Connect with us

BIG BOSS

BBK11: ಪುತ್ತೂರಿಗೆ ಆಗಮಿಸಿದ ಧನರಾಜ್ ಆಚಾರ್ಯ; ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ

Published

on

ಪುತ್ತೂರು : ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಸ್ಪರ್ಧಿ ಧನರಾಜ್ ಆಚಾರ್ಯ ನಿನ್ನೆ ಸಂಜೆ ಹುಟ್ಟೂರು ಪುತ್ತೂರಿಗೆ ಆಗಮಿಸಿದ್ದಾರೆ. ಮೊದಲಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಖಾಸಗಿ ವಾಹಿನಿಯ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸುಮಾರು 16 ವಾರಗಳ ಕಾಲ ಉಳಿದುಕೊಂಡು ಕೊನೆಯ ಹಂತದಲ್ಲಿ ಹೊರಬಂದಿದ್ದರು. ಬಹಳಷ್ಟು ಅಭಿಮಾನಿಗಳನ್ನ ತನ್ನ ಡೈಲಾಗ್ ಗಳ ಮೂಲಕವೇ ಮನರಂಜಿಸುತ್ತಿದ್ದರು.

ಬಿಗ್ ಬಾಸ್ ಮನೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅವರ ಡೈಲಾಗ್ ಹೇಳಿ ಎಲ್ಲಾ ಸ್ಪರ್ಧಿಗಳ ಮನಸ್ಸನ್ನು ಗೆದ್ದುಕೊಂಡಿದ್ದರು. ವೀಕ್ಷಕರ ಮನಸ್ಸನ್ನೂ ಗೆದ್ದುಕೊಂಡು 16ನೇ ವಾರದವರೆಗೆ ಬಿಗ್‌ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ತಮಗೆ ಅನಿಸಿದ್ದನ್ನು ನೇರವಾಗಿ ಹೇಳುವ ಮೂಲಕ ‘ಕಿಚ್ಚ’ ಸುದೀಪ್ ಅವರ ಚಪ್ಪಾಳೆ ಕೂಡ ಗಿಟ್ಟಿಸಿಕೊಂಡಿದ್ದರು.

ಧನರಾಜ್ ಅವರು ಆಸೆ ಪಟ್ಟಂತೆ ಅವರ ಕುಟುಂಬಸ್ಥರು, ಮುಖ್ಯವಾಗಿ ಅವರ ಮಗಳು ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ಖುಷಿಯನ್ನು ದುಪ್ಪಟ್ಟು ಮಾಡಿದ್ದರು. ಬಿಗ್ ಬಾಸ್ ಮನೆಯಲ್ಲಿ ಹನುಮಂತ ಅವರ ಜೊತೆಗೆ ಓಡಾಡಿಕೊಂಡಿದ್ದ ಧನರಾಜ್ ಆಚಾರ್ಯ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಬಳಿಕ ನೇರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಬಳಿಕ ಅನಂತಾಡಿ ಕೊಡಾಜೆಯ ತನ್ನ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ: ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?

ಧನರಾಜ್ ಅವರನ್ನ ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಭಿನಂದಿಸಿದರು. ಈ ಸಂದರ್ಭ ಧನ್ ರಾಜ್ ಆಚಾರ್ಯ ಅವರ ತಂದೆ, ಸಹೋದರಿ ಮತ್ತು ಚಿಕ್ಕಪ್ಪ ಮತ್ತು ಅವರ ಆಪ್ತ ಬಳಗದವರು ಜೊತೆಗಿದ್ದರು.

ಇನ್ನು ಬಿಗ್ ಬಾಸ್ ನಿಂದ ಹೊರಬಂದ ಬಳಿಕ ಹಲವಾರು ಆಫರ್ ಗಳು ಹೊರಬಂದಿವೆ ಅಂತ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ಸಿನಿಮಾ ಸೇರಿದಂತೆ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಿಂದ ಈಗಾಗ್ಲೇ ಆಫರ್‌ಗಳು ಲಭಿಸಿವೆ ಎಂದರು.

ಇನ್ನು ಬಿಗ್ ಬಾಸ್ ಅಂತಿಮ ಹಂತದಲ್ಲಿದ್ದು ನಮ್ ದೋಸ್ತ್ ಹನುಮಂತ ಗೆಲ್ಲುತ್ತಾನೆ ಅನ್ನೋ ನಂಬಿಕೆ ಇದೆ ಅಂತ ಪುನರುಚ್ಚರಿಸಿದರು.

BIG BOSS

ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಮೋಕ್ಷಿತಾ..! ಅದೇನು ಗೊತ್ತಾ..?

Published

on

ಬೆಂಗಳೂರು: ಬಿಗ್‌ಬಾಸ್ ಸೀಸನ್ 11 ರ ಟಾಪ್ 3 ಕಂಟೆಸ್ಟೆಂಟ್ ಆದ ಮೋಕ್ಷಿತಾ ಪೈ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಮೋಕ್ಷಿತಾ ಇದೀಗ ಕಿರುತೆರೆಯಿಂದ ಬೆಳ್ಳಿತೆರೆಗೆ ಲಗ್ಗೆ ಇಡುತ್ತಿದ್ದಾರೆ.

ಪಾರು ಸೀರಿಯಲ್ ನಟನೆಯ ಮೂಲಕ ಜನಮನ ಗೆದ್ದ ಮೋಕ್ಷಿತಾ ಬಳಿಕ ಇದೀಗ ಸಿನಿಮಾ ಒಂದರಲ್ಲಿ ನಟನೆ ಮಾಡುತ್ತಿದ್ದಾರೆ. ಅಂಜನಾದ್ರಿ ಪ್ರೊಡಕ್ಷನ್ಸ್ ಫಸ್ಟ್ ಪ್ರಾಜೆಕ್ಟ್ ಅಡಿಯಲ್ಲಿ ಮೋಕ್ಷಿತಾ ಅಭಿನಯಿಸುತ್ತಿದ್ದಾರೆ. ಸದ್ಯದಲ್ಲೇ ಸಿನಿಮಾದ ಹೆಸರನ್ನು ರಿಲೀಸ್ ಮಾಡಲಿದ್ದಾರೆ.

ತನ್ನ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಚಾರದ ಬಗ್ಗೆ ನಟಿ ಮೋಕ್ಷಿತಾ ಪೈ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಅಂಜನಾದ್ರಿ ಪ್ರೊಡಕ್ಷನ್ಸ್ ಫಸ್ಟ್ ಪ್ರಾಜೆಕ್ಟ್ #MCR ನಿಂದ ಇಂದು ಸಂಜೆ 6:00 ಗಂಟೆಗೆ ಶೀರ್ಷಿಕೆಯನ್ನು ಪ್ರಾರಂಭಿಸಲು ನಮಗೆ ತುಂಬಾ ಸಂತೋಷವಾಗಿದೆ. ಜಯರಾಂ ಗಂಗಪ್ಪನಹಳ್ಳಿ ನಿರ್ಮಾಣ ಹಾಗೂ ಧನುಷ್ ಗೌಡ ವಿ ನಿರ್ದೇಶನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಮುಕೇನ ಇಂದು ಸಂಜೆ 6 ಗಂಟೆಗೆ ಮೋಕ್ಷಿತಾ ಪೈ ಅಭಿನಯದ ಮೊದಲ ಸಿನಿಮಾದ ಹೆಸರು ಅನೌನ್ಸ್ ಆಗಲಿದೆ.

Continue Reading

BIG BOSS

ಮದುವೆಯ ಬಗ್ಗೆ ಕ್ಲೂ ನೀಡಿದ ಬಿಗ್ ಬಾಸ್ ಐಶ್ವರ್ಯ

Published

on

ಬೆಂಗಳೂರು: ಬಿಗ್ ಬಾಸ್ ಸೀಸನ್ 11 ರಲ್ಲಿ ತನ್ನ ಕ್ಯೂಟ್ ಎಕ್ಸ್‌ಪ್ರೇಶನ್ ಮೂಲಕ ಕನ್ನಡ ಜನಮನ ಗೆದ್ದಿದ್ದಲ್ಲದೆ ಕರ್ನಾಟಕದ ಮನೆಮಗಳು ಎಂದೆನಿಸಿಕೊಂಡಿದ್ದಾರೆ. ಬಿಗ್ ಮನೆಯಲ್ಲಿ ಇವರ ಆಟ ನಡೆ ನುಡಿ ಜೊತೆಗೆ ಇವರ ಡ್ರೆಸ್ಸಿಂಗ್ ಸೆನ್ಸ್ ಬಹಳಷ್ಟು ಗಮನ ಸೆಳೆದಿತ್ತು. ಬರೋಬ್ಬರಿ 91 ದಿನಗಳ ಕಾಲ ಬಿಗ್ ಬಾಸ್ ಮನೆಯೊಳಗಿದ್ದ ಐಶ್ವರ್ಯ ಸಿಕ್ಕಾಪಟ್ಟೆ ಅಭಿಮಾನಿಗಳನ್ನು ಗಳಿಸಿದ್ದಾರೆ.

ಇದೀಗ ಐಶ್ವರ್ಯನಲ್ಲಿ ಪ್ರತಿಯೊಬ್ಬರೂ ನಿಮಗೆ ಮದುವೆ ಯಾವಾಗ? ಬಾಯ್‌ಫ್ರೆಂಡ್ ಇದ್ದಾರಾ? ಶಿಶಿರ್‌ನ ಲವ್ ಮಾಡ್ತಿದ್ದೀರಾ? ಶಿಶಿರ್‌ ಕಡೆಯಿಂದ ಪ್ರಪೋಸಲ್ ಬಂದರೆ ನೀವು ಒಪ್ಪಿಕೊಳ್ಳುತ್ತೀರಾ ? ಹೀಗೆ ಹಲವು ಪ್ರಶ್ನೆಗಳನ್ನು ಜನರು ಕೇಳುತ್ತಿದ್ದಾರೆ. ಈಗ ಅದಕ್ಕೆಲ್ಲಾ ಸ್ವತಃ ಐಶ್ವರ್ಯ ಅವರೇ ಉತ್ತರ ನೀಡಿದ್ದಾರೆ.

ಮದುವೆ ಆಗುವ ಯೋಚನೆ ಸದ್ಯಕ್ಕೆ ಇಲ್ಲ. ಒಳ್ಳೆಯ ಗುಣ, ನಡತೆ, ನನ್ನನ್ನು ಅತಿಯಾಗಿ ಪ್ರೀತಿಸುವ, ಕಾಳಜಿ ವಹಿಸುವ, ಗೌರವಿಸುವ ಹುಡುಗ ನನಗೆ ಬೇಕು. ಈ ಎಲ್ಲಾ ನಡತೆಗಳು ಇರುವ ಹುಡುಗ ಸಿಕ್ಕರೆ ನಾನು ಖಂಡಿತವಾಗಿಯೂ ಮದುವೆ ಆಗುತ್ತೇನೆ. ಆ ತರಹದ ಹುಡುಗ ಸಿಕ್ಕರೆ ಬೇಗನೇ ಅವನ ಹೆಸರನ್ನು ರಿವೀಲ್ ಮಾಡಲ್ಲ ಎಂದು ಹೇಳಿದ್ದಾರೆ.

ಇದೀಗ ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದಂತೆಯೇ ಹೊಸ ರಿಯಾಲಿಟಿ ಶೋನಲ್ಲಿ ಐಶ್ವರ್ಯ ಶಿಂಧೋಗಿ ಕಾಣಿಸಿಕೊಂಡಿರುವುದು ಅವರ ಅಭಿಮಾನಿಗಳಿಗಂತೂ ಬಹಳ ಸಂತೋಷ ತಂದಿದೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಆಕ್ಟಿವ್ ಐಶ್ವರ್ಯ ಶಿಂಧೋಗಿ ತಮ್ಮದೇ ಯೂಟ್ಯೂಬ್ ಚಾನೆಲ್ ಅನ್ನು ಕೂಡ ಹೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿಯೂ ಆಗಾಗ ತಮ್ಮ ವೃತ್ತಿ ಬದುಕಿನ ಬಗೆಗಿನ ಬಹಳಷ್ಟು ಅಪ್ ಡೇಟ್‌ಗಳನ್ನು ನೀಡುತ್ತಿರುತ್ತಾರೆ.

Continue Reading

BIG BOSS

ಬಿಗ್‌ಬಾಸ್‌ ಸೀಸನ್-11 ರಲ್ಲಿ ಅತೀ ಕಡಿಮೆ ಸಂಬಳ ಪಡೆದ ಸ್ಪರ್ಧಿ ಇವರೇ ನೋಡಿ..!

Published

on

ಬಿಗ್‌ಬಾಸ್ ಮನೆಯಿಂದ ಹೊರಗೆ ಬಂದ ಕೂಡಲೇ ಅವರ ಹೆಸರು ಇನ್ನಷ್ಟು ಪ್ರಸಿದ್ಧಿಯಾಗುತ್ತದೆ. ದಿನಕ್ಕೊಂದು ಹೊಸ ಹೊಸ ಆಫರ್‌ಗಳು ಬರುತ್ತಲೇ ಇರುತ್ತದೆ. ಹೀಗಾಗಿ ಅದೆಷ್ಟೋ ಜನರು ಬಿಗ್‌ಬಾಸ್ ಮನೆಗೆ ನನಗೂ ಹೋಗಲು ಅವಕಾಶ ಸಿಗುತ್ತಿದ್ದರೆ ಒಳ್ಳೆಯದಿತ್ತು ಎಂದು ಬಯಸುತ್ತಾರೆ.

ಇನ್ನು ಬಿಗ್‌ಬಾಸ್ ಮನೆಗೆ ಹೋದವರಿಗೆ ಮೊದಲೇ ಪೇಮೆಂಟ್ ವಿಷಯವನ್ನು ಹೇಳುತ್ತಾರೆ. ಈ ಮೊದಲೇ ಹೆಸರು ಗಳಿಸಿದವರಿಗೆ ಸ್ವಲ್ಪ ಜಾಸ್ತಿ ಹಣವಿರುತ್ತದೆ. ಪ್ರತಿವಾರಕ್ಕೆ ಇಂತಿಷ್ಟು ಸಂಭಾವನೆ ಎಂದು ಅವರಿಗೆ ಸಿಗುತ್ತದೆ. ಅಲ್ಲದೇ ಬಿಗ್‌ಬಾಸ್ ಗೆದ್ದರೆ 50 ಲಕ್ಷ ಹಣವಿರುತ್ತದೆ. ಇದೀಗ ಬಿಗ್‌ಬಾಸ್‌ನಲ್ಲಿ ಅತೀ ಕಡಿಮೆ ಸಂಬಳ ಪಡೆದ ಸ್ಪರ್ಧಿ ಯಾರು ಗೊತ್ತಾ..?

 

ಹೌದು, ಬಿಗ್‌ಬಾಸ್‌ನಲ್ಲಿ ಅತೀ ಕಡಿಮೆ ಸಂಭಾವನೆ ಪಡೆದವರು ಪುತ್ತೂರಿನ ಧನ್‌ರಾಜ್ ಆಚಾರ್ಯ. ಒಂದು ವಾರಕ್ಕೆ 30 ಸಾವಿರ ಸಂಭಾವನೆ ಸಿಗುತ್ತಿತ್ತು. ಬಿಗ್‌ಬಾಸ್ ಮನೆಯಲ್ಲಿ ಧನರಾಜ್ ಅವರು ಕೊನೆಯವರೆಗೂ ಇದ್ದರು. ಗ್ರ್ಯಾಂಡ್ ಫಿನಾಲೆಗೆ ಹೋಗುವ ಮೊದಲು ಎಲಿಮಿನೇಟ್ ಆದರು.

ಅಲ್ಲದೇ ಬಿಗ್‌ಬಾಸ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿದ್ದು ಸತ್ಯ ಧಾರಾವಾಹಿಯ ಗೌತಮಿ ಜಾದವ್ ಎಂದು ತಿಳಿದುಬಂದಿದೆ. ಬಿಗ್ ಬಾಸ್‌ ಮನೆಯಲ್ಲಿ ಹನುಮಂತ ಲಮಾಣಿ ಮತ್ತು ಧನರಾಜ್ ಆಚಾರ್ ಅವರ ಸ್ನೇಹ ಎಂಥದ್ದು ಎಲ್ಲರಿಗೂ ತಿಳಿದಿದೆ. ಇಬ್ಬರು ಕೂಡ ಜೀವಕ್ಕೆ ಜೀವದಂತೆ ಇದ್ದರು. ಹಾಗೆಯೇ ತನ್ನ ಕಾಮಿಡಿ ಮಾತುಗಳ ಮೂಲಕ ಧನ್‌ರಾಜ್ ವೀಕ್ಷಕರನ್ನು ಮನೋರಂಜಿಸುತ್ತಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page