Connect with us

BIG BOSS

BBK 11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

Published

on

ಬಿಗ್‌ಬಾಸ್‌ ಕನ್ನಡ 11 ನ ಅತೀ ಕಿರಿಕ್ ಪಾರ್ಟಿ ಎಂದರೆ ಅದು ಲಾಯರ್ ಜಗದೀಶ್, ಈ ಬಾರಿ ವೀಕೆಂಡ್‌ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್‌ ಅವರಿಗೆ ಕ್ಲಾಸ್‌ ತೆಗೆದುಕೊಳ್ಳಬೇಕು. ಹೆಣ್ಣು ಮಕ್ಕಳ ಬಗ್ಗೆ ಪದ ಬಳಕೆ ಸರಿ ಇಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಲಾಗುತ್ತಿದೆ. ಮಾತ್ರವಲ್ಲ ಬಿಗ್‌ಬಾಸ್ ಶೋ ನಡೆಸಲು ನಾನು ಬಿಡುವುದಿಲ್ಲ ಎಂದು ಜಗದೀಶ್ ಚಾಲೆಂಜ್ ಹಾಕುತ್ತಿರುವುದು ಕಂಡುಬಂದಿದೆ.

ತಕ್ಕಡಿ ಭಾಗ್ಯ ಎಂಬ ಟಾಸ್ಕ್ ನಲ್ಲಿ ಉಗ್ರಂ ಮಂಜು ಟಾಸ್ಕ್‌ ಗೆದ್ದು ಸೇಫ್ ಆಗಿದ್ದಾರೆ. ಈ ಟಾಸ್ಕ್ ನೋಡಿಕೊಳ್ಳುವ ಉಸ್ತುವಾರಿಯನ್ನು ಧನ್‌ರಾಜ್ ಆಚಾರ್ಯ ಅವರಿಗೆ ನೀಡಲಾಗಿತ್ತು. ಈ ವೇಳೆ ಲಾಯರ್ ಜಗದೀಶ್ ಮತ್ತು ಧನ್‌ರಾಜ್ ಮಧ್ಯೆ ವಾಗ್ವಾದ ನಡೆಯಿತು. ಟಾಸ್ಕ್‌ ಮುಗಿದ ನಂತರ ಮನೆಯೊಳಗೆ ಬಂದ ಜಗದೀಶ್ ಮತ್ತೆ ಧನ್‌ರಾಜ್ ವಿಚಾರದಲ್ಲಿ ಅವನು ಇಷ್ಟುದ್ದ ಇದ್ದಾನೆ ಹೊಡಿಲಿಕ್ಕೆ ಬರ್ತಾನೆ ಎಂದು ನರಕವಾಸಿಗಳ ಬಳಿ ಹೇಳಲು ಜಗಳ ಮತ್ತಷ್ಟು ಜೋರಾಯಿತು.

ಇನ್ನು ಬಿಗ್‌ಬಾಸ್ ಕ್ಯಾಮಾರ ಮುಂದೆ ಬಂದು ಮಾತನಾಡಿದ ಹಂಸಾ ಜಗದೀಶ್ ಅವರು, ನಮ್ಮ ಟೀಂ ಅಲ್ಲಿ ಇದ್ದುಕೊಂಡು ನಮಗೆಲ್ಲ ಡಿಚ್‌ ಮಾಡೋದೆ ಕಂಡೆಂಟಾ? ಹೇಳಿ? ಗೇಮ್ ಆಡೋಕೆ ಶಕ್ತಿ ಇಲ್ಲದಂತಾಗಿದೆ ಎಂದು ಕಣ್ಣೀರಿಟ್ಟರು.

ಇನ್ನು ಇವತ್ತಿನ ಪ್ರೋಮದಲ್ಲಿ ಇದೇ ಗಲಾಟೆ ಮುಂದುವರೆದಂತೆ ಕಾಣುತ್ತಿದೆ. ಮೀಸೆ ಎತ್ತಿಹಿಡಿದವನು ಯಾವನೇ ಆಗಿರಬಹುದು. ಇದುವರೆಗೂ ಬಿಟ್ಟಿಲ್ಲ. ಎಂದು ಬಿಗ್‌ಬಾಸ್‌ ಗೆ ಜಗದೀಶ್ ಚಾಲೆಂಜ್ ಮಾಡಿದಂತಿದೆ. ಜಗದೀಶ್ ಮೇಲೆ ಕೋಪಗೊಂಡಿರುವ ರಂಜಿತ್ ಕೊಡೋ ಮರ್ಯಾದೆ ಈಗ ತೆಗೆದುಕೊಳ್ಳಿಲ್ಲ ಅಂದರೆ ಇದಕ್ಕೆ ಸಮ ಎಂದು ಕಾಲಿನ ಚಪ್ಪಲಿಗೆ ಹೊಡೆಯುವುದು ಕಾಣುತ್ತಿದೆ. ಇದಕ್ಕೆ ನನಗೆ ಘನತೆ ಗೌರವ ಆಚೆ ಕಡೆ ಚೆನ್ನಾಗಿದೆ. ನನಗೆ ನಾನೇ ಬಿಗ್‌ಬಾಸ್‌ , ನನ್ನನ್ನು ಹೊರಗೆ ಕಳಿಸಿದರೆ ಉತ್ತಮ ಎಂದು ಗಾಭೀರ್ಯದಿಂದ ಕುಳಿತು ಜಗದೀಶ್ ಹೇಳುತ್ತಿದ್ದಾರೆ. ಮಾತ್ರವಲ್ಲ ಹೊರಗೆ ಹೋದ ಮೇಲೆ ನಾನು ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಬಿಗ್‌ಬಾಸ್ ಶೋ ಚೆನ್ನಾಗಿ ನಡೆಸಲು ನಾನು ಬಿಡುವುದಿಲ್ಲ ಎಂದು ಚಾಲೆಂಜ್‌ ಮಾಡಿದ್ದಾರೆ ಜಗದೀಶ್!

BIG BOSS

ನಿಶ್ಚಿತಾರ್ಥ ಮಾಡಿಕೊಂಡ BBK11ರ ಸ್ಪರ್ಧಿ ಉಗ್ರಂ ಮಂಜು

Published

on

ಬಿಗ್‌ ಬಾಸ್‌ ಕನ್ನಡ ಸೀಸನ್ 11ರ ಸ್ಪರ್ಧಿ, ನಟ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಮಂಜು ಬದುಕಿನಲ್ಲಿ ಹೊಸ ಅಧ್ಯಾಯವೊಂದು ತೆರೆದುಕೊಂಡಿದೆ.

ಮ್ಯಾಕ್ಸ್ ಮಂಜು ಅವರು ಸಂಧ್ಯಾ ಖುಷಿ ಎನ್ನುವವರ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಫೋಟೋಗಳನ್ನು ಇಬ್ಬರೂ ತಮ್ಮ ತಮ್ಮ ಇನ್‌ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಇಬ್ಬರೂ ತಮ್ಮ ತಮ್ಮ ಇನ್‌ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದು, ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ, ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ, ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ’ ಬರೆದುಕೊಂಡಿದ್ದಾರೆ.

ಮ್ಯಾಕ್ಸ್​ ಮಂಜು ಅವರು ಬಿಗ್ ಬಾಸ್ ಸೀಸನ್​ 11ರಲ್ಲಿ ಸ್ಪರ್ಧಿಯಾಗಿದ್ದರು. ಕೊನೆವರೆಗೂ ಪೈಪೋಟಿ ಕೊಟ್ಟಿದ್ದರು. ಬಿಗ್ ಬಾಸ್​ನಲ್ಲಿ ಮಗ ಮದುವೆ ಬಗ್ಗೆ ತಂದೆ ಪ್ರಸ್ತಾಪ ಮಾಡಿದ್ದರು. ಅದರಂತೆ ಮ್ಯಾಕ್ಸ್ ಮಂಜು ಅವರ ನಿಶ್ಚಿತಾರ್ಥ ಆಗಿದ್ದು ಇನ್ನೇನು ವಿವಾಹ ಸಂಭ್ರಮವೊಂದು ಬಾಕಿ ಇದೆ.

ಇದನ್ನೂ ಓದಿ: 20 ವರ್ಷದ ಯುವತಿ ವಿರುದ್ದ ಕೇಸ್ ದಾಖಲಿಸಿದ ಖ್ಯಾತ ನಟಿ ಅನುಪಮಾ ಪರಮೇಶ್ವರನ್‌; ಪೋಸ್ಟ್‌ನಲ್ಲೇನಿದೆ?

ಹುಡುಗಿ ಯಾರು?
ಉಗ್ರಂ ಮಂಜು ಕೈಹಿಡಿಯಲಿರುವ ಸಂಧ್ಯಾ ಖುಷಿ ಅವರು ಸ್ಪರ್ಷ್ ಆಸ್ಪತ್ರೆಯಲ್ಲಿ ಟ್ರಾನ್ಸ್‌ಪ್ಲ್ಯಾಂಟ್ ಕೋರ್ಡಿನೇಟರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿಯೂ ಬಹಳ ಸಕ್ರಿಯವಾಗಿರುವ ಸಂಧ್ಯಾ ಅವರು ತಮ್ಮ ಹಲವಾರು ವಿಡಿಯೋಗಳು ಮತ್ತು ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಾರೆ.

Continue Reading

BIG BOSS

ರಕ್ಷಿತಾ ಚಪ್ಪಲಿ ತೋರಿಸಿದ್ದು ನಿಜಾನಾ? ಸುದೀಪ್ ಬಿಚ್ಚಿಟ್ರು ಅಸಲಿ ಸತ್ಯ!

Published

on

BBK 12 : ವಾರಾಂತ್ಯ ಬಂತೆಂದರೆ ಎಲ್ಲರೂ ಕಿಚ್ಚನ ಆಗಮನಕ್ಕಾಗಿ ಕಾಯುತ್ತಿರುತ್ತಾರೆ. ಈ ಬಾರಿ ಎಂದಿನಂತೆ ಕಿಚ್ಚ ವೀಕೆಂಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರು ವಾರದ ಪಂಚಾಯಿತಿ ನಡೆಸಲು ಬರುತ್ತಿದ್ದಂತೆ ಗರಂ ಆಗಿದ್ದರು. ರಕ್ಷಿತಾ ಶೆಟ್ಟಿ ಕಲಾವಿದರಿಗೆ ಚಪ್ಪಲಿ ತೋರಿಸಿದ್ದಾರೆಂಬ ಅಶ್ವಿನಿ ಗೌಡ ಆರೋಪಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ.

ರಕ್ಷಿತಾ.. ನಾಟಕ ಅಂತ ಹೇಳಿಕೊಂಡು ನೀನು ಚಪ್ಪಲಿ ತೋರಿಸಿದ್ದೀಯಾ ಅಂದರೆ ಯಾರಿಗೆ ನೀನು ಅವಮಾನ ಮಾಡುತ್ತಾ ಇದ್ದೀಯಾ? ಎಂದು ಕಿಚ್ಚ ಸುದೀಪ್ ಮುಂದೆಯೇ ಅಶ್ವಿನಿ ಗೌಡ ಆರೋಪ ಮಾಡಿದ್ದಾರೆ.

ಆಗ ಸುದೀಪ್, ಕಲಾವಿದರಿಗೆ ಚಪ್ಪಲಿ ತೋರಿಸಿದ್ರಾ? ನಾನು ತಪ್ಪು ಹೇಳಿಕೆ ಕೊಟ್ಟಾಗ ಏನಾಗುತ್ತೆ ಯಾರ್ ಯಾರೋ ಕಲಾವಿದರಿಗೆ ಹೇಳಿದ್ದರಂತೆ, ಕಲಾವಿದರಿಗೆ ಹೇಳಿದ್ದರಂತೆ ಅಂತಾರೆ. ಯಾಕೆ ಮೇಡಂ ವೇದಿಕೆ ಮೇಲೆ ನಿಂತಿರುವ ನಾನು ಒಬ್ಬ ಕಲಾವಿದ ಅಲ್ವಾ? ಕರ್ನಾಟದಲ್ಲಿ ಇರುವ ಪ್ರತಿಯೊಬ್ಬ ಕಲಾವಿದರಿಗೆ ನಾನು ಉತ್ತರ ಕೊಡಬೇಕಾಗಿತ್ತು. ಇದೊಂದು ತಪ್ಪು ಗ್ರಹಿಕೆ ಎಂದಿದ್ದಾರೆ.

ಅಸಲಿಗೆ ಆಗಿದ್ದೇನು?

ಕಳೆದ ಸಂಚಿಕೆಯಲ್ಲಿ ಅಶ್ವಿನಿ ಗೌಡ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಜಗಳ ನಡೆದಿತ್ತು. ಈ  ವೇಳೆ ಅಶ್ವಿನಿ ಗೌಡ ರಕ್ಷಿತಾ ಮೇಲೆ ಗಂಭೀರ ಆರೋಪ ಮಾಡಿದ್ದರು. ರಕ್ಷಿತಾ ಕಲಾವಿದರಿಗೆ ಅವಮಾನ ಮಾಡಿದರು. ನಾಲ್ಕೈದು ಬಾರಿ ಚಪ್ಪಲಿ ತೋರಿಸಿ ಮಾತನಾಡಿದ್ರು ಎಂದು ಆರೋಪಿಸಿದ್ದರು.

ಇದನ್ನೂ ಓದಿ : BBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?

ಇದೀಗ ಇದೇ ವಿಚಾರವಾಗಿ ಸುದೀಪ್ ಅವರು ವಾರದ ಪಂಚಾಯಿತಿಯಲ್ಲಿ ಪ್ರಶ್ನಿಸಿದ್ದಾರೆ. ಇದೊಂದು ತಪ್ಪು ಗ್ರಹಿಕೆ ಎಂದು ರಕ್ಷಿತಾ ಮೇಲಿನ ಆರೋಪಕ್ಕೆ ತೆರೆ ಎಳೆದಿದ್ದಾರೆ.

Continue Reading

BIG BOSS

ವ್ಯಕ್ತಿತ್ವದ ಪರೀಕ್ಷೆಯಲ್ಲಿ ಗೆಲ್ಲೋದು ಯಾರು? ಯಾರಿಗೆ ಗೇಟ್‌ ಪಾಸ್?

Published

on

BBK12 : ಬಿಗ್ ಬಾಸ್ ಕನ್ನಡ ಸೀಸನ್‌ 12 ಶೋನಲ್ಲಿ ವಾರಾಂತ್ಯ ಬಂತು ಅಂದ್ರೆ ಕುತೂಹಲ ಹೆಚ್ಚು. ಕಿಚ್ಚ ಯಾರಿಗೆ ಕ್ಲಾಸ್ ತಗೋತ್ತಾರೆ? ಕಿಚ್ಚನ ಚಪ್ಪಾಳೆ ಯಾರಿಗೆ? ಯಾರು ದೊಡ್ಮನೆಯಿಂದ ಹೊರ ಹೋಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಗುತ್ತೆ. ಹಾಗಾಗಿ ಕಿಚ್ಚನ ಬರುವಿಕೆಗಾಗಿ ಬಿಗ್ ಬಾಸ್ ವೀಕ್ಷಕರು ಕಾಯುತ್ತಿರುತ್ತಾರೆ.

ಅಂದಹಾಗೆ,  ಈ ಬಾರಿ ಎಲ್ಲಾ ಸ್ಪರ್ಧಿಗಳನ್ನು ಕಿಚ್ಚ ಸುದೀಪ್‌ ನಾಮಿನೇಟ್‌ ಮಾಡಿದ್ದರು. ಈ ವಾರ ವ್ಯಕ್ತಿತ್ವದ ಆಟ, ಫಿಸಿಕಲ್‌ ಟಾಸ್ಕ್‌ ಇರೋದಿಲ್ಲ ಎಂದು ಹೇಳಿದ್ದರು. ಹಾಗಾಗಿ ಯಾರು ಬಚಾವಾಗ್ತಾರೆ ಅನ್ನೋ ಕುತೂಹಲ ಹೆಚ್ಚು.

ಕಲರ್ಸ್‌ ಕನ್ನಡ ಪ್ರೊಮೋ ಒಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕಿಚ್ಚ ಸುದೀಪ್ ವಾರದ ಪಂಚಾಯಿತಿ ನಡೆಸಲು ವೇದಿಕೆಗೆ ಎಂಟ್ರಿ ಕೊಟ್ಟಿರೋದನ್ನು ಕಾಣಬಹುದು. ತಾಳ್ಮೆ ನಮಗೆ ಕಲಿಸುವುದು ಪಾಠ ಒಂದು ಕಡೆಯಾದರೆ, ಬದುಕು ದಿನನಿತ್ಯ ಕಲಿಸುವ ಪಾಠಗಳೇ ಬೇರೆ ತರ ಆಗಿರುತ್ತವೆ.

ಬಿಗ್‌ಬಾಸ್‌ನಲ್ಲಿ ಪರೀಕ್ಷೆ ಎಲ್ಲರಿಗೂ ಒಂದೆ. ಆದರೇ, ಪಠ್ಯಕ್ರಮ ಎಲ್ಲ ವ್ಯಕ್ತಿತ್ವಗಳಿಗೆ ಸರಿಯಾಗಿ ಬದಲಾಗುತ್ತಾ ಹೋಗುತ್ತದೆ. ವ್ಯಕ್ತಿತ್ವದ ಪರೀಕ್ಷೆಯಲ್ಲಿ ಪಾಸ್ ಆದೋರು ಯಾರು? ಪಾಸ್ ಆಗದವರು ಯಾರು? ಎಂದು ಅವರು ಹೇಳಿದ್ದಾರೆ.

ಈ ಬಾರಿ ಲೆಟರ್‌ ಟಾಸ್ಕ್‌ ಇತ್ತು. ಎಲ್ಲ ಸ್ಪರ್ಧಿಗಳಿಗೂ ಮನೆಯವರಿಂದ ಪತ್ರ ಬಂದಿತ್ತು. ಈ ಪತ್ರ ಪಡೆಯಲು ಎಮೋಶನ್ ಟಾಸ್ಕ್ ಇತ್ತು. ಯಾರಿಗೆ ಪತ್ರ ಸಿಕ್ಕಿದೆಯೋ ಅವರಿಗೆ ಇಮ್ಯೂನಿಟಿ ಸಿಕ್ಕಿದೆ. ಅಭಿಷೇಕ್‌, ಜಾಹ್ನವಿ, ಕಾವ್ಯ ಶೈವ, ಮಾಳು ನಿಪನಾಳ, ರಿಷಾ ಗೌಡ ಅವರಿಗೆ ಪತ್ರ ಸಿಕ್ಕಿದ್ದು,  ಅವರು ಒಂದು ವಾರ ಸೇಫ್‌ ಆಗಿದ್ದಾರೆ.

ಇದನ್ನೂ ಓದಿ : BBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?

ಪತ್ರ ಸಿಗದ ಅಶ್ವಿನಿ ಗೌಡ, ರಕ್ಷಿತಾ, ಗಿಲ್ಲಿ ನಟ, ಧನುಷ್, ಕಾಕ್ರೋಚ್ ಸುಧಿ, ಸ್ಪಂದನಾ, ಧ್ರುವಂತ್, ಸೂರಜ್, ಚಂದ್ರಪ್ರಭ ಹಾಗೂ ರಾಶಿಕಾ ಬಿಗ್‌ಬಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page