Connect with us

BELTHANGADY

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ಅಗ್ನಿ ದುರಂತ; ಬೆಂಕಿಯಲ್ಲಿ ಸುಟ್ಟು ಕರಕಲಾದ ಅಂಗಡಿ

Published

on

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ನಡೆದಿದೆ.


ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್ ಎಂಬವರ ಮಾಲೀಕತ್ವದ ಕೆಎಎಫ್ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಫೆ.14 ರಂದು ಬೆಳಗ್ಗೆ 7:30 ಕ್ಕೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ.

ಇದನ್ನೂ ಓದಿ: ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

BELTHANGADY

ಚಿನ್ನಾಭರಣ ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ; ಆರೋಪಿ ಬಂಧನ

Published

on

ಬೆಳ್ತಂಗಡಿ: ಚಿನ್ನಾಭರಣ ಪಾಲಿಶ್ ಮಾಡಿ ಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಾಶಿ ಪಟ್ಣ ಗ್ರಾಮದಲ್ಲಿ ನಡೆದಿದ್ದು, ಪ್ರಕರಣದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.


ಕಾಶಿಪಟ್ಲ ಗ್ರಾಮದ ಪಣಿಲಾಜೆ ಎಂಬಲ್ಲಿ 90 ವರ್ಷ ಪ್ರಾಯದ ವೃದ್ಧ ಮಹಿಳೆ ಒಬ್ಬರೇ ಮನೆಯಲ್ಲಿದ್ದ ಸಂದರ್ಭದಲ್ಲಿ ಸೇಲ್ಸ್ ಮ್ಯಾನ್ ಎಂಬುದಾಗಿ ಹೇಳಿಕೊಂಡು ಬಂದಿದ್ದ ಬಿಹಾರದ ಸುಪೋಲ್ ಜಿಲ್ಲೆಯ ತ್ರಿವೇಣಿಗಂಜ್ ತಾಲೂಕಿನ ರಘನಾಥಪುರ ಗ್ರಾಮ ನಿವಾಸಿ 30 ವರ್ಷ ಪ್ರಾಯದ ಚಂದನ್ ಕುಮಾರ್ ಎಂಬಾತ ಚಿನ್ನವನ್ನು ತೊಳೆದು ಕೊಡುವುದಾಗಿ ಹೇಳಿದ್ದಾನೆ. ಅದನ್ನು ನಂಬಿದ ಮಹಿಳೆ ಕಪಾಟಿನ ಲಾಕರಿನಲ್ಲಿದ್ದ ಲಕ್ಷ್ಮೀ ಪದಕ ಇರುವ ಎರಡು ಮುಕ್ಕಾಲು ಪವನ್ ತೂಕದ ಚಿನ್ನದ ಸರವನ್ನು ತಂದು ಕೊಟ್ಟಿದ್ದಾರೆ.

ಆರೋಪಿಯು ಅಂಗಳದಲ್ಲಿದ್ದ ನಳ್ಳಿಯಿಂದ ಮಗ್ ಗೆ ನೀರು ಹಾಕಿ ಬ್ರಶ್ ನಿಂದ ಸರವನ್ನು ತೊಳೆಯುವ ನಾಟಕ ಮಾಡಿದ್ದಾನೆ. ಬಳಿಕ ಪೇಪರ್ ನಲ್ಲಿ ಸುತ್ತಿ ಕೊಟ್ಟಿದ್ದು, ಫ್ಯಾನ್ ಗಾಳಿಗೆ ಇಟ್ಟು ಒಣಗಿಸುವಂತೆ ಹೇಳಿ ಅಲ್ಲಿಂದ ಕಾಲ್ಕಿತ್ತಿದ್ದ. ಅವರು ಪೇಪರ್ ತೆರೆದು ನೋಡಿದಾಗ ಅರಶಿನ ಪುಡಿಯಂತೆ ಕಾಣುವ ಪುಡಿ ಇದ್ದು, ಚಿನ್ನದ ಸರದ ಸಣ್ಣ ಸಣ್ಣ ತುಂಡುಗಳು, ತಾಮ್ರದ ಬಣ್ಣಕ್ಕೆ ತಿರುಗಿದ ಲಕ್ಷ್ಮೀ ಪದಕ ಕಂಡು ಬಂದಿತ್ತು. ತಾನು ಮೋಸ ಹೋಗಿದ್ದೇನೆ ಎಂದು ಗೊತ್ತಾದ ಮಹಿಳೆ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಯುವಕನ ಹತ್ಯೆಗೈದ ಪ್ರಿಯಕರ!

ಕೇಸು ದಾಖಲಿಸಿಕೊಂಡ ಪೊಲೀಸರು ಸಿಸಿ ಕೆಮರಾದಲ್ಲಿ ಸೆರೆಯಾಗಿದ್ದ ಆರೋಪಿಯ ಫೋಟೊ ಆಧಾರದಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಫೆಬ್ರವರಿ 28 ರಂದು ಮೂಡುಬಿದಿರೆಯ ಗಂಟಾಲ್‌ ಕಟ್ಟೆ ಎಂಬಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ. ಮತ್ತು ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ರವಿ ಬಿ.ಎಸ್. ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಅಕ್ಷಯ್ ಡವಗಿ, ಓಮನಾ ಎನ್. ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿತ್ತು.

Continue Reading

BELTHANGADY

ಮಂಗಳೂರು: 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Published

on

ಮಂಗಳೂರು: ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನ ಚಿತ್ರಶೇಖರ ಎಂಬವರಿಗೆ 2013 ರಲ್ಲಿ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಬೆಳ್ತಂಗಡಿಯ ಪಾರೆಂಕಿ ಗ್ರಾಮದ 53 ವರ್ಷ ಪ್ರಾಯದ ಆಲ್ವಿನ್ ರೊಡ್ರಿಗಸ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಚಿತ್ರಶೇಖರ ಎಂಬವರಿಗೆ ಹಲ್ಲೆ ನಡೆಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ನಮ್ಮ ಕುಟುಂಬದ ಮಕ್ಕಳನ್ನ ನಾವೇ ಸರಿಯಾಗಿ ಗಮನಿಸಬೇಕು: ಲವ್ ಜಿಹಾದ್ ಕುರಿತು ಶಾಸಕ ಯತ್ನಾಳ್ ಹೇಳಿಕೆ

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಆಲ್ವಿನ್ ರೊಡ್ರಿಗಸ್‌ನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Continue Reading

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page