Connect with us

LATEST NEWS

ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಮಾಡಿದ್ದ ಅಸಲಿ ಪೊಲೀಸರು ಅಂದರ್..!

Published

on

ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಮಾಡಿದ್ದ ಅಸಲಿ ಪೊಲೀಸರು ಅಂದರ್..!

ಬೆಂಗಳೂರು : ಕಳ್ಳರನ್ನು ಹಿಡಿಯಬೇಕಾದವರು ಪೊಲೀಸರೇ ದುಡ್ಡಿನ ಆಸೆಗೆ ಬಲಿಬಿದ್ದು ದರೋಡೆಗಿಳಿದು ಬಂಧನಕ್ಕೆ ಒಳಗಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಅಸಲಿ ಪೊಲೀಸರು ಕಳ್ಳರ ಜತೆಗೆ ಸೇರಿಕೊಂಡು ನಕಲಿ ದಾಳಿ ಮಾಡಿ ಚಿನ್ನದ ಆಭರಣಗಳನ್ನು ದೋಚಿ ಸಿಕ್ಕಿಬಿದ್ದಿದ್ದಾರೆ. ಅಸಲಿ ಪೊಲೀಸರು ಈಗ ದರೋಡೆಕೋರರ ಜತೆಗೆ ಜೈಲು ಪಾಲಾಗಿ ಕಂಬಿ ಎಣಿಸುತ್ತಿದ್ದಾರೆ.

ಅಂದಹಾಗೆ ಕಳ್ಳರು ಮತ್ತು ಪೊಲೀಸರು ಜತೆಗೂಡಿ ನಕಲಿ ಪೊಲೀಸ್ ರೇಡ್ ಮಾಡಿರುವ ದರೋಡೆಯ ರೋಚಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ನವೆಂಬರ್ 11 ರಂದು ಈ ಘಟನೆ ನಡೆದಿದೆ. ನಗರದ ನಗರ್ತಪೇಟೆಯ ಅಣ್ಣಯ್ಯ ಬೀದಿಯಲ್ಲಿ ಚಿನ್ನದ ಅಂಗಡಿಗೆ ಏಕಾಏಕಿ ಪೊಲೀಸರು ದಾಳಿ ಮಾಡಿದ್ದರು.

ನೀನು ಪರವಾನಗಿ ಇಲ್ಲದೇ ಅಂಗಡಿ ನಡೆಸುತ್ತಿದ್ದೀಯ. ಕದ್ದ ಚಿನ್ನ ಖರೀದಿಸಿರುವ ಮಾಹಿತಿ ಇದೆ ಎಂದು ಸಿಸಿಬಿ ಪೊಲೀಸರ ಶೈಲಿಯಲ್ಲೇ ದಾಳಿ ನಡೆಸಿ ಬರೋಬ್ಬರಿ 9 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದರು.

ದಾಳಿ ನಡೆದ ಬಳಿಕ ಅಂಗಡಿ ಮಾಲೀಕ ಕಾರ್ತಿಕ್ ಅವರು ಪರಿಚಿತ ಪೊಲೀಸರ ಮೂಲಕ ದಾಳಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ದಾಳಿ ನಡೆಸಿದ್ದು ಅಸಲಿ ಪೊಲೀಸರಲ್ಲ, ದರೋಡೆಕೋರರು ಎಂಬ ಸಂಗತಿ ಅರಿವಿಗೆ ಬಂದಿತ್ತು.

ಕೂಡಲೇ ಹೋಗಿ ಹಲಸೂರು ಗೇಟ್ ಠಾಣೆಗೆ ದೂರು ನೀಡಿದ್ದರು.

ಪೊಲೀಸರ ಸೋಗಿನಲ್ಲಿ ದರೋಡೆಕೋರರು ದಾಳಿ ನಡೆಸಿ ಚಿನ್ನಾಭರಣ ಕದ್ದಿದ್ದ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡಸಿದ್ದರು.

ಪ್ರಕರಣದ ತನಿಖೆ ನಡೆಸಿದ ಹಲಸೂರುಗೇಟ್ ಪೊಲೀಸರು ನಕಲಿ ದಾಳಿ ಮಾಡಿದ್ದ ಏಳು ಆರೋಪಿಗಳನ್ನು ಬಂಧಿಸಿದ್ದು, ಅದರಲ್ಲಿ ಇಬ್ಬರು ಅಸಲಿ ಪೊಲೀಸ್ ಕಾನ್ಸ್ಟೇಬಲ್ ಗಳು ನಕಲಿ ದಾಳಿಯಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಪೇದೆ ಅಶೋಕ್ ಸೇರಿ ಎಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಕಾನ್ಸ್ಟೇಬಲ್ ಚೌಡೇಗೌಡ ತಲೆಮರೆಸಿಕೊಂಡಿದ್ದಾನೆ.
ಚಿನ್ನದ ಅಂಗಡಿ ಮಾಲೀಕ ಕಾರ್ತೀಕ್ ಪರವನಾಗಿ ಪಡೆಯದೇ ಚಿನ್ನದ ಆಭರಣ ಮಾಡುತ್ತಿದ್ದರು. ಈ ವಿಷಯ ತಿಳಿದಿದ್ದ ಬಿಲ್ಡಿಂಗ್ ಮಾಲೀಕರ ಪುತ್ರ ಸೂರಜ್ ಕಳ್ಳರ ಜತೆ ಸೇರಿ ಪೊಲೀಸರ ಹೆಸರಿನಲ್ಲಿ ದಾಳಿ ನಡೆಸಿ ಹಣ ದೋಚಲು ಸಂಚು ರೂಪಿಸಿದ್ದಾರೆ.

ಅದಕ್ಕೆ ಅಸಲಿ ಪೊಲೀಸರ ನೆರವು ಪಡೆಯಲು ಮುಂದಾಗುವ ದರೋಡೆಕೋರರ ತಂಡ, ಅಪಘಾತ ಪ್ರಕರಣದಲ್ಲಿ ಪ್ರಮುಖ ಆರೋಪಿ ನದೀಮ್ ಗೆ ಪರಿಚಯವಾಗಿದ್ದ ಕಾನ್ಸ್ಟೇಬಲ್ ಗಳಾದ ಚೌಡೇಗೌಡ ಮತ್ತು ಅಶೋಕ್ ಜತೆ ಮಾತನಾಡಿ ಯೋಜನೆ ರೂಪಿಸಿದ್ದಾರೆ.

ಕಾರ್ತೀಕ್ ಪೊಲೀಸರಿಗೆ ದೂರು ಕೊಡಲ್ಲ ಎಂಬ ಧೈರ್ಯದ ಮೇಲೆಯೇ ಪ್ಲಾನ್ ನಂತೆ ನದೀಮ್ ನೇತೃತ್ದದಲ್ಲಿ ದರೋಡೆಕೋರರು ಪೊಲೀಸರ ಸೋಗಿನಲ್ಲಿ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಪೇದೆಗಳಾದ ಚೌಡೇಗೌಡ ಮತ್ತು ಅಶೋಕ್ ಪಾಲ್ಗೊಂಡಿದ್ದಾರೆ. ಇದೇ ಕಾರಣಕ್ಕೆ ಭಯ ಬಿದ್ದು ದಾಳಿ ವೇಳೆ ಅಂಗಡಿ ಮಾಲೀಕ ಸುಮ್ಮನಾಗಿದ್ದ. ಪರಿಚಿತ ಪೊಲೀಸರ ಮೂಲಕ ಪೊಲೀಸರ ದಾಳಿ ನಕಲಿ ಎಂದು ಗೊತ್ತಾದ ಬಳಿಕ ದೂರು ನೀಡಿದ್ದು, ಇದೀಗ ಅಸಲಿ ಪೊಲೀಸರ ಜತೆಗೂಡಿ ನಕಲಿ ದಾಳಿ ಮಾಡಿ ದರೋಡೆ ಮಾಡಿದ್ದ ಏಳು ಆರೋಪಿಗಳು ಅಂದರ್ ಆಗಿದ್ದಾರೆ.

ಕಾನ್‌ಸ್ಟೇಬಲ್ ಚೌಡೇಗೌಡ ತಪ್ಪಿಸಿಕೊಂಡಿದ್ದು,ಆತನಿಗಾಗಿ ಶೋಧ ನಡೆಸುತ್ತಿದ್ದಾರೆ. ದರೋಡೆ ಮಾಡಿದ್ದ 9 ಲಕ್ಷ ರೂ.ಗಳಲ್ಲಿ ತಲಾ ಒಂದೊಂದು ಲಕ್ಷ ಹಂಚಿಕೊಂಡಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

FILM

ರಶ್ಮಿಕಾ ಮಂದಣ್ಣ ಮದ್ವೆ ಬೆನ್ನಲ್ಲೇ ಈ ಫೋಟೋ ಪೋಸ್ಟ್ ಮಾಡಿದ ನಟ ರಕ್ಷಿತ್ ಶೆಟ್ಟಿ..!

Published

on

ಕರಾವಳಿ ಮೂಲದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರು ಇತ್ತೀಚೆಗೆ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ. ರಿಚರ್ಡ್ ಆ್ಯಂಟನಿ’ ಸಿನಿಮಾ ಘೋಷಣೆ ಮಾಡಿ ಹಲವು ಸಮಯ ಕಳೆದರೂ ಆ ಚಿತ್ರದ ಬಗ್ಗೆ ಯಾವುದೇ ಅಪ್​​ಡೇಟ್ ಇಲ್ಲ. ಈ ಎಲ್ಲ ವಿಷಯದಲ್ಲಿ ಫ್ಯಾನ್ಸ್​ಗೆ ಬೇಸರ ಇದೆ. ಹೀಗಿರುವಾಗಲೇ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಬೇಸರದ ಮುಖ ಭಾವವಿರುವ ಫೋಟೋನ ಪೋಸ್ಟ್ ಮಾಡಿದ್ದಾರೆ. ಈ ಫೋಟೋನ ರಕ್ಷಿತ್ ಹಂಚಿಕೊಂಡಿದ್ದೇಕೆ ಎಂಬ ಪ್ರಶ್ನೆ ಮತ್ತು ಕುತೂಹಲ ಅಭಿಮಾನಿಗಳದ್ದು.

ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಮುರಿದು ಬಿದ್ದಿತ್ತು. ಇದೀಗ ನಟಿ ರಶ್ಮಿಕಾ ಮಂದಣ್ಣ ನಟ ವಿಜಯ ದೇವರಕೊಂಡ ಅವರ ಕೈ ಹಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೆಲ್ಲ ಅವರ ವಿವಾಹದ ಫೋಟೋಗಳು ಸಖತ್ ಸದ್ದು ಮಾಡುತ್ತಿದೆ. ಇದೇ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಬೇಸರದಲ್ಲಿರೋ ಫೋಟೋನೇ ಪೋಸ್ಟ್ ಮಾಡಿದ್ದು ಅಚ್ಚರಿ ಮೂಡಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಇವರ ಪೋಸ್ಟ್ ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಸ್ ಗಳನ್ನು ಹಾಕಿದ್ದಾರೆ. ‘ಹಳೆಯದನ್ನು ಮರೆತು ಮುಂದೆ ಸಾಗಿ’ ಎಂದು ಫ್ಯಾನ್ಸ್ ಹೇಳಿದ್ದಾರೆ. ಇನ್ನೂ ಕೆಲವರು, ‘ನಿಮ್ಮ ಕಂಬ್ಯಾಕ್ ಬೇರೆಯವರಿಗೆ ಸ್ಲಿಪ್ಪರ್ ಶಾಟ್ ಆಗಬೇಕು’ ಎಂದು ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಇದ್ದಿದ್ದು ಕಡಿಮೆ. ಆದರೆ ಏಕಾಏಕಿ ಚಾರ್ಲಿ ಸಿನಿಮಾದ ಈ ಫೋಟೋ ಪೋಸ್ಟ್ ಮಾಡಿದ್ದು ಯಾಕೆ ಎಂಬ ಕ್ಯೂರಾಸಿಟಿ ಮಾತ್ರ ಜಾಸ್ತಿಯಾಗಿದೆ.

Continue Reading

LATEST NEWS

ರಾಜ್ಯ ಸರ್ಕಾರ ಮಂಡಿಸಿದ್ದು ನಿರಾಶಾದಾಯಕ ಬಜೆಟ್: ಉದಯ್ ಕುಮಾರ್ ಶೆಟ್ಟಿ

Published

on

ಉಡುಪಿ: ರಾಜ್ಯ ಸರ್ಕಾರ ಮಂಡಿಸಿದ ಬಜೆಟ್ ನಿರಾಶಾದಾಯಕ ಬಜೆಟ್ ಆಗಿದೆ. ಯಾವುದೇ ದೂರದೃಷ್ಟಿ ಇಲ್ಲದ ಕಾಟಾಚಾರದ ಬಜೆಟ್ ಇದಾಗಿದೆ. ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ರು. ಆದರೆ ಬಹುಪಾಲು ಯೋಜನೆಗಳು ಹಳ್ಳ ಹಿಡಿದಿದೆ ಎಂದು ಬಿಜೆಪಿ ಮುಖಂಡ ಉದಯ್ ಕುಮಾರ್ ಶೆಟ್ಟಿ ವ್ಯಂಗ್ಯವಾಡಿದರು.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಕರಾವಳಿ ಜಿಲ್ಲೆಗಳಿಗೆ ವಿಶೇಷ ಸವಲತ್ತುಗಳು ನೀಡಬೇಕು ಅನ್ನೊ‌ ನಿರೀಕ್ಷೆ ಇತ್ತು ಅದ್ರೆ ಯಾವುದೇ ಸೌಲಭ್ಯ ನೀಡಿಲ್ಲ. ಯುವ ನಿಧಿ ಯೋಜನೆಯನ್ನು ಆರಂಭಿಸಿದ್ರು ಯುವಜನತೆಗೆ ಪ್ರಯೋಜನ ಅಗಿಲ್ಲ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಆಶಾದಾಯಕ ಬಜೆಟ್ ಅನ್ನೋ ನಿರೀಕ್ಷೆ ಸುಳ್ಳಾಗಿದೆ. ಗೋವು ಸಾಗಾಟ ಬಗ್ಗೆ ಕಟ್ಟುನಿಟ್ಟಾದ ಕ್ರಮಕ್ಕೆ ಸರ್ಕಾರ ಮುಂದಾಗಿಲ್ಲ. ಇನ್ನು ಗೋ ರಕ್ಷಣೆ ಶಿಬಿರ ನಡೆಸಲು ಕಾಂಗ್ರೆಸ್ ಮುಂದಾಗಿರೋದು ಅಭಾಸ ಸಂಗತಿ ಎಂದು ಹೇಳಿದರು.

Continue Reading

DAKSHINA KANNADA

ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ

Published

on

ಮಂಗಳೂರು: ನಗರದ ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ. ರಾಜ್ಯ ಸರಕಾರ ಈ ಯೋಜನೆಗೆ ಚಿಕ್ಕಾಸು ನೀಡದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ದಿನೇಶ್ ಗುಂಡೂ ರಾವ್ ಅವರು ಶಿಲಾನ್ಯಾಸ ನೆರವೇರಿಸಿದ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗರಂ ಆಗಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಪಚ್ಚನಾಡಿ ಎಸ್.ಟಿ.ಪಿ ಆವರಣದಲ್ಲಿ ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಗುದ್ದಲಿ ಪೂಜೆ ನಡೆಸಿ, ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವಾಸ್ತವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವು ಕ್ಷೇತ್ರದ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳಿಂದ ನಯಾ ಪೈಸೆ ನೀಡಿಲ್ಲ. ಮೊದಲು ಆ ಅನುದಾನ ಬಿಡುಗಡೆಗೊಳಿಸಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿ. ಸ್ವಚ್ಛ ಭಾರತ ಮಿಷನ್ 2.0 ಮತ್ತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಡಿ, ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎಸ್.ಟಿ.ಪಿ. ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಇದು ಸಂಪೂರ್ಣ ಕೇಂದ್ರ ಸರಕಾರದ ಅನುದಾನವಾಗಿದೆ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾದ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ಸಹಿತ ಇಲ್ಲಿನ ಸಂಸದರಿಗೆ ಸರಿಯಾಗಿ ಮಾಹಿತಿ ನೀಡದಿರುವುದು ಮಂಗಳೂರಿಗೆ ಹಾಗೂ ಇಲ್ಲಿನ ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

Continue Reading
Advertisement

Trending

Copyright © 2025 Namma Kudla News

You cannot copy content of this page