Connect with us

LATEST NEWS

BENGALURU : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬ್ ಇಟ್ಟವನ ಗುರುತು ಪತ್ತೆ!

Published

on

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನ ಗುರುತು ಪತ್ತೆಯಾಗಿದೆ. ಮಾರ್ಚ್‌ 1 ರಂದು ನಗರದ ಪ್ರತಿಷ್ಠಿತ ಕೆಫೆಯಲ್ಲಿ ಬಾಂಬ್ ಇಡಲಾಗಿತ್ತು. ಇದು ಇಡೀ ದೇಶದಲ್ಲೇ ಆತಂಕ ಹುಟ್ಟಿಸಿತ್ತು. ಇದೀಗ ಈ ಬಾಂಬ್ ಇಟ್ಟಿದ್ದು ತೀರ್ಥಹಳ್ಳಿಯ ಮುಸಾಬೀರ್ ಹುಸೇನ್‌ ಶಜೀಬ್‌ ಎಂದು ಗುರುತ್ತಿಸಲಾಗಿದೆ.

ರಾಮೇಶ್ವರಂ ಕೆಫೆ ಸಿಸಿಟಿವಿ ಕ್ಯಾಮರಾ ಹಾಗೂ ಬಸ್ ಇತರ ಸ್ಥಳಗಳಲ್ಲಿರು ಸಿಸಿಕ್ಯಾಮರಾದಲ್ಲಿರುವ ದೃಶ್ಯಗಳನ್ನು ಆಧರಿಸಿ ಆರೋಪಿಯ ಗುರುತು ಪತ್ತೆ ಮಾಡಲಾಗಿದೆ. 800 ಸಿಸಿ ಕ್ಯಾಮರಾಗಳಲ್ಲಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ ಶಂಕಿತನಿಗೂ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಶಜೀಬ್ ಭಾವಚಿತ್ರಕ್ಕೂ ಹೊಂದಾಣಿಕೆಯಾಗುತ್ತಿದೆ.

ಹಲವು ಭಯೋತ್ಪಾದನಾ ಕೃತ್ಯದಲ್ಲಿ ಭಾಗಿ :

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾಬೀರ್ ಹುಸೇನ್ ಶಾಜಿಬ್ ಒಬ್ಬ ಶಂಕಿತ ಉಗ್ರನಾಗಿದ್ದು ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟು ಹೋಗಿದ್ದ ವ್ಯಕ್ತಿ ಎಂದು ರಾಷ್ಟ್ರೀಯ ತನಿಖಾ ದಳ (NIA)ಪತ್ತೆ ಹಚ್ಚಿದೆ. ಹೀಗಾಗಿ ಈ ಸ್ಪೋಟದ ಹಿಂದೆ ಶಿವಮೊಗ್ಗ ಐಸಿಸ್ ಮಾಡ್ಯೂಲ್ ಕೈವಾಡ ಇರುವುದು ಖಚಿತವಾಗಿದೆ.

ಶಂಕಿತ ಆರೋಪಿ ಈ ಹಿಂದೆ ಕೂಡ ಹಲವಾರು ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ನಡೆದ ಭಯೋತ್ಪಾದನಾ ಕೃತ್ಯಗಳಲ್ಲಿ ಶಾಜಿಬ್ ಕೈವಾಡವಿದೆ ಎನ್ನುವುದು ತಿಳಿದು ಬಂದಿದೆ.

ಇತ್ತೀಚಿನ ವರ್ಷಗಳಲ್ಲಿ ನಡೆದ ಮಂಗಳೂರಿನ ದೇಶ ವಿರೋಧಿ ಗೋಡೆ ಬರಹ, ಮಂಗಳೂರು ಕುಕ್ಕರ್ ಸ್ಪೋಟ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತುಂಗಾ ತೀರದಲ್ಲಿ ಬಾಂಬ್ ಪರೀಕ್ಷೆ ಪ್ರಕರಣ, ತಮಿಳುನಾಡಿನ ಕೊಯಮತ್ತೂರಿನ ಬಾಂಬ್ ಸ್ಪೋಟ ಹಾಗೂ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಗಳಿಗೆ ನಂಟಿದೆ.

ಯಾಕೆಂದರೆ ಮಂಗಳೂರು ಕುಕ್ಕರ್ ಸ್ಪೋಟ ಹಾಗೂ ಶಿವಮೊಗ್ಗ ಜಿಲ್ಲೆ ಬಾಂಬ್ ಪ್ರಯೋಗದಲ್ಲಿ ಪತ್ತೆಯಾಗಿದ್ದ ಸ್ಪೋಟಕ ವಸ್ತುಗಳಿಗೂ ಕೆಫೆ ಸ್ಪೋಟದ ಬಾಂಬ್ ತಯಾರಿಕೆಗೆ ಬಳಸಲಾಗಿದ್ದ ವಸ್ತುಗಳಿಗೂ ತಾಳೆಯಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿ :

ಜನವರಿ ಮತ್ತು ಫೆಬ್ರವರಿಯಲ್ಲಿ ಚೆನ್ನೈನಲ್ಲಿ ತಂಗಿದ್ದ ಮುಸಾವೀರ್‌ ಹುಸೇನ್‌ ಶಜೀಬ್‌ ಮಾರ್ಚ್‌ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆಸಿದ್ದಾನೆ ಎನ್ನಲಾಗಿದೆ. ಆದರೆ, ಇದುವರೆಗೂ ಈತನೇ ಸ್ಫೋಟ ನಡೆಸಿದ್ದಾನೆ ಎಂದು ಖಚಿತವಾಗಿ ಅಧಿಕಾರಿಗಳು ಮಾಹಿತಿ ನೀಡಿಲ್ಲ.

ಈತ ಮಾಸ್ಟರ್‌ ಮೈಂಡ್‌ ಕೂಡ ಆಗಿರಬಹುದು ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಈತನ ಜೊತೆ ಅಬ್ದುಲ್‌ ಮತೀನ್‌ ತಹಾ ಕೂಡ ಇದ್ದ ಎಂಬುದು ಗೊತ್ತಾಗಿದೆ. ಈ ಇಬ್ಬರು ಕೂಡ ಅಲ್‌ ಹಿಂದ್‌ ಮಾಡ್ಯೂಲ್‌ ಕೇಸ್‌ನಲ್ಲಿ ಎನ್‌ಐಎಗೆ ಬೇಕಾಗಿದ್ದು, 2020ರಿಂದಲೂ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಾಪತ್ತೆ ದೂರು :

ಬೆಂಗಳೂರಿನಲ್ಲಿ ರೆಡಿಮೆಡ್‌ ಗಾರ್ಮೆಂಟ್ಸ್‌ ವ್ಯವಹಾರವನ್ನು ಮುಸಾವೀರ್‌ ನಡೆಸುತ್ತಿದ್ದ ಎನ್ನಲಾಗಿದೆ. ಆದರೆ, 2019ರಿಂದ ನಾಪತ್ತೆಯಾಗಿದ್ದಾನೆ ಎಂದು ಅವರ ತಾಯಿ ಕೂಡ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಅವರ ದೂರಿನಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮುಸಾವೀರ್‌ ಹುಸೇನ್‌ ಶಜೀಬ್‌ ಅನ್ನು ವಶಕ್ಕೆ ತೆಗೆದುಕೊಂಡಿದ್ದರು. ಅದಾದ ಬಳಿಕ ಆತ ನನ್ನನ್ನು ಸಂಪರ್ಕಿಸಿಲ್ಲ, ನಾಪತ್ತೆಯಾಗಿದ್ದಾನೆ. ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಳು.

DAKSHINA KANNADA

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಚೀಂವ್ ಚೀಂವ್ ಅಭಿಯಾನ

Published

on

ಬಂಟ್ವಾಳ: ಬೇಸಗೆಯಲ್ಲಿ ಮನುಷ್ಯನಿಗೆ ಹೇಗೆ ಬಾಯಾರಿಕೆ ಆಗುತ್ತದೆಯೋ ಅದೇ ರೀತಿ ಪ್ರಾಣಿ ಪಕ್ಷಿಗಳಿಗೂ ಬಾಯಾರಿಕೆ ಆಗುತ್ತದೆ. ಆದರೆ ಬೇಸಗೆಯಲ್ಲಿ ನೀರು ಸಿಗದೆ ಪ್ರಾಣಿ ಪಕ್ಷಿಗಳು ಸಾಕಷ್ಟು ಸಂಕಷ್ಟ ಎದುರಿಸುತ್ತಿರುವ ಕಾರಣ ಅವುಗಳಿಗೂ ನೀರುಣಿಸುವುದು ನಮ್ಮ ಜವಾಬ್ದಾರಿ. ಈ ಬಗ್ಗೆ ಬಿ.ಸಿ.ರೋಡ್ ನ ಮೊಡಂಕಾಪಿನ ಕಾರ್ಮೆಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಚೀಂವ್ ಚೀಂವ್ ಅಭಿಯಾನ ನಡೆಸಿದ್ದಾರೆ.

ನೀರು ಸಿಗದೆ ಪರದಾಡುವ ಪಕ್ಷಿಗಳಿಗೆ ಶಾಲಾ ಆವರಣದಲ್ಲಿ ತೆಂಗಿನ ಗೆರಟೆಗಳನ್ನು ಇರಿಸಿ ನೀರುಣಿಸುವ ಕೆಲಸ ಮಾಡುತ್ತಿದ್ದಾರೆ. ಸುಮಾರು 252 ಈ ರೀತಿಯ ಗೆರಟೆಗಳನ್ನು ಇರಿಸಿ ನಿತ್ಯ ಇದಕ್ಕೆ ನೀರು ಹಾಕಿ ಪಕ್ಷಿಗಳಿಗೆ ಕುಡಿಯಲು ನೀರು ಸಿಗುವಂತೆ ಮಾಡಿದ್ದಾರೆ.

ಇಲ್ಲಿನ ಶಿಕ್ಷಕ ರೋಶನ್ ಪಿಂಟೋ ಅವರ ಮಾರ್ಗದರ್ಶನದಲ್ಲಿ ಈ ಪರಿಸರ ಸ್ನೇಹಿ ಕೆಲಸ ನಡೆಸಲಾಗಿದೆ. ಕಳೆದ ಐದು ವರ್ಷಗಳಿಂದ ಇಲ್ಲಿನ ವಿದ್ಯಾರ್ಥಿಗಳು ಬೇಸಗೆಯಲ್ಲಿ ಪಕ್ಷಿಗಳಿಗೆ ಆಹಾರ ಇಡಲು ಪಾತ್ರೆ ತಯಾರಿಸಿ ಶಾಲೆಯ ಸುತ್ತ ಮುತ್ತ ಹಾಗೂ ಮನೆಗಳ ಸುತ್ತಮುತ್ತ ಇಟ್ಟು ಪಕ್ಷಿಗಳ ಬಾಯಾರಿಕೆ ನೀಗಿಸುತ್ತಿದ್ದಾರೆ. ಇದು ವಿದ್ಯಾರ್ಥಿಗಳಿಗೆ ಪಕ್ಷಿಗಳ ಬಗ್ಗೆ ಅಧ್ಯಯನಕ್ಕೂ ಸಹಕಾರಿಯಾಗಿದ್ದು, ಶಾಲೆಯ ವತಿಯಿಂದ ಪಕ್ಷಿಗಳು ಆಹಾರ ನೀರು ಸೇವಿಸುವ ಫೋಟೋ ಸ್ಪರ್ಧೆಯನ್ನೂ ಏರ್ಪಡಿಸಿ ಬಹುಮಾನ ನೀಡಲಾಗಿದೆ. ಮಕ್ಕಳ ಈ ಜಾಗೃತಿ ಅಭಿಯಾನ ಪ್ರತಿಯೊಬ್ಬರು ಕನಿಷ್ಟ ತಮ್ಮ ಮನೆಯ ಕಿಟಕಿಯಲ್ಲಿ ಪಕ್ಷಿಗಳಿಗೆ ನೀರಿಡುವಂತೆ ಪ್ರೇರೇಪಿಸಿದೆ.

Continue Reading

DAKSHINA KANNADA

ಅನ್ಯಧರ್ಮದ ಯುವತಿಯರನ್ನ ಮದುವೆ ಆಗಲು ಸಲಹೆ…ಸಂಕಷ್ಟದಲ್ಲಿ ಸೂಲಿಬೆಲೆ!

Published

on

ಮಂಗಳೂರು : ಭಾರೀ ವಿವಾದ ಸೃಷ್ಟಿಸಿದ್ದ ಚಕ್ರವರ್ತಿ ಸೂಲಿಬೆಲೆ ಅವರ ‘ಅನ್ಯಧರ್ಮೀಯ’ ವಿವಾಹ ಸಲಹೆ ಈಗ ಸಂಕಷ್ಟ ತಂದೊಡ್ಡಿದೆ. ಕೋಮುದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಳ ಠಾಣೆಗೆ ದೂರು ನೀಡಿದ್ದಾರೆ.

ಏನಂದಿದ್ರು ಸೂಲಿಬೆಲೆ?

ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಮಾರ್ಚ್ 9 ರಂದು ಕದ್ರಿ ಮಂಜುನಾಥ  ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜ ಆದಿಕ್ಷೇತ್ರಕ್ಕೆ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆ ನಡೆದಿತ್ತು. ಸಮಾರೋಪ ಸಮಾರಂಭದಲ್ಲಿ ವಾಗ್ಮಿ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಘರ್ ವಾಪ್ಸಿ ಬಗ್ಗೆ ಮಾತನಾಡಿದ್ದರು.

ಮತಾಂತರ ಎಂದು ಬಾಯಿ ಬಡಿದುಕೊಳ್ಳುವುದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದಿದ್ದರು.

ಇದನ್ನೂ ಓದಿ : 9 ತಿಂಗಳ ಬಳಿಕ ಮಾ.18ರಂದು ಸುನಿತಾ ಭೂಮಿಗೆ ವಾಪಸ್; ಗಗನಯಾನಿಗಳ ಸಂಬಳ ಎಷ್ಟಿರುತ್ತೆ ಗೊತ್ತಾ?

ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ. ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಹೇಳಿದ್ದರು.

ಈ ಹೇಳಿಕೆಗೆ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗಳು ಹುಟ್ಟುಕೊಂಡಿದ್ದವು.

Continue Reading

LATEST NEWS

ಆಟ ಆಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Published

on

ಕೇರಳ: ಕ್ರಿಕೆಟ್ ಆಡುವಾಗ ಸಿಡಿಲು ಬಡಿದು ಯುವಕನೋರ್ವ ಸಾವನ್ನಪ್ಪಿದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.

ಅಖಿಲ್ ಪಿ ಶ್ರೀನಿವಾಸನ್ (28) ಸಾವನ್ನಪ್ಪಿದ ಯುವಕ. ಈತ ಸಂಜೆಯ ವೇಳೆ ತನ್ನ ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಕೂಡಲೇ ಆತನನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page