Connect with us

bangalore

ಫ್ಲೈಟ್‌ನಲ್ಲಿ ನಾಯಿಗೆ ಎಂಟ್ರಿ ಕೊಟ್ಟಿಲ್ಲ-ಕ್ಯಾನ್ಸಲ್ ಆಯ್ತು 4ಲಕ್ಷ ರೂಪಾಯಿಯ 12 ದಿನದ ಟ್ರಿಪ್…!

Published

on

ಬೆಂಗಳೂರು: ವಿಮಾನದಲ್ಲಿ ತಮ್ಮ ಪ್ರೀತಿಯ ಸಾಕುನಾಯಿಯನ್ನು ಕರೆದುಕೊಂಡು ಹೋಗಲು ಫೈಲೆಟ್ ತಿರಸ್ಕರಿಸಿ ವ್ಯಕ್ತಿಯೊಬ್ಬರು ತನ್ನ 4 ಲಕ್ಷ ರೂಪಾಯಿಯ 12 ದಿನದ ಟ್ರಿಪ್ ರದ್ದು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಬೆಂಗಳೂರಿನ ವರ್ತೂರಿನ ನಿವಾಸಿ ಸಚಿನ್ ಶೆಣೈ ಟ್ರಿಪ್‌ ಕ್ಯಾನ್ಸಲ್‌ ಮಾಡಿಕೊಂಡ ವ್ಯಕ್ತಿ.

ಬೆಂಗಳೂರಿನಲ್ಲಿ ಐಟಿ ಕಂಪನಿಯ HR ಆಗಿ ಕೆಲಸ ಮಾಡುತ್ತಿದ್ದ ಸಚಿನ್ ನಾಯಿಯೊಂದನ್ನು ಪ್ರೀತಿಯಿಂದ ಸಾಕಿಕೊಂಡಿದ್ದ. ಆತನ ಕುಟುಂಬಸ್ಥರು ಇಯರ್ ಎಂಡ್ ಟ್ರಿಪ್‌ಗಾಗಿ 12 ದಿನದ ಪ್ಲ್ಯಾನ್ ಮಾಡಿಕೊಂಡಿದ್ದರು.

ಈ ವೇಳೆ ಸಚಿನ್‌ ತನ್ನ ಸಾಕು ನಾಯಿಯನ್ನು ಜೊತೆಗೆ ಕರೆದೊಯ್ಯುವ ಪ್ಲ್ಯಾನ್‌ ಮಾಡಿಕೊಂಡಿದ್ದ. ಹೀಗೆ ಪ್ಲ್ಯಾನ್‌ ಮಾಡಿದ್ದ ಸಚಿನ್‌ ಕುಟುಂಬ 4 ಲಕ್ಷ ಖರ್ಚು ಮಾಡಿ ಬೆಂಗಳೂರು ಟು ಅಮೃತಸರಕ್ಕೆ ಹೋಗಬೇಕೆಂದುಕೊಂಡಿದ್ದರು. ಇದಕ್ಕಾಗಿ ಅಮೃತಸರದಲ್ಲಿ ಹೋಟೆಲ್, ಕ್ಯಾಬ್ ಬುಕ್ ಮಾಡಿಕೊಂಡಿದ್ದರು.

ಅಷ್ಟೇ ಅಲ್ಲದೆ ಸುಮಾರು ಮೂರು ತಿಂಗಳ ಹಿಂದೆ ಫ್ಲೈಟ್ ಬುಕ್ ಆಗಿತ್ತು. ಜೊತೆಗೆ ನಾಯಿಗಾಗಿ ಬೋರ್ಡಿಂಗ್ ಪಾಸ್ ಪಿಟ್ ಟು ಫ್ಲೈ ಸರ್ಟಿಫಿಕೇಟ್ ಕೂಡ ತೆಗೆದುಕೊಂಡಿದ್ದರು. ಆದರೆ ಇನ್ನೇನೂ ಪ್ಲೈಟ್ ಹತ್ತಬೇಕು ಅನ್ನುವಷ್ಟರಲ್ಲಿ ನಾಯಿಯ ಗೂಡು ಸರಿಯಾಗಿಲ್ಲ ಎನ್ನುವ ಕಾರಣಕ್ಕೆ ಪೈಲೆಟ್ ನಿರಾಕರಿಸಿದ್ದಾರೆ.

ಅದೆಷ್ಟು ಮನವೊಲಿಸಿದರೂ ಪೈಲೆಟ್ ನಾಯಿಯನ್ನು ಹತ್ತಿಸಿಕೊಳ್ಳಲು ತಯಾರಿರಲಿಲ್ಲ. ನಾಯಿಯನ್ನು ಬಿಟ್ಟು ಬಂದರೆ ಮಾತ್ರ ನೀವು ದೆಹಲಿಗೆ ಹೋಗಬಹುದು ಎಂದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಸಚಿನ್ ಎಲ್ಲ ರೂಲ್ಸ್ ಪಾಲನೆ ಮಾಡಿ, ಹಣ ಕಟ್ಟಿದ ಮೇಲೆ ಪೈಲೆಟ್ ಕಿರಿಕಿರಿ ಮಾಡಿದ ಬಗ್ಗೆ ಅಸಮಾಧಾನ ತೋರಿಸಿದ್ದಾನೆ. ಅಷ್ಟೇ ಅಲ್ಲದೇ ಇಡೀ ಟ್ರಿಪ್ ಕ್ಯಾನ್ಸಲ್‌ ಮಾಡಿಕೊಂಡು ಏರ್‌ಪೋರ್ಟ್‌ನಿಂದ ಸಚಿನ್ ಕುಟುಂಬ ವಾಪಸಾಗಿದೆ.

ಇನ್ನೂ ಘಟನೆಗೆ ಸಂಬಂಧಿಸಿ ಸಚಿನ್‌ ವೀಡಿಯೋವೊಂದನ್ನು ಮಾಡಿದ್ದು, ಏರ್‌ಪೋರ್ಟ್‌ನಲ್ಲಿ ನಡೆದ ಘಟನೆ ಬಗ್ಗೆ ಶೇರ್‌ ಮಾಡಿಕೊಂಡು, ಇದ್ಯಾವ ರೀತಿಯ ನ್ಯಾಯ ಅಂತಾ ಸಚಿನ್ ಪ್ರಶ್ನಿಸಿದ್ದಾನೆ.

ಅಷ್ಟೇ ಅಲ್ಲದೇ ಶ್ವಾನವನ್ನು ಬಿಡದಿದ್ದಕ್ಕೆ 4 ಲಕ್ಷ ವೆಚ್ಚದ ಟ್ರಿಪ್‌ನ್ನು ಕ್ಯಾನ್ಸಲ್ ಮಾಡಿಕೊಳ್ಳಬೇಕಾಗಿ ಬಂತು ಎಂದು ಏರ್‌ಪೋರ್ಟ್‌ನಲ್ಲಿ ವೀಡಿಯೋ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾನೆ.

Advertisement
Click to comment

Leave a Reply

Your email address will not be published. Required fields are marked *

bangalore

ಲೇಡಿ ಫಿಟ್ನೆಸ್ ಟ್ರೈನರ್ ಮೇಲೆ ಅತಿಯಾದ ಮೋಹ; ಯುವಕ ಅರೆಸ್ಟ್‌

Published

on

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಹರಿಯಾಣ ಮೂಲದ ಸುಧೀರ್ ಕುಮಾರ್ ಬಂಧಿತ ಆರೋಪಿ. ಸಂತ್ರಸ್ತ ಯುವತಿ ಬೆಂಗಳೂರಲ್ಲಿ ಲೇಡಿ ಫಿಟ್ನೆಸ್, ನ್ಯೂಟ್ರೀಷಿಯನ್ ಇನ್‌ಫ್ಲೂಯೆನ್ಸರ್ ಆಗಿ ಕೆಲಸ ಮಾಡುತ್ತಿದ್ದು, ಇನ್‌ಸ್ಟಾ ಮೂಲಕ ಆತ ಲೈಂಗಿಕವಾಗಿ ಪ್ರಚೋದಿಸುವಂತೆ ಮೆಸೇಜ್ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾದಲ್ಲಿ ಯುವತಿಯನ್ನು ನೋಡಿ ಪೀಡಿಸಲು ಶುರುಮಾಡಿದ್ದ. ಜೊತೆಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸೆ ನೀಡುತ್ತಿದ್ದ. ಅದಾದ ಬಳಿಕ ವಾಟ್ಸಪ್ ನಂಬರ್ ಪಡೆದುಕೊಂಡು, ಪುನಃ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದ. ದಿನ ಕಳೆದಂತೆ ಬೆಂಬಿಡದೇ ಯುವತಿಯನ್ನು ಕಾಡಲು ಶುರುಮಾಡಿದ್ದ. ಕೊನೆಗೆ ಯುವತಿಯನ್ನು ಹುಡುಕಿಕೊಂಡು ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ. ಬೆಂಗಳೂರಿಗೆ ಬಂದು ಜಿಮ್ ಸಹೋದ್ಯೋಗಿಗಳ ಬಳಿ ವಿಚಾರಿಸಿದ್ದ.

ಇದನ್ನೂ ಓದಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಚಾರ ತಿಳಿಯುತ್ತಿದ್ದಂತೆ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ದಕ್ಷಿಣ ವಿಭಾಗ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

Continue Reading

bangalore

ಮಹಿಳಾ ಒಳ ಉಡುಪುಗಳನ್ನು ಕದಿಯುತ್ತಿದ್ದ ಆರೋಪಿಯ ಬಂಧನ

Published

on

ಬೆಂಗಳೂರು: ಮಹಿಳಾ ಒಳಉಡುಪುಗಳನ್ನು ಕದಿಯುತ್ತಿದ್ದ ಕೇರಳ ಮೂಲದ ಆರೋಪಿ ಅಮಲ್ (23) ಎಂಬಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ.


ಆರೋಪಿ ಮಹಿಳೆಯರ ಒಳಉಡುಪುಗಳನ್ನು ಕದ್ದು, ನಂತರ ಅವುಗಳನ್ನ ಧರಿಸಿಕೊಂಡು ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.  ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿಯ ಮೊಬೈಲ್ ಫೋನ್ ಪರಿಶೀಲನೆ ಮಾಡಿದಾಗ, ಮಹಿಳಾ ಒಳಉಡುಪು ಧರಿಸಿಕೊಂಡಿರುವ ಹಲವು ಫೋಟೋಗಳು ಪತ್ತೆಯಾಗಿವೆ.

ಇದನ್ನೂ ಓದಿ: ಹನೂರು: ಬೆಂಕಿ ಅನಾಹುತ; ವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಮೇವು ಸುಟ್ಟು ಭಸ್ಮ

ಇನ್ನು ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ವೇಳೆ ಮಹಿಳಾ ಒಳಉಡುಪುಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದುದೂ ಪತ್ತೆಯಾಗಿದೆ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Continue Reading

bangalore

ಕಾನೂನು ಕಾಯುವವರೇ ಕಾಮುಕರಾದ್ರೆ..! ಹಿರಿಯ ಪೊಲೀಸ್ ಅಧಿಕಾರಿ ರಾಸಲೀಲೆ ವೀಡಿಯೋ ವೈರಲ್..!

Published

on

ಬೆಂಗಳೂರು: ರಾಜ್ಯದಲ್ಲಿ ಕಾನೂನು ಇಲಾಖೆಯೇ ತಲೆ ತಗ್ಗಿಸುವ ಪ್ರಕರಣವೊಂದು ನಡೆದಿದೆ. ಚಿನ್ನ ಸ್ಮಂಗ್ಲಿಗ್ ಕೇಸ್ ನಲ್ಲಿ ಜೈಲಿನಲ್ಲಿರುವ ನಟಿ ರನ್ಯಾ  ರಾವ್ ತಂದೆ ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್  ತನ್ನ ಕಚೇರಿಯಲ್ಲೇ ಪೊಲೀಸ್ ಡ್ರೆಸ್ ನಲ್ಲೇ ಮಹಿಳೆಯರ ಜೊತೆಗೆ ರಾಸಲೀಲೆ ನಡೆಸಿರುವುದು ಬೆಳಕಿಗೆ ಬಂದಿದೆ. ರಾಮಚಂದ್ರರಾವ್ ಮಹಿಳೆಯರನ್ನು ಅಪ್ಪಿಕೊಂಡು, ತಬ್ಬಿಕೊಂಡು, ಮುತ್ತು ನೀಡುವ ದೃಶ್ಯಗಳ ವಿಡಿಯೋ ರೀಲೀಸ್ ಆಗಿದೆ.

 

 

ಕಚೇರಿಯಲ್ಲಿ ಡ್ಯೂಟಿಯಲ್ಲಿರುವ ಸಂದರ್ಭವೇ ಇವರು ದೂರು ನೀಡಲು ಬರುವ ಬೇರೆ ಬೇರೆ ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸುವ ದೃಶ್ಯ ಸೀಕ್ರೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪೊಲೀಸ್ ಇಲಾಖೆಯ ಶಿಸ್ತು, ಘನತೆ, ಗೌರವಕ್ಕೆ ಧಕ್ಕೆ ತರುವ ವಿಷಯ. ಮಹಿಳೆಯರನ್ನು ಬಲವಂತ ಮಾಡಿಲ್ಲದೇ ಇದ್ದರೂ, ಕಚೇರಿಯ ವೇಳೆಯಲ್ಲಿ ಪೊಲೀಸ್ ಡ್ರೆಸ್ ಧರಿಸಿ ರಾಮಚಂದ್ರ ರಾವ್ ರಾಸಲೀಲೆ ನಡೆಸಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.
ರಾಮಚಂದ್ರರಾವ್ ಸದ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಆಗಿದ್ದಾರೆ.

 

ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page