Connect with us

BELTHANGADY

ಪುರುಷ ಕಟ್ಟುವ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮಕ್ಕೆ ಅವಮಾನ; ಪ್ರಕರಣ ದಾಖಲು

Published

on

ಬೆಳ್ತಂಗಡಿ : ‘ಪುರುಷ ಕಟ್ಟುವ’ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್‌ (ಸ.ಅ) ಮತ್ತು ಪವಿತ್ರವಾದ ಅಝಾನ್‌ ಅನ್ನು ಅವಹೇಳನ ಮಾಡಿದ ಘಟನೆ ಬೆಳ್ತಂಗಡಿಯ ಪೆರಾಡಿ ಗ್ರಾಮದಲ್ಲಿ ನಡೆದಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ಮಂದಿ ಆರೋಪಿಗಳ ವಿರುದ್ಧ ಹಾಗೂ ಇದಕ್ಕೆ ಸಹಕರಿಸಿದ ಇತರ 20 ರಿಂದ 30 ಮಂದಿಯ ವಿರುದ್ಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಣೂರು ಪೊಲೀಸ್ ಠಾಣೆಯಲ್ಲಿ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ಮನೆ ನಿವಾಸಿ ಮಹಮ್ಮದ್ ರಫೀಕ್ ನೀಡಿರುವ ದೂರಿನಂತೆ ಆರೋಪಿಗಳಾದ ಸಾವ್ಯ ನಿವಾಸಿಗಳಾದ ವಸಂತ, ರಾಜೇಶ್, ಹರೀಶ್, ಪೆರಾಡಿ ನಿವಾಸಿಗಳಾದ ದಯಾನಂದ, ರಂಗನಾಥ ಮೋಹನ್, ಶಮಿತ್, ರವಿ, ರಮೇಶ್ ಕುಲಾಲ್, ಸುರೇಶ್, ಅಶೋಕ ಕುಲಾಲ್, ಧನುಷ್ ಹರದೊಟ್ಟು, ಹರೀಶ್ ಬಂತೊಟ್ಟು, ರಮೇಶ್ ಆರ್.ಕೆ, ಸುರೇಶ್ ಬರೊಟ್ಟು, ಪ್ರಮೋದ್, ಪ್ರಕಾಶ್ ಪೆರಾಡಿ ಮತ್ತು ಇತರ 20 ರಿಂದ 30 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇಸ್ಲಾಂ ಧರ್ಮವನ್ನು ಅವಮಾನಿಸುವ ವೀಡಿಯೋ ಹರಿಬಿಟ್ಟ ಬಗ್ಗೆ, ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲಿಯೇ ಇದೀಗ ವೇಣೂರು ಪೊಲೋಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎ.14 ರಂದು ರಾತ್ರಿಯ ವೇಳೆ ಪುರುಷ ಕಟ್ಟುನ ಎಂಬ ಆಚರಣೆಯ ನೆಪದಲ್ಲಿ ಮುಸ್ಲಿಂ ವೇಷ ಧರಿಸಿಕೊಂಡು ಇಸ್ಲಾಂ ಧರ್ಮ, ಪ್ರವಾದಿ ಮಹಮ್ಮದ್ (ಸ.ಅ) ಮತ್ತು ಪವಿತ್ರವಾದ ಆಝಾನ್ ಅನ್ನು ಅವಹೇಳನ ಮಾಡಿ ಹಿಂದೂ ಮುಸ್ಲಿಂ ಧರ್ಮಗಳ ನಡುವೆ ವೈಷಮ್ಯದ ಭಾವನೆಗಳನ್ನು ಉಂಟುಮಾಡುವ ಉದ್ದೇಶದಿಂದ ವಿಡಿಯೋವನ್ನು ಸಾಮಾಜಿಕ ಜಾಕತಾಣಗಳಲ್ಲಿ ವೈರಲ್ ಮಾಡಿದ್ದ ಬಗ್ಗೆ ಕಲಂ 353(2) ಜೊತೆಗೆ 3(5) ಬಿ.ಎನ್.ಎಸ್ 2023 ರಂತೆ ಪ್ರಕರಣ ದಾಖಲಿಸಲಾಗಿದೆ.

BELTHANGADY

ನಿದ್ದೆ ಮಾತ್ರೆ ಸೇವನೆ ತಾಯಿ ಮಗ ಆತ್ಮಹತ್ಯೆ ಯತ್ನ ; ಡೆತ್‌ನೋಟ್‌ನಲ್ಲಿ ಏನಿದೆ ..?

Published

on

ಬೆಳ್ತಂಗಡಿ : ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ (ಮೇ.12) ಸಂಭವಿಸಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞರಾಮನ್ ನಾಯ‌ರ್ ಅವರ ಪತ್ನಿ ಕಲ್ಯಾಣಿ (96) ಸಾವನ್ನಪ್ಪಿದರೆ, ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರಾವಸ್ಥೆಯಲ್ಲಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯವೇ ಈ ದುರ್ಘಟನೆಗೆ ಮುಕ್ಯ ಕಾರಣ ಎನ್ನಲಾಗಿದೆ.

ಮಲಗಿದ ಸ್ಥಿತಿಯಲ್ಲಿ ತಾಯಿ- ಮಗ :

ಕಲ್ಯಾಣಿ ಮತ್ತು ಜಯರಾಂ ಅವರ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು ಗಮನಿಸಿ ನೆರೆ ಹೊರೆಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊರವರು ಸೇರಿ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಡೆತ್‌ನೋಟ್‌ನಲ್ಲಿ ಏನಿದೆ ..?

ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.

ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

BELTHANGADY

ಆಪರೇಷನ್ ಸಿಂಧೂರ್ : ಕಾಂಗ್ರೆಸ್ ಮುಖಂಡನ ನೇತೃತ್ವದಲ್ಲಿ ವೀರ ಯೋಧರಿಗೆ ವಿಶೇಷ ಅಭಿನಂದನಾ ಕಾರ್ಯಕ್ರಮ

Published

on

ಬೆಳ್ತಂಗಡಿ : ‘ಆಪರೇಷನ್ ಸಿಂಧೂರ’ ಯಶಸ್ವಿ ಕಾರ್ಯಚರಣೆಗಾಗಿ ವೀರ ಯೋಧರಿಗೆ ವಿಶೇಷ ಅಭಿನಂದನಾ ಸಲ್ಲಿಕೆ ಕಾರ್ಯಕ್ರಮ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ರಕ್ಷಿತ್ ಶಿವರಾಂ ರವರು ದೇಶದ ಐಕ್ಯತೆ , ಸಮಗ್ರತೆ , ಸಾರ್ವಭೌಮತ್ವಗಾಗಿ ಕಾಂಗ್ರೆಸ್ ಪಕ್ಷ ತ್ಯಾಗ , ಬಲಿದಾನ ಮಾಡಿದನ್ನು ಈ ದೇಶದ ಇತಿಹಾಸದಿಂದ ಅಳಿಸಲು ಅಸಾಧ್ಯ. ನಮ್ಮ ದೇಶದ ವಿರುದ್ಧ ಯಾವುದೇ ದೇಶ ಯುದ್ಧ ಸಾರಿದರೂ ನಮ್ಮ ಪಕ್ಷ ದೇಶದ ಪರವಾಗಿ ಸದಾಕಾಲವೂ ನಿಲ್ಲುತ್ತದೆ. ನಮ್ಮ ದೇಶದಲ್ಲಿ ಹಿಂದೂ , ಮುಸ್ಲಿಂ , ಕ್ರೈಸ್ತ , ಜೈನ , ಪಾರ್ಸಿ ಎಂಬುದನ್ನು ಮರೆತು ಒಂದಾಗುವ ಕಾಲ ಇದು. ಆದರೆ ಕೆಲವರು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಸುತ್ತಿರುವುದು ಅಸಹ್ಯವಾಗಿದೆ. ಆಪರೇಶನ್ ಸಿಂಧೂರದಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ್ದು ಓರ್ವ ಮುಸ್ಲಿಂ ಮಹಿಳಾ ಸೇನಾಧಿಕಾರಿ ಎಂಬುದನ್ನು ನಾವು ಶ್ಲಾಘಿಸಬೇಕು ಎಂದರು.

ಇದನ್ನೂ ಓದಿ : ದಾಳಿಗೆ ಪ್ರತಿದಾಳಿ ..! ಪಾಕ್ ವಿಫಲ ಯತ್ನ ..! F-16 ಹಾಗೂ JF-17 ಜೆಟ್‌ಗಳನ್ನು ಹೊಡೆದುರುಳಿಸಿದ ಭಾರತ ..!

ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ ಕುಮಾರ್ , ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷನಾಗೇಶ್ ಕುಮಾರ್ ಗೌಡ , ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ , ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ವಂದನಾ ಭಂಡಾರಿ , ಗ್ರಾಮೀಣ ಬ್ಲಾಕ್ ಅಧ್ಯಕ್ಷೆ ನಮಿತಾ ಪೂಜಾರಿ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ ,ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ , ಉಪಾಧ್ಯಕ್ಷರುಗಳಾದ ಅರುಣ್ ಲೋಬೊ. ನವೀನ್ ಗೌಡ. ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷರು ಅಝರ್ ನಾವೂರು , ಮಚ್ಚಿನ ಪಂಚಾಯತ್ ಸದಸ್ಯರು ಪ್ರಮೋದ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Continue Reading

BELTHANGADY

ಹರೀಶ್ ಪೂಂಜಾನಿಂದ ಕೋಮು ಪ್ರಚೋದನಕಾರಿ ಭಾಷಣ; ದೇವಸ್ಥಾನ ಆಡಳಿತಕ್ಕೆ ಮುಸ್ಲಿಂ ಒಕ್ಕೂಟದಿಂದ ಪತ್ರ

Published

on

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾರವರು ಬೆಳ್ತಂಗಡಿಯ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ತೆಕ್ಕಾರು ನಿವಾಸಿ ಇಬ್ರಾಹಿಂ.ಎಸ್.ಬಿ ದೂರು ದಾಖಲಿಸಿದ್ದರು. ಇದೀಗ ಹರೀಶ್ ಪೂಂಜಾ ಅವರ ಹೇಳಿಕೆ ವಿರೋಧಿಸಿ ಮುಸ್ಲಿಂ ಒಕ್ಕೂಟ ದೇವಸ್ಥಾನದ ಆಡಳಿತಕ್ಕೆ ಪತ್ರ ಬರೆದಿದೆ.

ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾರಿಗೆ ಮಾತನಾಡಲು ಅವಕಾಶ ಕೊಟ್ಟಿರುವುದಕ್ಕೆ ಮುಸ್ಲಿಂ ಸಮುದಾಯದಿಂದ ವಿರೋಧ ವ್ಯಕ್ತಪಡಿಸಿದೆ. ‘ಶಾಸಕ ಹರೀಶ್ ಪೂಂಜಾ ತೆಕ್ಕಾರು ಪರಿಸರದ ಸೌಹಾರ್ದತೆಯನ್ನು ಕೆಡಿಸುವ ಪ್ರಯತ್ನ ಮಾಡಿದ್ದಾರೆ, ಈ ಬೆಳವಣಿಗೆಯಿಂದ ನಮಗೆ ನೋವುಂಟಾಗಿದೆ. ಭಕ್ತಾಧಿಗಳ ವಾಹನ ನಿಲ್ಲಿಸಲು ಮುಸ್ಲಿಮರ ಜಮೀನು ಬಳಕೆ ಮಾಡಲಾಗಿದೆ. ಕ್ಷೇತ್ರದ ಟ್ಯೂಬ್ ಲೈಟ್, ಡೀಸೆಲ್ ಕದ್ದ ಆರೋಪ ಮುಸ್ಲಿಮರ ಮೇಲೆ ಹೊರಿಸಲಾಗಿದೆ, ಇದಕ್ಕೆ ಸೂಕ್ತ ಸಾಕ್ಷಿಯನ್ನು ಒದಗಿಸಬೇಕು.ದೇವಸ್ಥಾನದ ಆಡಳಿತ ಮಂಡಳಿ ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಸುಹಾಸ್ ಶೆಟ್ಟಿ ಕೊಲೆಯಲ್ಲಿ ಬಜಪೆ ಹೆಡ್ ಕಾನ್ಸ್‌ಟೆಬಲ್‌ ಭಾಗಿ : ಶರಣ್ ಪಂಪ್‌ವೆಲ್ ಆರೋಪ

ಅಷ್ಟಕ್ಕೂ ಶಾಸಕ ಹೇಳಿದ್ದೇನು?

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶಾಸಕ ಹರೀಶ್ ಪೂಂಜಾ “ದೇವಾಲಯದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಮುಸ್ಲಿಂ ಮಸೀದಿಗಳಿಗೆ ಏಕೆ ನೀಡಿದ್ದೀರಿ? ನಮಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ನೀವು ಮುಸ್ಲಿಮರಿಗೆ ಆಹ್ವಾನ ಪತ್ರಿಕೆ ನೀಡಿದ್ದರಿಂದಲೇ ಅವರು ಟ್ಯೂಬ್‌ಲೈಟ್ ಒಡೆದಿದ್ದಾರೆ” ಎಂದಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page