಿ ಹ*ಲ್ಲೆಗೊಳಗಾದ ಮಹಿಳೆ ಸಹಿ ಪಡೆದುಕೊಂಡ ಪೊಲೀಸರು ಆಕೆಗೆ ತಿಳಿಯದಂತೆ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ ಅನ್ನೋದು ಸದ್ಯ ಪೊಲೀಸರ ಮೇಲೆ ಇರುವ ಆರೋಪ. ಈ ಬಗ್ಗೆ ಮಹಿಳೆ ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ನಾನು ಊರಿಗೆ ಹೋಗುತ್ತೇನೆ ಎಂದು ಹೇಳಿದ್ದರು. ಆದ್ರೆ ಇದೇ ವೇಳೆ ಪತ್ರಿಕಾಗೋಷ್ಠಿ ನಡೆಸಿದ ಬಂಜಾರ ಸಮೂದಾಯದ ವಿದ್ಯಾರ್ಥಿ ಸಂಘಟನೆ ಹ*ಲ್ಲೆ ನಡೆಸಿದ ಎಲ್ಲರನ್ನೂ ಹಾಗೂ ಪ್ರಮೋದ್ ಮದ್ವರಾಜ್ ಅವರನ್ನೂ ಬಂಧಿಸಬೇಕು ಎಂದು ಒತ್ತಾಯ ಮಾಡಿದೆ. ಆದ್ರೆ ಮತ್ತೊಂದೆಡೆ ಅದೇ ಸಮೂದಾಯದ ಪ್ರಮುಖರು ಇದೊಂದು ದೊಡ್ಡ ಘಟನೆಯೇ ಅಲ್ಲ. ನಾವು ಹೊಟ್ಟೆ ಪಾಡಿಗೆ ಇಲ್ಲಿಗೆ ಬಂದವರು. ಇಲ್ಲಿನ ಜನರು ತುಂಬಾ ಒಳ್ಳೆಯವರು ಹಾಗೂ ಪ್ರಮೋದ್ ಮದ್ವರಾಜ್ ಅವರಷ್ಟು ಒಳ್ಳೆಯವರು ಯಾರೂ ಇಲ್ಲ. ಮಲ್ಪೆ ಬಂದರಿನಲ್ಲಿ ಇಂತಹದು ದಿನಾ ನಡಿತಾ ಇರುತ್ತದೆ ಅದಕ್ಕೆಲ್ಲಾ ಕೇಸ್ ಹಾಕ್ತಾ ಇದ್ರೆ ಪೊಲೀಸ್ ಠಾಣೆಯಲ್ಲಿ ಪುಸ್ತಕ ಸಾಕಾಗದು. ಇದು ನಮ್ಮನ್ನು ಮುಂದಿಟ್ಟು ಮಾಡುತ್ತಿರುವ ರಾಜಕೀಯ ಅಂತ ಹೇಳಿದ್ದಾರೆ.

ಕೇವಲ ಮೀನು ಕದ್ದ ಆರೋಪಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹ*ಲ್ಲೆ ನಡೆಸಿರುವುದನ್ನು ನಾಗರಿಕ ಸಮಾಜ ಒಪ್ಪುವ ವಿಚಾರವಂತು ಖಂಡಿತಾ ಅಲ್ಲ. ಇಂತಹ ಘಟನೆಗಳು ನಡೆದಾಗ ಸಂವಿಧಾನದ ಪ್ರಕಾರ ಕಾನೂನು ಕ್ರಮ ಕೈಗೊಳ್ಳಬೇಕಾಗಿರುವುದು ಪೊಲೀಸರ ಕರ್ತವ್ಯ ಕೂಡಾ. ಆದ್ರೆ ಇದರಲ್ಲಿ ರಾಜಕೀಯದವರು ಮೂಗು ತೂರಿಸಿದ ಕಾರಣ ಇದೀಗ ಹೊಟ್ಟೆಪಾಡಿಗೆ ಬಂದಿರುವ ಬಂಜಾರ ಸಮೂದಾಯದ ನಡುವೆ ಒಡಕು ಮೂಡಿರುವುದು ಸುಳ್ಳಲ್ಲ.

Continue Reading
Advertisement

Trending

Copyright © 2025 Namma Kudla News

You cannot copy content of this page