Connect with us

LATEST NEWS

ಬೆಳ್ತಂಗಡಿ- ಪಂಪ್ ಆನ್ ಮಾಡಲು ಹೋಗಿ ಜೀವ ಕಳಕೊಂಡ ತಾಯಿ -ಮಗು..!

Published

on

ಬೆಳ್ತಂಗಡಿ : ಪಂಪ್ ಸ್ವಿಚ್ ಆನ್ ಮಾಡಲು ಹೋಗಿ  ತಾಯಿ ಮತ್ತು ಮಗು ವಿದ್ಯುತ್ ಅಘಾತಕ್ಕೆ ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪಟ್ರಮೆ ಎಂಬಲ್ಲಿ ನಡೆದಿದೆ.

ಪಟ್ರಮೆ ಕೋಡಂದೂರು ನಿವಾಸಿ ಹರೀಶ್ ಎಂಬವರ ಪತ್ನಿ 30 ವರ್ಷದ ಗೀತಾ ಹಾಗೂ ಅವರ ನಾಲ್ಕೂವರೇ ವರ್ಷದ ಮಗು ಭವಿಷ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಬೆಳಿಗ್ಗೆ 10 ಗಂಟೆ ವೇಳೆಗೆ ಗೀತಾರವರು ಮಗು ಭವಿಷ್‍ನನ್ನು ಹಿಡಿದುಕೊಂಡು ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದಾರೆ.

ಈ ಸಂದರ್ಭ ಅಚಾನಕ್ ಆಗಿ ವಿದ್ಯುತ್ ಅಘಾತಕ್ಕೆ ಒಳಗಾಗಿ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಧರ್ಮಸ್ಥಳ ಪೊಲೀಸರು ಸ್ಥಳ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿದ್ದಾರೆ.

DAKSHINA KANNADA

ಸುರತ್ಕಲ್ : ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರು ಹೊಂಡಕ್ಕೆ ; ದಂಪತಿಗೆ ಗಾಯ

Published

on

ಸುರತ್ಕಲ್: ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ 5 ಅಡಿ ಆಳದ ಹೊಂಡಕ್ಕೆ ಬಿದ್ದು ದಂಪತಿ ಗಾಯಗೊಂಡಿರುವ ಘಟನೆ ಜೋಕಟ್ಟೆಯ ಕಳವಾರು ಎಂಬಲ್ಲಿ ನಿನ್ನೆ (ಫೆ.6) ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಕಾನ ಕಾಪ್ರಿಗುಡ್ಡ ನಿವಾಸಿ ರವಿ ಹಾಗೂ ಅವರ ಪತ್ನಿ ಗಾಯಳುಗಳು ಎಂದು ಗುರುತಿಸಲಾಗಿದೆ. ಅಪಘಾತದಿಂದ ದಂಪತಿಗೆ ಗಾಯಗಳಾಗಿದ್ದು, ಅವರನ್ನು ಕಾನದ ಆಸ್ಪತ್ರೆಗೆ ರವಾನಿಸಲಾಗಿದೆ.

ತಮ್ಮ ಪತ್ನಿಯೊಂದಿಗೆ ರವಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಜೋಕಟ್ಟೆ ಕಳವಾರು ಬಳಿ ಕಾರಿನ ಬ್ರೇಕ್ ಫೇಲ್ ಆಗಿದೆ.‌ ಕಾರನ್ನು ನಿಯಂತ್ರಣಕ್ಕೆ ತರಲೆಂದು ಯತ್ನಿಸಿದಾಗ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದರ ಪರಿಣಾಮ ಒಂದು ವಿದ್ಯುತ್ ಕಂಬ ನೆಲಕ್ಕೆ ಉರುಳಿದ್ದು, ಹೈಟೆನ್ಷನ್ ವಯರ್ ರಸ್ತೆಯಲ್ಲಿ ಬಿದ್ದಿದೆ.

 

ಇದನ್ನೂ ಓದಿ : ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

 

ಅಪಘಾತದ ರಭಸಕ್ಕೆ ಕಾರು ಜೋಕಟ್ಟೆ ಬಜ್ಪೆ ರಸ್ತೆಯಿಂದ ಎಸ್‌.ಇ.ಆರ್‌.ಝೆಡ್ ರಸ್ತೆಗೆ ಉರುಳಿದೆ ಎನ್ನಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದ್ದಾರೆ.

 

Continue Reading

LATEST NEWS

ಮಂಗಳೂರು : ಸ್ನ್ಯಾಪ್‌ನಲ್ಲಿ ಅಶ್ಲೀಲ ವಿಡಿಯೋ ಸೆಂಡ್ ಮಾಡಿ ಬೆದರಿಕೆ ಹಾಕಿದವನ ವಿರುದ್ಧ ದೂರು ದಾಖಲು

Published

on

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಸ್ನ್ಯಾಪ್‌ ಚಾಟ್‌ನಲ್ಲಿ ಅಶ್ಲೀಲ ವೀಡಿಯೋ ಕಳುಹಿಸಿ ಬೆದರಿಕೆ ಹಾಕಿದವನ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟೀವ್ ಇರುವುದು ತಪ್ಪಲ್ಲ. ಆದರೆ ಮಿತಿಯಲ್ಲಿರಬೇಕು. ಇದೀಗ ದಾಖಲಾಗಿರುವ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿಯ ಕೈಗೆ ಮೊಬೈಲ್ ಕೊಟ್ಟದ್ದು ಹೆತ್ತವರ ತಪ್ಪೂ ಹೌದು. ಜೊತೆಗೆ ಮೊಬೈಲ್‌ನಲ್ಲಿ ಆಕೆ ಏನು ಮಾಡುತ್ತಿದ್ದಾಳೆ ಎನ್ನುವುದನ್ನೂ ಗಮನಿಸುತ್ತಿರಬೇಕು. ವಿಶೇಷವಾಗಿ ಬಾಲಕಿಯರನ್ನು ಸೋಶಿಯಲ್ ಮೀಡಿಯಾದಿಂದ ಆದಷ್ಟು ದೂರ ಇರುವಂತೆ ಎಚ್ಚರಿಕೆ ನೀಡಬೇಕು. ಏಕೆಂದರೆ ಮುಂದಿನ ಸವಾಲಿನ ಬಗ್ಗೆ ಅವರಿಗೆ ಅರಿವಿರುವುದಿಲ್ಲ. ಇದೀಗ ನಡೆದಿರುವ ಪ್ರಕರಣದಲ್ಲಿ ಅಪ್ರಾಪ್ತ ಬಾಲಕಿ ವಿಡಿಯೋ ನೋಡಿ ಹೆದರಿ ಬಳಿಕ ಹೆತ್ತವರ ಸಹಾಯದೊಂದಿಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

“ವ್ಯಕ್ತಿಯೋರ್ವ ತನ್ನ ಸ್ನ್ಯಾಪ್‌ಚಾಟ್ ಖಾತೆಗೆ ಆತನ ಸ್ನ್ಯಾಪ್‌ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೋ ಕಾಲ್‌ನ ಸ್ಟ್ರೀನ್ ರೆಕಾರ್ಡ್ ಮಾಡಿರುವ ವೀಡಿಯೋ ಫೈಲ್ ಸೆಂಡ್ ಮಾಡಿ ಬೆದರಿಕೆ ಹಾಕಿದ್ದಾನೆ” ಎಂದು ನ್ಯಾಷನಲ್ ಸೈಬ‌ರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್‌ಗೆ (ಎನ್‌ಸಿಸಿಆರ್‌ಪಿ) ದೂರು ನೀಡಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಮಂಗಳೂರಿನ ಓರ್ವ ಶಂಕಿತ ಸ್ನ್ಯಾಪ್‌ಚಾಟ್ ಖಾತೆದಾರನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಈ ದೇಶದಲ್ಲಿ ಪ್ರೇಮಿಗಳ ದಿನದಂದು ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ !

Published

on

ಪ್ರಪಂಚದಾದ್ಯಂತ ಫೆಬ್ರವರಿ 14ರಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತದೆ. ಅನೇಕ ಜನರು ಈ ದಿನ ತಮ್ಮ ಪ್ರೀತಿಯ ಸಂದೇಶಗಳೊಂದಿಗೆ ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ಕಳುಹಿಸುವ ಮೂಲಕ ಇನ್ನೊಬ್ಬರಿಗೆ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಆದರೆ ಈ ಒಂದು ದೇಶದಲ್ಲಿ ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ.

ವ್ಯಾಲೆಂಟೆನ್ಸ್ ಡೇ ಬಹಳ ಜನಪ್ರಿಯವಾದ ದಿನವಾಗಿದೆ. ಪ್ರೀತಿಪಾತ್ರರ ನಡುವೆ ಈ ದಿನದಂದು ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳಲಾಗುತ್ತದೆ. ಪ್ರೇಮಿಗಳ ದಿನದಂದು ಹೆಚ್ಚಾಗಿ ಹುಡುಗರು ಹುಡುಗಿಯರಿಗೆ ಗಿಫ್ಟ್‌ಗಳನ್ನು ಕೊಡುತ್ತಾರೆ. ಆದರೆ, ಜಪಾನ್ ದೇಶದಲ್ಲಿ ಹುಡುಗಿಯರು ಹುಡುಗರಿಗೆ ಉಡುಗೊರೆಗಳನ್ನು ನೀಡುತ್ತಾರೆ. ಇದರ ಬದಲಾಗಿ ಹುಡುಗರು ಹುಡುಗಿಯರು ಇಷ್ಟಪಡದ ವಸ್ತುಗಳನ್ನು ಹಿಂತಿರುಗಿಸಬೇಕು.

ಇದನ್ನೂ ಓದಿ: ಗೆಳತಿಗಾಗಿ ಕಳ್ಳನಾದ ಎಂಎಲ್ಎ ಮಗ !

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 14ರಂದು ಅಲ್ಲಿನ ಜನರು ತಮ್ಮ ತಮ್ಮ ಪ್ರೀತಿಪಾತ್ರರ ಹೆಸರನ್ನು ಹೃದಯದ ಆಕಾರದಲ್ಲಿ ಭುಜದ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಇನ್ನು ಎಲ್ಲಾ ದೇಶಗಳಲ್ಲೂ ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸಿದರೆ, ಬ್ರೇಜಿಲ್‌ನಲ್ಲಿ ಜೂನ್ 12 ರಂದು ವ್ಯಾಲೆಂಟೆನ್ಸ್ ಡೇ ಆಚರಿಸುತ್ತಾರೆ. ಫಿಲಿಪೈನ್ಸ್ ದೇಶದಲ್ಲಿ ಸರ್ಕಾರದ ಆಶ್ರಯದಲ್ಲಿ ಸಾಮೂಹಿಕ ವಿವಾಹಗಳು ನಡೆಯುತ್ತವೆ.

Continue Reading
Advertisement

Trending

Copyright © 2025 Namma Kudla News

You cannot copy content of this page