Connect with us

BIG BOSS

BBK12: ಗಿಲ್ಲಿ ಕಾಮಿಡಿಗೆ ನಕ್ಕುನಕ್ಕು ಸುಸ್ತಾದ ರಜತ್‌

Published

on

BBK12: . ಬಿಗ್‌ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ವೈಲ್ಡ್‌ ಕಾರ್ಡ್‌ ಸ್ಪರ್ಧಿಯಾಗಿ ಬಂದಂತಹ ರಜತ್‌ ಇದೀಗ ಬಿಗ್‌ಬಾಸ್‌ ಮನೆಗೆ ಎರಡನೇ ಬಾರಿ ಕಾಲಿಟ್ಟಿದ್ದಾರೆ. ನಟ ರಜತ್ ರಫ್‌ ಆ್ಯಂಡ್‌ ಟಫ್‌ ವ್ಯಕ್ತಿತ್ವದವರು. ಮನೆಗೆ ಅತಿಥಿಯಾಗಿ ಬಂದ ಮೊದಲ ವಾರವೇ ಗಿಲ್ಲಿ ಮೇಲೆ ಸಿಡಿದೆದ್ದಿದ್ದರು. ಆದರೆ ಈಗ ರಜತ್‌ ಗಿಲ್ಲಿ ಸೂಪರ್‌ ಕಾಂಬಿನೇಷನ್‌ ಆಗಿದ್ದಾರೆ.


ಗಿಲ್ಲಿ ಮಾಡುವ ಎಲ್ಲ ಕಾಮಿಡಿಯನ್ನು ರಜತ್‌ ಅವರು ಸಖತ್‌ ಎಂಜಾಯ್‌ ಮಾಡುತ್ತಿದ್ದಾರೆ. ಇದರಿಂದ ಬಿಗ್‌ಬಾಸ್‌ ಮನೆಯೊಳಗೆ ರಜತ್‌ ತುಂಬಾನೇ ಕೂಲ್‌ ಆಗಿದ್ದಾರೆ. ಈ ಮೊದಲು ರಘು ಜತೆ ಸೇರಿ ಕಾಮಿಡಿ ಮಾಡುತ್ತಿದ್ದ ಗಿಲ್ಲಿ ಈಗ ರಜತ್‌ ಜತೆ ಸೇರಿಕೊಂಡಿದ್ದಾರೆ.

ಬಿಗ್‌ಬಾಸ್‌ ಮನೆಯಲ್ಲಿ ಯಾವಾಗಲೂ ಜಗಳ, ಗಲಾಟೆ ನಡೆಯುತ್ತಲೇ ಇರುತ್ತದೆ. ಮಾತಿನ ಚಕಮಕಿ ನಡುವೆ ಮನರಂಜನೆಯೇ ಕಳೆದು ಹೋಗಿರುತ್ತದೆ. ಆಗ ವೀಕ್ಷಕರಿಗೆ ಮತ್ತು ಸದಸ್ಯರಿಗೆ ರಿಲೀಫ್‌ ನೀಡುವುದೇ ಗಿಲ್ಲಿ ಕಾಮಿಡಿ. ಗಿಲ್ಲಿ ಅವರು ಬಿಗ್‌ಬಾಸ್‌ ಆಟದಲ್ಲಿನ ಅನೇಕ ಘಟನೆಯನ್ನು ತನ್ನದೇ ಶೈಲಿಯಲ್ಲಿ ಅರ್ಥೈಸುತ್ತಾರೆ. ಅದನ್ನು ಕೇಳಿ ಎಲ್ಲರಿಗೂ ನಗು ಬರುತ್ತದೆ.

ಮಂಡ್ಯ ಭಾಷೆಯಲ್ಲಿ ಮಾತಾಡುತ್ತಾ ಎಲ್ಲರ ಮನಸ್ಸು ಸೆಳೆಯುತ್ತಾರೆ. ನಗಿಸುವ ಕಲೆ ಗಿಲ್ಲಿಗೆ ಸೂಕ್ತವಾಗಿದೆ. ಜನಪ್ರಿಯ ಸಿನಿಮಾಗಳ ಸಂಭಾಷಣೆಗಳನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಂಡು ಸಖತ್‌ ಮನರಂಜನೆ ನೀಡುತ್ತಾರೆ. ವೀಕ್ಷಕರು ಮಾತ್ರವಲ್ಲದೇ ವೈಲ್ಡ್‌ ಕಾರ್ಡ್‌ ಸ್ಪರ್ಧಿ ರಜತ್‌ ಕೂಡ ಫುಲ್‌ ಎಂಜಾಯ್‌ ಮಾಡುತ್ತಿದ್ದಾರೆ.

ಕಳೆದ ವಾರದಿಂದ ಸೈಲೆಂಟ್‌ ಆಗಿರುವ ಧ್ರುವಂತ್‌ ಮನೆಯಿಂದ ಹೊರಹೋಗಲು ನಿರ್ಧಾರ ತೆಗೆದುಕೊಂಡಿದ್ದಾರೆ. ಆ ವಿಚಾರವನ್ನು ಇಟ್ಟುಕೊಂಡು ಗಿಲ್ಲಿ ನಟ, ಡಿಸೆಂಬರ್‌ 4ರ ಸಂಚಿಕೆಯಲ್ಲಿ ಉಪೇಂದ್ರ ಸಿನಿಮಾದ ಡೈಲಾಗ್‌ ಅನುಕರಣೆ ಮಾಡಿ ಧ್ರುವಂತ್‌ ಅವರ ಕಾಲೆಳೆದು ಮಾತನಾಡಿದ್ದರು. ಗಿಲ್ಲಿ ಕಾಮಿಡಿಗೆ ಮನಸಾರೆ ನಕ್ಕ ರಜತ್‌ ಬಿಗ್‌ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್‌ ಎಂಟ್ರಿ ನೀಡುವ ಮುನ್ನವೇ ಗಿಲ್ಲಿಗೆ ಫಿದಾ ಆಗಿದ್ದರಂತೆ.

ಇದನ್ನೂ ಓದಿ: ನಿನ್ನ ಜತೆ ಸೇರಲೇಬಾರದಿತ್ತು ಎಂದ ಗಿಲ್ಲಿ; ಕಾವ್ಯಾಗೆ ಶಾಕ್!

ರಜತ್‌ ಬಿಗ್‌ಬಾಸ್‌ ಮನೆಯೊಳಗೆ ಬಂದು ಒಂದು ವಾರ ಅತಿಥಿಯಾಗಿ ಇದ್ದಾಗ, ಇವನೇ ನನಗೆ ಸಖತ್‌ ಇಷ್ಟ ಎಂದು ಹೇಳಿದ್ದರು. ಆದರೆ ಮೊದಲು ಸಾಕಷ್ಟು ಮನಸ್ತಾಪಗಳು ಇದ್ದಿದ್ದರೂ, ಈಗ ವಾತಾವರಣ ಬದಲಾಗಿದೆ. ಗಿಲ್ಲಿಯ ಪ್ರತಿಯೊಂದು ಕಾಮಿಡಿಯನ್ನು ಕೂಡ ಎಂಜಾಯ್ ಮಾಡುತ್ತಿದ್ದಾರೆ.

BIG BOSS

ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ; ಗಮನ ಸೆಳೆದ ಕಿಚ್ಚ ಸುದೀಪ್ ಪೋಸ್ಟ್ !

Published

on

BBk12 :  ಕನ್ನಡ ಬಿಗ್ ಬಾಸ್ ಸೀಸನ್ 12 ಕೊನೆಯ ಹಂತದಲ್ಲಿದೆ. ಇನ್ನು ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ವಿನ್ನರ್ ಯಾರು ಅನ್ನೋದು ಹೊರ ಬೀಳಲಿದೆ. ಬಿಗ್ ಬಾಸ್ ಫಿನಾಲೆ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಸತತ 12 ಸೀಸನ್‌ಗಳನ್ನು ಕಿಚ್ಚ ಸುದೀಪ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಸೀಸನ್ 12 ಮುಕ್ತಾಯಗೊಳ್ಳುವ ಹಂತದಲ್ಲಿರುವಾಗ ಕಿಚ್ಚ ಸುದೀಪ್ ಸೋಸಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ಸ್ಪರ್ಧಿಗಳಿಗೆ ಅಭಿನಂದನೆ ತಿಳಿಸಿದ್ದಾರೆ.

ಕಿಚ್ಚ ಪೋಸ್ಟ್ ಏನು?

ಕಿಚ್ಚ ತನ್ನಫೋಟೋವೊಂದನ್ನು ಹಂಚಿಕೊಂಡಿದ್ದಾರೆ.  ಇಂದು ಸೂರ್ಯ ಮುಳುಗುವ ವೇಳೆಗೆ ಬಿಗ್‌ಬಾಸ್ ಸೀಸನ್ – 12 ಮುಕ್ತಾಯಗೊಳ್ಳಲಿದೆ. ಈ ಸೀಸನ್‌ನ ಬೆಳವಣಿಗೆ ಮತ್ತು ಅದ್ಭುತ ಪ್ರಯಾಣ ಮುಂದಿನ ಪೀಳಿಗೆಗೆ ಸಾಕ್ಷಿಯಾಗಿದೆ. ಅಚಲ ಬೆಂಬಲಕ್ಕಾಗಿ ಪ್ರತಿಯೊಬ್ಬ ವೀಕ್ಷಕರಿಗೂ ನನ್ನ ಹೃತ್ತೂರ್ವಕ ಕೃತಜ್ಞತೆಗಳು.

ಇದನ್ನೂ ಓದಿ :  ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

ಎಲ್ಲಾ ಸ್ಪರ್ಧಿಗಳಿಗೆ ಮತ್ತು ಸೀಸನ್‌ನ ವಿಜೇತರಿಗೆ ಹೃತ್ತೂರ್ವಕ ಅಭಿನಂದನೆಗಳು. ಈ ಅದ್ಭುತ ಯಶಸ್ಸಿಗೆ ಇಡೀ ಬಿಗ್‌ಬಾಸ್ ತಾಂತ್ರಿಕ ತಂಡಕ್ಕೆ ಅಭಿನಂದನೆಗಳು. ನೀವೆಲ್ಲರೂ ಇಲ್ಲದೆ ಬಿಗ್‌ಬಾಸ್ ಕಾರ್ಯಕ್ರಮವಿಲ್ಲ. ಹೊಸ ಸೀಸನ್ – 13 ಪ್ರಾರಂಭವಾಗುವವರೆಗೆ ಬಿಗ್‌ ಬಾಸ್ ವಿಶ್ರಾಂತಿ ಪಡೆಯಲು ಗೌರವಯುತವಾಗಿ ಮುಖ್ಯದ್ವಾರವನ್ನು ಮುಚ್ಚುತ್ತೇವೆ ಎಂದು ಬರೆದುಕೊಂಡಿದ್ದಾರೆ.

Continue Reading

BIG BOSS

ಹನುಮಂತ ಪ್ರಕಾರ ಬಿಗ್ ಬಾಸ್ ಗೆಲ್ಲೋದು ಇವರೇ ಅಂತೆ!

Published

on

BBK12 : ಬಿಗ್ ಬಾಸ್ ಸೀಸನ್ 12 ಕೊನೆಯ ಹಂತಕ್ಕೆ ಬಂದು ನಿಂತಿದೆ. ಸದ್ಯ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಅನ್ನೋ ಕುತೂಹಲ ಬಿಗ್ ಬಾಸ್ ವೀಕ್ಷಕರದ್ದು.  ತಮ್ಮ ನೆಚ್ಚಿನ ಸ್ಪರ್ಧಿಗಳಿಗೆ ಈಗಾಗಲೇ ಬಹುತೇಕ ಮಂದಿ ವೋಟ್ ಮಾಡಿದ್ದು, ಫಿನಾಲೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಬಿಗ್ ಬಾಸ್‌ 11ರಲ್ಲಿ ವೈಲ್ಡ್ ಕಾರ್ಡ್ ಪಡೆದಿದ್ದವರು ಗಾಯಕ ಹನುಮಂತ ಲಮಾಣಿ. ಆ ಸೀಸನ್‌ನ ವಿಜೇತರಾಗಿ ಹೊರಬಂದು ಇತಿಹಾಸ ಸೃಷ್ಟಿಸಿದ್ದರು. ವೈಲ್ಡ್ ಕಾರ್ಡ್ ಮೂಲಕ ಒಳಗೆ ಹೋದವರು ಗೆದ್ದು ತೋರಿಸಬಹುದೆಂದು ತೋರಿಸಿಕೊಟ್ಟಿದ್ದರು ಹನುಮಂತ. ಇದೀಗ ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರು ಅನ್ನೋ ಭವಿಷ್ಯ ನುಡಿದಿದ್ದಾರೆ.

ಯಾರು ವಿನ್ನರ್ ?

ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವರೇ ವಿನ್ನರ್ ಆಗ್ತಾರೆ ಎಂದು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತ ಹೇಳಿದ್ದಾರೆ.

ಈ ಬಾರಿಗೆ ಗಿಲ್ಲಿ ಚೆನ್ನಾಗಿ ಆಟವಾಡಿದ್ದಾರೆ. ಅವರು ಗೆಲ್ಲುವ ವಿಶ್ವಾಸ ನನಗೆ ಇದೆ. ಬಿಗ್ ಬಾಸ್ ಮನೆಯಲ್ಲಿ ಯಾವುದೇ ಭೇದ ಭಾವ ಮಾಡುವುದಿಲ್ಲ. ಈ ಬಾರಿ ಅತಿ ಹೆಚ್ಚು ವೋಟಿಂಗ್ ಆಗಿದೆ. ಅತಿ ಹೆಚ್ಚು ವೋಟು ಗಿಲ್ಲಿನಟ ತೆಗೆದುಕೊಂಡಿದ್ದಾರೆ. ನಾನು ಸಹ ಗಿಲ್ಲಿ ನಟನಿಗೆ ವೋಟ್ ಮಾಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

ನನ್ನ ಫೇವರಿಟ್ ಗಿಲ್ಲಿ ಅಣ್ಣ. ಎಲ್ಲರಿಗೂ ಆಲ್ ದಿ ಬೆಸ್ಟ್. ಸೋತೋರು ಬೇಜಾರ್ ಮಾಡ್ಕೋಬೇಡಿ. ಎಲ್ಲರಿಗೂ ಆಲ್ ದಿ ಬೆಸ್ಟ್, ಗಿಲ್ಲಿ ಅಣ್ಣನಿಗೆ ವಿಶೇಷ ಆಲ್ ದಿ ಬೆಸ್ಟ್. ಸುದೀಪ್ ಸರ್ ಮುಂದೆ ನಿಲ್ಲೋದೆ ಪುಣ್ಯ. ಫೈನಲ್ ವರೆಗೂ ಹೋಗೋದೆ ಪುಣ್ಯ  ಎಂದಿದ್ದಾರೆ.

Continue Reading

BIG BOSS

BBK12: ಗಿಲ್ಲಿ ವಿನ್ನರ್ ಆದ್ರೂ ನಿಲ್ಲದ ಕಿಚ್ಚು: ರಕ್ಷಿತಾ ಪರ ಸೋಷಿಯಲ್ ಮೀಡಿಯಾ ವಾರ್; ಯಾಕೆ ಗೊತ್ತಾ?

Published

on

BBK12: ಬಿಗ್‌ಬಾಸ್‌ ಕನ್ನಡ ಸೀಸನ್‌ 12ರ ಫಿನಾಲೆ ಇಂದು ನಡೆಯಲಿದ್ದು, ಆರು ಸ್ಫರ್ಧಿಗಳು ಫಿನಾಲೆ ತಲುಪಿದ್ದಾರೆ. ಅವರ ಪೈಕಿ ಗಿಲ್ಲಿ ನಟನೇ ಈ ಸೀಸನ್‌ನ ವಿನ್ನರ್‌ ಎಂದು ಇಡೀ ಕರ್ನಾಟಕ ಸುದ್ದಿ ಮಾಡುತ್ತಿದೆ. ಇನ್ನು ಕೆಲವರು ಸೋಶಿಯಲ್‌ ಮೀಡಿಯಾದಲ್ಲಿ ಗಿಲ್ಲಿ ಬದಲು ರಕ್ಷಿತಾ ಶೆಟ್ಟಿ ಗೆಲ್ಲಬೇಕು ಎಂದು ಚರ್ಚೆ ಮಾಡುತ್ತಿದ್ದಾರೆ.


ರಕ್ಷಿತಾ ಶೆಟ್ಟಿ ಕೇವಲ ಯೂಟ್ಯೂಬ್‌ ಕಂಟೆಂಟ್‌ ಕ್ರಿಯೇಟರ್‌. ಆದರೆ ಗಿಲ್ಲಿ ನಟ ನಟರಾಗಿದ್ದಾರೆ. ರಕ್ಷಿತಾ ಯೂಟ್ಯೂಬ್‌ ಒಂದರಿಂದಲೇ ಇಷ್ಟು ಫೇಮಸ್‌ ಆಗಿ ಬಿಗ್‌ಬಾಸ್‌ ಶೋಗೆ ಸ್ಥಾನ ಪಡೆದಿದ್ದಾರೆ. ಅದಕ್ಕಾಗಿ ಗಿಲ್ಲಿಗಿಂತಲೂ ರಕ್ಷಿತಾ ಗ್ರೇಟ್‌ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

ಆದರೆ, ರಕ್ಷಿತಾಗಿಂತ ಗಿಲ್ಲಿಗೆ ಅಭಿಮಾನಿಗಳು ಜಾಸ್ತಿ ಇದ್ದಾರೆ. ಅದೇ ಕಾರಣಕ್ಕಾಗಿ ಸಾಕಷ್ಟು ವೋಟ್‌ ಗಿಲ್ಲಿಗೆ ಬಂದಿವೆ. ಆದರೆ, ರಕ್ಷಿತಾ ಶೆಟ್ಟಿ ಗೆಲ್ಲಬೇಕು ಎಂಬ ಬಯಕೆ ಇರುವುದು ಈಗ ಜಗತ್ತಿಗೆ ಗೊತ್ತಾಗಿದೆ. ಕೆಲವು ಮಾಹಿತಿ ಪ್ರಕಾರ, ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಸ್ಥಾನ ಸಿಗುವುದು ಡೌಟ್‌ ಎನ್ನಲಾಗಿದೆ. ಗಿಲ್ಲಿ ವಿನ್ನರ್‌, ಅಶ್ವಿನಿ ಗೌಡ ರನ್ನರ್ ಎಂದು ಅನೇಕರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಫ್ಯಾನ್ಸ್ ಅಬ್ಬರ ಕಂಡು ಬೆಚ್ಚಿಬಿದ್ದ ಬಿಗ್ ಬಾಸ್ ಮನೆ ಮಂದಿ; ಸುದೀಪ್ ಕೊಟ್ಟ ಸುಳಿವೇನು?

ಇನ್ನು ಕೆಲವೇ ಸಮಯದಲ್ಲಿ ಬಿಗ್‌ಬಾಸ್‌ ಕನ್ನಡ 12ರ ವಿನ್ನರ್‌, ರನ್ನರ್‌ ಅದೇ ರೀತಿ 3ನೇ ಸ್ಥಾನ ಯಾರ ಪಾಲಾಗಲಿದೆ ಎಂಬುದು ತಿಳಿಯಲಿದೆ. ಕಲರ್ಸ್‌ ಕನ್ನಡದಲ್ಲಿ ಇಂದು ಪ್ರಕಟಿಸಲಾಗುತ್ತಿದ್ದು, ಕಪ್‌ ಯಾರ ಪಾಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ

Continue Reading
Advertisement

Trending

Copyright © 2025 Namma Kudla News

You cannot copy content of this page